ರಾಜಕೀಯದಲ್ಲಿ ಎಚ್ಚರಿಕೆಯಿಂದ ಇರಬೇಕು: ರಾಜಣ್ಣ ವಜಾ ಬಗ್ಗೆ ವ್ಯಾಖ್ಯಾನ ಮಾಡಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ. ಕೆ.ಎನ್.ರಾಜಣ್ಣರನ್ನು ಸಂಪುಟದಿಂದ ವಜಾ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರು ಹಗೆ ಸಾಧಿಸುತ್ತಾರೆ. ನಾವು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ರಾಜಣ್ಣ ಅವರನ್ನು ವಜಾ ಮಾಡಿರುವುದು ಹೈಕಮಾಂಡ್ ನಿರ್ಧಾರ. ಈ ಬಗ್ಗೆ ರಾಜಣ್ಣ ಅವರೇ …
Read More »ಗರ್ಭ ಧರಿಸಿದ ಬಸವಿ ಹಸುವಿಗೆ ಸೀಮಂತ
ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೊಸ ಶೀಡೆನೂರು ಗ್ರಾಮದಲ್ಲಿ ಮೂರು ವರ್ಷದ ಹಿಂದೆ ಬಸವಿ ಕರು ಬಿಡಲಾಗಿತ್ತು. ಈ ಕರುವನ್ನು ಎಲ್ಲರೂ ಗೌರಿ ಎಂದು ಮುದ್ದಾಗಿ ಕರೆಯುತ್ತಿದ್ದರು. ಗೌರಿಗೆ ಮೂರು ವರ್ಷ ತುಂಬಿದ್ದರೂ ಗರ್ಭ ಧರಿಸಿಲ್ಲಾ ಎನ್ನುವ ಬೇಸರದಲ್ಲಿದ್ದ ಜನರು ಇದೀಗ ಮರಿ ಗೌರಿಯ ಸಂಭ್ರಮದಲ್ಲಿದ್ದಾರೆ. ಹಸುವಿಗೆ ಸೀಮಂತ: ಜನರ ಬಯಕೆಯಂತೆ ಗೌರಿ ಗರ್ಭ ಧರಿಸಿದ್ದು, ಗ್ರಾಮಸ್ಥರು ಗೌರಿಗೆ ಸೀಮಂತ ಮಾಡುವ ಮೂಲಕ ಸಂಭ್ರಮಿಸಿದ್ದಾರೆ. ಗೌರಿಗೆ ಅರಿಶಿಣ ಕುಂಕುಮ ಹಚ್ಚಿ, ಹೊಸ ಸೀರೆ …
Read More »ಕಾಂಗ್ರೆಸ್ ಮುಖಂಡನ ಮೇಲೆ ಮಾ₹ ರಣಾಂತಿಕ ಹಲ್ಲೆ
ಕಾಂಗ್ರೆಸ್ ಮುಖಂಡನ ಮೇಲೆ ಮಾ₹ ರಣಾಂತಿಕ ಹಲ್ಲೆ ಚಿಕ್ಕೋಡಿ: ಮಾಜಿ ತಾಲೂಕು ಪಂಚಾಯತ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡನ ಮೇಲೆ ಮಾರ₹ ಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮುಗಳಿ ಗ್ರಾಮದಲ್ಲಿ ನಡೆದಿದೆ. ಮಾಜಿ ತಾಲೂಕು ಪಂಚಾಯತ ಸದಸ್ಯ ಹಾಗೂ ಕೈ ಮುಖಂಡ ರಾಜು ಪಾಟೀಲ್ ಮೇಲೆ ಖಾರದ ಪುಡಿ ಎರಚಿ ಮಾರ₹ ಣಾಂತಿಕ ಹಲ್ಲೆ ನಡೆಸಲಾಗಿದೆ. ಮುಗಳಿ ಗ್ರಾಮದ ಬಸ್ ನಿಲ್ದಾಣದ ಬಳಿ …
Read More »ಎಡಪಂಥೀಯರಿಂದ ಧರ್ಮಸ್ಥಳ, ಹೆಗ್ಗಡೆಯವರ ಹೆಸರಿಗೆ ಕಳಂಕ ತರುವ ಕೆಲಸ’: ಹಾವೇರಿಯಲ್ಲಿ ಪ್ರತಿಭಟನೆ
ಹಾವೇರಿ: ಮೂಲಭೂತವಾದಿಗಳು ಹಾಗು ಎಡಪಂಥೀಯರು ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಹೆಸರಿಗೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಮಂಗಳವಾರ ಹಾವೇರಿಯಲ್ಲಿ ಪ್ರತಿಭಟನೆ ನಡೆಸಿದವು. ಹಾವೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಅಪಾರ ಸಂಖ್ಯೆಯಲ್ಲಿ ಸೇರಿದ ಜನರು, ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಅವರಿಗೆ ಕಳಂಕ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸಿದರು. ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ದೂರಿನ …
Read More »ಧರ್ಮಸ್ಥಳ: ಮುಸುಕುಧಾರಿ ದೂರುದಾರ ತೋರಿಸಿದ ಪಾಯಿಂಟ್ 13ರಲ್ಲಿ 15 ಅಡಿ ಅಗೆದರೂ ಸಿಗದ ಶವ
ಬೆಳ್ತಂಗಡಿ(ದಕ್ಷಿಣ ಕನ್ನಡ): ನೂರಾರು ಮೃತದೇಹಗಳನ್ನು ಹೂತು ಹಾಕಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪಾಯಿಂಟ್ ನಂಬರ್ 13ರಲ್ಲಿ ನಡೆಸಿದ ಶೋಧ ಕಾರ್ಯದಲ್ಲಿ ಯಾವುದೇ ಕಳೇಬರದ ಕುರುಹುಗಳು ಪತ್ತೆಯಾಗಿಲ್ಲ. ಕಳೆದ 12 ದಿನಗಳಿಂದ ಎಸ್ಐಟಿ ನೇತೃತ್ವದಲ್ಲಿ ಶೋಧ ಕಾರ್ಯ ನಡೆಯುತ್ತಿದ್ದು, ನೇತ್ರಾವತಿ ನದಿ ಬದಿಯಲ್ಲಿ ಗುರುತು ಮಾಡಿದ 13ರ ಶೋಧ ಕುತೂಹಲಕ್ಕೆ ಕಾರಣವಾಗಿತ್ತು. ಅನಾಮಧೇಯ ಮುಸುಕುಧಾರಿ ದೂರುದಾರ ವ್ಯಕ್ತಿ ಈ ಸ್ಥಳದಲ್ಲಿ ಹಲವು ಶವಗಳನ್ನು ಹೂತು ಹಾಕಿರುವುದಾಗಿ ಮಾಹಿತಿ ನೀಡಿದ್ದ ಹಿನ್ನೆಲೆಯಲ್ಲಿ ಈ …
Read More »ಸರ್ಕಾರಿ ನೌಕರಿ ನಕಲಿ ಆದೇಶ ಪತ್ರ, ರಾಜ್ಯಪಾಲರ ಸಹಿ: ಆರೋಪಿ ವಿರುದ್ಧ ಚಾರ್ಜ್ಶೀಟ್ಗೆ ಬೆಳಗಾವಿ ಪೊಲೀಸರ ಸಿದ್ಧತೆ
ಬೆಳಗಾವಿ: ”ಸರ್ಕಾರಿ ನೌಕರಿ ಕೊಡಿಸುವುದಾಗಿ 14 ಜನರಿಗೆ 30 ಲಕ್ಷ ರೂ. ವಂಚಿಸಿದ್ದ ಪ್ರಕರಣದಲ್ಲಿ ಆರೋಪಿ ಬೇರೆ ಬೇರೆಯವರ ಹೆಸರು ಹೇಳಿಕೊಂಡು ಸರ್ಕಾರದ ಲೋಗೋ ಕಾಪಿ ಮಾಡಿ, ರಾಜ್ಯಪಾಲರ ಸಹಿಯನ್ನೂ ನಕಲು ಮಾಡಿ, ಸುಳ್ಳು ಸರ್ಕಾರಿ ನೌಕರಿಯ ಆದೇಶ ಪತ್ರ ಕೊಟ್ಟಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಹಾಗಾಗಿ, ಆರೋಪಿ ವಿರುದ್ಧ ಚಾರ್ಜ್ಶೀಟ್ ಸಿದ್ಧಪಡಿಸುತ್ತಿದ್ದೇವೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದರು. ಈ ಕುರಿತು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಎಸ್ಪಿ, ”ಮಂಜುನಾಥ …
Read More »3ನೇ ಪಾಯಿಂಟ್ನಲ್ಲೂ ಮೂಳೆಗಳು ಸಿಗದಿದ್ರೆ SIT ಶೋಧ ಸ್ಥಗಿತ, ಸಚಿವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ
ಬೆಂಗಳೂರು: 13 ಸ್ಥಳಗಳಲ್ಲೂ ಶವ ಸಿಗದಿದ್ದರೆ ಎಸ್ಐಟಿ ಶವ ಶೋಧನೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕಾಗುತ್ತದೆ. ಈ ಬಗ್ಗೆ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಇಂದು ನಡೆದ ಶಾಸಕಾಂಗ ಸಭೆಯಲ್ಲಿ ತಿಳಿಸಿದ್ದಾರೆ. ಧರ್ಮಸ್ಥಳ ವಿಚಾರವಾಗಿ ಬೇಳೂರು ಗೋಪಾಲಕೃಷ್ಣ ವಿಷಯ ಪ್ರಸ್ತಾಪಿಸಿದರು. ಈ ಸಂಬಂಧ ಮಾತನಾಡಿದ ಸಿಎಂ, ಎಸ್ಐಟಿ ಮಾಡಿದ ಬಗ್ಗೆ ಜನರಿಂದ ಒಳ್ಳೆಯ ಅಭಿಪ್ರಾಯ ಬಂದಿದೆ. ಧರ್ಮಸ್ಥಳದ ವಿಚಾರದಲ್ಲಿ ಯಾರೂ ಭಾವನಾತ್ಮಕವಾಗಿ ಹೇಳಿಕೆ ನೀಡಬೇಡಿ, 13 ಸ್ಥಳಗಳಲ್ಲಿ ಎಸ್ಐಟಿ ಶೋಧನೆ …
Read More »ಯಲ್ಲಮ್ಮನ ಗುಡ್ಡದಲ್ಲಿ ಮಳೆ ಅವಾಂತರ: ಹುಂಡಿಗೆ ನುಗ್ಗಿದ ನೀರು, ತೊಯ್ದ ಕಾಣಿಕೆ ಹಣ
ಬೆಳಗಾವಿ: ಕೋಟ್ಯಂತರ ಭಕ್ತರ ಆರಾಧ್ಯ ದೇವತೆ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾದ ಪ್ರವಾಹದಲ್ಲಿ ದೇವಸ್ಥಾನ ಸಂಪೂರ್ಣವಾಗಿ ಮುಳುಗಿತ್ತು. ಶ್ರಾವಣ ಹಿನ್ನೆಲೆ ಬರುತ್ತಿರುವ ಭಕ್ತರು ಮಳೆಯಿಂದ ತೀವ್ರ ಸಂಕಷ್ಟ ಎದುರಿಸಿದ್ದರು. ಪ್ರವಾಹದ ನೀರು ದೇವಸ್ಥಾನದ ತುಂಬೆಲ್ಲಾ ವ್ಯಾಪಿಸಿದ್ದರಿಂದ ಕೊಳಚೆ, ಮಣ್ಣು, ಕೆಸರು ತುಂಬಿಕೊಂಡಿದೆ. ಇದರಿಂದ ದೇವಸ್ಥಾನದ ಆವರಣವು ಕೆಸರಿನಿಂದ ತುಂಬಿಕೊಂಡಿದೆ. ದೇವಸ್ಥಾನದ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ. ನೀರಿನಲ್ಲಿ ತೊಯ್ದ ಹುಂಡಿ …
Read More »ಮೀನು ಹಿಡಿಯಲು ತೆರಳಿ ನಾಪತ್ತೆಯಾಗಿದ್ದ ಓರ್ವ ಶವವಾಗಿ ಪತ್ತೆ
ಉತ್ತರ ಕನ್ನಡ (ಯಲ್ಲಾಪುರ) : ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಬೇಡ್ತಿ ನದಿಗೆ ಮೀನು ಹಿಡಿಯಲು ಹೋಗಿ ಹಿಂದಿರುಗುವ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಕಾಣೆಯಾಗಿದ್ದ ಸಹೋದರರಿಬ್ಬರಲ್ಲಿ ಓರ್ವನ ಶವ ಸೋಮವಾರ ಪತ್ತೆಯಾಗಿದೆ. ತಾಲೂಕಿನ ಶಿರನಾಲ ಮಾದನಸರದ ಮಹ್ಮದ್ ರಫೀಕ್ ಸಾಬ್ ಸೈಯದ್ (27) ಅವರ ಶವ ಪತ್ತೆಯಾಗಿದೆ. ನಾಪತ್ತೆಯಾದ ಮಹ್ಮದ್ ಹನೀಫ್ ಸಾಬ್ ಸೈಯದ್ (25) ಅವರಿಗೆ ಹುಡುಕಾಟ ಮುಂದುವರಿದಿದೆ. ಭಾನುವಾರ ಬೆಳಗ್ಗೆ ಕವಲಗಿ ಹಳ್ಳ ದಾಟಿ ಬೇಡ್ತಿ ನದಿಗೆ ಮೀನು ಹಿಡಿಯಲು …
Read More »ಮಲಗಿದ್ದ ಯುವತಿಗೆ ಮಚ್ಚಿನಿಂದ ಹೊಡೆದ ಮನೆಕೆಲಸದ ಮಹಿಳೆ
ಬೆಂಗಳೂರು: ಮನೆಯಲ್ಲಿ ಮಲಗಿದ್ದ ಯುವತಿಗೆ ಮಚ್ಚಿನಿಂದ ಹೊಡೆದು ಗಾಯಗೊಳಿಸಿದ ಆರೋಪದಡಿ ಮನೆ ಕೆಲಸದ ಮಹಿಳೆಯನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 10ರಂದು ಬೆಳಗಿನ ಜಾವ ಬಸಪ್ಪ ಗಾರ್ಡನ್ನಲ್ಲಿ ಘಟನೆ ನಡೆದಿತ್ತು. ಸುಶ್ಮಿತಾ (21) ಎಂಬಾಕೆಯ ಮೇಲೆ ಹಲ್ಲೆಗೈದ ಆರೋಪದಡಿ ಲಲಿತಾ ಎಂಬಾಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಲಲಿತಾ, ಬಸಪ್ಪ ಗಾರ್ಡನ್ನಲ್ಲಿರುವ ಸರೋಜಮ್ಮ ಎಂಬವರ ಮನೆಯಲ್ಲಿ ಕೆಲಸ ಮಾಡಿಕೊಂಡು ಅವರೊಂದಿಗೆ ವಾಸವಿದ್ದಳು. ಸರೋಜಮ್ಮ ಅವರಿಗೆ ಪರಿಚಿತಳಾಗಿದ್ದ ಸುಶ್ಮಿತಾ ಆಗಾಗ …
Read More »
Laxmi News 24×7