Breaking News

ಭೋರ್ಗರೆಯುತ್ತಿರುವ ನೇತ್ರಾವತಿ: 1974ರ ಬಳಿಕ ಮತ್ತೆ ಮುಳುಗುವ ಭೀತಿಯಲ್ಲಿ ಬಂಟ್ವಾಳ?

ಬಂಟ್ವಾಳ (ದಕ್ಷಿಣ ಕನ್ನಡ): 1923, ಆಗಸ್ಟ್​ 7 ಮತ್ತು 8.. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಮಹಾ ಪ್ರವಾಹವೊಂದು ಬಂದಿತ್ತು. ನೋಡಿದವರು ಯಾರಿದ್ದಾರೆ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಆದರೆ, ಹಿರಿಯರಿಂದ ಕಿರಿಯರಿಗೆ ಮಾಹಿತಿ ವರ್ಗಾವಣೆ ಆಗುವುದೇನು ದೊಡ್ಡ ವಿಚಾರವಲ್ಲ. 1923ರ ಪ್ರವಾಹದಲ್ಲಿ ಬದುಕಿದ ಮಕ್ಕಳು ಈಗ ವೃದ್ಧಾಪ್ಯದಲ್ಲಿದ್ದಾರೆ. ತಮ್ಮ ಹಿರಿಯರು ಹೇಳಿದ್ದು ಅವರಿಗೆ ನೆನಪಿದೆ. ಅಲ್ಲದೇ 1974ರ ಆಗಸ್ಟ್​ ತಿಂಗಳಿನಲ್ಲೂ ದೊಡ್ಡದೊಂದು ಪ್ರವಾಹ ಬಂದಿತ್ತು. ಸದ್ಯ ಈ ಎಲ್ಲ …

Read More »

ಮಳೆ ತಗ್ಗಿದರೂ ಮುಂದುವರಿದ ಪ್ರವಾಹ: ಹೆದ್ದಾರಿಗಳಲ್ಲಿ ಗುಡ್ಡ ಕುಸಿತ,

ಕಾರವಾರ (ಉತ್ತರ ಕನ್ನಡ): ಉತ್ತರ ಕನ್ನಡದಲ್ಲಿ ಅಬ್ಬರಿಸುತ್ತಿದ್ದ ಮಳೆ ಕೊಂಚ ಕಡಿಮೆಯಾಗಿದ್ದು, ನದಿ ತೀರದ ಪ್ರದೇಶದಲ್ಲಿ ಸೃಷ್ಟಿಯಾಗಿದ್ದ ಪ್ರವಾಹ ಕೊಂಚ ಇಳಿಕೆಯಾಗಿದೆ. ಆದರೆ, ಪ್ರವಾಹ ಹಾಗೂ ಗಾಳಿ ಮಳೆಯಿಂದಾಗಿ ಜಿಲ್ಲೆಯಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಗುಡ್ಡ ಕುಸಿತದಿಂದಾಗಿ ಹಲವು ಹೆದ್ದಾರಿಗಳು ಬಂದ್​ ಆಗಿವೆ. ಜನ ಸಂಚಾರಕ್ಕೆ ಪರದಾಡಬೇಕಾದ ಸ್ಥಿತಿ ಮುಂದುವರಿದಿದೆ. ಉತ್ತರ ಕನ್ನಡದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಆರ್ಭಟಿಸುತ್ತಿದ್ದ ಮಳೆ ಅಬ್ಬರ ಸ್ವಲ್ಪ ಕಡಿಮೆಯಾಗಿದೆ. ಪರಿಣಾಮ ಗಂಗಾವಳಿ, ಅಘನಾಶಿನಿ, ವರದಾ ಹಾಗೂ …

Read More »

B.S.F. ಯೋಧನೊಬ್ಬ ಪಿಡಿಎಸ್ ಡೀಲರ್, ಆತನ ಪತ್ನಿ ಹಾಗೂ ಇಬ್ಬರು ಗ್ರಾಮಸ್ಥರು ಸೇರಿದಂತೆ ಒಟ್ಟು ನಾಲ್ವರ ಮೇಲೆ ಕತ್ತಿಯಿಂದ ಹಲ್ಲೆ

ಪಲಾಮು (ಜಾರ್ಖಂಡ್): ಬಿಎಸ್‌ಎಫ್ ಯೋಧನೊಬ್ಬ ಪಿಡಿಎಸ್ ಡೀಲರ್, ಆತನ ಪತ್ನಿ ಹಾಗೂ ಇಬ್ಬರು ಗ್ರಾಮಸ್ಥರು ಸೇರಿದಂತೆ ಒಟ್ಟು ನಾಲ್ವರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಪಿಡಿಎಸ್ ಡೀಲರ್ (ಸಾರ್ವಜನಿಕ ವಿತರಣಾ ವ್ಯವಸ್ಥೆಯ ಅಂಗಡಿಯವ) ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಮೇದಿನಿ ರೈ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಮೀನು ವಿವಾದದ ಹಿನ್ನೆಲೆ ಕತ್ತಿಯಿಂದ ಹಲ್ಲೆ: ಇಡೀ ಘಟನೆಯು ಪಲಮುವಿನ ಪಾಡ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋಲ್ಹಾನಾದಲ್ಲಿ ನಡೆದಿದೆ. …

Read More »

ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವು

ಬೆಂಗಳೂರು : ನಗರದ ನಾಗವಾರದ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್​​ ಬಿದ್ದು ತಾಯಿ ಹಾಗೂ ಮಗು ಮೃತಪಟ್ಟ ಪ್ರಕರಣಕ್ಕೆ 10 ಕೋಟಿ ರೂ. ನಷ್ಟ ಪರಿಹಾರ ನೀಡಲು ಆದೇಶಿಸುವಂತೆ ಕೋರಿ ಮೃತ ಮಹಿಳೆಯ ಪತಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಲೋಹಿತ್ ಕುಮಾರ್ ವಿ. ಸುಲಾಖೆ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ವಿಚಾರಣೆ ನಡೆಸಿತು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಬೆಂಗಳೂರು ಮೆಟ್ರೋ ರೈಲು …

Read More »

ಬೆಂಗಳೂರು ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಖದೀಮನನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ತಮಿಳುನಾಡಿನ ಧರ್ಮಪುರಿಯಿಂದ ಬೆಂಗಳೂರು ನಗರಕ್ಕೆ ಬಸ್​ನಲ್ಲಿ ಬಂದು ಮನೆಗಳ್ಳತನ ಮಾಡುತ್ತಿದ್ದ ಖದೀಮನನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ರಾಮಸ್ವಾಮಿ ಬಂಧಿತ ಆರೋಪಿ. ಈತನಿಂದ 30 ಲಕ್ಷ ರೂ ಮೌಲ್ಯದ 602 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ಕಳೆದ 25 ವರ್ಷಗಳಿಂದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ಬನಶಂಕರಿ, ಸಿ.ಕೆ.ಅಚ್ಚುಕಟ್ಟು, ಮಡಿವಾಳ, ರಾಮಮೂರ್ತಿನಗರ ಹಾಗು ಕುಮಾರಸ್ವಾಮಿ ಲೇಔಟ್ ಸೇರಿದಂತೆ ನಗರದ ವಿವಿಧ ಪೊಲೀಸ್ …

Read More »

ಆರು ತಾಲೂಕೂಗಳ ಶಾಲೆಗಳಿಗೆ ಬುಧವಾರ ರಜೆ ಘೋಷಿಸಿದ ಡಿಸಿ

ಬೆಳಗಾವಿ: ನಗರದ ವಡಗಾವಿ ಸಫಾರ ಗಲ್ಲಿಯಲ್ಲಿ ಮಳೆಯು ಅವಾಂತರ ಸೃಷ್ಟಿಸಿದೆ. ಮನೆಗಳಿಗೆ, ವಿದ್ಯುತ್ ಮಗ್ಗದ ಕಾರ್ಖಾನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನೀರು ಹೊರ ಹಾಕಲು ಜನ ಹರಸಾಹಸ ಪಡುತ್ತಿದ್ದಾರೆ. ಹೌದು.. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಸಫಾರ ಗಲ್ಲಿಯಲ್ಲಿ ಹತ್ತಕ್ಕೂ ಹೆಚ್ಚು ಮನೆಗಳಲ್ಲಿ ನೀರು ನುಗ್ಗುತ್ತಿದೆ. ಹಗಲು ರಾತ್ರಿ ಎನ್ನದೇ ಇಲ್ಲಿನ ಜನ, ಚಿಕ್ಕ ಮಕ್ಕಳು, ವಯೋವೃದ್ಧರು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ಮೊಣಕಾಲುದ್ದ ನಿಂತಿದ್ದ ನೀರನ್ನು ಹೊರ ಹಾಕುವಲ್ಲಿ …

Read More »

ಮನೆಹಾನಿ ಹೆಚ್ಚಿನ ಪರಿಹಾರಕ್ಕೆ ಚಿಂತನೆ:? ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ:ಮಳೆಗಾಲದಲ್ಲಿ ಖಾನಾಪುರ ಸೇರಿದಂತೆ ರಾಜ್ಯದ ಮಲೆನಾಡು ಪ್ರದೇಶಗಳಲ್ಲಿ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ನದಿ ದಾಟಲು ಅನುಕೂಲವಾಗುವಂತೆ ಕಿರು ಸೇತುವೆಗಳನ್ನು ನಿರ್ಮಿಸುವ ಬಗ್ಗೆ ವಿಶೇಷ ಯೋಜನೆ ಜಾರಿಗೆ ತರುವ ಚಿಂತನೆಯಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಖಾನಾಪುರ ತಾಲೂಕಿನ ಭೂರಣಕಿ ಗ್ರಾಮಕ್ಕೆ ಭೇಟಿ ನೀಡಿ ಮನೆ ಹಾನಿಯನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ನದಿ ದಾಟಲು ಅನುಕೂಲವಾಗಲು ಐದರಿಂದ ಹತ್ತು ಲಕ್ಷ ರೂಪಾಯಿ …

Read More »

ಸರ್ವರ್ ಸ್ಲೋ ಆಗಿದ್ದರಿಂದ ಗೃಹ ಲಕ್ಷ್ಮಿ ಯೋಜನೆ ನೋಂದಣಿ ವಿಳಂಬ.

ಬೆಳಗಾವಿ: ಗೃಹ ಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಲು ಸುರಿಯುವ ಮಳೆಯಲ್ಲೇ ಮಹಿಳೆಯರು ಗಂಟೆಗಟ್ಟಲೇ ನಿಂತಿರುವುದು ನಗರದ ರಿಸಾಲ್ದಾರ್ ಗಲ್ಲಿಯ ಬೆಳಗಾವಿ ಒನ್ ಕೇಂದ್ರದಲ್ಲಿ ಕಂಡು ಬಂತು. ಗೃಹ ಲಕ್ಷ್ಮಿ ಯೋಜನೆ ನೋಂದಣಿಗೆ ಚಾಲನೆ ಸಿಕ್ಕ ದಿನದಿಂದಲೂ ಇಲ್ಲಿನ ಬೆಳಗಾವಿ ಒನ್ ಕೇಂದ್ರದಲ್ಲಿ ಮಹಿಳೆಯರ ದಟ್ಟಣೆ ನಿತ್ಯವೂ ಇದ್ದು, ಮಂಗಳವಾರ ಸಹ ಸುರಿವ ಮಳೆ ಲೆಕ್ಕಿಸದೇ ಛತ್ರಿ ಹಿಡಿದುಕೊಂಡು ಸಾಲಿನಲ್ಲಿ ನಿಂತ ಮಹಿಳೆಯರು ತಮ್ಮ ಸರದಿ ಯಾವಾಗ ಬರುತ್ತೊ ಎಂದು ಕಾಯುತ್ತಾ ನಿಂತಿದ್ದರು. …

Read More »

ಜೈನಮುನಿ ಹತ್ಯೆ ಪ್ರಕರಣ ಸಂಬಂಧ ಸಿಐಡಿ ಉನ್ನತಾಧಿಕಾರಿಗಳ ತಂಡ ಹಿರೇಕೋಡಿ ನಂದಿ ಪರ್ವತ ಆಶ್ರಮಕ್ಕೆ ಭೇಟಿ

ಚಿಕ್ಕೋಡಿ(ಬೆಳಗಾವಿ): ಹಿರೇಕೋಡಿ ಜೈನಮುನಿ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿರುವ ಹಿನ್ನೆಲೆ, ಸಿಐಡಿ ಅಧಿಕಾರಿಗಳು ಚಿಕ್ಕೋಡಿಯಲ್ಲಿ ತನಿಖೆಯನ್ನು ಚುರುಕು ಗೊಳಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿಪರ್ವತ ಆಶ್ರಮಕ್ಕೆ ಸಿಐಡಿ ಉನ್ನತಾಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸಿಐಡಿ ಐಜಿ ಪ್ರವೀಣ ಮಧುಕರ್​ ಪವಾರ್ ಹಾಗೂ ಎಫ್‌ಎಸ್‌ಎಲ್ ನಿರ್ದೇಶಕ ಧರ್ಮೇಂದ್ರ ಕುಮಾರ್ ಮೀನಾ ಸೇರಿ ಇತರ ಹಿರಿಯ ಅಧಿಕಾರಿಗಳು ಜೈನಮುನಿಗಳು ಇದ್ದ ಕೊಠಡಿ ಪರಿಶೀಲನೆ ನಡೆಸಿ, ತನಿಖೆ ಮುಂದುವರಿಸಿದ್ದಾರೆ. ಬೆಳಗಾವಿ …

Read More »

ಗೃಹಲಕ್ಷ್ಮೀ ಯೋಜನೆ ನೋಂದಣಿ ಪ್ರಕ್ರಿಯೆಯಲ್ಲಿ ಜನರಿಂದ ಹಣ ಪಡೆದರೆ ಕ್ರಿಮಿನಲ್​ ಪ್ರಕರಣ:ಹೆಬ್ಬಾಳ್ಕರ್

ಬೆಳಗಾವಿ: “ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಯಾರಾದರು ಅಸಡ್ಡೆ ತೋರಿದರೆ, ಜನರಿಂದ ದುಡ್ಡು ಪಡೆದರೆ ಅಂಥವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ” ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, “ಈಗಾಗಲೇ ಮೂವರ ಲಾಗಿನ್ ಐಡಿ ವಾಪಸ್ ಪಡೆಯಲಾಗಿದೆ. ಸರಕಾರವಾಗಲಿ, ಇಲಾಖೆಯಾಗಲಿ ಸುಮ್ಮನೆ ಕುಳಿತಿಲ್ಲ. ಅಂಥವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು” …

Read More »