Breaking News

ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ,

ಶಿವಮೊಗ್ಗ: ಹಾಡಹಗಲೇ ಇಬ್ಬರು ರೌಡಿಶೀಟರ್ ಗಳನ್ನು ನಡುರಸ್ತೆಯಲ್ಲಿ ಹತ್ಯೆಗೈದ ಭಯಾನಕ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಬುಧವಾರ ನಡೆದಿದೆ. ಹತ್ಯೆಯಾದವರನ್ನು ತುಂಗಾನಗರದ ಸೊಹೈಲ್ (35) ಮತ್ತು ದೊಡ್ಡಪೇಟೆ ಮೊಹಮ್ಮದ್ ಗೌಸ್(30) ಎಂದು ಹೇಳಲಾಗಿದೆ. ರೌಡಿ ಶೀಟರ್ ಯಾಸೀನ್ ಕುರೇಶಿ ಮೇಲೆ ದಾಳಿ ಮಾಡಲು ಬಂದ ತಂಡ ಯಾಸೀನ್ ಗೆ ಚಾಕುವಿನಿಂದ ಇರಿದಿದೆ ಇದಕ್ಕೆ ಪ್ರತಿದಾಳಿ ಮಾಡಿರುವ ಯಾಸೀನ್ ಕುರೇಶಿ ಗ್ಯಾಂಗ್ ದಾಳಿಗೆ ಬಂದಿದ್ದ ಇಬ್ಬರು ರೌಡಿಶೀಟರ್ ಗಾಲ ಮೇಲೆ …

Read More »

ಪ್ರಜ್ವಲ್‌ ಪರವಾಗಿ ಮಾತನಾಡುವುದಿಲ್ಲ,ರೇವಣ್ಣ ಪರ ಮಾತ್ರ ಹೋರಾಟ: H.D.K.

ಬೆಂಗಳೂರು: ನಾನು ಪ್ರಜ್ವಲ್‌ ಪರವಾಗಿ ಮಾತನಾಡುವುದಿಲ್ಲ. ಸತ್ಯಾ ಸತ್ಯತೆ ಹೊರಬರಲಿ. ಆದರೆ ರೇವಣ್ಣ ವಿಷಯದಲ್ಲಿ ಸರಕಾರ ಹೇಗೆ ನಡೆದುಕೊಳ್ಳುತ್ತಿದೆ. ಅಧಿಕಾರ ದುರ್ಬಳಕೆ ಆಗುತ್ತಿದೆ ಎಂಬುದು ಗೊತ್ತಿದೆ. ಹೀಗಾಗಿ ರೇವಣ್ಣ ಪರವಾಗಿ ಹೋರಾಟ ಮುಂದುವರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರಕ್ತ ಸಂಬಂಧಿ, ಸಹೋದರ ಎನ್ನುವ ಕಾರಣಕ್ಕೆ ರೇವಣ್ಣ ಪರವಾಗಿ ಹೋರಾಟ ಮಾಡುವುದಿಲ್ಲ. ಒಕ್ಕಲಿಗ ನಾಯಕನಾಗಿಯೂ ಹೋರಾಡುವುದಿಲ್ಲ. ಯಾವ ಒಕ್ಕಲಿಗ …

Read More »

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಮೈಸೂರು: ಸಂಸದ ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ಜಾಲವೂ ಒಳಗೊಂಡಿದೆ. ಕೂಡಲೇ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಆಗ್ರಹಿಸಿದರು. ಪೆನ್‌ಡ್ರೈವ್‌ ಹಂಚಿಕೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಕೈವಾಡ ಹಾಗೂ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್‌ನಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, 3 ಕೋಟಿ ರೂ. ನೀಡಿ ಚೆನ್ನೈ ಕಂಪೆನಿಯೊಂದರಿಂದ ಪೆನ್‌ಡ್ರೈವ್‌ ಖರೀದಿಸಿದ್ದಾರೆ. ಬಳಿಕ ಮಲೇ ಷಿ ಯಾಕ್ಕೆ ಹೋಗಿ ಅಲ್ಲಿನ ಲ್ಯಾಬ್‌ ನಲ್ಲಿ ವೀಡಿಯೋ ಅಪ್‌ಲೋಡ್‌ ಮಾಡಲಾಗಿದೆ ಎಂದು ಆರೋಪಿಸಿದರು. ಮಾಜಿ …

Read More »

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ಬೆಂಗಳೂರು: ಸಣ್ಣ ನೀರಾವರಿ ಸಚಿವ ಎನ್‌.ಎಸ್‌.ಬೋಸರಾಜ್‌ ಅವರದ್ದು ಸಹಿತ ವಿಧಾನ ಪರಿಷತ್ತಿನ 11 ಸ್ಥಾನಗಳು ಜೂನ್‌ ತಿಂಗಳಲ್ಲಿ ಖಾಲಿಯಾಗಲಿದ್ದು, ಮೇಲ್ಮನೆ ಪ್ರವೇಶಕ್ಕೆ ಈಗ ಮೂರು ಪಕ್ಷಗಳಲ್ಲೂ ತೆರೆಮರೆಯಲ್ಲಿ ಲಾಬಿ ಪ್ರಾರಂಭಗೊಂಡಿದೆ. ಕೋಟ ಶ್ರೀನಿವಾಸ ಪೂಜಾರಿ ಸಂಸತ್‌ ಪ್ರವೇಶಿಸಿದರೆ ಪರಿಷತ್‌ ವಿಪಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕುವ ಅನಿವಾರ್ಯತೆ ಬಿಜೆಪಿಗಿದೆ. ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಚುನಾಯಿತರಾದ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು, ಆಡಳಿತಾರೂಢ ಕಾಂಗ್ರೆಸ್‌ಗೆ ಸಂಖ್ಯಾಬಲದ ಆಧಾರದಲ್ಲಿ ಈ ಬಾರಿ ಸಿಂಹಪಾಲು ಪರಿಷತ್‌ …

Read More »

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

ಬೆಂಗಳೂರು: ಪ್ರಕರಣದ ವಿಶೇಷ ತನಿಖಾ ತಂಡ ಒಂದು ದಿಕ್ಕಿನಲ್ಲಿ ಮಾತ್ರ ತನಿಖೆ ನಡೆಸುತ್ತಿದೆ. ಹೀಗಾಗಿ ಗುರುವಾರ ಕೋರ್ಟ್‌ ನಲ್ಲಿ ಎಸ್‌ಐಟಿ ವಿರುದ್ಧ ಕ್ರಿಮಿನಲ್‌ ಆರೋಪದಡಿ ಖಾಸಗಿ ಪ್ರಕರಣ ದಾಖಲಿಸುತ್ತೇವೆ ಎಂದು ಹಾಸನ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆಪ್ರಕರಣದಲ್ಲಿ ಕಾರ್ತಿಕ್‌ನ ವಿಚಾರಣೆ ನಡೆಸಲಾಗಿದೆ. ಆದರೆ ಆತನನ್ನು ಬಂಧಿಸಿಲ್ಲ. ಇನ್ನು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ರೇವಣ್ಣ ಅವರನ್ನು ಬಂಧಿಸಲಾಗಿದೆ. ಆದರೆ ಕಾರ್ತಿಕ್‌ ಜಾಮೀನು ಅರ್ಜಿ …

Read More »

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

ಬೆಂಗಳೂರು: ಹಾಸನದ ಅಶ್ಲೀಲ ವೀಡಿ ಯೋಗಳ ಪೆನ್‌ಡ್ರೈವ್‌ ಪ್ರಕರಣದ ಆರೋಪ ಎದುರಿ ಸುತ್ತಿರುವ ಸಂಸದ ಪ್ರಜ್ವಲ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿ ವಾರ ಕಳೆದಿದ್ದು, ವಿದೇಶ ದಿಂದ ಬೆಂಗಳೂರಿಗೆ ಬರುವುದನ್ನೇ ಎಸ್‌ಐಟಿ ಕಾದು ಕುಳಿತಿದೆ. ಆದರೆ ಬಂಧನ ಭೀತಿಯಿಂದಾಗಿ ಸದ್ಯಕ್ಕೆ ಪ್ರಜ್ವಲ್‌ ದೇಶಕ್ಕೆ ವಾಪಸಾಗುವುದೇ ಅನುಮಾನ ಎನ್ನಲಾಗುತ್ತಿದೆ.   ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್‌ ಕೊಟ್ಟ ಬಳಿಕ ವಿಚಾರಣೆಗೆ ಹಾಜರಾಗಲು 7 ದಿನ ಕಾಲಾವಕಾಶ ಕೇಳಿದ್ದರು. ಆದರೆ ಇದನ್ನು ಎಸ್‌ಐಟಿ ತಿರಸ್ಕರಿಸಿತ್ತು. ಈಗ …

Read More »

ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

ಬೆಳಗಾವಿ: ಪ್ರಜ್ವಲ್‌ ರೇವಣ್ಣ ವೀಡಿಯೋಗಳ ಪೆನ್‌ಡ್ರೈವ್‌ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೆಸರು ಹಿಂದಿನಿಂದಲೂ ಕೇಳಿಬರುತ್ತಿದೆ. ಎಸ್‌ಐಟಿ ತನಿಖೆಯಿಂದ ನಮಗೆ ನ್ಯಾಯ ಸಿಗುವುದಿಲ್ಲ ಎಂದು ಜೆಡಿಎಸ್‌ ನಾಯಕರು ಹೇಳುತ್ತಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಆಗ್ರಹಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಚುನಾವಣೆಗೂ, ಪ್ರಜ್ವಲ್‌ ಪ್ರಕರಣಕ್ಕೂ, ವೈರಲ್‌ ಆಗಿರುವ ಶಿವಕುಮಾರ್‌ ಆಡಿಯೋಗೂ ಸಂಬಂಧವಿಲ್ಲ. ಇದು ಬಿಜೆಪಿಯ ಫಲಿತಾಂಶದ ಮೇಲೆ …

Read More »

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಬೆಂಗಳೂರು: ಅಶ್ಲೀಲ ಪೆನ್‌ಡ್ರೈವ್‌ ಪ್ರಕರಣದಿಂದ ಮುಜುಗರಕ್ಕೆ ಸಿಲುಕಿರುವ ಬಿಜೆಪಿ ನಾಯಕರು ಲೋಕಸಭಾ ಚುನಾವಣೆಯ ಫ‌ಲಿತಾಂಶ ಪ್ರಕಟಕ್ಕೆ ಮೊದಲೇ ಬಾಹ್ಯ ಮೈತ್ರಿಯನ್ನು ಕಡಿದುಕೊಳ್ಳುವರೇ ಎಂಬ ಚರ್ಚೆ ಆರಂಭವಾಗಿದ್ದು, ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆಯೇ ಎಂಬ ಪ್ರಶ್ನೆ ಉದ್ಭವವಾಗಿದೆ. ವಿಪಕ್ಷ ನಾಯಕ ಆರ್‌.ಅಶೋಕ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆಗಳಿಂದ ಎರಡೂ ಪಕ್ಷಗಳ ಪಡಸಾಲೆಯಲ್ಲಿ ಈ ಚರ್ಚೆ ಪ್ರಾರಂಭಗೊಂಡಿದೆ. ಮುಜುಗರ ಎದುರಾದರೆ ಬಿಜೆಪಿ ನಾಯಕರು ಮೈತ್ರಿ ಮುರಿದುಕೊಳ್ಳಬಹುದು ಎಂದು ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲೇ …

Read More »

ಪ್ರಧಾನಿ ಮೋದಿ ಹೇಳಿದ 15 ಸುಳ್ಳುಗಳ ಪಟ್ಟಿ ಬಿಡುಗಡೆ ಮಾಡಿದ ಸಿದ್ದರಾಮಯ್ಯ

ಬೆಂಗಳೂರು, ಮೇ 09: ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣಾ ಪ್ರಚಾರ ಕಾಲದಲ್ಲಿ ಹೇಳುತ್ತಿರುವ ಸುಳ್ಳುಗಳ ನೆನಪಾಯಿತು ಎಂದು 15 ವಿಚಾರಗಳ ಪಟ್ಟಿಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಚಿಕೊಂಡಿದ್ದಾರೆ. ಈ ಕುರಿತು ಟ್ವೀಟ್‌ ಮೂಲಕ ತಿಳಿಸಿರುವ ಸಿದ್ದರಾಮಯ್ಯ ಅವರು, ಸುಮ್ಮನೆ ಲೆಕ್ಕ ಹಾಕತೊಡಗಿದೆ. ಸದ್ಯಕ್ಕೆ ಇಷ್ಟು ನೆನಪಾಯಿತು. ಹೆಚ್ಚುವರಿಯಾಗಿ ನಿಮಗೆ ನೆನಪಾದರೆ ಇದಕ್ಕೆ ಸೇರಿಸಿಕೊಳ್ಳಿ. ಈ ಸುಳ್ಳುಗಳ ಸರಮಾಲೆ ಇಲ್ಲಿಗೆ …

Read More »

ನನ್ನ ವಿಡಿಯೋ ಬಿಟ್ಟವ್ರೆ, ಮಾಜಿ ಸಿಎಂ ಪುತ್ರನನ್ನು ಅರೆಸ್ಟ್ ಮಾಡಿ : ಕೆ ಎಸ್‌ ಈಶ್ವರಪ್ಪ ಹೇಳಿದ್ದೇನು?

ಶಿವಮೊಗ್ಗ, ಮೇ 08: ಕೆ ಎಸ್‌ ಈಶ್ವರಪ್ಪ ಅವರ ಪುತ್ರನಿಗೆ ಹಾವೇರಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ, ಶಿವಮೊಗ್ಗ ಕ್ಷೇತ್ರದಿಂದ ಈಶ್ವರಪ್ಪ ಪಕ್ಷೇತರವಾಗಿ ಸರ್ಧೆ ಮಾಡಿದ್ದು, ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹೌದು, ಈ ಹಿಂದೆ ಬಿಜೆಪಿಯಲ್ಲಿದ್ದ ಮಾಜಿ ಉಪಮುಖ್ಯಮಂತ್ರಿ ಕೆ ಎಸ್‌ ಈಶ್ವರಪ್ಪ ಅಟವರು 2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಶಿವಮೊಗ್ಗ ಅಭ್ಯರ್ಥಿಯಾಗಿದ್ದ ಬಿ …

Read More »