ಶಿವಮೊಗ್ಗ: ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಚಿವ ಕೆಎಸ್ ಈಶ್ವರಪ್ಪರಿಗೆ ಕ್ಲೀನ್ ಚಿಟ್ ನೀಡಿದೆ. ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ದೇಶದ ಕೆಲಸ ಮಾಡಲು ಇಂದಿನ ನ್ಯಾಯಾಲಯದ ತೀರ್ಪು ಪ್ರೇರಣೆ ಕೊಟ್ಟಿದೆ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಚೌಡೇಶ್ವರಿ ನನ್ನನ್ನು ಇವತ್ತು ನಿರ್ದೋಷಿ ಅಂತ ಹೇಳಿ ನ್ಯಾಯ ಕೊಟ್ಟಿದ್ದಾಳೆ. ನನ್ನಲ್ಲಿ ಮತ್ತಷ್ಟು ಆ ದೈವ ಭಕ್ತಿ ನನಗೆ ಹೆಚ್ಚಿಗೆ ಆಗಲು ಅವಕಾಶ ಆಯಿತು. ಆ ತಾಯಿಯ …
Read More »ಮುಂಗಾರು ಮಳೆ ವಿಳಂಬವಾಗಿದ್ದರಿಂದ ಎಲೆಕೋಸು ಇಳುವರಿ ಕುಂಠಿತವಾಗಿದ್ದು, ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದೇ ರೈತರ ನಷ್ಟ
ಹಾವೇರಿ: ಜಿಲ್ಲೆಯ ರೈತರು ಅತ್ಯುತ್ತಮವಾದ ಎಲೆಕೋಸು ಬೆಳೆಯುತ್ತಾರೆ. ಇಲ್ಲಿ ಬೆಳೆಯುವ ಎಲೆಕೋಸಿಗೆ ಮಧ್ಯಪ್ರದೇಶ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹೆಚ್ಚು ಬೇಡಿಕೆ ಇದ್ದು, ಜಿಲ್ಲೆಯಿಂದ ದೊಡ್ಡ ಪ್ರಮಾಣದಲ್ಲಿ ಎಲೆಕೋಸು ರಫ್ತಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ನೂರಾರು ರೈತರು ಕೆಲ ವರ್ಷಗಳಿಂದ ಎಲೆಕೋಸು ಬೆಳೆಯುತ್ತಿದ್ದಾರೆ. ಆದರೆ, ಪ್ರತಿವರ್ಷ ಉತ್ತಮ ಆದಾಯಗಳಿಸುತ್ತಿದ್ದ ಎಲೆಕೋಸು ಬೆಳೆಗಾರರು ಈ ವರ್ಷ ನಷ್ಟದ ಹಾದಿಯಲ್ಲಿದ್ದಾರೆ. ಈ ಬಾರಿ ಮುಂಗಾರು ಮಳೆ ವಿಳಂಬದಿಂದ ಎಲೆಕೋಸು ಫಸಲು ನಿರೀಕ್ಷಿತ ಮಟ್ಟದಲ್ಲಿ ಬಂದಿಲ್ಲಾ. …
Read More »ಜೈನಮುನಿ ಕಾಮಕುಮಾರ ನಂದಿ ಮಹಾರಾಜರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಜಯಮೃತ್ಯುಂಜಯ ಶ್ರೀ
ಚಿಕ್ಕೋಡಿ: ಹಿರೇಕೊಡಿ ನಂದಿ ಪರ್ವತ ಮಹಾರಾಜರ ಹತ್ಯೆಯಿಂದ ಭಾರತದ ಅಧ್ಯಾತ್ಮ ಪರಂಪರೆಗೆ ಧಕ್ಕೆ ಆಗಿದೆ. ಒಕ್ಕೊರಲಾಗಿ ಖಂಡಿಸಿ ನ್ಯಾಯ ಕೊಡಿಸುವ ಕೆಲಸ ಎಲ್ಲರೂ ಕೂಡಿ ಮಾಡಬೇಕು. ನೊಂದ ಮನಸ್ಸುಗಳಿಗೆ ಧೈರ್ಯ ಹೇಳಿ ಮುಂದೆ ಈ ರೀತಿ ಘಟನೆ ಆಗದಂತೆ ಎಲ್ಲರೂ ಸಾಮೂಹಿಕ ಪ್ರಯತ್ನ ಮಾಡಬೇಕಾಗಿದೆ ಎಂದು ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತದ ಆಶ್ರಮಕ್ಕೆ ಭೇಟಿ ನೀಡಿ ಮಾಧ್ಯಮಗಳ …
Read More »ಲೋಕಸಭೆ ಚುನಾವಣೆಗೆ ಪುತ್ರಿ ಪ್ರಿಯಾಂಕಾ ಕಣಕ್ಕಿಳಿಸುವ ಬಗ್ಗೆ ತೀರ್ಮಾನಿಸಿಲ್ಲ,ಪಕ್ಷ ಸೂಚಿಸಿದರೆ ನಾನೇ ಸ್ಪರ್ಧಿಸುತ್ತೇನೆ.
ಬೆಳಗಾವಿ: ಲೋಕಸಭೆ ಚುನಾವಣೆಗೆ ಪುತ್ರಿ ಪ್ರಿಯಾಂಕಾ ಅವರನ್ನು ಕಣಕ್ಕಿಳಿಸುವ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಮೊದಲು ಕಾರ್ಯಕರ್ತರಿಗೆ ಆದ್ಯತೆ ಕೊಡುತ್ತೇವೆ. ಅವಶ್ಯಕತೆ ಬಿದ್ದರಷ್ಟೇ ಪುತ್ರಿ ಸ್ಪರ್ಧಿಸಲಿದ್ದಾರೆ. ಒಂದು ವೇಳೆ ಪಕ್ಷ ಸೂಚಿಸಿದರೆ ನಾನೇ ಸ್ಪರ್ಧಿಸುತ್ತೇನೆ. ಕೊನೇ ಘಳಿಗೆಯಲ್ಲಿ ರಾಜಕಾರಣದಲ್ಲಿ ಏನೂ ಬೇಕಾದರೂ ಆಗಬಹುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಜಿಲ್ಲೆಯ ಶಾಸಕರು, ಬ್ಲಾಕ್ ಅಧ್ಯಕ್ಷರು ಮತ್ತು ಕಾರ್ಯಕರ್ತರೊಂದಿಗೆ ಚರ್ಚಿಸಿ …
Read More »ಸ್ನೇಹಿತನನ್ನು ಹತ್ಯೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ: ಇಲ್ಲಿನ ಪೀರನವಾಡಿಯ ಯುವಕ ಅರ್ಬಾಜ್ ರಫೀಕ್ ಮುಲ್ಲಾ(22) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪೀರನವಾಡಿ ಗ್ರಾಮದ ಪ್ರಸಾದ ನಾಗೇಶ ವಡ್ಡರ, ಪ್ರಶಾಂತ ಕರ್ಲೇಕರ್ ಬಂಧಿತ ಆರೋಪಿಗಳು. ಇನ್ನು ಕೊಲೆಗೆ ಹಳೆ ದ್ವೇಷವೇ ಕಾರಣ ಎಂದು ತಿಳಿದು ಬಂದಿದೆ. ಆರೋಪಿಗಳಾದ ಪ್ರಸಾದ ವಡ್ಡರ, ಪ್ರಶಾಂತ ಕರ್ಲೇಕರ್ ಮತ್ತು ಕೊಲೆಯಾದ ಅರ್ಬಾಜ್ ಮುಲ್ಲಾ ಮೂವರು ಸ್ನೇಹಿತರು. ಮೂರು ವರ್ಷಗಳ ಹಿಂದೆ ಪೀರನವಾಡಿಯ ಜನ್ನತ್ …
Read More »ಜು.18 ರಂದು ತಾಜ್ ವೆಸ್ಟೆಂಡ್ನಲ್ಲಿ ವಿಪಕ್ಷಗಳ ಸಭೆ
ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿರುವ ವಿಪಕ್ಷಗಳು ಪಾಟ್ನಾ ಬಳಿಕ ತಮ್ಮ ಎರಡನೇ ಸಭೆಯನ್ನು ಇಲ್ಲಿ ಜುಲೈ 18 ರಂದು ನಡೆಸಲಿದ್ದು, ಅದರ ಸಿದ್ಧತೆ ಪರಿಶೀಲನೆಗೆ ದೆಹಲಿ ನಾಯಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರು ಬೆಂಗಳೂರಿನಲ್ಲಿ ನಡೆಯಲಿರುವ ಸಭೆಯ ಸಿದ್ಧತೆಗಳ ವೀಕ್ಷಣೆ ಮಾಡಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಬೆಂಗಳೂರಿನ ತಾಜ್ ವೆಸ್ಟೆಂಡ್ನಲ್ಲಿ ಸಭೆ ನಡೆಯಲಿದ್ದು, ಒಟ್ಟು 24 ಪಕ್ಷಗಳ ಪ್ರಮುಖ …
Read More »ಭೀಕರ ಪ್ರವಾಹ.. ಉತ್ತರ ಭಾರತಕ್ಕೆ ಬೈಕ್ ರೈಡ್ ಹೋಗಿದ್ದ ಕಾರವಾರದ ಯುವಕರು ಬದುಕಿ ಬಂದದ್ದೇ ಪವಾಡ!
ಕಾರವಾರ(ಉತ್ತರ ಕನ್ನಡ): ಬೈಕ್ ಏರಿ ಉತ್ತರಭಾರತ ಸುತ್ತುವ ಕನಸಿನೊಂದಿಗೆ ಕಾರವಾರದಿಂದ ತೆರಳಿದ್ದ ಸಾಹಸಿ ಯುವಕರ ತಂಡವೊಂದು ಹಿಮಾಚಲ ಪ್ರದೇಶದ ಬಳಿ ಸಂಭವಿಸಿದ ಪ್ರವಾಹದಿಂದ ಕೂದಲೆಳೆ ಅಂತರದಿಂದ ಪಾರಾಗಿದೆ. ಪ್ರಯಾಣದುದ್ದಕ್ಕೂ ಹಲವು ಅಡೆತಡೆಗಳನ್ನು ಎದುರಿಸಿ ಇದೀಗ ಸುರಕ್ಷಿತವಾಗಿ ಮರಳಿರುವ ಯುವಕರ ತಂಡ ತಮಗಾದ ಭಯಾನಕ ಅನುಭವ ಬಿಚ್ಚಿಟ್ಟಿದ್ದಾರೆ. ಈ ಕುರಿತು ಒಂದು ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ. ಬೈಕ್ ಕ್ರೇಜ್ ಇರುವ ಬಹುತೇಕರಿಗೆ ದೂರದ ಊರುಗಳಿಗೆ ಪ್ರವಾಸ ಕೈಗೊಳ್ಳುವ ಹಂಬಲ ಕೂಡ ಇರುತ್ತದೆ. …
Read More »ಚಂದ್ರಯಾನ 3 ತಂಡದಲ್ಲಿದ್ದ ಚಿಕ್ಕಮಗಳೂರಿನ ಡಾ.ನಂದಿನಿ
ಚಿಕ್ಕಮಗಳೂರು: ಇಡೀ ಪ್ರಪಂಚವೇ ಕಾತರದಿಂದ ಕಾಯುತ್ತಿದ್ದ, ಭಾರತದ ಕನಸಿನ ಯೋಜನೆ ಚಂದ್ರಯಾನ 3 ನಿನ್ನೆಯಷ್ಟೆ ಇಸ್ರೋ ಕೇಂದ್ರದಿಂದ ಯಶಸ್ವಿಯಾಗಿ ಬಾಹ್ಯಾಕಾಶ ಕಕ್ಷೆಗೆ ಉಡಾವಣೆಗೊಂಡಿದೆ. ಚಂದ್ರಯಾನ 3 ಯೋಜನೆ ಹಾಗೂ ಇದರ ಯಶಸ್ವಿ ಉಡಾವಣೆಯ ಹಿಂದೆ ಹಲವಾರು ವಿಜ್ಞಾನಿಗಳ ಪರಿಶ್ರಮವಿದೆ. ದೇಶದ ಬೇರೆ ಬೇರೆ ಜಿಲ್ಲೆಗಳ ವಿಜ್ಞಾನಿಗಳು ಈ ಯೋಜನೆಗಾಗಿ ಹಗಲು ಇರುಳು ಕೆಲಸ ಮಾಡಿದ್ದಾರೆ. ಇದೀಗ ಆಂಧ್ರಪ್ರದೇಶದ ಶ್ರೀ ಹರಿಕೋಟಾ ಸತೀಶ್ ಧವನ್ ಉಪಗ್ರಹ ಉಡಾವಣಾ ಕೇಂದ್ರದಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ …
Read More »”ಜನರು ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು” : ಎಸ್.ಆರ್. ಹೀರೇಮಠ
ಮೈಸೂರು: ”ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಾಠ ಕಲಿಸಿದಂತೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಕೂಡಾ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು” ಎಂದು ಜನಾಂದೋಲನ ಮಹಾಮೈತ್ರಿ ಅಧ್ಯಕ್ಷ ಎಸ್. ಆರ್. ಹಿರೇಮಠ ಕೇಂದ್ರ ಸರ್ಕಾರದ ವಿರುದ್ಧ ಗರಂ ಆದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಹಾಗೂ ಸಂಘ ಪರಿವಾರದ ಶಕ್ತಿಗಳ ಡಬಲ್ ಎಂಜಿನ್ ಸರಕಾರವನ್ನು ಸೋಲಿಸುವ ಮೂಲಕ ಐತಿಹಾಸಿಕ ನಿರ್ಣಯ …
Read More »ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಈಗಿನಿಂದಲೇ ಸಿದ್ಧತೆ ಆರಂಭ
ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. ರಾಜ್ಯದಲ್ಲಿ ಈ ಬಾರಿ ಸುಮಾರು 20 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಪಕ್ಷ ಹೊಂದಿದೆ. ಹೆಚ್ಚಿನ ಕ್ಷೇತ್ರ ಗೆಲ್ಲುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರ ಮೇಲೆ ಹೆಚ್ಚಿನ ಒತ್ತಡ ಹಾಕಲು ಹೈಕಮಾಂಡ್ ಮುಂದಾಗಿದೆ. ಮುಖ್ಯಮಮತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಲೋಕಸಭೆ ಚುನಾವಣೆಯಲ್ಲಿ ತಮ್ಮ ಜಿಲ್ಲೆಯ ವ್ಯಾಪ್ತಿಯಲ್ಲಿನ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು …
Read More »