Breaking News

”ಠೇವಣಿ ಏಜೆಂಟ್​ಗಳಿಂದ ಪಿಗ್ಮಿ ಕಲೆಕ್ಷನ್​ಗಳಲ್ಲಿ ಈಗಾಗಲೇ ಅನೇಕ ಅವ್ಯವಹಾರ ಪ್ರಕರಣಗಳು ಬೆಳಕಿಗೆ ಬಂದಿವೆ.

ಬೆಳಗಾವಿ: ”ಸಹಕಾರ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪಿಕೆಪಿಎಸ್, ಡಿಸಿಸಿ ಬ್ಯಾಂಕ್, ಅರ್ಬನ್ ಸೊಸೈಟಿಗಳಲ್ಲಿ ಹಣ ಕಬಳಿಸಿ, ದುರುಪಯೋಗಪಡಿಸಿಕೊಂಡು ಸಂಸ್ಥೆಗಳಿಗೆ ವಂಚನೆ ಎಸಗುವವರ ವಿರುದ್ಧ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು” ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್ ರಾಜಣ್ಣ ಸೂಚನೆ ನೀಡಿದರು. ಸುವರ್ಣ ವಿಧಾನ ಸೌಧದ ಕಾನ್ಫರೆನ್ಸ್ ಹಾಲ್​ನಲ್ಲಿ ಇಂದು ನಡೆದ ಬೆಳಗಾವಿ ಪ್ರಾಂತ್ಯದ ಇಲಾಖಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ”ಜಿಲ್ಲೆಗಳ ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ …

Read More »

ವಿಟಿಯು 23ನೇ ಘಟಿಕೋತ್ಸವ ಜರುಗಿದ್ದು, ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರ ಅಧ್ಯಕ್ಷತೆಯಲ್ಲಿ ಚಿನ್ನದ ಪದಕ ವಿಜೇತರು ಹಾಗೂ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಎ ಪಿ ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಮಂಗಳವಾರ 23ನೇ ಘಟಿಕೋತ್ಸವ ಜರುಗಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ‌ ಚಿನ್ನದ ಪದಕ ವಿಜೇತರು ಹಾಗೂ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಭಾರತೀಯ ತಂತ್ರಜ್ಞಾನ ಸಂಸ್ಥೆ ಮದ್ರಾಸ್ ನಿರ್ದೇಶಕ ಪ್ರೊ. ವಿ. ಕಾಮಕೋಟಿ ಅವರು ಘಟಿಕೋತ್ಸವ ಭಾಷಣ ಮಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸನ್ನು ನನಸು ಮಾಡಿಕೊಳ್ಳಲು …

Read More »

ಟೊಮೆಟೊ ಕಳ್ಳನನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ ರೈತ

ಚಿಕ್ಕೋಡಿ (ಬೆಳಗಾವಿ) : ಕಳೆದ ಎರಡು ತಿಂಗಳಿಂದ ಟೊಮೆಟೊ ಬೆಲೆ ಗಗನಕ್ಕೇರಿದ್ದು, 200 ರೂ. ಗಡಿ ಮುಟ್ಟಿದೆ. ಗ್ರಾಹಕರ ಜೇಬಿಗೆ ಹೊರೆಯಾಗಿ ಪರಿಣಮಿಸಿರುವ ಟೊಮೆಟೊ, ರೈತರಿಗೆ ಹೆಚ್ಚಿನ ಲಾಭವನ್ನು ತಂದುಕೊಡುತ್ತಿದೆ. ಆದರೆ ಇತ್ತೀಚೆಗೆ ತೋಟಕ್ಕೆ ನುಗ್ಗಿ ಟೊಮೆಟೊ ಕಳ್ಳತನ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ನಡುವೆ ರೈತರೋರ್ವರು ಟೊಮೆಟೊ ಕಳ್ಳನನ್ನು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ರಾಯಭಾಗ ತಾಲೂಕಿನ ಸಿದ್ದಾಪೂರ ಗ್ರಾಮದ ಬುಜಪ್ಪಾ ಗಾಣಗೇರ ಎಂಬುವರು ಟೊಮೆಟೊ ಕಳ್ಳತನ …

Read More »

ಲೋಕಸಭೆ ಚುನಾವಣೆ ಕುರಿತು ಚರ್ಚೆ ನಡೆಸಲು ದೆಹಲಿಯಲ್ಲಿ ಹೈಕಮಾಂಡ್ ಸಭೆ : ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ

ಚಿಕ್ಕೋಡಿ (ಬೆಳಗಾವಿ): ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆ ಪಕ್ಷ ಸಂಘಟನೆಯ ಕುರಿತು ಚರ್ಚೆ ನಡೆಸಲು ದೆಹಲಿಯಲ್ಲಿ ಹೈಕಮಾಂಡ್ ಸಭೆ ಕರೆದಿದೆ. ಈ ನಿಟ್ಟಿನಲ್ಲಿ ಕೆಲವರು ದೆಹಲಿಗೆ ಹೊರಟಿದ್ದೇವೆ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಕೆಡಿಪಿ ಸಭೆ ನಡೆಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವರ ವಿರುದ್ಧ ಶಾಸಕರು ದೂರು ನೀಡಿದ ವಿಚಾರವಾಗಿ …

Read More »

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಂತೋಷ ಕಕಮರಿ 31 ಮತ ಪಡೆದು ಆಯ್ಕೆ

ಚಿಕ್ಕೋಡಿ: ರಾಜ್ಯದಲ್ಲೇ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆ ಪಡೆದಿರುವ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಚ್ಚರಿಯ ಎಂಬಂತೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದು, ಸ್ಥಳೀಯ ಶಾಸಕರು ಹಾಗೂ ಕಾಂಗ್ರೆಸ್ ವಲಯಕ್ಕೆ ಭಾರಿ ನಿರಾಸೆ ಮೂಡಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಂತೋಷ ಕಕಮರಿ 31 ಮತ ಪಡೆದು …

Read More »

ಬಿಜೆಪಿ ಲೀಡರ್ ಲೆಸ್ ಪಾರ್ಟಿ: ಶೆಟ್ಟರ್

ಬಿಜೆಪಿ ಲೀಡರ್ ಲೆಸ್ ಪಾರ್ಟಿಯಾಗಿದ್ದು, ದಯನೀಯ ಸ್ಥಿತಿಗೆ ಹೋಗುತ್ತಿದೆ ಎಂದು ಮಾಜಿ ಸಿಎಂ ಹಾಗೂ ವಿಧಾನ ಪರಿಷತ್ ಸದಸ್ಯರಾದ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗರಿಗೆ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡಲಾಗುತ್ತಿಲ್ಲ. ಎರಡು ಕಡೆ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡೋಕೆ ಆಗುತ್ತಿಲ್ಲ ಎಂದು ವ್ಯಂಗ್ಯವಾಡಿದರು. ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಬಂದು ನೂರಾರು ಕಡೆ ಪ್ರಚಾರ ಮಾಡಿದರು. ಆದ್ರೆ ಫಲಿತಾಂಶ ಏನಾಯ್ತು? …

Read More »

ಇಂದಿನಿಂದ ಗೃಹಜ್ಯೋತಿ ಜಾರಿ… 200 ಯೂನಿಟ್ ಮೀರಿದರೆ ಪೂರ್ಣ ಬಿಲ್ ಪಾವತಿಸಬೇಕಾಗುತ್ತೆ: ಜಾರ್ಜ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿಗಳ ಯೋಜನೆ ಪೈಕಿ ಒಂದಾದ ಗೃಹಜ್ಯೋತಿ ಯೋಜನೆ ಇಂದಿನಿಂದ ಜಾರಿಗೆ ಬರುತ್ತಿದ್ದು, ಜುಲೈನಲ್ಲಿ ಬಳಸಿದ ವಿದ್ಯುತ್ ಬಿಲ್ ಇಂದಿನಿಂದ ಬರಲಿದ್ದು, ಈ ಬಿಲ್ ಶೂನ್ಯ ಬಿಲ್ ಆಗಿರಲಿದೆ. ನಿಗದಿತ ಬಳಕೆ ಮೀರಿದ ಯೂನಿಟ್​ಗೆ ಮಾತ್ರ ವಿದ್ಯುತ್ ಬಿಲ್ ಪಾವತಿ ಮಾಡಬೇಕಾಗಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ನಗರದ ಖಾಸಗಿ ಹೋಟೆಲ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದಿನಿಂದ ಗೃಹ ಜ್ಯೋತಿ ಯೋಜನೆ …

Read More »

ನಗರದಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ರಹಸ್ಯ ವಿಡಿಯೋ ಸೆರೆಹಿಡಿದು ಸುದ್ದಿ ಪ್ರಸಾರ ಮಾಡುವುದಾಗಿ ಬೆದರಿಸುತ್ತಿದ್ದ ಆರೋಪದಡಿ ಯೂಟ್ಯೂಬ್ ಚಾನಲ್ ಮಾಲೀಕ ಸೇರಿ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಸುದ್ದಿ‌ ಪ್ರಸಾರ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಯೂಟ್ಯೂಬ್ ಚಾನಲ್ ಮಾಲೀಕ ಸೇರಿ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಯೂಟ್ಯೂಬ್​ ಚಾನಲ್​ ನಡೆಸುತ್ತಿದ್ದ ಮಾಲೀಕ ಆತ್ಮಾನಂದ, ಆನಂದ, ಶ್ರೀನಿವಾಸ್, ಕೇಶವಮೂರ್ತಿ ಎಂಬುವರು ಬಂಧಿತ ಆರೋಪಿಗಳು. ಅಕ್ರಮ ಚಟುವಟಿಕೆಗಳ ಬಗ್ಗೆ ರಹಸ್ಯ ವಿಡಿಯೊ: ವಾಹಿನಿಯೊಂದರ ಮಾಲೀಕನಾಗಿರುವ ಆತ್ಮಾನಂದ ಹಲವು ವರ್ಷಗಳಿಂದ ಚಾನಲ್‌ ನಡೆಸುತ್ತಿದ್ದ.‌ ಕಾನೂನುಬಾಹಿರ ಚಟುವಟಿಕೆ ಕಂಡುಬಂದರೆ ಸ್ಥಳಕ್ಕೆ ಹೋಗಿ ವಿಡಿಯೋ ಸೆರೆಹಿಡಿದು ವಾಹಿನಿಯಲ್ಲಿ ಸುದ್ದಿ ಪ್ರಸಾರ ಮಾಡುವುದಾಗಿ ಹೇಳಿ, ಪೊಲೀಸರಿಗೆ …

Read More »

ಹುಕ್ಕೇರಿ ತಾಲೂಕಿನ ನೂತನ ತಹಸಿಲ್ದಾರರಾಗಿ ಮಂಜುಳಾ ನಾಯಿಕ ಅಧಿಕಾರ ಸ್ವೀಕರಿಸಿದರು.

ಹುಕ್ಕೇರಿ ತಾಲೂಕಿನ ನೂತನ ತಹಸಿಲ್ದಾರರಾಗಿ ಮಂಜುಳಾ ನಾಯಿಕ ಅಧಿಕಾರ ಸ್ವೀಕರಿಸಿದರು. ನೂತನ ದಂಡಾಧಿಕಾರಿಗಳಿಗೆ ಗ್ರೇಡ್‌ 2 ತಹಸಿಲ್ದಾರ ಕಲ್ಲೋಳಿ ಮತ್ತು ಕಂದಾಯ ಸಿಬ್ಬಂದಿಗಳು ಹೂಗುಚ್ಚ ನೀಡಿ ಸ್ವಾಗತಿಸಿದರು. ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಮಂಜುಳಾ ನಾಯಿಕ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ ಈಗ ರಾಜ್ಯ ಸರ್ಕಾರದ ನಿದೇರ್ಶನ ಮೇರೆಗೆ ಹುಕ್ಕೇರಿ ತಾಲೂಕಿನಲ್ಲಿ ಸೇವೆಗೆ ಇಂದು ಹಾಜರಾಗಿದ್ದೆನೆ , ಕಂದಾಯ ಸಿಬ್ಬಂದಿ ಮತ್ತು ವಿವಿಧ ಇಲಾಖೆಗಳ ಸಹಕಾದಿಂದ ಸರ್ಕಾರದ ಯೋಜನೆಗಳು …

Read More »

ರಾಜ್ಯ ಸ್ಟಾರ್ಟ್ ಅಪ್ ಸಂಸ್ಥೆಗಳ ಸಮಸ್ಯೆ, ಬೇಡಿಕೆ ಅರಿಯಲು ಸರ್ವೆಗೆ ಮುಂದಾದ ಐಟಿಬಿಟಿ…ಪ್ರಿಯಾಂಕ್ ಖರ್ಗೆ

ಬೆಂಗಳೂರು: ಐಟಿಬಿಟಿ ಇಲಾಖೆ ರಾಜ್ಯದ ಎಲ್ಲಾ ಸ್ಟಾರ್ಟ್ ಅಪ್ ಸಂಸ್ಥೆಗಳ ಸಮಸ್ಯೆ, ಬೇಡಿಕೆಗಳನ್ನು ತಿಳಿದುಕೊಳ್ಳಲು ಸರ್ವೆ ಮಾಡಲು ಮುಂದಾಗಿದೆ. ಆ​ನ್​ಲೈನ್ ಮೂಲಕ ಸರ್ವೆ ಕಾರ್ಯ ನಡೆಸಲಿರುವ ಐಟಿಬಿಟಿ ಇಲಾಖೆ ರಾಜ್ಯದ ನೋಂದಾಯಿತ ಎಲ್ಲಾ ಸ್ಟಾರ್ಟ್ ಅಪ್ ಸಂಸ್ಥೆಗಳ ಅಹವಾಲು, ಸಮಸ್ಯೆ, ಬೇಡಿಕೆ, ಅಗತ್ಯಗಳನ್ನು ಆಲಿಸಲಿದೆ. ಈ ಸಂಬಂಧ ಐಟಿ ಹಾಗೂ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ. ತಮ್ಮ ಅಗತ್ಯತೆಗಳನ್ನು ತಿಳಿದುಕೊಳ್ಳುವ ಸಲುವಾಗಿ ಐಟಿಬಿಟಿ ಇಲಾಖೆ ಸರ್ವೆಯನ್ನು ಕೈಗೊಳ್ಳುತ್ತಿದೆ. ಸರ್ವೆಯಲ್ಲಿ …

Read More »