Breaking News

ಕಿತ್ತೂರು ಇತಿಹಾಸ ಸಾರುವ ಸಂಗ್ರಹಾಲಯಕ್ಕೆ 1.72 ಲಕ್ಷ ಪ್ರವಾಸಿಗರ ಭೇಟಿ: 17 ಲಕ್ಷ ರೂ. ಪ್ರವೇಶ ಶುಲ್ಕ ಸಂಗ್ರಹ

ಬೆಳಗಾವಿ: ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ ಅಮೃತಹಸ್ತದಿಂದ ಕಿತ್ತೂರಿನಲ್ಲಿ ಉದ್ಘಾಟನೆಗೊಂಡ “ಕಿತ್ತೂರು ರಾಣಿ ಚನ್ನಮ್ಮ ಸ್ಮಾರಕ ಸರ್ಕಾರಿ ವಸ್ತು ಸಂಗ್ರಹಾಲಯ”ಕ್ಕೆ ಈಗ 58ರ ಸಂಭ್ರಮ. ಕಿತ್ತೂರು ಕೋಟೆಗೆ ಬರುವವರು ಈ ವಸ್ತು ಸಂಗ್ರಹಾಲಯ ಕಣ್ತುಂಬಿಕೊಳ್ಳುತ್ತಾರೆ. ಕಳೆದ ಎರಡು ವರ್ಷಗಳಲ್ಲಿ 1.72 ಲಕ್ಷ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಿದ್ದು, ಪ್ರವಾಸಿಗರಿಂದ 17 ಲಕ್ಷಕ್ಕೂ ಅಧಿಕ ಹಣ ಸಂಗ್ರಹವಾಗಿದೆ. ಈ ವಸ್ತು ಸಂಗ್ರಹಾಲಯದಲ್ಲಿ ಏನೇನಿದೆ? ಇನ್ನೂ ಏನಾಗಬೇಕಿದೆ? ಎಂಬ ಕುರಿತು ಇಲ್ಲಿದೆ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಶಿಂಗಳಾಪುರ ಬಂಗ್ಲೆ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …

Read More »

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ “72ನೇ ಸಹಕಾರ ಸಪ್ತಾಹ” ಆಚರಣೆಯ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಸಭೆ ಬಳಿಕ ಪತ್ರಿಕಾಗೋಷ್ಠಿ

ಇಂದು ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ “72ನೇ ಸಹಕಾರ ಸಪ್ತಾಹ” ಆಚರಣೆಯ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದೆ. ಸಹಕಾರ ಚಳವಳಿ ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ಅಗತ್ಯವಿದ್ದು, ಜವಾಹರಲಾಲ್ ನೆಹರೂ ಅವರ ಜಯಂತಿಯ ದಿನ ನವೆಂಬರ್ 14ರಂದು 72ನೇ ಸಹಕಾರಿ ಸಪ್ತಾಹದ ಉದ್ಘಾಟನೆ ಮಾಡಲಿದ್ದೇವೆ. ಅರಮನೆ ಮೈದಾನದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಸಪ್ತಾಹ ನಡೆಯಲಿದ್ದು, ಮಂಗಳೂರು, ರಾಯಚೂರು, ಹಾವೇರಿ, ಹೊಸಪೇಟೆ, ಕೊಪ್ಪಳದಲ್ಲಿ ಸಪ್ತಾಹ ನಡೆಯಲಿದೆ. ಸಮಾರೋಪ ಸಮಾರಂಭವು …

Read More »

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ ಗ್ರಾಮೀಣ ಭಾಗದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲಿ : ಸಂಸದೆ ಪ್ರಿಯಾಂಕಾ ಜಾರಕಿಹೊಳಿ ನಾಗನೂರು (ಮೂಡಲಗಿ): ಗ್ರಾಮೀಣ ಭಾಗದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು ಕ್ರೀಡಾಪಟುಗಳ ಮೂಲಭೂತ ಸೌಕರ್ಯಗಳಿಗಾಗಿ ಸರ್ಕಾರ ಹಾಗೂ ಸಂಘ -ಸಂಸ್ಥೆಗಳು ಸಹಾಯ ಸಹಕಾರ ನೀಡಬೇಕೆಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು . ಅವರು ನಾಗನೂರು ಪಟ್ಟಣದಲ್ಲಿ ಬೆಳಗಾವಿ …

Read More »

ಹುಬ್ಬಳ್ಳಿ ಕಿಮ್ಸ್​ನಲ್ಲಿ ಲ್ಯಾಬ್ ಸಿಬ್ಬಂದಿ ನಿರ್ಲಕ್ಷ್ಯ: ರಿಪೋರ್ಟ್​ಗಾಗಿ ರೋಗಿಗಳ ಪರದಾಟ

ಹುಬ್ಬಳ್ಳಿ, ಅಕ್ಟೋಬರ್ 24: ಹುಬ್ಬಳ್ಳಿ ನಗರದಲ್ಲಿರುವ ಕಿಮ್ಸ್ ಆಸ್ಪತ್ರೆ, ಕರ್ನಾಟಕದ ಎರಡನೇ ಅತಿ ಹಳೆಯ ಸರ್ಕಾರಿ ಆಸ್ಪತ್ರೆ. ಅಷ್ಟೇ ಅಲ್ಲದೆ, ಉತ್ತರ ಕರ್ನಾಟಕ ಭಾಗದಲ್ಲಿಯೇ ಅತಿ ದೊಡ್ಡ ಆಸ್ಪತ್ರೆ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಕೇವಲ ಧಾರವಾಡ ಜಿಲ್ಲೆ ಮಾತ್ರವಲ್ಲ, ಉತ್ತರ ಕರ್ನಾಟಕ ಭಾಗದ ಅನೇಕ ಜಿಲ್ಲೆಗಳಿಂದ ಪ್ರತಿನಿತ್ಯ ಈ ಆಸ್ಪತ್ರೆಗೆ ರೋಗಿಗಳು ಬರುತ್ತಾರೆ. ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎಂದು ನಂಬಿ ಬರುವ ರೋಗಿಗಳಿಗೆ ಇದೀಗ ಲ್ಯಾಬ್ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಪರದಾಡುವಂತಾಗಿದೆ. ಬೆಳಗಾವಿ …

Read More »

ಡ್ರಂಕ್​​ & ಡ್ರೈವ್:​ 36 ಶಾಲಾ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಮದ್ಯ ಸೇವಿಸಿ ಶಾಲಾ ವಾಹನಗಳನ್ನು ಓಡಿಸುವ​ ಚಾಲಕರ ವಿರುದ್ಧ ನಗರ ಪಶ್ಚಿಮ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, 36 ಚಾಲಕರು ಕುಡಿದು ವಾಹನ ಚಲಾಯಿಸಿರುವುದನ್ನು ಪತ್ತೆ ಹಚ್ಚಿದ್ಧಾರೆ. ಹಲಸೂರು ಗೇಟ್, ಅಶೋಕನಗರ, ಸದಾಶಿವನಗರ, ಬ್ಯಾಟರಾಯನಪುರ, ಮಾಗಡಿ ರೋಡ್ ಸೇರಿದಂತೆ 15 ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಇಂದು ಬೆಳಗ್ಗೆ 7.30ರಿಂದ 9.30ರ ವರೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 5,881 ಶಾಲಾ ಬಸ್​ಗಳ ಚಾಲಕರನ್ನು ಡ್ರಂಕ್​​ ಆ್ಯಂಡ್​​​ ಡ್ರೈವ್​​​ ತಪಾಸಣೆ ಮಾಡಲಾಯಿತು. …

Read More »

ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವು.

ಅಥಣಿ: ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವು. ಕೋಹಳ್ಳಿ ಗ್ರಾಮದ ‌ಹೊರವಲಯದಲ್ಲಿ ನಡೆದ ಘಟನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮ. ಪ್ರವೀಣ ಸಂತೋಷ್ ಮಂಟೂರ (9) ಮೃತ ಬಾಲಕ. ಸತತ 6 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬಾವಿಯಿಂದ ಬಾಲಕನ ಮೃತದೇಹ ಹೊರತೆಗೆದ ಅಗ್ನಿಶಾಮಕದಳ ಸಿಬ್ಬಂದಿಗಳು. ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Read More »

ರಾಯಬಾಗ ಸರ್ಕಾರಿ ಆಸ್ಪತ್ರೆಗೆ ಅಧಿಕಾರಿಗಳು ಭೇಟಿ

ರಾಯಬಾಗ ಸರ್ಕಾರಿ ಆಸ್ಪತ್ರೆಗೆ ಅಧಿಕಾರಿಗಳು ಭೇಟಿ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಎಸ್ಎಂ ಪಾಟೀಲ್ ಹಾಗೂ ತಾಲೂಕ ಪಂಚಾಯತ್ ಅಧಿಕಾರಿ ಸುರೇಶ್ ಕದ್ದು ಭೇಟಿ ನೀಡಿ ಆಸ್ಪತ್ರೆ ಪರಿಶೀಲನೆ ನಡೆಸಿದರು ಸರ್ಕಾರಿ ಆಸ್ಪತ್ರೆ ಕತ್ತಲೆ ಭಾಗ್ಯ ಎಂಬ ಸುದ್ದಿ ಪ್ರಸಾರ ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ರಾತ್ರಿ ವೇಳೆ ಕೆಲಸ ಮಾಡುವ ಸಿಬ್ಬಂದಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ ಸಿಬ್ಬಂದಿಗಳಿಗೆ ತರಾಟೆ ತೆಗೆದುಕೊಂಡು ಶೋಕಾಸ್ ನೋಟಿಸ್ ನೀಡಿದ್ದಾರೆ ಎರಡು ಜನರೇಟರ್ ಇದ್ದರು ಬೆಳಕಿನ ವ್ಯವಸ್ಥೆ …

Read More »

ಹೈಕಮಾಂಡ್​​ ತೀರ್ಮಾನದಂತೆ ಸಿಎಂ ಆಯ್ಕೆ ನಡೆಯುತ್ತದೆ: ಶಾಸಕ ಗೋಪಾಲಕೃಷ್ಣ ಬೇಳೂರು

ಹೈಕಮಾಂಡ್​​ ತೀರ್ಮಾನದಂತೆ ಸಿಎಂ ಆಯ್ಕೆ ನಡೆಯುತ್ತದೆ: ಶಾಸಕ ಗೋಪಾಲಕೃಷ್ಣ ಬೇಳೂರು ಶಿವಮೊಗ್ಗ: ” ಹೈಕಮಾಂಡ್​​​​ ತೀರ್ಮಾನದಂತೆ ಪಕ್ಷದಲ್ಲಿ ಸಿಎಂ ಆಯ್ಕೆ ನಡೆಯುತ್ತದೆ” ಎಂದು ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, “ಡಾ. ಯತೀಂದ್ರ ಅವರು ಸಿದ್ದರಾಮಯ್ಯ ರಾಜಕೀಯದ ಅಂತಿಮ ಘಟ್ಟದಲ್ಲಿದ್ದಾರೆಂದು ಹೇಳಿಕೆ ಯಾಕೆ ಕೊಟ್ಟರು ಅಂತಾ ಗೊತ್ತಿಲ್ಲ. ಆದರೆ, ನಮ್ಮಲ್ಲಿ ಮುಂದಿನ ಸಿಎಂ ಯಾರು ಎಂದು …

Read More »

ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಸಿಎಂ ಹಾಗೂ ಸಚಿವರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ಕೊಡಲಾಗಿದೆ. ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 66ನೇ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ. ಎಂ.ಸಿ.ಸುಧಾಕರ್, …

Read More »