ನವದೆಹಲಿ: 2013 ಮತ್ತು 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಭಾಗವಹಿಸುವಿಕೆಗೆ ಅನುಸರಿಸಿದ್ದ ಮಾನದಂಡವನ್ನು ಐಸಿಸಿ 2025ರ ಟೂರ್ನಿಗೆ ಬದಲಾಯಿಸಿದೆ. ಇದು ಈಗ ಹಲವು ಕ್ರಿಕೆಟ್ ಮಂಡಳಿಗಳ ಬೇಸರಕ್ಕೆ ಕಾರಣವಾದರೆ, ಇನ್ನೂ ಕೆಲ ಮಂಡಳಿಗಳಿಗೆ ಸಂತಸ ತರಲಿದೆ. 2025ಕ್ಕೆ ಪಾಕಿಸ್ತಾನದ ಆಥಿತ್ಯದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. 2013 ಮತ್ತು 2017 ರಲ್ಲಿ ಐಸಿಸಿ ನೀಡುವ ಶ್ರೇಯಾಂಕದಲ್ಲಿ 8 ಸ್ಥಾನಗಳನ್ನು ಪಡೆದುಕೊಂಡ ತಂಡಗಳು ಎರಡು ಗುಂಪಾಗಿ ಲೀಗ್ನಲ್ಲಿ ಸ್ಪರ್ಧಿಸುತ್ತಿದ್ದವು. ಮುಂದಿನ ಬಾರಿಯ ಚಾಂಪಿಯನ್ಸ್ …
Read More »100 ರನ್ಗಳಿಂದ ಗೆದ್ದ ಭಾರತ; ವಿಶ್ವಕಪ್ನಿಂದ ಹೊರಬಿದ್ದ ಹಾಲಿ ಚಾಂಪಿಯನ್ …
ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಹೈವೋಲ್ಟೇಜ್ ವಿಶ್ವಕಪ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಂಗ್ಲರು ರೋಹಿತ್ ಪಡೆಯ ಅಬ್ಬರಕ್ಕೆ 100 ರನ್ಗಳ ಹೀನಾಯ ಸೋಲು ಅನುಭವಿಸಿದೆ. ಇಂಗ್ಲೆಂಡ್ ತಂಡವನ್ನು 100 ರನ್ಗಳಿಂದ ಮಣಿಸಿದ ಟೀಂ ಇಂಡಿಯಾಕ್ಕೆ ಏಕದಿನ ವಿಶ್ವಕಪ್ನಲ್ಲಿ ಆಂಗ್ಲರ ವಿರುದ್ಧ ದಾಖಲೆಯ ಗೆಲುವಾಗಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಸತತ ಸೋಲುಗಳಿಂದ ತತ್ತರಿಸಿರುವ ಇಂಗ್ಲೆಂಡ್ ಐದನೇ ಸೋಲಿನೊಂದಿಗೆ ಪಾಯಿಂಟ್ …
Read More »ಸಂಸದ ಕರಡಿ ಸಂಗಣ್ಣ ಕಾಂಗ್ರೆಸ್ನ ಗ್ಯಾರಂಟಿಗಳ ವಿರುದ್ಧ ವಾಗ್ದಾಳಿ
ಗಂಗಾವತಿ(ಕೊಪ್ಪಳ): ಕಾಯಕದ ಮೂಲಕವೇ ಕೈಲಾಸ ಕಾಣಬೇಕು ಎಂದು ಆದರ್ಶ ನೀಡಿದ ಬಸವಣ್ಣನವರ ತತ್ವಾದರ್ಶಗಳಿಗೆ ವಿರುದ್ಧವಾಗಿ ಇಂದು ಉಚಿತ ಭಾಗ್ಯಗಳನ್ನು ನೀಡುವ ಮೂಲಕ ಜನರನ್ನು ಪರವಾಲಂಬಿಗಳನ್ನಾಗಿ ಮಾಡಲಾಗುತ್ತಿದೆ ಎಂದು ಸಂಸದ ಕರಡಿ ಸಂಗಣ್ಣ ಪರೋಕ್ಷವಾಗಿ ಕಾಂಗ್ರೆಸ್ ಸರ್ಕಾರದ ಉಚಿತ ಭಾಗ್ಯಗಳ ವಿರುದ್ಧ ವಾಗ್ದಾಳಿ ನಡೆಸಿದರು. ನಗರದ ಚನ್ನಬಸವಸ್ವಾಮಿ ಕಲಾ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಕೊಪ್ಪಳ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳ ಪ್ರತಿಭಾ ಪುರಸ್ಕಾರ …
Read More »ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಡಿ ಕೆ ಶಿವಕುಮಾರ್ ಶಾಸಕರಿಗೆ ನೀಡಿರುವ ಎಚ್ಚರಿಕೆ ಕುರಿತು ಮಾತನಾಡುವುದಿಲ್ಲ ಎಂದಿದ್ದಾರೆ.
ಹಾವೇರಿ : ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಪಕ್ಷದ ವಿಚಾರದಲ್ಲಿ, ಆಂತರಿಕ ವಿಚಾರದಲ್ಲಿ ಹೇಳಿಕೆ ನೀಡದಂತೆ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿರುವ ಕುರಿತು ಮಾತನಾಡುವುದಿಲ್ಲಾ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಜಿಲ್ಲೆಯ ಹಾನಗಲ್ ತಾಲೂಕು ಸಾಂವಸಗಿ ಗ್ರಾಮದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಅಧ್ಯಕ್ಷರು ಅಪ್ಪಣೆ ಏನಿದೆ ಅದನ್ನು ಚಾಚು ತಪ್ಪದೆ ನಿರ್ವಹಿಸಬೇಕು ಎಂದು ಅಭಿಪ್ರಾಯಪಟ್ಟರು. ಅವರು ನಮ್ಮ ಪಕ್ಷದ ಅಧ್ಯಕ್ಷರು. ಯಾರೇ ಆಗಲಿ ಮಾಧ್ಯಮಗಳಿಗೆ ಹೇಳಿಕೆ …
Read More »ಏಕ ಭಾರತ- ಶ್ರೇಷ್ಠ ಭಾರತ ದೃಷ್ಟಿಯ ಸಾಕಾರ- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ದೇಶಾದ್ಯಂತ ಸಂಗ್ರಹಿಸಿರುವ ಮಣ್ಣಿನಿಂದ ಅಮೃತ ಉದ್ಯಾನವನ್ನು ರಚಿಸಲಾಗಿದ್ದು, ಅದು ಏಕ ಭಾರತ- ಶ್ರೇಷ್ಠ ಭಾರತ ದೃಷ್ಟಿಯನ್ನು ಸಾಕಾರಗೊಳಿಸುತ್ತದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್ ಎಸ್ ಎಫ್ ಕಚೇರಿಯಲ್ಲಿ ದೆಹಲಿಯ ಕರ್ತವ್ಯ ಪಥದಲ್ಲಿ ಬರುವ ಮಂಗಳವಾರದಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಅರಭಾವಿಯಿಂದ ಭಾಗವಹಿಸಲಿರುವ ಕಾರ್ಯಕರ್ತರಿಗೆ ಅಮೃತ ಕಳಶವನ್ನು ದೆಹಲಿಗೆ ಬೀಳ್ಕೊಟ್ಟು ಶುಭ ಕೋರಿದ ಅವರು, ಈ ಮೂಲಕ ನಮ್ಮ ಹೆಮ್ಮೆಯ ವೀರ ಯೋಧರಿಗೆ …
Read More »ಕಾಂಗ್ರೆಸ್ನಲ್ಲಿ ಅಧಿಕಾರಕ್ಕಾಗಿ ಒಳಜಗಳ ಶುರುವಾಗಿದ್ದು, ಡೈವರ್ಟ್ ಮಾಡಲು ಹುಲಿ ಉಗುರು ಪೆಂಡೆಂಟ್ ವಿಚಾರ ತಂದಿದ್ದಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಗೊಂದಲದಿಂದ ರಾಜ್ಯದ ಜನ ಅಂತಂತ್ರವಾಗಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಇನ್ನೂ ಎರಡು ಡಿಸಿಎಂ ಹುದ್ದೆ ಸೃಷ್ಟಿಸಲು ಸಿಎಂ ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ಆರೋಪಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸಿಎಂ ಬಿಟ್ಟು ಸಭೆ ಮಾಡುವ ಸ್ಥಿತಿಗೆ ಸಿದ್ದರಾಮಯ್ಯ ತಲುಪಿದ್ದಾರೆ. ಇದು ರಾಜಕೀಯ ಹೈಡ್ರಾಮ, ಕಾಂಗ್ರೆಸಿನಲ್ಲಿ ನಿತ್ಯ ಭಿನ್ನಮತ ಹೆಚ್ಚಾಗುತ್ತಿದೆ. ಅಧಿಕಾರಕ್ಕಾಗಿ ಒಳಜಗಳ ನಡೆಯುತ್ತಿದೆ. ಡೈವರ್ಟ್ ಮಾಡಲು ಹುಲಿ …
Read More »ಕಬ್ಬಿನ ತೂಕದಲ್ಲಿ ಮೋಸ ಆರೋಪ: ಸರ್ಕಾರದ ವತಿಯಿಂದಲೇ ಎಲೆಕ್ಟ್ರಾನಿಕ್ ವೇಯಿಂಗ್ ಮಷಿನ್-ಸಚಿವ ಶಿವಾನಂದ ಪಾಟೀಲ
ವಿಜಯಪುರ: ಕೆಲವು ಸಕ್ಕರೆ ಕಾರ್ಖಾನೆಯವರು ರೈತರು ಕಾರ್ಖಾನೆಗೆ ತರುವ ಕಬ್ಬಿನ ತೂಕದಲ್ಲಿ ಮೋಸ ಮಾಡುತ್ತಿರುವ ಆರೋಪ ಕೇಳಿಬರುತ್ತಿದೆ. ರೈತರು ಈ ಬಗ್ಗೆ ಸಾಕ್ಷಿ ಸಮೇತ ದೂರು ಸಲ್ಲಿಸಿದರೆ ಅಂಥ ಕಾರ್ಖಾನೆಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ. ಮುಂದಿನ ವರ್ಷದಿಂದ ಈ ಅಕ್ರಮ ತಡೆಯಲು ಸರ್ಕಾರದ ವತಿಯಿಂದಲೇ ಎಲೆಕ್ಟ್ರಾನಿಕ್ ವೇಯಿಂಗ್ ಮಷಿನ್ ಅಳವಡಿಸಲಾಗುತ್ತದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಕುಂಟೋಜಿಯಲ್ಲಿ ಭಾನುವಾರ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ …
Read More »ವಿಶ್ವಕಪ್ ಬಿಗ್ ಫೈಟ್: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ, ನಾಯಕನಾಗಿ ರೋಹಿತ್ಗೆ 100ನೇ ಪಂದ್ಯ
ಲಖನೌ (ಉತ್ತರಪ್ರದೇಶ): ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ವಿಶ್ವಕಪ್ ಕ್ರಿಕೆಟ್ನ ಮಹತ್ವದ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಇಂಗ್ಲೆಂಡ್ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿತು. ಟೂರ್ನಿಯ 29ನೇ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ತಂಡ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಒಂದು ವೇಳೆ ಪಂದ್ಯದಲ್ಲಿ ಸೋತರೆ ಇಂಗ್ಲೆಂಡ್ ತಂಡ ವಿಶ್ವಕಪ್ನಿಂದ ಬಹುತೇಕ ಹೊರಬೀಳುವ ಸಾಧ್ಯತೆ ದಟ್ಟವಾಗಿದೆ. ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಸತತ ಐದನೇ …
Read More »ಸ್ಮಶಾನದಲ್ಲಿ ಸಮಾಧಿ ಮೇಲೆ ಕುಳಿತು ಕಳ್ಳೇಪುರಿ ತಿನ್ನುತ್ತಾ, ರಂಗಗೀತೆ: ಹುಲಿಕಲ್ ನಟರಾಜ್ ನೇತೃತ್ವದಲ್ಲಿ ಮೌಢ್ಯಕ್ಕೆ ಸೆಡ್ಡು
ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಚಂದ್ರಗ್ರಹಣ ಸಮಯದಲ್ಲಿ ಸ್ಮಶಾನದಲ್ಲಿರುವ ಸಮಾಧಿಗಳ ಮೇಲೆ ಕುಳಿತು ಕಳ್ಳೇಪುರಿ ತಿನ್ನುತ್ತಾ, ರಂಗಗೀತೆಗಳನ್ನು ಹಾಡುವ ಮೂಲಕ ಜನರು ಮೌಢ್ಯತೆಗೆ ಸೆಡ್ಡು ಹೊಡೆದ ಘಟನೆ ದೇವನಹಳ್ಳಿಯ ದೊರೆಕಾವಲು ಗ್ರಾಮದಲ್ಲಿ ನಡೆದಿದೆ. ಪವಾಡ ಭಂಜಕ ಖ್ಯಾತಿಯ ಹುಲಿಕಲ್ ನಟರಾಜ್ ನೇತೃತ್ವದಲ್ಲಿ ಗ್ರಾಮದ ಸ್ಮಶಾನದಲ್ಲಿ ಸೇರಿದ ಜನರು, ಗ್ರಹಣ ಸಂದರ್ಭದಲ್ಲಿ ಪ್ರಕೃತಿಯಲ್ಲಿ ನಡೆಯುವ ಕೌತುಕ ಕಣ್ತುಂಬಿಕೊಂಡರು. ಚಲನೆಯ ಕಾರಣದಿಂದ ನೆರಳುಬೆಳಕಿನ ಆಟದಲ್ಲಿ ಗ್ರಹಣಗಳು ಸಂಭವಿಸುತ್ತವೆ. ಇದು ಪ್ರಕೃತಿಯಲ್ಲಿ ನಡೆಯುವ ಸಹಜ ಪ್ರಕ್ರಿಯೆ. ನಾವು …
Read More »ವಿಧಾನ ಪರಿಷತ್ ಚುನಾವಣೆ: 5 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ
ಬೆಂಗಳೂರು: ಕರ್ನಾಟಕ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಎರಡು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳ ಚುನಾವಣಾ ಅಭ್ಯರ್ಥಿಗಳಾಗಿ ರಾಮೋಜಿ ಗೌಡ, ಪುಟ್ಟಣ್ಣ, ಕೆ.ಕೆ.ಮಂಜುನಾಥ್, ಡಿ.ಟಿ.ಶ್ರೀನಿವಾಸ್, ಡಾ.ಚಂದ್ರಶೇಖರ್ ಪಾಟೀಲ್ ಹೆಸರುಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಪ್ಪಿಗೆ ಸೂಚಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಐವರು ಅಭ್ಯರ್ಥಿಗಳನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ, …
Read More »
Laxmi News 24×7