ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಪಾರನಹಟ್ಟಿ ಗ್ರಾಮದಲ್ಲಿ ಶ್ರೀ ವಿಠ್ಠಲದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …
Read More »ಆರೋಗ್ಯ ಸೌಧದಲ್ಲಿವಿಶ್ವ ಹೆಪಟೈಟಿಸ್ ದಿನಾಚರಣೆ ಕಾರ್ಯಕ್ರಮ
ಬೆಂಗಳೂರು: ”ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ಆರೋಗ್ಯ ಶಿಕ್ಷಣ ನೀಡುವ ಮೂಲಕ ಯುವಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದು ಅತಿ ಅವಶ್ಯವಾಗಿದೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಶುಕ್ರವಾರ ವಿಶ್ವ ಹೆಪಟೈಟಿಸ್ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೆಪಟೈಟಿಸ್ ಸೋಂಕು ಆಹಾರ ಮತ್ತು ಜೀವನಶೈಲಿಯಲ್ಲಿ ಆಗುವ ಬದಲಾವಣೆಗಳಿಂದ ಬರುತ್ತದೆ. ಮಾನವನ ಅಂಗಾಂಗದಲ್ಲಿ ಲಿವರ್ಗೆ ನಾವು ಹೆಚ್ಚು ಪ್ರಾಮುಖ್ಯತೆ ನೀಡಬೇಕಾಗಿದೆ. ಲಿವರ್ನ್ನು ನಾವು ಎಷ್ಟು ಚೆನ್ನಾಗಿ ನೋಡಿಕೊಳ್ಳುತ್ತೇವೋ, ಅದು ನಮಗೆ …
Read More »ಶಾಲಾ ವಿದ್ಯಾರ್ಥಿನಿಗೆ ಬಸ್ ಹತ್ತಲು ಅಡ್ಡಿಪಡಿಸಿದ ಆರೋಪದ ಮೇಲೆ ಬಸ್ ಚಾಲಕನ ಅಮಾನತುಗೊಳಿಸಿ ಆದೇಶಿ
ಕಲಬುರಗಿ: ಬಸ್ ನಿಲ್ದಾಣದಲ್ಲಿ ನಿಂತಿದ್ದ ಸಾರಿಗೆ ಬಸ್ ಹತ್ತಲು ಶಾಲಾ ವಿದ್ಯಾರ್ಥಿನಿಯರಿಗೆ ಅಡ್ಡಿಪಡಿಸಿದ್ದಲ್ಲದೇ, ಬುರ್ಖಾ ಧರಿಸಿ ಮಾತನಾಡು ಎಂದು ಹೇಳಿ ಅನುಚಿತವಾಗಿ ವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಬಸ್ ಚಾಲಕನನ್ನು ಅಮಾನತು ಮಾಡಲಾಗಿದೆ. ಕಲಬುರಗಿ ಬಸ್ ಡಿಪೋ 3 ರ ಚಾಲಕ ಮೆಹಬೂಬ್ ಪಟೇಲ್ ಅಮಾನತುಗೊಂಡ ಚಾಲಕ. ಜುಲೈ 26ರಂದು ಬಸವಕಲ್ಯಾಣ – ಕಲಬುರಗಿ ಮಧ್ಯೆ ಸಂಚರಿಸುವ ಬಸ್ ಕಮಲಾಪುರ ನಿಲ್ದಾಣದಲ್ಲಿ ನಿಂತಾಗ ಕಮಲಾಪುರದಿಂದ ಓಕಳಿ ಗ್ರಾಮಕ್ಕೆ …
Read More »ಬಹುಕೋಟಿ ರೂಪಾಯಿಗಳ ಐಎಂಎ ಹಗರಣದಲ್ಲಿ ಐಪಿಎಸ್ ಅಧಿಕಾರಿ ಹಿಲೋರಿಗೆ ಬಿಗ್ ರಿಲೀಫ್
ಬೆಂಗಳೂರು : ಬಹುಕೋಟಿ ರೂಪಾಯಿಗಳ ಐಎಂಎ ಹಗರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ಶುಕ್ರವಾರ ರದ್ದುಪಡಿಸಿ ಆದೇಶ ನೀಡಿದೆ. ಇದರಿಂದಾಗಿ ಬಹುಕೋಟಿ ಹಗರಣದಲ್ಲಿ ಸಿಲುಕಿದ್ದ ಹಿಲೋರಿ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ತನ್ನ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಅಜಯ್ ಹಿಲೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ತಿರ್ಪುನ್ನು ಕಾಯ್ದಿರಿಸಿದ್ದು, ಶುಕ್ರವಾರ ಪ್ರಕಟಿಸಿತು. ಅರ್ಜಿದಾರರನ್ನು …
Read More »ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಅಪಘಾತ ಹೆಚ್ಚಳ :C.M. ಪರಿಶೀಲನೆ
ಬೆಂಗಳೂರು: ಉದ್ಘಾಟನೆ ಆದಾಗಿನಿಂದ ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ವೇ ಸುದ್ದಿಯಾಗುತ್ತಲೇ ಇದೆ. ಇತ್ತೀಚೆಗಷ್ಟೇ ಈ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳು, ಟ್ರ್ಯಾಕ್ಟರ್ನಂತಹ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿತ್ತು. ಇಲ್ಲಿನ ಅಪಘಾತ ಸ್ಥಳಗಳ ವೀಕ್ಷಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನಡೆಸಲಿದ್ದಾರೆ. ಹೆದ್ದಾರಿಯಲ್ಲಿ ಅಪಘಾತ ನಡೆಯುವ ಸ್ಥಳಗಳು, ರಸ್ತೆ ಅಪಘಾತ ತಡೆಗೆ ಹೆದ್ದಾರಿ ಪ್ರಾಧಿಕಾರ ಮತ್ತು ಪೊಲೀಸ್ ಇಲಾಖೆ ತೆಗೆದುಕೊಂಡ ಕ್ರಮಗಳು, ಹೆದ್ದಾರಿ ನಿರ್ಮಾಣದಲ್ಲಿ ಕಳಪೆ …
Read More »ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳ ನೇಮಕ ಮಾಡಿ ಸರ್ಕಾರ ಆದೇಶ
ಬೆಂಗಳೂರು : ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 15ನೇ ಆಗಸ್ಟ್, 2023ರ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ (ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ) ಈ ಕೆಳಗೆ ಸೂಚಿಸಿದಂತೆ ಸಚಿವರುಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ. ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳ ನೇಮಕ ಗೃಹ ಸಚಿವ ಡಾ. ಜಿ. ಪರಮೇಶ್ವರ್ – ತುಮಕೂರು. …
Read More »ನಮ್ಮ ನಾಯಕ ಡಿಕೆಶಿ, ಸಿಎಂ ಸಿದ್ದರಾಮಯ್ಯ ಅವರ ಜೊತೆ ಸೇರಿ ಪಕ್ಷ ಕಟ್ಟಿದ್ದರಿಂದ ಇಂದು ರಾಜ್ಯದಲ್ಲಿ ಅಧಿಕಾರ ಹಿಡಿದಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು : ಯುವಕರೇ ದೇಶದ ಆಸ್ತಿ, ಯುವಕರಿಂದಲೇ ದೇಶ ಮುನ್ನಡೆಯಬೇಕು. ದೇಶದ ಉಳಿವಿಗಾಗಿ ಯುವಕರು ಎಚ್ಚೆತ್ತುಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಯುವ ಕಾಂಗ್ರೆಸ್ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, 2024ರ ಚುನಾವಣೆ ನಮ್ಮ ಮುಂದಿನ ಗುರಿಯಾಗಿದ್ದು, ಈ ಗುರಿ ತಲುಪಬೇಕಿದೆ ಎಂದರು. ಭವಿಷ್ಯದ ನಾಯಕರನ್ನು ರೂಪಿಸಲು ಯುವ ಘಟಕಗಳು ಪ್ರಮುಖ ಪಾತ್ರ …
Read More »ತಡವಾಗಿಯಾದರೂ ಭೋರ್ಗರೆಯುತ್ತ ಮುಂಗಾರು ಮಳೆ ದೇಶಾದ್ಯಂತ ಹೆಚ್ಚಿನ ಅನಾಹುತ ಸೃಷ್ಟಿಸುತ್ತಿದೆ.
ಏತೂರುನಗರ (ತೆಲಂಗಾಣ): ತಡವಾಗಿಯಾದರೂ ಭೋರ್ಗರೆಯುತ್ತ ಮುಂಗಾರು ಮಳೆ ದೇಶಾದ್ಯಂತ ಹೆಚ್ಚಿನ ಅನಾಹುತ ಸೃಷ್ಟಿಸುತ್ತಿದೆ. ಆಂಧ್ರಪ್ರದೇಶ, ತೆಲಂಗಾಣದಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. 3 ದಿನಗಳಿಂದ ಸತತ ಮಳೆಯಾಗಿದ್ದು ಪ್ರವಾಹ ಉಂಟಾಗಿದೆ. ಹೈದರಾಬಾದ್ಗೆ ಸಮೀಪವಿರುವ ಏರೂತುನಗರ ಮಂಡಲದ ಕೊಂಡಾಯಿ ಗ್ರಾಮ ದಿಢೀರ್ ಮಳೆಗೆ ಮುಳುಗಡೆಯಾಗಿದ್ದು, 8 ಮಂದಿ ಪ್ರವಾಹದಲ್ಲಿ ಕೊಚ್ಚಿ ಹೋದ ರ್ದುರ್ಘಟನೆ ನಡೆದಿದೆ. ತೀವ್ರ ಮಳೆ ಸುರಿದ ಕಾರಣ ಕೊಂಡಾಯಿ ಗ್ರಾಮದ ಕೆಲ ಮನೆಗಳು ಮುಳುಗಡೆಯಾಗಿವೆ. ಪ್ರಾಣ ರಕ್ಷಣೆಗೆಂದು 8 ಮಂದಿ …
Read More »ಬಂದ್, ಗ್ರಾಮದಲ್ಲೇ ಬಸಿಯುತ್ತಿರುವ ಮಳೆ ನೀರು..
ದಾವಣಗೆರೆ: ಜಿಲ್ಲೆಯ ಬಲ್ಲೂರು ಗ್ರಾಮದಲ್ಲಿ ಹಾದು ಹೋಗಿರುವ ಕಾಲುವೆಯನ್ನು ಬಂದ್ ಮಾಡಿದ್ದರಿಂದ ಮಳೆಗಾಲದಲ್ಲಿ ಇಡೀ ಗ್ರಾಮದಲ್ಲಿ ನೀರು ಹೊರಹೋಗದೆ ಬಸಿಯುತ್ತಿದೆ. ಇದರಿಂದ ಗ್ರಾಮಸ್ಥರು ಮನೆ ಶಾಲೆ ಎಲ್ಲಿ ಬೀಳುತ್ತೋ ಎಂಬ ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಮಳೆ ಹೆಚ್ಚು ಆಗುತ್ತಿರುವ ಕಾರಣ ಕೆಲ ಮನೆಗಳು ನೆಲಕ್ಕುರುಳಿವೆ. ಬಲ್ಲೂರು, ಜಡಗನಹಳ್ಳಿ, ಶಿರಗಾನಹಳ್ಳಿ ಗ್ರಾಮದಲ್ಲಿ ಮಳೆನೀರು ಬಸಿಯುತ್ತಿರುವುದರಿಂದ ನಮ್ಮ ಕಟ್ಟಡಗಳನ್ನು ಉಳಿಸಿಕೊಡಿ ಎಂದು ಅಂಗಲಾಚಿ ಬೇಡಿಕೊಳ್ಳುತ್ತಿದ್ದಾರೆ. ಈ ಗ್ರಾಮಗಳು ನೀರಾವರಿ ಪ್ರದೇಶದಿಂದ 9 ರಿಂದ 10 …
Read More »ಕಾಗವಾಡ ತಾಲೂಕಿನ ಕೂಸನಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಅವಿರೋಧ.
ಶುಕ್ರವಾರ ರಂದು ಕೂಸನಾಳ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆ ಜರಗಿತು. ಚುನಾವಣಾಧಿಕಾರಿಗಳಾಗಿ ಕಾಗವಾಡ ಬಿ ಯು ಓ, ಎಂ ಆರ್ ಮುಂಜೆ ಇವರ ನೇತೃತ್ವದಲ್ಲಿ ನೆರವೇರಿತು. ಅಧ್ಯಕ್ಷರಾಗಿ ಅಶೋಕ್ ನಾದನಿ, ಉಪಾಧ್ಯಕ್ಷರಾಗಿ ದೀಪಾ ವಿಜಯಕುಮಾರ್ ಖನ್ನಿಕುಡೆ ಆಯ್ಕೆಗೊಂಡರು, ಮುಳವಾಡ-ಕುಸನಾಳ ಗ್ರಾಮಗಳ 14 ಪಂಚಾಯಿತಿ ಸದಸ್ಯರು ಇದ್ದಾರೆ. ಚುನಾವಣೆ ಜರುಗಿದ ಬಳಿಕ ನೂತನ ಅಧ್ಯಕ್ಷ ಅಶೋಕ ನಾಂದನಿ ಮಾತನಾಡಿ ಎಲ್ಲ ಸದಸ್ಯರು ನನ್ನ ಮೇಲೆ ವಿಶ್ವಾಸವಿಟ್ಟು ಅವಿರೋಧವಾಗಿ ಆಯ್ಕೆ …
Read More »