Breaking News

79ನೇ ಸ್ವಾತಂತ್ರ್ಯೋತ್ಸವ: ಮಾಣಿಕ್ ಶಾ ಪರೇಡ್​ಗೆ ಇದೇ ಮೊದಲ ಬಾರಿ ಸಾರ್ವಜನಿಕರಿಗೆ ಇ – ಪಾಸ್ ವ್ಯವಸ್ಥೆ

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 15ರಂದು ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ, ಕವಾಯತು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಲಿದ್ದು, ಬಳಿಕ ತೆರೆದ ಜೀಪ್‌ನಲ್ಲಿ ನಿಂತು ಪರೇಡ್ ವೀಕ್ಷಿಸಿ, ಗೌರವರಕ್ಷೆ ಸ್ವೀಕರಿಸಲಿದ್ದಾರೆ. ಕೆಎಸ್ಆರ್‌ಪಿ, ಸಿಆರ್‌ಪಿಎಫ್, ಬಿಎಸ್ಎಫ್, ಸಿಎಆರ್, ಗೋವಾ ಪೊಲೀಸ್, ಕೆಎಸ್ಐಎಸ್ಎಫ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಗೃಹರಕ್ಷಕ ದಳ, ಟ್ರಾಫಿಕ್ ವಾರ್ಡನ್, ಅಗ್ನಿಶಾಮಕದಳ, ಶ್ವಾನದಳ …

Read More »

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ವಿರುದ್ಧ ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣ ಸಂಬಂಧ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿರುವ ಕೆ.ಆರ್. ಪುರ ಶಾಸಕ ಬೈರತಿ ಬಸವರಾಜ್ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ತನಿಖಾಧಿಕಾರಿಗೆ ಸೂಚಿಸಿದೆ. ಇದರಿಂದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಶಾಸಕ ಬೈರತಿ ಸದ್ಯಕ್ಕೆ ನಿರಾಳರಾಗಿದ್ದಾರೆ. ಪ್ರಕರಣ ಸಂಬಂಧ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಪ್ರಕರಣದ ಐದನೇ ಆರೋಪಿ ಬೈರತಿ ಬಸವರಾಜ್ ಸಲ್ಲಿಸಿರುವ ಕ್ರಿಮಿನಲ್ …

Read More »

ಸಣ್ಣ ಉದ್ದಿಮೆ ಆರಂಭಿಸುವವರಿಗೆ ಸಿಹಿಸುದ್ದಿ! ಭೂ ಕಂದಾಯ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಂಗಳೂರು: ಸಣ್ಣ ಉದ್ದಿಮೆ ಸ್ಥಾಪಿಸಲು ಗ್ರಾಮೀಣ ಭಾಗದಲ್ಲಿ ಎರಡು ಎಕರೆವರೆಗೆ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕಾಗಿ ಬಳಸಲು ಅವಕಾಶ ಕಲ್ಪಿಸುವ 2025ರ ಕರ್ನಾಟಕ ಭೂ ಸುಧಾರಣೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಇಂದು ಅಂಗೀಕಾರ ದೊರೆಯಿತು. ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ವಿಧೇಯಕ ಕುರಿತು ಮಾತನಾಡಿ, ಖಾಸಗಿ ವ್ಯಕ್ತಿಗಳ ಕೃಷಿ ಜಮೀನನ್ನು ಶಿಕ್ಷಣ ಸಂಸ್ಥೆಗಳು ಅಥವಾ ಸಣ್ಣ ಉದ್ದಿಮೆ/ಕೈಗಾರಿಕೆಗಳಿಗೆ ಖರೀದಿಸಲು ಸೆಕ್ಷನ್‌ 109ರ ಅಡಿ ಈ …

Read More »

ವಾಲ್ಮೀಕಿ ಸಮುದಾಯದವರನ್ನೇ ಸಂಪುಟಕ್ಕೆ ಸೇರಿಸಲು ಒತ್ತಾಯಿಸಲು ದೆಹಲಿಗೆ ಹೋಗುತ್ತೇವೆ: ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ಇಬ್ಬರು ವಾಲ್ಮೀಕಿ ಸಮುದಾಯದವರನ್ನೇ ಸಂಪುಟದಿಂದ ಕೈ ಬಿಡಲಾಗಿದೆ. ವಾಲ್ಮೀಕಿ ಸಮುದಾಯದವರನ್ನೇ ಸಂಪುಟಕ್ಕೆ ಸೇರಿಸಲು ಒತ್ತಾಯಿಸಲು ನಾವು ದೆಹಲಿಗೆ ಹೋಗುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿದ ಹಿನ್ನೆಲೆ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಮುದಾಯದ ಶಾಸಕರು, ಕೈ ನಾಯಕರು ಸಭೆ ನಡೆಸಿದರು. ಸಭೆಯಲ್ಲಿ ಶಾಸಕರಾದ ಬಸವಂತಪ್ಪ, ಅನಿಲ್ ಚಿಕ್ಕಮಾಧು, ಬಿ.ಎಂ.ನಾಗರಾಜ್, ರಘಮೂರ್ತಿ, ಗಣೇಶ ಪ್ರಸಾದ್, ಹರೀಶ್​ ಗೌಡ ಪಾಲ್ಗೊಂಡಿದ್ದರು. ಕೆ.ಎನ್.ರಾಜಣ್ಣ ಜೊತೆ ಶಾಸಕರು ಚರ್ಚೆ …

Read More »

ಭೂಮಾಪಕರ ನೇಮಕಾತಿಗೆ ತಕ್ಷಣ ಕ್ರಮನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಪ್ರಶ್ನೆಗೆ ಪ್ರತಿಕ್ರಿಯೆ

ಭೂಮಾಪಕರ ನೇಮಕಾತಿಗೆ ತಕ್ಷಣ ಕ್ರಮ ಕೈಗೊಳ್ಳುತ್ತೇವೆ; ಕಂದಾಯ ಸಚಿವ ಕೃಷ್ಣ ಭೈರೇಗೌಡ ಅನುಮತಿ ಸಿಗುತ್ತಲೇ ನಿಪ್ಪಾಣಿಯಲ್ಲಿ ಸಹಾಯಕ ಭೂದಾಖಲೆಗಳ ನಿರ್ದೇಶಕರ ಕಛೇರಿ ಸ್ಥಾಪನೆ; ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಪ್ರಶ್ನೆಗೆ ಪ್ರತಿಕ್ರಿಯೆ ಕರ್ನಾಟಕ ವಿಧಾನಸಭೆಯ ಅಧಿವೇಶನದಲ್ಲಿ ರಾಜ್ಯದಲ್ಲಿ ಭೂಮಾಪಕರ ಕೊರತೆಯ ಬಗ್ಗೆ ಶಾಸಕ ಶಶಿಕಲಾ ಜೊಲ್ಲೆ ಅವರು ಪ್ರಶ್ನೆ ಎತ್ತಿದರು. ಈ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಉತ್ತರ ನೀಡಿ, ರಾಜ್ಯದಲ್ಲಿ ಭೂಮಾಪಕರ ಕೊರತೆ ಇದೆ ಎಂಬುದು ಸರಕಾರದ …

Read More »

ಬಾಗಲಕೋಟೆಯಲ್ಲಿಯೂ ಧರ್ಮಸ್ಥಳದ ಅವಹೇಳನವನ್ನು ಖಂಡಿಸಿ ಭಕ್ತರು ಪ್ರತಿಭಟನೆಯನ್ನು ನಡೆಸಿ, ಅವಹೇಳನ ಮಾಡುವವರ ವಿರುದ್ಧ ಕ್ರಮಕೈಗೊಳ್ಳದಿದ್ದರೇ, ಉಗ್ರ ಪ್ರತಿಭಟನೆಯ ಎಚ್ಚರಿಕೆ

ಬಾಗಲಕೋಟೆಯಲ್ಲಿಯೂ ಧರ್ಮಸ್ಥಳದ ಅವಹೇಳನವನ್ನು ಖಂಡಿಸಿ ಭಕ್ತರು ಪ್ರತಿಭಟನೆಯನ್ನು ನಡೆಸಿ, ಅವಹೇಳನ ಮಾಡುವವರ ವಿರುದ್ಧ ಕ್ರಮಕೈಗೊಳ್ಳದಿದ್ದರೇ, ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದಾರೆ. ಧರ್ಮಸ್ಥಳದ ಹೆಗ್ಗಡೆ ಕುಟುಂಬದ ಗೌರವಕ್ಕೆ ಧಕ್ಕೆ ತರಲು ಒಳಸಂಚು ನಡೆಸುತ್ತಿರುವ ದುಷ್ಟ ವ್ಯಕ್ತಿಗಳ ವಿರುದ್ದ ಭಕ್ತಾಭಿಮಾನಿಗಳಲ್ಲಿ ಆಕ್ರೋಶ ಉಕ್ಕಿದೆ. ಬಾಗಲಕೋಟೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎದುರು ಇಂದು ಭಕ್ತರು ಪ್ರತಿಭಟನೆ ನಡೆಸಿದರು. ಧರ್ಮಸ್ಥಳದ ಭಕ್ತಾಭಿಮಾನಿಗಳ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಸಿ, ಧರ್ಮಾಧಿಕಾರಿಗಳಾದ ವೀರೆಂದ್ರ ಹೆಗಡೆ ಅವರ ಹೆಸರಿಗೆ ಮಸಿ ಬಳಿಯುವ …

Read More »

ನಕಲಿ ಯೋಗ ಕೇಂದ್ರ ಮಷೀನ್ ತಯಾರಿಸಿದ ಆರೋಪ ಐವರ ವಿರುದ್ಧ ಪ್ರಕರಣ ದಾಖಲಿಸಿದ ಮಹಿಳೆ!!!

ನಕಲಿ ಯೋಗ ಕೇಂದ್ರ ಮಷೀನ್ ತಯಾರಿಸಿದ ಆರೋಪ ಐವರ ವಿರುದ್ಧ ಪ್ರಕರಣ ದಾಖಲಿಸಿದ ಮಹಿಳೆ!!! ನಕಲಿ ಯೋಗ ಕೇಂದ್ರ ಮಷೀನ್ ತಯಾರಿಸಿದ ಆರೋಪ ಐವರ ವಿರುದ್ಧ ಪ್ರಕರಣ ದಾಖಲಿಸಿದ ಮಹಿಳೆ!!! ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ತಮ್ಮ ಮಷೀನಿನ ನಕಲು ಮಾಡಿ ಮೋಸ ಮಾಡಿದ ಆರೋಪ ಒಂಭತ್ತು ವರ್ಷದ ಹಿಂದೆ ತಮ್ಮ ಯೋಗಾ ಕೇಂದ್ರದಲ್ಲಿ ಬಂದು ಚಿಕಿತ್ಸೆ ಪಡೆದು, ಅದರ ಫೋಟೋ ತೆಗೆದುಕೊಂಡು ಹೋಗಿ ಅಂತಹದ್ದೇ ಯಂತ್ರವನ್ನು ತಯಾರಿಸಿ …

Read More »

ಪೂಜ್ಯರ ನಡೆ ನೂರು ಕಾಯಕ ಪಂಗಡದವರ ಮನೆ ಕಡೆ ವಿಶೇಷ ಕಾರ್ಯಕ್ರಮ

ಪೂಜ್ಯರ ನಡೆ ನೂರು ಕಾಯಕ ಪಂಗಡದವರ ಮನೆ ಕಡೆ ವಿಶೇಷ ಕಾರ್ಯಕ್ರಮ ಬೆಳಗಾವಿಯ ಸೈನಿಕ ನಗರದಲ್ಲಿ ವಿಶೇಷ ಕಾರ್ಯಕ್ರಮ ಅಖಿಲ ಲಿಂಗಾಯತ ನೂರು ಕಾಯಕ ಪಂಗಡಗಳ ಒಕ್ಕೂಟ ವತಿಯಿಂದ ಶ್ರಾವಣ ಮಾಸದ ಪ್ರಕ್ತ ಬೆಳಗಾವಿಯ ಸೈನಿಕ ನಗರದಲ್ಲಿ ಪೂಜ್ಯರ ನಡೆ ನೂರು ಕಾಯಕ ಪಂಗಡದವರ ಮನೆ ಕಡೆ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಹಿರೇಮಠ ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಶೂನ್ಯ ಸಂಪಾದನಾ ಹುಣಸಿಕೊಳ್ಳಮಠ ಯಮಕನಮರಡಿಯ ಶ್ರೀ ಸಿದ್ದಬಸವ ದೇವರು …

Read More »

ಎಸ್.ಎಸ್. ಢವಣ, ರಾಮದುರ್ಗ ಕ್ಷೇತ್ರದ ಬಿಡಿಸಿಸಿ ಬ್ಯಾಂಕ್ ಚುನಾವಣೆಯ ಅಭ್ಯರ್ಥಿ.:ಶಾಸಕ ಬಾಲಚಂದ್ರ ಜಾರಕಿಹೊಳಿ ಘೋಷಣೆ

  ರಾಮದುರ್ಗ ತಾಲ್ಲೂಕಿನ ೩೬ ಪಿಕೆಪಿಎಸ್ ಸಂಘಗಳ ಪೈಕಿ ೨೯ ಸೊಸೈಟಿ ಗಳಿಂದ ಢವಣ ಆಯ್ಕೆಗೆ ಸರ್ವಾನುಮತದ ಬೆಂಬಲ – ಶಾಸಕ ಬಾಲಚಂದ್ರ ಜಾರಕಿಹೊಳಿ ಘೋಷಣೆ ಬೆಳಗಾವಿಯಲ್ಲಿ ರಾಮದುರ್ಗ ತಾಲ್ಲೂಕಿನ ಪಿಕೆಪಿಎಸ್ ಸೊಸೈಟಿ ಆಡಳಿತ ಮಂಡಳಿಗಳ ಸಭೆ ಕರೆದ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ- ಅಕ್ಟೋಬರ್ ತಿಂಗಳಲ್ಲಿ ಜರುಗುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ರಾಮದುರ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಮ್ಮ ಫೆನಲ್ ದಿಂದ ಹಾಲಿ ನಿರ್ದೇಶಕ ಶ್ರೀಕಾಂತ ಢವಣ ಅವರು ಸ್ಪರ್ಧೆ ಮಾಡಲಿದ್ದಾರೆ …

Read More »

ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರಕ್ಕೆ ರಾಯಬಾಗ ಪಟ್ಟಣದಲ್ಲಿ ಖಂಡನೆ

ಚಿಕ್ಕೋಡಿ: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಹೆಗ್ಗಡೆ ಕುಟುಂಬಕ್ಕೆ ಕಳಂಕ ತರಲು ಒಳಸಂಚು ನಡೆಸುತ್ತಿರುವವರ ವಿರುದ್ಧ ಸಕಾರ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಡಾ.ಸಿದ್ಧಸೇನ ಮುನಿ ಮಹಾರಾಜರು ನೇತೃತ್ವದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳಯ ಭಕ್ತಾಭಿಮಾನಿಗಳು ಪಟ್ಟಣದ ಮಹಾವೀರ ಭವನದಲ್ಲಿ ತಹಶೀಲ್ದಾರ ಸುರೇಶ ಮುಂಜೆ ಅವರಿಗೆ ಮನವಿ ಸಲ್ಲಿಸಿದರು. ಮಂಗಳವಾರ ಬೆಳಿಗ್ಗೆ ೧೧ ರಾಯಬಾಗ ಗಂಟೆಗೆ ಪಟ್ಟಣದ ಹನುಮಾನ ದೇವಸ್ಥಾನದಿಂದ ಮಹಾವೀರ ಭವನದ ವರೆಗೆ ಮೆರವಣಿಗೆ ಮೂಲಕ …

Read More »