Breaking News

ಎನ್​ಡಿಆರ್​ಎಫ್​, ಎಸ್​​ಡಿಆರ್​ಎಫ್​ ನಿಯಮಗಳ ಪ್ರಕಾರ ರೈತರ ಖಾತೆಗೆ ಹಣ ಹಾಕಿ: ಹಾವೇರಿ ರೈತರ ಆಗ್ರಹ

ಹಾವೇರಿ: ಜಿಲ್ಲೆಯು ಹಿಂದೆಂದೂ ಕಾಣರಿಯದ ಬರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಹೀಗಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಮಯದಲ್ಲಿ ನೆರವಿಗೆ ಧಾವಿಸಬೇಕಿದ್ದ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಕೈಕಟ್ಟಿ ಕುಳಿತಿವೆ ಎಂದು ಜಿಲ್ಲಾ ರೈತ ಸಂಘ ಮತ್ತು ಹಸಿರು ಸೇನೆ ಆರೋಪಿಸಿದೆ. ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, “ಹಾವೇರಿ ಕೃಷಿ ಪ್ರಧಾನ ಜಿಲ್ಲೆ, ಆದ್ರೆ ಸತತ ಮೂರು ವರ್ಷ ಅತಿವೃಷ್ಟಿ ಇತ್ತು. ಈ ವರ್ಷ ಬರಗಾಲ ಉಂಟಾಗಿದೆ, …

Read More »

ಪ್ರಿಯಾಂಕಾ ಉಪೇಂದ್ರ ಹುಟ್ಟುಹಬ್ಬ: ಡ್ರೋನ್​ ಮೂಲಕ ರಿವೀಲ್ ಆಯ್ತು ‘ಕ್ಯಾಪ್ಚರ್’ ಪೋಸ್ಟರ್

‘ಕ್ಯಾಪ್ಚರ್​’ ಸಿನಿಮಾ ತಂಡ ಪ್ರಿಯಾಂಕಾ ಉಪೇಂದ್ರ ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದರು. ಕನ್ನಡ ಚಿತ್ರರಂಗದ ನಟಿ ಪ್ರಿಯಾಂಕಾ ಉಪೇಂದ್ರ ಅವರಿಗಿಂದು 46ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ರಿಯಲ್​ ಸ್ಟಾರ್​ ಪತ್ನಿಗೆ ಸ್ನೇಹಿತರು, ಅಭಿಮಾನಿಗಳು, ಆತ್ಮೀಯರು ಹಾಗೂ ಸ್ಯಾಂಡಲ್​​ವುಡ್​​ ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ಕೋರುತ್ತಿದ್ದಾರೆ. ಇಂದು ಪ್ರಿಯಾಂಕಾ ಅವರು ಅಭಿಮಾನಿಗಳು ಹಾಗೂ ಕುಟುಂಬಸ್ಥರ ಜೊತೆ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಅಲ್ಲದೇ, ‘ಕ್ಯಾಪ್ಚರ್​’ ಸಿನಿಮಾ ತಂಡ ಪ್ರಿಯಾಂಕಾ ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ …

Read More »

ಸಚಿವರಿಗೆ ಹಣ ಸಂಗ್ರಹದ ಟಾರ್ಗೆಟ್ ನೀಡಲಾಗಿದೆ:H.D.K.

ಸಚಿವರಿಗೆ ಹಣ ಸಂಗ್ರಹದ ಟಾರ್ಗೆಟ್ ನೀಡಲಾಗಿದೆ ಬೆಂಗಳೂರು: “ಕರ್ನಾಟಕದಲ್ಲಿ ಕಾಂಗ್ರೆಸ್ ತಂದಿರುವ ಪಂಚ ಗ್ಯಾರಂಟಿಗಳನ್ನು ತೆಲಂಗಾಣ ಸೇರಿದಂತೆ ಪಂಚರಾಜ್ಯಗಳ ಜನತೆ ನಂಬಬಾರದು. ಈ ಗ್ಯಾರಂಟಿಗಳಿಗೆ ಯಾವ ಕಾರಣಕ್ಕೂ ಮರುಳಾಗಬೇಡಿ, ಕಾಂಗ್ರೆಸ್ ಮೋಸ ಮಾಡುತ್ತಿದೆ” ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ತೆಲಂಗಾಣದಲ್ಲಿ ನಮ್ಮ ಟೆಂಪರರಿ ಚೀಫ್ ಮಿನಿಸ್ಟರ್, ಡೂಪ್ಲಿಕೇಟ್ ಚೀಫ್ ಮಿನಿಸ್ಟರ್​ಗಳು ಹಾಗೂ …

Read More »

ಪಂಚರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯದಲ್ಲಿ ಬಿಜೆಪಿ ಬಹುಮತದೊಂದಿಗೆ ಆಡಳಿತಕ್ಕೆ ಬರುತ್ತದೆ ಎಂದ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಪಂಚರಾಜ್ಯ ಚುನಾವಣೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ ಈ ಮೂರು ರಾಜ್ಯದಲ್ಲಿ ಬಿಜೆಪಿ ಬಹುಮತದೊಂದಿಗೆ ಆಡಳಿತಕ್ಕೆ ಬರುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈಗಾಗಲೇ ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಜನರಿಗೆ ಮಾಡಿದ ಮೋಸದಂತೆ ರಾಜಸ್ಥಾನದಲ್ಲಿ ಮಾಡಿದ್ದಾರೆ” ಎಂದು ಕಿಡಿಕಾರಿದರು. “ಕರ್ನಾಟಕ ಸರ್ಕಾರ ಉಚಿತದ ಹೆಸರಿನಲ್ಲಿ ಹೇಳೋದು ಒಂದು ಮಾಡೋದು ಒಂದು ರೀತಿ. …

Read More »

ಯೋಧರೊಂದಿಗೆ ಬೆಳಕಿನ ಹಬ್ಬ ಆಚರಿಸಿದ ಮೋದಿ

ಹಿಮಾಚಲಪ್ರದೇಶ): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿವರ್ಷದಂತೆ ಈ ಬಾರಿಯೂ ಬೆಳಕಿನ ಹಬ್ಬ ದೀಪಾವಳಿಯನ್ನು ಗಡಿ ಕಾಯುತ್ತಿರುವ ಸೈನಿಕರೊಂದಿಗೆ ಆಚರಿಸಿದ್ದಾರೆ. ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ಹಬ್ಬದ ಶುಭಾಶಯ ಕೋರಿದ್ದಾರೆ. ಹಿಮಾಚಲಪ್ರದೇಶದ ಲೆಪ್ಚಾ ಪೋಸ್ಟ್​ಗೆ ಭಾನುವಾರ ಭೇಟಿ ನೀಡಿದ ಪ್ರಧಾನಿ, ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದರು. ಐಟಿಬಿಪಿ ಸೇನಾಧಿಕಾರಿಗಳ ಸಮವಸ್ತ್ರದಲ್ಲಿದ್ದ ಪ್ರಧಾನಿ ಭಾರತ್​ ಮಾತಾ ಕೀ ಜೈ ಎಂದು ಘೋಷಣೆ ಕೂಗಿದರು. ಬಳಿಕ ಮಾತನಾಡಿದ …

Read More »

ಪರಪ್ಪನ ಅಗ್ರಹಾರದಲ್ಲಿರುವ ಚೈತ್ರಾ ಮೇಲೆ ಮಹಿಳಾ ಕೈದಿಗಳಿಂದ ಹಲ್ಲೆ

 (ಬೆಂಗಳೂರು): ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಚೈತ್ರಾ ಮೇಲೆ ಆಫ್ರಿಕನ್ ಮಹಿಳಾ ಕೈದಿಗಳಿಂದ ಹಲ್ಲೆಯಾಗಿದೆ ಎಂದು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಷ್ಟ್ರಗೀತೆ ವಿಚಾರಕ್ಕೆ ನಡೆದ ಜಗಳದಲ್ಲಿ ಚೈತ್ರಾ ಮೇಲೆ ಆಫ್ರಿಕನ್ ಮಹಿಳಾ ಕೈದಿಗಳಿಂದ ಹಲ್ಲೆ ನಡೆದಿದೆ. ಇಂದು ಮಧ್ಯಾಹ್ನ ಮಹಿಳಾ ವಿಚಾರಣಾಧೀನ ಕೈದಿಗಳ ಬ್ಯಾರಕ್‌ನಲ್ಲಿ ರಾಷ್ಟ್ರಗೀತೆ ವಿಚಾರಕ್ಕೆ ಆಫ್ರಿಕನ್ ಮಹಿಳಾ ಕೈದಿಗಳು ಮತ್ತು ಚೈತ್ರಾ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಆಫ್ರಿಕನ್ ಮಹಿಳಾ ಕೈದಿಗಳು …

Read More »

ಅಮಲು ಪದಾರ್ಥ ಕುಡಿಸಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ

ಚಿಕ್ಕಮಗಳೂರು: ನರ್ಸ್​ವೊಬ್ಬಳು ತನ್ನ ಪ್ರಿಯಕರನಿಗಾಗಿ​ ವಸತಿ ಶಾಲೆಯ ಅಪ್ರಾಪ್ತ ವಯಸ್ಸಿನ ಹುಡುಗಿಯರಿಗೆ ಅಮಲು ಪದಾರ್ಥ ನೀಡಿ ಪ್ರಜ್ಞೆ ತಪ್ಪಿಸಿ ತನ್ನ ಲವರ್ ಜೊತೆ ಬಿಡುತ್ತಿದ್ದ ಪ್ರಕರಣವೊಂದು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಈ ಪ್ರಕರಣದಡಿ ನರ್ಸ್​ ಸೇರಿ ಮೂವರು ಆರೋಪಿಗಳನ್ನು ಕಡೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ವಸತಿ ಶಾಲೆಯ ಪ್ರಾಂಶುಪಾಲರು ಕಡೂರು ಠಾಣೆಗೆ ದೂರು ನೀಡಿದ್ದು, ತನಿಖೆ ಮುಂದುವರಿದಿದೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ವಸತಿ ಶಾಲೆಯ ಪಕ್ಕದ ಹಳ್ಳಿಯಲ್ಲಿ ಎನ್‌ಎಂ …

Read More »

ಆಟಗಾರರು ಸಾಂಪ್ರದಾಯಿಕ ಉಡುಗೆ ತೊಟ್ಟು ದೀಪಾವಳಿ ಹಬ್ಬವನ್ನು ಆದ್ಧೂರಿಯಾಗಿ ಆಚರಿಸಿದರು.

ಬೆಂಗಳೂರು: ದೇಶಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಜೊತೆಗೆ ವಿಶ್ವಕಪ್​ನ ಲೀಗ್ ಹಂತದ ಕೊನೆ ಪಂದ್ಯಾಟಕ್ಕೆ ಬೆಂಗಳೂರಿಗೆ ಬಂದಿಳಿದಿರುವ ಭಾರತ ತಂಡದ ಆಟಗಾರರು ದೀಪಾವಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು. ಇಂದು ಭಾರತ ಮತ್ತು ನೆದರ್ಲೆಂಡ್ಸ್​ ನಡುವಿನ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ಭಾರತವು ಲೀಗ್ ಹಂತದ 8 ಪಂದ್ಯಗಳಲ್ಲಿ ಗೆದ್ದು ಬೀಗಿದ್ದು, ಸೆಮಿಫೈನಲ್​ ಸೆಣಸಾಟಕ್ಕೆ ಸಜ್ಜಾಗಿದೆ. ಭಾರತವು ಇಂದು ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ನೆದರ್ಲೆಂಡ್ಸ್​ ತಂಡವನ್ನು …

Read More »

ಚಿಕ್ಕೋಡಿ ತಾಲೂಕಿನ ಚಿಂಚಣಿಯ ಸಿದ್ಧಸಂಸ್ಥಾನ ಮಠದ ಅಲ್ಲಮಪ್ರಭು ಸ್ವಾಮೀಜಿ ಅನಾರೋಗ್ಯದಿಂದ ಲಿಂಗೈಕ್ಯ

ಬೆಳಗಾವಿ: ಗಡಿ ಭಾಗದಲ್ಲಿ ಕನ್ನಡದ ಮಠ ಎಂದೇ ಪ್ರಖ್ಯಾತಿ ಪಡೆದಿರುವ ಚಿಕ್ಕೋಡಿ ತಾಲೂಕಿನ ಚಿಂಚಣಿಯ ಸಿದ್ಧಸಂಸ್ಥಾನ ಮಠದ ಪೀಠಾಧಿಪತಿ ಅಲ್ಲಮಪ್ರಭು ಸ್ವಾಮೀಜಿ ಇಂದು ಬೆಳಗಿನ ಜಾವ ಲಿಂಗೈಕ್ಯರಾಗಿದ್ದಾರೆ. ಹಲವು ದಶಕಗಳಿಂದ ಗಡಿಯಲ್ಲಿ ಕನ್ನಡ ಕಟ್ಟುವ ಕೈಂಕರ್ಯ ತೊಟ್ಟಿದ್ದ ಚಿಂಚಣಿಯ ಅಲ್ಲಮಪ್ರಭು ಸ್ವಾಮೀಜಿ ಕನ್ನಡಪರ ಕಾರ್ಯಕ್ರಮಗಳ ಮೂಲಕ ನಾಡಿನ ಮನೆ ಮಾತಾಗಿದ್ದರು. ಕಿಡ್ನಿ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ಸ್ವಾಮೀಜಿ ಹಲವು ದಿನಗಳಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ …

Read More »

ಯುವತಿಯರ ಡೀಪ್​ ಫೇಕ್ ಫೋಟೋ ಪ್ರಕರಣ: ಎಸ್​ಪಿ ಪ್ರತಿಕ್ರಿಯೆ

ಬೆಳಗಾವಿ: ದೇಶಾದ್ಯಂತ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್​ ಫೇಕ್ ವಿಡಿಯೋ ಸದ್ದು ಮಾಡುತ್ತಿರುವಾಗಲೇ ಬೆಳಗಾವಿ ಜಿಲ್ಲೆಯಲ್ಲಿ ಡೀಪ್ ಫೇಕ್ ಫೋಟೋ ಎಡಿಟ್ ಪ್ರಕರಣ ಬೆಳಕಿಗೆ ಬಂದಿದೆ. ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಹಾಗೂ ಆಕೆಯ ಇಬ್ಬರು ಸ್ನೇಹಿತೆಯರ ನಗ್ನ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ ಖಾನಾಪುರದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಯುವಕನ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಳು. ಇದರಿಂದಾಗಿ ನಿನ್ನ ಮತ್ತು ಸ್ನೇಹಿತೆಯರ …

Read More »