Breaking News

ಪಾಲಿಕೆ ‌ಮುಖ್ಯ ಆಯುಕ್ತರಿಂದ ಇಂದಿರಾ ಕ್ಯಾಂಟೀನ್​ಗಳ ಪರಿಶೀಲನೆ

ಬೆಂಗಳೂರು : ನಗರದ ಪೂರ್ವ ವಲಯದ ಹೆಬ್ಬಾಳ ಹಾಗೂ ವಿಶ್ವನಾಥ ನಾಗೇನಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಎರಡು ಇಂದಿರಾ ಕ್ಯಾಂಟೀನ್ ಗಳಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಈ ವೇಳೆ ಅವರು, ಬಾಕಿ ಇರುವ ದುರಸ್ತಿ ಕಾರ್ಯಗಳನ್ನು ಕೂಡಲೇ ಕೈಗೆತ್ತಿಕೊಂಡು ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೊದಲು ಪೂರ್ವ ವಲಯ ವ್ಯಾಪ್ತಿಯಲ್ಲಿ ಹೆಬ್ಬಾಳ ವಾರ್ಡ್ ಬಳ್ಳಾರಿ ಮುಖ್ಯ ರಸ್ತೆಯಲ್ಲಿ ಇರುವ ಇಂದಿರಾ ಕ್ಯಾಂಟೀನ್​ಗೆ ಭೇಟಿ …

Read More »

ರಾಜ್ಯದಲ್ಲಿ 2,000 ಕೋಟಿ ರೂಪಾಯಿ ಹೂಡಿಕೆಗೆ ಮುಂದಾದ ಟಾಟಾ ಟೆಕ್ನಾಲಜೀಸ್

ಬೆಂಗಳೂರು: ಪ್ರತಿಷ್ಠಿತ ಟಾಟಾ ಟೆಕ್ನಾಲಜೀಸ್ ಕಂಪನಿಯು 2,000 ಕೋಟಿ ರೂ. ಹೂಡಿಕೆ ಮಾಡಿ ರಾಜ್ಯದಲ್ಲಿ ಮೂರು ಸಾಮಾನ್ಯ ಎಂಜಿನಿಯರಿಂಗ್ ಸೌಲಭ್ಯಗಳ ಕೇಂದ್ರ (ಸಿಇಎಫ್‌ಸಿ- ಕಾಮನ್ ಎಂಜಿನಿಯರಿಂಗ್ ಫೆಸಿಲಿಟಿ ಸೆಂಟರ್)ಗಳನ್ನು ಸ್ಥಾಪಿಸಲು ಮುಂದೆ ಬಂದಿದೆ. ವಿಧಾನಸೌಧದಲ್ಲಿ ಬುಧವಾರ ಕಂಪನಿಯ ಉನ್ನತ ಅಧಿಕಾರಿಗಳು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರನ್ನು ಭೇಟಿಯಾಗಿ ಈ ಸಂಬಂಧ ಪ್ರಸ್ತಾವನೆ ಸಲ್ಲಿಸಿ ಮಾತುಕತೆ ನಡೆಸಿದ್ದಾರೆ. ವಿಶೇಷವಾಗಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ …

Read More »

ಅಪರಿಚಿತ ವ್ಯಕ್ತಿಯೋರ್ವ ಬಾಲಕಿಯನ್ನು ಅಪಹರಿಸಲು ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪ್ರಕರಣ ದಾಖಲಾದ 12 ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಖೆಡ್ಡಾಕ್ಕೆ ಬೀಳಿಸಿದ್ದಾರೆ.

ಬೆಳಗಾವಿ: ಅಪರಿಚಿತ ವ್ಯಕ್ತಿಯೋರ್ವ 12 ವರ್ಷದ ಬಾಲಕಿಯನ್ನು ಅಪಹರಿಸಲು ಯತ್ನಿಸಿ ಸಿಕ್ಕಿ ಬಿದ್ದಿರುವ ಘಟನೆ ನಗರದ ಹಿಂದವಾಡಿಯ ಮಹಾವೀರ ಗಾರ್ಡನ್ ಬಳಿ ಮಂಗಳವಾರ ಸಂಜೆ ನಡೆದಿದೆ. ಆರೋಪಿ ಬಾಲಕಿಯನ್ನು ಹೊತ್ತೊಯ್ಯುವ ದೃಶ್ಯ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈ ಬಗ್ಗೆ ದೂರು ದಾಖಲಾದ 12 ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಖೆಡ್ಡಾಕ್ಕೆ ಕೆಡವಿದ್ದಾರೆ. ಮಾರುತಿ ನಗರದ ಗಜಾನನ ಪಾಟೀಲ (40) ಖೆಡ್ಡಾಕ್ಕೆ ಬಿದ್ದ ಆರೋಪಿ. ಆರೋಪಿ ಗಜಾನನ ಟ್ಯೂಶನ್​​ಗೆ ಹೊರಟಿದ್ದ ಬಾಲಕಿಗೆ ಚಾಕಲೇಟ್ ಆಮಿಷವೊಡ್ಡಿ …

Read More »

ರಸ್ತೆ ಇಲ್ಲ, ಜೋಳಿಗೆಯಲ್ಲಿ ವೃದ್ಧೆಯನ್ನು ಹೊತ್ತು ಆಸ್ಪತ್ರೆಗೆ ಕರೆದೊಯ್ದ ಗ್ರಾಮಸ್ಥರು

ಚಿಕ್ಕಮಗಳೂರು : ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆಯುತ್ತಿವೆ. ಹೀಗಿದ್ದರೂ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಶುದ್ಧ ಕುಡಿಯುವ ನೀರು, ಸರಿಯಾದ ರಸ್ತೆ ಸೇರಿದಂತೆ ಇನ್ನೂ ಅನೇಕ ಅಗತ್ಯ ಕನಿಷ್ಟ ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಇದಕ್ಕೆ ಹೊಸದೊಂದು ನಿದರ್ಶನ ಸಿಕ್ಕಿದೆ. ಚಿಕ್ಕಮಗಳೂರಿನ ಅರಣ್ಯ, ಪರ್ವತ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಸರಿಯಾದ ರಸ್ತೆಗಳಿಲ್ಲ. ಔಷಧೋಪಚಾರಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಬೀದಿ ದೀಪಗಳಿಲ್ಲದೆ ಜನರು ಶೋಚನೀಯ ಜೀವನ ನಡೆಸುತ್ತಿದ್ದಾರೆ. ವಾಹನಗಳು ಓಡಾಡುವ ರಸ್ತೆಗಳಿಲ್ಲದ …

Read More »

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ​ ಅನರ್ಹತೆ ಪ್ರಶ್ನಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ

ಬೆಳಗಾವಿ: ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ​ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಂಡ ವಿಚಾರದ ಹಿನ್ನೆಲೆ ಮೌನ ಪ್ರತಿಭಟನೆಗೆ ಅಖಿಲ ಭಾರತೀಯ ಕಾಂಗ್ರೆಸ್ ಕರೆ ನೀಡಿತ್ತು. ಇಂದು ಬುಧವಾರ ಬೆಳಗಾವಿಯ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಜಿಲ್ಲೆಯ ಕೈ ಕಾರ್ಯಕರ್ತರು ಧರಣಿ ನಡೆಸಿದರು. ಈ ವೇಳೆ ಎಂಎಲ್​ಸಿ ಬಿ.ಕೆ. ಹರಿಪ್ರಸಾದ್ ಸಾಥ್ ನೀಡಿದರು. ರಾಹುಲ್ ಗಾಂಧಿಯವರ ಸತ್ಯದ ನಡಿಗೆಯಲ್ಲಿ ನಮ್ಮ ಹೆಜ್ಜೆ, ಸರ್ವಾಧಿಕಾರಿ ಧೋರಣೆಯ ಮೋದಿಯವರಿಗೆ ಧಿಕ್ಕಾರ, ನಮ್ಮ ಹೆಜ್ಜೆ ಜನತಾ ನ್ಯಾಯಾಲಯದತ್ತ …

Read More »

ಶಿವರಾಜ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.:C.M.

ಕನ್ನಡ ಚಿತ್ರರಂಗದ ಖ್ಯಾತ ಹಾಗೂ ಪ್ರತಿಭಾವಂತ ನಟ ಶಿವರಾಜ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ನಟನಾ ಕೌಶಲದಿಂದ ಮಾತ್ರವಲ್ಲ ತಮ್ಮ ವಿನಯಶೀಲ ನಡೆ-ನುಡಿಗಳಿಂದಲೂ ಕೋಟ್ಯಂತರ ಜನರ ಪ್ರೀತಿ-ಅಭಿಮಾನಗಳಿಗೆ ಪಾತ್ರರಾಗಿರುವ ಶಿವರಾಜ್ ಕುಮಾರ್ ಅವರಿಗೆ ಆಯುಷ್ಯ ಮತ್ತು ಆರೋಗ್ಯದ ಭಾಗ್ಯ ಕೂಡಿಬರಲಿ ಎಂದು ಹಾರೈಸುತ್ತೇನೆ.

Read More »

ಸಂಬಳ ಬೇಕು, ಪಾಠ ಮಾತ್ರ ಮಾಡಲ್ಲ’

ಶಿಕ್ಷಕರು ಮಕ್ಕಳಿಗೆ ದೇವರ ಸಮಾನ. ತಾಯಿ ನಂತರ ಮಕ್ಕಳಿಗೆ ಶಿಕ್ಷಕರೇ ಎಲ್ಲವೂ ಎಂದರೆ ತಪ್ಪಾಗಲಾರದು. ಇಂಥಾ ಗುರುಗಳು ಯಾವಾಗಲೂ ಮಕ್ಕಳಿಗೆ ಪಾಠ ಮಾಡುವ ಕೆಲಸ ಮಾಡಬೇಕು. ಅದರಲ್ಲೂ ಮಕ್ಕಳಿಗಾಗಿಯೇ ಶಾಲೆ ಇರುವುದು. ಮಕ್ಕಳಿಗೆ ಪಾಠ ಮಾಡಲು ಎಂದೇ ಶಿಕ್ಷಕರ ನೇಮಕ ಮಾಡಿ ಸಂಬಳ ನೀಡುವುದು. ಇಲ್ಲೋರ್ವ ಕಿಡಿಗೇಡಿ ಶಿಕ್ಷಕನೋರ್ವ ಸಂಬಳ ತೆಗೆದುಕೊಂಡು ಸರಿಯಾಗಿ ಪಾಠ ಮಾಡದ ಘಟನೆ ಸಂಭವಿಸಿದೆ. ಅಲ್ಲದೇ ಈ ವಿಷಯ ಯಾರಿಗೂ ಗೊತ್ತಾಗಬಾರದು ಎಂದು ತನ್ನ ಬದಲಿಗೆ …

Read More »

ಳ್ಳರಿಂದ ತರಕಾರಿ ರಕ್ಷಿಸಲು ಪಾಳಿಯಲ್ಲಿ ಕಾವಲು ಕಾಯುತ್ತಿರುವ ರೈತ‌!

ದಾವಣಗೆರೆ: ಇದೀಗ ಟೊಮೆಟೊ ತರಕಾರಿಗಳಲ್ಲೇ ರಾಜ ಎನ್ನಿಸಿಕೊಳ್ಳುವ ಪರಿಸ್ಥಿತಿ ಇದೆ. ಏಕೆಂದರೆ ಬೆಲೆ ಗಗನಕ್ಕೇರಿದೆ. ಇನ್ನೊಂದೆಡೆ, ರೈತರು ಬೆಳೆ ಬೆಳೆಯುತ್ತಿರುವ ಜಮೀನುಗಳಲ್ಲೇ ಮೊಕ್ಕಾಂ ಹೂಡುವಂತಾಗಿದೆ. ಕಳ್ಳರ ಕಾಟದಿಂದ ಬೇಸತ್ತಿರುವ ಅವರಿಗೆ ಟೊಮೆಟೊ ರಕ್ಷಣೆ ಮಾಡುವುದು ತಲೆನೋವಾಗಿ ಪರಿಣಮಿಸಿದೆ. ದಾವಣಗೆರೆಯ ರೈತರು ಎರಡು ನಾಯಿಗಳೊಂದಿಗೆ ಜಮೀನಿನಲ್ಲಿ ಕಾವಲು ಕಾಯುತ್ತಿದ್ದಾರೆ. ಮಾಯಕೊಂಡ ಹೋಬಳಿಯಲ್ಲಿ ಟೊಮೆಟೊ ಹೆಚ್ಚಾಗಿ ಬೆಳೆಯುತ್ತಾರೆ. ಸುತ್ತಮುತ್ತಲ ಗ್ರಾಮದ‌ ಜಮೀನುಗಳಲ್ಲಿ ಬೆಳೆಯುವ ತರಕಾರಿ ವಿದೇಶಗಳಿಗೂ ರಫ್ತಾಗುತ್ತದೆ. ಈಗಂತೂ ಟೊಮೆಟೊಗೆ ಬೆಲೆ ಕೇಳುವಂತಿಲ್ಲ. ಪ್ರತಿ …

Read More »

ಜೈನಮುನಿಹತ್ಯೆ ಮಾಡಿದ ಆರೋಪಿಗಳಿಗೆ ವರ್ಷದೊಳಗೆ ಮರಣ ದಂಡನೆ ವಿಧಿಸಬೇಕು:ಅಬ್ದುಲ್ ಅಜೀಮ್

ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣದಲ್ಲಿ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆ ಆಗಬೇಕು. ಹತ್ಯೆ ಮಾಡಿದವರ ಜತೆಗೆ ಹತ್ಯೆಗೆ ಪ್ರಚೋದನೆ, ಸಾಧನ, ಸಲಕರಣೆ ಒದಗಿಸಿದವರನ್ನೂ ಶಿಕ್ಷೆಗೆ ಒಳಪಡಿಸಬೇಕು. ಅಪರಾಧಿಗಳಿಗೆ ಅತ್ಯಂತ ಕಠಿಣ ಮರಣದಂಡನೆ ಶಿಕ್ಷೆ ವಿಧಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸೇರಿದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ತಿಳಿಸಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ …

Read More »

ಕುಡಿಯಲು ಹಣ ನೀಡುವಂತೆ ಮನೆಯವರಿಗೆ ಪೀಡಿಸುತ್ತಿದ್ದ ಯುವಕನ ಹೊಡೆದು ಕೊಂದ ತಂದೆ, ಸಹೋದರ!

ಚಿಕ್ಕೋಡಿ: ಕುಡಿತದ ಚಟಕ್ಕೆ ದಾಸನಾಗಿ ಕುಟುಂಬಸ್ಥರನ್ನು ಪೀಡಿಸುತ್ತಿದ್ದ ಯುವಕನನ್ನು ಸ್ವಂತ ತಂದೆ ಮತ್ತು ಅಣ್ಣನೇ ಹೊಡೆದು ಸಾಯಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದ ಸೋಮಯ್ಯ ಮಹಾಲಿಂಗಯ್ಯ ಹಿರೇಮಠ (24) ಮೃತ ದುರ್ದೈವಿ. ಆರೋಪಿಗಳಾದ ಮಹಾಲಿಂಗಯ್ಯ ಗುರುಸಿದ್ದಯ್ಯ ಹಿರೇಮಠ, ಬಸಯ್ಯ ಹಿರೇಮಠ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾರುಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ : ಜುಲೈ 10ರಂದು ಸೋಮಯ್ಯ ಮದ್ಯಪಾನ ಮಾಡಲು ಹಣ …

Read More »