Breaking News

ಕೆಎಸ್​ಆರ್​ಟಿಸಿ ಬಸ್ ಮತ್ತು ಕಾರಿನ ನಡುವೆ ರಾಮನಗರದಲ್ಲಿ ಭೀಕರ ಅಪಘಾತ ಸಂಭವಿಸಿದೆ.

ರಾಮನಗರ: ಕೆಎಸ್​ಆರ್​ಟಿಸಿ ಬಸ್ ಮತ್ತು ಕ್ವಾಲಿಸ್ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕನಕಪುರ ತಾಲೂಕಿನ ಸಾತನೂರು ಕೆಮ್ಮಾಳೆ ಗೇಟ್​ಬಳಿ ಇಂದು ನಡೆದಿದೆ. ಮಹದೇಶ್ವರ ಬೆಟ್ಟದಿಂದ ವಾಪಸ್ ಆಗ್ತಿದ್ದ ಕಾರು ಬೆಂಗಳೂರಿನಿಂದ ಮಳವಳ್ಳಿ ಕಡೆ ಸಂಚರಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಕಾರು ಸಂಪೂರ್ಣ ಜಖಂ ಆಗಿದೆ. ಬಸ್‌ನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಸಾತನೂರು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರವಾಗಿ ಗಾಯಗೊಂಡವರನ್ನು ರಾಮನಗರದ ಜಿಲ್ಲಾಸ್ಪತ್ರೆಗೆ …

Read More »

ಥಿಯೇಟರ್​ಗಳಲ್ಲಿ ಅಬ್ಬರಿಸುತ್ತಿದೆ ‘ಟೋಬಿ’ ಸಿನಿಮಾ ಮೂರು ದಿನಗಳಲ್ಲಿ 10 ರಿಂದ 12 ಕೋಟಿ ರೂಪಾಯಿ ಕಲೆಕ್ಷನ್​

  ‘ಒಂದು ಮೊಟ್ಟೆಯ ಕಥೆ’ಯಲ್ಲಿ ಮುಗ್ಧನಾಗಿ, ‘ಗರುಡ ಗಮನ ವೃಷಭ ವಾಹನ’ದಲ್ಲಿ ರೌಡಿಯಾಗಿ ಕಾಣಿಸಿಕೊಂಡಿದ್ದ ನಟ ರಾಜ್​ ಬಿ ಶೆಟ್ಟಿ ‘ಟೋಬಿ’ಯಾಗಿ ರಾಜ್ಯಾದ್ಯಂತ ಅಬ್ಬರಿಸುತ್ತಿದ್ದಾರೆ. ಶೆಟ್ರ ಜೊತೆ ಚೈತ್ರಾ ಜೆ ಆಚಾರ್​ ಮತ್ತು ಸಂಯುಕ್ತಾ ಹೊರನಾಡು ಮುಖ್ಯಭೂಮಿಕೆಯಲ್ಲಿರುವ ಸಿನಿಮಾ ಆಗಸ್ಟ್​ 25 ರಂದು ತೆರೆ ಕಂಡು, ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮಲ್ಟಿಫ್ಲೆ​ಕ್ಸ್​ಗಳಲ್ಲಿ ಟೋಬಿ ಸಿನಿಮಾದ ಕ್ರೇಜ್​ ಕೊಂಚ ಜಾಸ್ತಿನೇ ಇದೆ. ಒಳ್ಳೆಯ ಕಂಟೆಂಟ್​ ಜೊತೆಗೆ ಉತ್ತಮ ಸಿನಿಮಾವನ್ನು ಕೊಟ್ಟರೆ …

Read More »

ನೀರಿನ ಕಾಲುವೆಗೆ ಕೆಮಿಕಲ್ ಮಿಶ್ರಿತ ಆಯಸಿಡ್​ ಕಪ್ಪು ಬಣ್ಣಕ್ಕೆ ತಿರುಗಿದ‌ ಬೆಳೆ

ದಾವಣಗೆರೆ : ಅವರು ಮೂಲತಃ ಆಂಧ್ರದಿಂದ ಆಗಮಿಸಿ ದಾವಣಗೆರೆಯ ಸುತ್ತಮುತ್ತ ಕೃಷಿ ಚಟುವಟಿಕೆ ಮಾಡ್ತಾ ಜೀವನ ಸಾಗಿಸುತ್ತಿದ್ದವರು. ಯಾರೋ ದುರುಳರು ಬಂದು ಆ ರೈತನ ಹೊಲಕ್ಕೆ ನೀರು ಕಟ್ಟುವ ಕಾಲುವೆಯ ನೀರಿಗೆ ಟ್ಯಾಂಕರ್ ಮೂಲಕ ರಾಸಾಯನಿಕ ತ್ಯಾಜ್ಯ (ಕೆಮಿಕಲ್) ಸುರಿದ ಬೆನ್ನಲ್ಲೇ ಅವರ ಬದುಕು ಬರ್ಬಾದ್ ಆಗಿದೆ. ನೀರಿನಲ್ಲಿ ರಾಸಾಯನಿಕ ಹರಿದುಬಂದು ಹೊಲ ಸೇರಿದ್ದರಿಂದ‌ ಇಡೀ ಭತ್ತದ ಪೈರು ಕಪ್ಪು ಬಣ್ಣಕ್ಕೆ ತಿರುಗಿ ಸುಟ್ಟಿರುವ ರೀತಿ ಭಾಸವಾಗುತ್ತಿದೆ. ಸಾಲಸೋಲ ಮಾಡಿ ಬೆಳೆದಿದ್ದ …

Read More »

ಶಿವಶಕ್ತಿ ಪಾಯಿಂಟ್​ನಲ್ಲಿ 3×4 ವ್ಯಾಸದ ಕುಳಿ ಚಿತ್ರ ಕಳುಹಿಸಿದ ರೋವರ್​.. ಪಥ ಬದಲಿಸಿ ಅಧ್ಯಯನ ಮುಂದುವರಿಕೆ

ಬೆಂಗಳೂರು​: ಚಂದ್ರನ ಶಿವಶಕ್ತಿ ಪಾಯಿಂಟ್​ ಸುತ್ತಲೂ ಅಧ್ಯಯನ ಆರಂಭಿಸಿರುವ ಪ್ರಜ್ಞಾನ್​ ರೋವರ್​ ದೊಡ್ಡ ಕುಳಿಯನ್ನು ಗುರುತಿಸಿದೆ. 8 ಮೀಟರ್ ದೂರದ ಸಂಚಾರದಲ್ಲಿ ಮಾರ್ಗ ಮಧ್ಯೆ ಕುಳಿಯೊಂದು ಬಂದಿದ್ದು, ನೇರವಾಗಿ ಚಲಿಸುವ ಬದಲು ಅಲ್ಲಿಂದ ಪಕ್ಕಕ್ಕೆ ಸರಿದು ಪ್ರಯೋಗ ಮುಂದುವರಿಸಿದೆ. ಶಶಿಯ ಈ ಕುಳಿ 3×4 ವ್ಯಾಸ ಹೊಂದಿದೆ ಎಂದು ಇಸ್ರೋ ತಿಳಿಸಿದೆ. ಆಗಸ್ಟ್ 27 ರಂದು ರೋವರ್​ ಈ ಕುಳಿಯ ಸಮೀಪ ಸಾಗಿದೆ. ಬಳಿಕ ಹೊಸ ಮಾರ್ಗವನ್ನು ಆಯ್ದುಕೊಂಡು ಸುರಕ್ಷಿತವಾಗಿ ಮುಂದೆ …

Read More »

ಪ್ರಭಾಶುಗರ ಅಧ್ಯಕ್ಷರಾಗಿ ಅಶೋಕ ಪಾಟೀಲ, ಉಪಾಧ್ಯಕ್ಷರಾಗಿ ರಾಮಣ್ಣಾ ಮಹಾರಡ್ಡಿ ಪುನರಾಯ್ಕೆ

ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ರಾಮಣ್ಣಾ ಕೃಷ್ಣಪ್ಪ ಮಹಾರಡ್ಡಿ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಸೋಮವಾರದಂದು ಸಕ್ಕರೆ ಕಾರ್ಖಾನೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಬೈಲಹೊಂಗಲ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಶಾಹೀನ್ ಅಖ್ತರ ಅವರು ಪ್ರಕಟಿಸಿದರು. ಅಧ್ಯಕ್ಷ-ಉಪಾಧ್ಯಕ್ಷರಾಗಿ ಅವಿರೋಧವಾಗಿ …

Read More »

ಮುಂದಿನ ಐದು ವರ್ಷ ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ಸ್ಪರ್ಧಿಸಲ್ಲ:H.D.K.

ಮಂಡ್ಯ: ಮುಂದಿನ ಐದು ವರ್ಷ ನಿಖಿಲ್ ಕುಮಾರಸ್ವಾಮಿ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡಲ್ಲ. ನಿಖಿಲ್‌ಗೆ ಸಲಹೆ ನೀಡಿದ್ದೇನೆ, ರಾಜಕೀಯ ಸಹವಾಸಕ್ಕೆ ಹೋಗಬೇಡ. ನಿನಗೆ ಭಗವಂತ ಕೊಟ್ಟಿರೋ ಕಲೆ ಇದೆ ಸಿನಿಮಾ ಮಾಡು ಎಂದು ಹೇಳಿರುವುದಾಗಿ ನಿಖಿಲ್ ಚುನಾವಣೆ ಸ್ಪರ್ಧೆ ಬಗ್ಗೆ ನಿಖಿಲ್​ ತಂದೆಯೂ ಆಗಿರುವ ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಕುರಿತು ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ ಅವರು, ನಿಖಿಲ್​ಗೆ ರಾಜಕೀಯ ಜಂಗುಳಿ ಬಿಟ್ಟು ಕಲಾವಿದನಾಗಿ ಬದುಕು ರೂಪಿಸಿಕೊಳ್ಳಲು …

Read More »

ಗೋಕಾಕ ಪ್ರತಿಭೆಗಳಿಗೆ ಗುಡ್ ನ್ಯೂಸ್; ಮತ್ತೆ ಸತೀಶ್ ಶುಗರ್ಸ್ ಅವಾರ್ಡ್ ಪ್ರಾರಂಭ

ಗೋಕಾಕ ಪ್ರತಿಭೆಗಳಿಗೆ ಗುಡ್ ನ್ಯೂಸ್; ಮತ್ತೆ ಸತೀಶ್ ಶುಗರ್ಸ್ ಅವಾರ್ಡ್ ಪ್ರಾರಂಭ. ಗೋಕಾಕ : ಸತೀಶ್ ಶುಗರ್ಸ್ ಅವಾರ್ಡ್ ಪ್ರಾರಂಭ ಮಾಡುವುದಾಗಿ ಗೋಕಾಕ ಪ್ರತಿಭೆಗಳಿಗೆ ಗುಡ್ ನ್ಯೂಸ್; ಮತ್ತೆ ಸತೀಶ್ ಶುಗರ್ಸ್ ಅವಾರ್ಡ್ ಪ್ರಾರಂಭ. ಗೋಕಾಕ : ಸತೀಶ್ ಶುಗರ್ಸ್ ಅವಾರ್ಡ್ ಪ್ರಾರಂಭ ಮಾಡುವುದಾಗಿ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನವೆಂಬರ್ ತಿಂಗಳಲ್ಲಿ ಯಮಕನಮರಡಿ ಮತಕ್ಷೇತ್ರದಲ್ಲಿ, ಜನವರಿ ತಿಂಗಳಲ್ಲಿ ಗೋಕಾಕ ನಗರದಲ್ಲಿ ಸತೀಶ್ ಶುಗರ್ಸ್ ಅವಾರ್ಡ್ ಹಮ್ಮಿಕೊಳ್ಳಲಾಗುವುದು. …

Read More »

ಕೋವಿಡ್ ಹಗರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ಮಾಡುತ್ತೇವೆ: ಸಚಿವ ಶರಣಪ್ರಕಾಶ ಪಾಟೀಲ್

ಹುಬ್ಬಳ್ಳಿ: ಕೋವಿಡ್ ಹಗರಣದ ತನಿಖೆ ಕಾಟಾಚಾರಕ್ಕೆ ಮಾಡುತ್ತಿಲ್ಲ. ಕೋವಿಡ್ ಹಗರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ಮಾಡುತ್ತೇವೆ. ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ಮಾಡಿಸುತ್ತಿದ್ದೇವೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲೆಂದೇ ನ್ಯಾಯಾಂಗ ತನಿಖೆ ಮಾಡಿಸುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದರು. ನಗರದ ಕಿಮ್ಸ್ ಆಸ್ಪತ್ರೆ ವೈದ್ಯರೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ನಮ್ಮ ಇಲಾಖೆಯಿಂದಲೂ ಕೆಲವೊಂದು ಹಗರಣಗಳ ತನಿಖೆ ನಡಿಯುತ್ತಿದೆ. ನಮ್ಮ ಸರ್ಕಾರದಲ್ಲಿ ಪಾರದರ್ಶಕ ಆಡಳಿತ ಕೊಡುತ್ತೇವೆ ಅಂತ …

Read More »

ನಿಮ್ಮಗೆ ಮುಂದಿನ ಕಾರ್ಯ ಮಾಡೋಕೆ ಆದರೆ ಮಾಡಿ ಇಲ್ಲ ಹೆಣ ಬಿಸಾಕಿ ಎಂದು ಮಕ್ಕಳು

ಸುಮಾರು ಒಂದೂವರೆ ತಿಂಗಳ ಹಿಂದೆ #ಚಿಕ್ಕೋಡಿ ತಾಲ್ಲೂಕಿನ #ನಾಗರಮುನ್ನೊಳಿ ಗ್ರಾಮದ ಶಿವನೇರಿ ಲಾಡ್ಜ್ ನಲ್ಲಿ ಯಾರೋ ಚಿಕಿತ್ಸೆಗೆಂದು ಸುಮಾರು 72 ವರ್ಷದ ವೃದ್ಧನನ್ನು ತಂದು ಇಲ್ಲೆ ಬಿಟ್ಟು ಪರಾರಿಯಾಗಿರುತ್ತಾರೆ ಎಂಬ ಮಾಹಿತಿ ತಿಳಿದು ಬಂದ ಮೇಲೆ ಚಿಕ್ಕೋಡಿ ಪೋಲಿಸರಾದ ನಾವು ಸ್ಥಳಕ್ಕೆ ಭೇಟಿ ನೀಡಿದಾಗ ಅಲ್ಲಿ ಮೂಲಚಂದ್ರ ಶರ್ಮಾ ಎನ್ನುವ ಪುನಾ ಮೂಲದ ವ್ಯಕ್ತಿ ಇಂಗ್ಲಿಷ್, ಹಿಂದಿ , ಮರಾಠಿ ಹೀಗೆ ಹಲವು ಭಾಷೆಗಳಲ್ಲಿ ಕರಾರುವಕ್ಕಾಗಿ ಕಡಕ್ಕಾಗಿ ಮಾತನಾಡುತ್ತಾ ಪಾರ್ಶ್ವವಾಯು …

Read More »

ಧರಣಿ ನಡೆಸುತ್ತಿದ್ದ ವೇಳೆ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ರೈತರು.. ಡಿಸಿ, ಎಸ್ಪಿ ಭೇಟಿ

ಗಂಗಾವತಿ (ಕೊಪ್ಪಳ) : ಸರಿಯಾದ ಮಳೆ ಇಲ್ಲದಿರುವ ಕಾರಣಕ್ಕೆ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಕಾರಟಗಿಯಲ್ಲಿ ರೈತರು ನಡೆಸುತ್ತಿರುವ ಧರಣಿ ಸಂದರ್ಭದಲ್ಲಿ ಇಬ್ಬರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಘಟನೆ ನಡೆದಿದೆ.   ಆರೋಗ್ಯದಲ್ಲಿ ದಿಢೀರ್ ಏರುಪೇರಿನಿಂದಾಗಿ ಆಸ್ಪತ್ರೆ ಪಾಲಾದ ರೈತರನ್ನು ಕಾರಟಗಿಯ ಸಮುದಾಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿ ನಲೀನ್ ಅತುಲ್ ಕುಮಾರ್ ಹಾಗೂ ಜಿಲ್ಲಾ ಎಸ್ಪಿ ಯಶೋಧಾ …

Read More »