Breaking News

ಬೆಳಗಾವಿ ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರ ಚಿಂತನೆ

ಬೆಳಗಾವಿ : ಬೆಳಗಾವಿ ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್‌ ಮಾಹಿತಿ ನೀಡಿದ್ದಾರೆ. ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷ ತುಂಬಿದ ಹಿನ್ನೆಲೆ ಸುವರ್ಣ ಸೌಧ ಆವರಣದಲ್ಲಿ ನಡೆದ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ವಾರಾಂತ್ಯದಲ್ಲಿ ಸುವರ್ಣ ಸೌಧವನ್ನು ಸಾರ್ವಜನಿಕರಿಗೆ ಮುಕ್ತವಾಗಿ ತೆರೆದು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ. …

Read More »

ರಾಜ್ಯಸಭೆಯಿಂದ ಟಿಎಂಸಿ ಸಂಸದ ಅಮಾನತು

ನವದೆಹಲಿ: ರಾಜ್ಯಸಭೆಯಲ್ಲಿ ಅಶಿಸ್ತಿನ ನಡುವಳಿಕೆ ತೋರಿದ ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ಅವರನ್ನು ಗುರುವಾರ ಅಧಿವೇಶನದ ಇನ್ನುಳಿದ ಅವಧಿ ವರೆಗೆ ಅಮಾನತು ಮಾಡಲಾಯಿತು. ಗುರುವಾರ ಕಲಾಪ ಶುರುವಾಗುತ್ತಿದ್ದಂತೆ ನಿನ್ನೆ ನಡೆದ ಸಂಸತ್‌ ಭದ್ರತಾ ಲೋಪದ ಕುರಿತು ಚರ್ಚಿಸುವಂತೆ ಪಟ್ಟು ಹಿಡಿದ ಡೆರೆಕ್‌ ಒಬ್ರಿಯಾನ್‌ ದುರ್ವರ್ತನೆ ತೋರುವ ಮೂಲಕ ಸದನಕ್ಕೆ ಅಗೌರವ ತೋರಿದರು. ಈ ಹಿನ್ನೆಲೆ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್‌, ಒಬ್ರಿಯಾನ್‌ಗೆ ಸದನದಿಂದ ಹೊರಗೆ ಹೋಗುವಂತೆ ಸೂಚಿಸಿದರು. ಡೆರೆಕ್ ಒ’ಬ್ರೇನ್ …

Read More »

ನಮ್ಮ ಜೋಡೆತ್ತಿನ ಬಗ್ಗೆಯೂ ಸ್ವಲ್ಪ ಮಾತಾಡ್ರೀ.’ ಎಂದ ಯತ್ನಾಳ್‌

ಬೆಳಗಾವಿ : ಅಧಿವೇಶನ(Session) ಆರಂಭವಾದಾಗಿನಿಂದಲೂ ಸ್ವಪಕ್ಷದ ನಾಯಕರನ್ನು ಎಷ್ಟು ಕೆಣಕಲು ಸಾಧ್ಯವೋ ಎಲ್ಲಾ ಅವಕಾಶವನ್ನೂ ಯತ್ನಾಳ್‌(yatnal) ಬಳಸಿಕೊಳ್ಳುತ್ತಿರುವಂತಿದೆ. ಇಂದು ಕೂಡ ಪೂರಕ ಬಜೆಟ್‌ ವಿಚಾರದ ಚರ್ಚೆಯಲ್ಲಿ ಆರ್‌ ಅಶೋಕ್‌, ಬಿ ವೈ ವಿಜಯೇಂದ್ರ ಅವರನ್ನು ಯತ್ನಾಳ್‌ ಎಳೆದು ತಂದಿದ್ದಾರೆ.   ನಿನ್ನೆ ಕಾಂಗ್ರೆಸ್‌ ನಾಯಕರು ಮಂಡಿಸಿದ ಪೂರಕ ಬಜೆಟ್‌ ಬಗ್ಗೆ ವಿಚಾರ ಎತ್ತಿದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಪ್ರತಿ ಸಲ ಪ್ರಧಾನಿ ಮೋದಿ ಅವರ ಹೆಸರನ್ನು ಎಳೆದು ತರಲಾಗುತ್ತಿದೆ, …

Read More »

ಯತ್ನಾಳ್, ವಿ ಸೋಮಣ್ಣ ಅವರ ಪಾಪದ ಕೊಡ ತುಂಬಿದೆ: ರೇಣುಕಾಚಾರ್ಯ

ದಾವಣಗೆರೆ, ಡಿಸೆಂಬರ್​​ 14: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ವಿ. ಸೋಮಣ್ಣ ಅವರ ಪಾಪದ ಕೊಡ ತುಂಬಿದೆ. ಅವರು ನಾಶ ಆಗುತ್ತಾರೆ. ಇದೇ ಕಾರಣಕ್ಕೆ ಇಬ್ಬರು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಮಾತಾಡುತ್ತಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ(MP Renukacharya)ವಾಗ್ದಾಳಿ ಮಾಡಿದ್ದಾರೆ. ನಗದರಲ್ಲಿ ಮಾತನಾಡಿದ ಅವರು, ಇವರಿಬ್ಬರಿಗೂ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ದ ಮಾತನಾಡುವುದು ಬಿಟ್ಟು ಬೇರೆ ಕೆಲಸವಿಲ್ಲ ಎಂದು …

Read More »

ಬೆಳಗಾವಿ ಅಧಿವೇಶನಕ್ಕೆ ಇಂದು ತೆರೆ

ಬೆಳಗಾವಿ, ಡಿಸೆಂಬರ್ 15: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ (Belagavi Session) ಚಳಿಗಾಲದ ಅಧಿವೇಶನ (Winter Session) ಇಂದು ಕೊನೆಗೊಳ್ಳಲಿದೆ. ಅಧಿವೇಶನದಲ್ಲಿ ಅನೇಕ ವಿಚಾರಗಳು ಪ್ರಸ್ತಾಪವಾದರೆ, ಮತ್ತೆ ಕೆಲವು ವಿಷಯಗಳು ಕುರಿತ ಚರ್ಚೆಯೇ ಆಗಿಲ್ಲ. ಅಧಿವೇಶನ ಡಿಸೆಂಬರ್ 4 ರಿಂದ ಆರಂಭವಾಗಿದ್ದು ಈವರೆಗೆ ಉಪಯುಕ್ತ ಚರ್ಚೆಗಿಂತ ಗದ್ದಲ ಕೋಲಾಹಲದಲ್ಲೇ ಸದನ ಮುಳುಗಿಹೋಗಿದೆ. ಚರ್ಚೆಯಾಗಬೇಕಾದ ಸಾಕಷ್ಟು ವಿಚಾರಗಳು ಹಾಗೇ ಉಳಿದುಕೊಂಡಿವೆ. ಏನೆಲ್ಲ ಚರ್ಚೆಯಾಗಿಲ್ಲ? ಡಿಸಿಎಂ ಡಿ.ಕೆ.ಶಿವಕುಮಾರ್ ಮೇಲಿನ ಸಿಬಿಐ ಕೇಸ್ ವಾಪಸ್ ವಿಚಾರದಲ್ಲಿ ಪ್ರತಿಪಕ್ಷಗಳು ಅಷ್ಟೇನು ಗಂಭೀರ ಚರ್ಚೆ …

Read More »

ಹಾಸ್ಟೆಲ್ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಬೆಳಗಾವಿ: ಸೇವಾ ಭದ್ರತೆ, ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹಾಸ್ಟೆಲ್ ಹೊರ ಗುತ್ತಿಗೆ ನೌಕರರು ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ ನಲ್ಲಿ ಪ್ರತಿಭಟನೆ ನಡೆಸಿದರು. ಹಾಸ್ಟೆಲ್ ಹೊರ ಗುತ್ತಿಗೆ ನೌಕರರ ಸಂಘದ ಆಶ್ರಯದಲ್ಲಿ ನಡೆದ ಪ್ರತಿಭಟನೆಯಲ್ಲಿ‌ ಭಾಗಿಯಾಗಿದ್ದ ನೂರಕ್ಕೂ ಅಧಿಕ ಹೊರ ಗುತ್ತಿಗೆ ನೌಕರರು, ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು. ನಮಗೆ ಕನಿಷ್ಠ ವೇತನ ಸಿಗುತ್ತಿಲ್ಲ‌. ಪಿ ಎಫ್ ಕಟ್ಟುತ್ತಿಲ್ಲ, ಸಾಕಷ್ಟು ಮ್ಯಾನ್​​ ಪವರ್ …

Read More »

ತಮ್ಮ ಪಕ್ಷದ ವಿರುದ್ಧವೇ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಬೇಸರ

ಬೆಳಗಾವಿ: ಯಾರೇ ಮಂತ್ರಿಯಾಗಬೇಕಂದರೂ, ಅದಕ್ಕೆ ಜಾದು ಮಾಡ್ಬೇಕು. ನಮಗೆ ಮಂತ್ರಿಯಾಗೋ ಜಾದುವೇ ಗೊತ್ತಿಲ್ಲ. ಇನ್ನು ಮುಖ್ಯಮಂತ್ರಿಯಾಗೋದು ಎಲ್ಲಿಂದ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪರೋಕ್ಷವಾಗಿ ಬಿಜೆಪಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಚರ್ಚೆಯಲ್ಲಿ ಬಿ.ಆರ್‌. ಪಾಟೀಲ್‌ ಮಾತನಾಡುತ್ತಾ, ಕೇಂದ್ರ ಸಾರಿಗೆ ಸಚಿವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯ ಕೆಲಸ ಮಾಡುವ ಕನಸುಗಳಿವೆ. ಆದರೆ, ನಿಮ್ಮವರು ಅದನ್ನು ಮಾಡಲು ಬಿಡುತ್ತಿಲ್ಲ. ನನಗೆ ಅನುಕಂಪ ಇದೆ …

Read More »

ಬಾಕಿ ಬಿಲ್ ಕೊಡಿ ಇಲ್ಲ ವಿಷ ಕೊಡಿ:

ಬೆಳಗಾವಿ : ಪೂರ್ಣಗೊಂಡ ಕಾಮಗಾರಿಗಳ ಬಾಕಿ ಬಿಲ್ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿದ್ದ ಗುತ್ತಿಗೆದಾರರು‌ ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್​ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಸರ್ಕಾರಿ ಗುತ್ತಿಗೆದಾರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಅವರು ಬಾಕಿ ಬಿಲ್ ಕೊಡಿ ಇಲ್ಲವೇ ವಿಷ ಕೊಡಿ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಬೃಹತ್ ಮತ್ತು ಮಧ್ಯಮ ನೀರಾವರಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

Read More »

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ನಾಮಕರಣ ಮಾಡುವ ನಿರ್ಣಯ ಅಂಗೀಕಾರ

ಬೆಳಗಾವಿ : ವಿಧಾನಸಭೆಯಲ್ಲಿ ರಾಜ್ಯದ ನಾಲ್ಕು ಏರ್​ಪೋರ್ಟ್​ಗಳಿಗೆ ನಾಮಕರಣ ಮಾಡುವ ನಿರ್ಣಯ ಅಂಗೀಕಾರ ಪಡೆದುಕೊಳ್ಳಲಾಯಿತು. ಈ ಸಂಬಂಧ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಸಚಿವ ಎಂ.ಬಿ ಪಾಟೀಲ್, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಣಯ ಮಂಡಿಸಿದರು.   ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ ಹೆಸರು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ …

Read More »

ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ವಿಧೇಯಕ ಅಂಗೀಕಾರ-ಕನಿಷ್ಠ 500 ಕೋಟಿ ರೂ

ಬೆಂಗಳೂರು : ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ವಿಧೇಯಕ- 2023ನ್ನು ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ ಅವರು ವಿಧಾನ ಪರಿಷತ್ತಿನಲ್ಲಿ ಮಂಡಿಸಿದರು. ಸಭಾಪತಿ ಬಸವರಾಜ ಹೊರಟ್ಟಿ ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದಾಗ ಸದಸ್ಯರು ಸರ್ವಾನುಮತದಿಂದ ಮೇಜು ಕುಟ್ಟಿ ತಮ್ಮ ಬೆಂಬಲ ವ್ಯಕ್ತಪಡಿಸಿದರು. ವಿಧೇಯಕವು ವಿಧಾನಪರಿಷತ್ತಿನಲ್ಲಿ ಅಂಗೀಕಾರ ಪಡೆಯಿತು. ಸದಸ್ಯ ರವಿಕುಮಾರ್ ಮಾತನಾಡಿ, ಪ್ರಾಧಿಕಾರ ರಚಿಸುತ್ತಿರುವುದು ಸ್ವಾಗತಾರ್ಹ. ಕನಿಷ್ಠ 500 ಕೋಟಿ ರೂ.ಮೀಸಲಿಟ್ಟು …

Read More »