Breaking News

ಚನ್ನಮ್ಮನ ಉತ್ಸವಕ್ಕೆ ಜನಸಾಗರವೇ ಕಿತ್ತೂರಿಗೆ ಹರಿದು ಬಂದಿದೆ.

ಬೆಳಗಾವಿ: ಚನ್ನಮ್ಮನ ಉತ್ಸವಕ್ಕೆ ಜನಸಾಗರವೇ ಕಿತ್ತೂರಿಗೆ ಹರಿದು ಬಂದಿದೆ. ಕಲರ್​ಫುಲ್ ಲೈಟಿಂಗ್ಸ್‌ನಿಂದ​ ಕಂಗೊಳಿಸುತ್ತಿದ್ದ ಕೋಟೆಯಲ್ಲಿ ಜನರು ಸೆಲ್ಫಿ ಫೋಟೋ ತೆಗೆಸಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ. ಉತ್ಸವಕ್ಕೆ ಬಂದವರು ಕೋಟೆ ಅಭಿವೃದ್ಧಿಯಾಗಿ, ಪ್ರಸಿದ್ಧ ಪ್ರವಾಸಿ ತಾಣವಾಗಬೇಕು, ದಸರಾ ಮಾದರಿಯಲ್ಲಿ ಕಿತ್ತೂರು ಉತ್ಸವ ಜರುಗಬೇಕು ಎಂದು ಆಶಿಸಿದರು. ವೀರರಾಣಿ ಚನ್ನಮ್ಮಾಜಿ ಆಳಿದ ಕೋಟೆಯಲ್ಲಿ ಯುವಕ, ಯುವತಿಯರು, ಚಿಕ್ಕ ಮಕ್ಕಳು, ಮಹಿಳೆಯರು ಸೇರಿ ಇಡೀ ಕುಟುಂಬಸ್ಥರು ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು. ವಸ್ತು ಪ್ರದರ್ಶನದಲ್ಲಿ ಮಾರಾಟಕ್ಕೆ ಇಟ್ಟಿರುವ ವಿವಿಧ ವಸ್ತುಗಳ …

Read More »

ಶಾಸಕ ಅಭಯ್ ಪಾಟೀಲ್​ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ.

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಇತ್ತೀಚೆಗೆ ಆಸ್ತಿ ತೆರಿಗೆ ಹೆಚ್ಚಳ ನಿರ್ಣಯದ ದಿನಾಂಕ ತಿದ್ದಿದ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಬುಧವಾರ ಬಿಜೆಪಿ ಶಾಸಕ ಅಭಯ್ ಪಾಟೀಲ್ ದಲಿತ ಅಧಿಕಾರಿಗಳ ಮೇಲೆ ವೈಯಕ್ತಿಕ ಹಗೆತನ ಸಾಧಿಸುತ್ತಿದ್ದಾರೆ ಎಂದು ಆರೋಪಿಸಿ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.   ಪ್ರಗತಿಪರ ಸಂಘಟನೆಗಳು, ಕಾಂಗ್ರೆಸ್ ನಗರಸಭೆ ಸದಸ್ಯರು, ವಿವಿಧ ದಲಿತ ಸಂಘಟನೆಗಳು ಹಾಗೂ ಸಚಿವ ಸತೀಶ್​ …

Read More »

ಮಹಿಳೆಗೆ ಯಾವುದೇ ಜವಾಬ್ದಾರಿ ನೀಡಿದರೂ ಆಕೆ ಅಚ್ಚುಕಟ್ಟಾಗಿ ನಿರ್ವಹಿಸುತ್ತಾಳೆ. ವಿಶ್ವಾಸದ್ರೋಹವನ್ನು ಸ್ತ್ರೀಕುಲ ಎಂದೂ ಮಾಡುವುದಿಲ್ಲ.: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಮಹಿಳೆಗೆ ಯಾವುದೇ ಜವಾಬ್ದಾರಿ ನೀಡಿದರೂ ಆಕೆ ಅಚ್ಚುಕಟ್ಟಾಗಿ ನಿರ್ವಹಿಸುತ್ತಾಳೆ. ವಿಶ್ವಾಸದ್ರೋಹವನ್ನು ಸ್ತ್ರೀಕುಲ ಎಂದೂ ಮಾಡುವುದಿಲ್ಲ. ಆದರೆ ಒಬ್ಬ ಮಹಿಳೆ ಇನ್ನೊಬ್ಬ ಮಹಿಳೆಯನ್ನು ಸಹಿಸಿಕೊಳ್ಳುವುದಿಲ್ಲ ಎನ್ನುವ ಅಪವಾದವಿದೆ. ತೊಡೆದು ಹಾಕಲು ನಾವೆಲ್ಲ ಒಂದಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಕಿತ್ತೂರು ಉತ್ಸವದಲ್ಲಿ ಬುಧವಾರ ರಾಜ್ಯಮಟ್ಟದ ಮಹಿಳಾಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು. ಚಂದ್ರಯಾನ ಸೇರಿದಂತೆ ಪ್ರತಿಯೊಂದು ಸಾಧನೆಯಲ್ಲೂ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದು. ಈಗ …

Read More »

ಹೆಣ್ಣು ಭ್ರೂಣ ಪತ್ತೆ ಹಚ್ಚಿ ಗರ್ಭಪಾತ.. ಆಲೆಮನೆಯನ್ನೇ ಸ್ಕ್ಯಾನಿಂಗ್ ಸೆಂಟರ್ ಆಗಿ ಪರಿವರ್ತಿಸಿದ್ದ ನಾಲ್ವರ ಸೆರೆ

ಬೆಂಗಳೂರು : ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿ ಗರ್ಭಪಾತ ಮಾಡಿಸುತ್ತಿದ್ದ ದಂಧೆಯನ್ನು ಪತ್ತೆ ಹಚ್ಚಿರುವ ಬೈಯಪ್ಪನಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಶಿವಲಿಂಗೇಗೌಡ, ನಯನ್ ಕುಮಾರ್, ನವೀನ್ ಕುಮಾರ್, ವೀರೇಶ್ ಎಂದು ಗುರುತಿಸಲಾಗಿದೆ. ಕಳೆದ ಅಕ್ಟೋಬರ್​ 15ರಂದು ಪಿಎಸ್‌ಐ ಮಂಜುನಾಥ್ ನೇತೃತ್ವದ ತಂಡ ರಾತ್ರಿ ಹೊತ್ತು ಗಸ್ತು ತಿರುಗುತ್ತಿತ್ತು. ಈ ವೇಳೆ ಅನುಮಾನಾಸ್ಪದವಾಗಿ ಕಾರು ಚಲಾಯಿಸಿಕೊಂಡು ಬಂದ ವ್ಯಕ್ತಿಗೆ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಚಾಲಕ ಕಾರನ್ನು …

Read More »

ಕಾನೂನು ಆಯೋಗದ ಜೊತೆ ಕೋವಿಂದ್ ನೇತೃತ್ವದ​ ಸಮಿತಿ ಸಭೆ

ನವದೆಹಲಿ : “ಒಂದು ದೇಶ, ಒಂದು ಚುನಾವಣೆ” ಸಾಧ್ಯತೆ ಬಗ್ಗೆ ಪರಿಶೀಲಿಸಲು ನೇಮಿಸಿರುವ ಮಾಜಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ನೇತೃತ್ವದ ಸಮಿತಿಗೆ ಕಾನೂನು ಆಯೋಗವು ತನ್ನ ವಿಸ್ತೃತ ವರದಿಯನ್ನು ಪ್ರಸ್ತುತಪಡಿಸಲು ಸಜ್ಜಾಗಿದೆ. ಕೋವಿಂದ್​ ನೇತೃತ್ವದ ಸಮಿತಿಯು ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಲು ಸಿದ್ಧತೆ ನಡೆಸುತ್ತಿರುವ ಮಧ್ಯೆ ಕಾನೂನು ಆಯೋಗವು ವರದಿಯನ್ನು ನೀಡಲು ಮುಂದಾಗಿದೆ. ಈ ಸಂಬಂಧ ಚುನಾವಣಾ ಸುಧಾರಣೆ ಕುರಿತು ಚರ್ಚೆ ನಡೆಸಲು ಕಾನೂನು ಆಯೋಗ ಮತ್ತು ಸಮಿತಿ ಬುಧವಾರ ಸಭೆ …

Read More »

ರಾಮನಗರ ಬೆಂಗಳೂರಿಗೆ ಸೇರಿಸುವ ವಿಚಾರ ನನಗೆ ಗೊತ್ತಿಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಸೇರಿಸುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಜೊತೆ ಡಿಕೆಶಿ ಅವರು ಚರ್ಚೆ ಮಾಡಿಲ್ಲ. ಅವರ ಮೈಂಡ್​ನಲ್ಲಿ ಏನಿದೆ ಎಂಬುದು ಗೊತ್ತಿಲ್ಲ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಇಂದು ತಮ್ಮ ಟಿ ಕೆ ಲೇಔಟ್ ನ ಮನೆಯ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಡಹಬ್ಬ ದಸರಾ ಮಹೋತ್ಸವ ಯಶಸ್ವಿಯಾಗಿ ನಡೆದಿದೆ. ಎಲ್ಲ ಪಕ್ಷದ ಶಾಸಕರು, ಜನಪ್ರತಿನಿಧಿಗಳು ಬೆಂಬಲ ನೀಡಿದ್ದಾರೆ. ಎಲ್ಲ …

Read More »

ಹುಲಿ ಉಗುರಿನ ಪೆಂಡೆಂಟ್ ಹಾಕಿದ್ ದರ್ಶನ್ ಅವರಿಗೂ ಹುಲಿ ಉಗುರಿನ ಸಂಕಷ್ಟ

ಹುಲಿ ಉಗುರಿನ ಪೆಂಡೆಂಟ್ ಹಾಕಿದ್ದರು ಎನ್ನುವ ಕಾರಣಕ್ಕಾಗಿ ‘ಬಿಗ್ ಬಾಸ್’ (Bigg Boss Kannada) ಸ್ಪರ್ಧಿ ವರ್ತೂರ್ ಸಂತೋಷ್ (Varthur santhosh) ಮೊನ್ನೆಯಷ್ಟೇ ಅರೆಸ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ದರ್ಶನ್ ಅವರಿಗೂ ಹುಲಿ ಉಗುರಿನ ಸಂಕಷ್ಟ ಎದುರಾಗಿದೆ. ಆರ್‌ಆರ್ ನಗರದ ದರ್ಶನ್ (Darshan) ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ. ವರ್ತೂರ್ ಸಂತೋಷ್ ಬಂಧನವಾಗ್ತಿದ್ದಂತೆ ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳಿಗೂ ಹುಲಿ ಉಗುರಿನ ಕಂಟಕ ಎದುರಾಗಿದೆ. ದರ್ಶನ್ ಕೂಡ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ …

Read More »

ದಸರಾಗೆ ತಂದಿದ್ದ ಆನೆಯನ್ನು ವಾಪಸ್​ ಒಯ್ಯುತ್ತಿದ್ದ ವೇಳೆ ವಾಹನ ಅಪಘಾತ.. ಚಾಲಕ ಸ್ಥಳದಲ್ಲೇ ಸಾವು

ಆನೇಕಲ್( ಬೆಂಗಳೂರು): ಬನ್ನೇರುಘಟ್ಟದ ಚಂಪಕಧಾಮ ಸ್ವಾಮಿ ದಸರಾ ಮಹೋತ್ಸವಕ್ಕೆ ತಂದಿದ್ದ ಆನೆಯನ್ನು ತಿರುಚ್ಚಿಗೆ ವಾಪಸ್​ ಒಯ್ಯುತ್ತಿದ್ದ ವೇಳೆ ವಾಹನ ತಗ್ಗು ಪ್ರದೇಶಕ್ಕೆ ಹರಿದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸಾನಮಾವು ಅರಣ್ಯ ಪ್ರದೇಶದ ಬೆಂಗಳೂರು ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ತಮಿಳುನಾಡಿನ ಪುದುಕ್ಕೊಟ್ಟೈ ಮೂಲದ ಆರೋಗ್ಯ ಸ್ವಾಮಿ ಮೃತ ಚಾಲಕ. ಆದರೆ ಲಾರಿಯಲ್ಲಿದ್ದ ಆನೆಯನ್ನು ರಕ್ಷಿಸಲಾಗಿದೆ. ರಸ್ತೆ ಬದಿಯಲ್ಲಿ ವಾಹನ ನಿಲ್ಲಿಸಿ ಚಾಲಕ …

Read More »

ಸಹೋದರನಿಗೆ 100 ಕೋಟಿ ರೂ. ವಂಚನೆ ಆರೋಪ.. ಮೈಸೂರಿನಲ್ಲಿ ಮುಂಬೈ ಮೂಲದ ಮಹಿಳೆ ಬಂಧನ

ಮುಂಬೈ (ಮಹಾರಾಷ್ಟ್ರ): ಅಂದಾಜು 100 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮಾರಾಟ ಮಾಡಿ ಸ್ವಂತ ಸಹೋದರನಿಗೆ ಮೋಸ ಮಾಡಿದ ಆರೋಪದ ಮೇಲೆ ಮುಂಬೈ ಮೂಲದ ಮಹಿಳಾ ಆರೋಪಿಯನ್ನು ಕರ್ನಾಟಕದ ಮೈಸೂರಿನಲ್ಲಿ ಬಂಧಿಸಲಾಗಿದೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ.   ಸೆಂಟ್ರಲ್ ಮುಂಬೈನ ನಿವಾಸಿ ಅಬಿದಾ ಇಸ್ಮಾಯಿಲ್ ಎಂಬ ಮಹಿಳೆಯೇ ಬಂಧಿತ ಆರೋಪಿ. ಈಕೆ ತನ್ನ ಸಂಬಂಧಿಕರು ಹಾಗೂ ಸಹೋದರನಿಗೆ ಸೇರಿದ ಆಸ್ತಿಯನ್ನು ಬೇರೊಬ್ಬರಿಗೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಇದರ ಅಂದಾಜು …

Read More »

ಕೆಂಪು ಬಣ್ಣದ ಲ್ಯಾಂಬೋರ್ಗಿನಿ ಕಾರು ಖರೀದಿಸಿದ ನಟಿ ಶ್ರದ್ಧಾ ಕಪೂರ್​.. ಬೆಲೆ ಎಷ್ಟು ಗೊತ್ತಾ ?

ಮುಂಬೈ : ನಟಿ ಶ್ರದ್ಧಾ ಕಪೂರ್​ ಬಾಲಿವುಡ್​ನ ಬಹುಬೇಡಿಕೆಯ ನಟಿ. ತನ್ನ ಅಮೋಘ ನಟನೆ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ. ಈ ನವರಾತ್ರಿ ಶುಭ ಸಂದರ್ಭದಲ್ಲಿ ಶ್ರದ್ಧಾ ಕಪೂರ್​ ತಮ್ಮ ಸಂತಸ ಇಮ್ಮಡಿಗೊಳಿಸಿದ್ದಾರೆ. ಬಾಲಿವುಡ್​ ನಟರಲ್ಲಿ ಹಲವರು ದುಬಾರಿ ಬೆಲೆಯ ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. ಬಾಲಿವುಡ್​ ಬಾದ್​ ಶಾ ಶಾರುಖ್​ ಖಾನ್, ಸಲ್ಮಾನ್​ ಖಾನ್​, ಅಕ್ಷಯ ಕುಮಾರ್​ ಸೇರಿದಂತೆ ಹಲವು ನಟರಲ್ಲಿ ಐಷಾರಾಮಿ ಕಾರುಗಳಿವೆ. ಜೊತೆಗೆ ಕೆಲವೇ ಕೆಲವು ಬಾಲಿವುಡ್​ ನಟಿಯರು …

Read More »