Breaking News

ಶರಾವತಿ ಯೋಜನೆ ವಿರೋಧ: ಮಣ್ಣು ಪರೀಕ್ಷೆಗೆ ಬಂದ ಅಧಿಕಾರಿಗಳಿಗೆ ಸ್ಥಳೀಯರಿಂದ ತಡೆ

  ಗೇರುಸೊಪ್ಪ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಯೋಜನಾ ಪ್ರದೇಶದಲ್ಲಿ ಮಣ್ಣು ಮತ್ತು ನೀರಿನ ಮಾದರಿ ಸಂಗ್ರಹಕ್ಕೆ ಬಂದಿದ್ದ ಕೇಂದ್ರ ಸರ್ಕಾರದ 13 ಅಧಿಕಾರಿಗಳ ತಂಡವನ್ನು ಸ್ಥಳೀಯರು ಅಡ್ಡಗಟ್ಟಿ ವಿಚಾರಣೆ ನಡೆಸಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ವಿದ್ಯುತ್ ನಿಗಮದ (KPC) ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿರುವ ಗೇರುಸೊಪ್ಪಾ ಡ್ಯಾಂ ಸಮೀಪದ ಬೆಗೋಡಿನಲ್ಲಿ ಶುಕ್ರವಾರ ಮಧ್ಯಾಹ್ನ ಸುಮಾರು 11.30ರ ಸುಮಾರಿಗೆ ಕೇಂದ್ರ ಕೃಷಿ ಸಂಶೋಧನಾ ಮಂಡಳಿ (ICAR) …

Read More »

ಶಾಸಕಿ ಜಿ. ಕರೆಮ್ಮಾ ನಾಯಕ್​ ಕಾರು ಅಪಘಾತ

ರಾಯಚೂರು: ದೇವದುರ್ಗ ಶಾಸಕಿ ಜಿ. ಕರೆಮ್ಮಾ ನಾಯಕ್​ ತೆರಳುತ್ತಿದ್ದ ಕಾರು ಅಪಘಾತವಾಗಿದ್ದು, ಶಾಸಕಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಲಿಂಗಸುಗೂರು ತಾಲೂಕಿನ‌ ಪೈದೊಡ್ಡಿ ಕ್ರಾಸ್ ಹತ್ತಿರ ‌ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ. ಮದುವೆ ಸಮಾರಂಭದಲ್ಲಿ ಭಾಗವಹಿಸುವುದಕ್ಕಾಗಿ ಇಂದು ದೇವದುರ್ಗದಿಂದ ಹುಬ್ಬಳ್ಳಿಗೆ ಕುಟುಂಬ ಸಮೇತವಾಗಿ ಶಾಸಕಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಕರೆಮ್ಮಾ ಅವರು ಕುಳಿತಿದ್ದ ಕಾರಿನ ಮುಂದೆ ಹೋಗುತ್ತಿದ್ದ, ಕರೆಮ್ಮಾ ಅವರಿಗೆ ಸೇರಿದ ಮತ್ತೊಂದು …

Read More »

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ಆಟೊ ಚಾಲಕನನ್ನ ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ದೂರಿನಲ್ಲಿ ಇರುವುದೇನು?- ಪ್ರಕರಣದ ಬಗ್ಗೆ ಪೊಲೀಸರು ಹೇಳಿದ್ದಿಷ್ಟು : ಈಶಾನ್ಯ ಭಾರತದ ಮೂಲದ ಯುವತಿ ನೀಡಿದ ದೂರಿನ ಮೇರೆಗೆ ಆಟೊ ಚಾಲಕ ಪವನ್ (21) ಎಂಬುವನನ್ನ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೂರಿನಲ್ಲಿ ಇರುವಂತೆ ಘಟನೆಯ ಹಿನ್ನೆಲೆ: ಕಳೆದ ಎರಡು ವರ್ಷಗಳಿಂದ ನಗರದ ಕ್ಯಾಲಸೇನಹಳ್ಳಿಯ …

Read More »

ಕಾರ್ಮಿಕ ಕಲ್ಯಾಣ ನಿಧಿ ಕಾಯ್ದೆಗೆ ತಿದ್ದುಪಡಿ ಪ್ರಸ್ತಾಪ: ಇನ್ನು ಮುಂದೆ 10 ಕಾರ್ಮಿಕರಿರುವ ಸಣ್ಣ ಅಂಗಡಿ, ಸಂಸ್ಥೆಗಳಿಗೂ ಕಲ್ಯಾಣ ನಿಧಿ ವಂತಿಕೆ ಹೊರೆ!

ಬೆಂಗಳೂರು: ಈವರೆಗೆ ಕನಿಷ್ಠ 50 ಕಾರ್ಮಿಕರಿರುವ ಅಂಗಡಿ, ಸಂಸ್ಥೆಗಳಿಂದ ಕಾರ್ಮಿಕ ನಿಧಿ ವಂತಿಕೆ ಸಂಗ್ರಹಿಸಲಾಗುತ್ತಿದೆ. ಇನ್ನು ಮುಂದೆ ಕನಿಷ್ಠ 10 ಕಾರ್ಮಿಕರಿರುವ ಅಂಗಡಿ, ಸಂಸ್ಥೆಗಳಿಂದ ಕಾರ್ಮಿಕ ನಿಧಿ ವಂತಿಕೆ ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಿಯಮ ತಿದ್ದುಪಡಿಗೆ ಮುಂದಾಗಿದೆ. ಕಾರ್ಮಿಕರ ಕಲ್ಯಾಣ ನಿಧಿ: ಈ ಮೊತ್ತದಲ್ಲಿ ರಾಜ್ಯದಲ್ಲಿ ಕಾರ್ಮಿಕರು ಮತ್ತು ಅವರ ಕುಟುಂಬದ ಅವಲಂಬಿತರಿಗಾಗಿ ಮಂಡಳಿ ವತಿಯಿಂದ 7 ಕಲ್ಯಾಣ ಯೋಜನೆಗಳನ್ನು ರಾಜ್ಯಾದ್ಯಂತ ಅನುಷ್ಠಾನಗೊಳಿಸಲಾಗುತ್ತಿದೆ.‌ ಕರ್ನಾಟಕ ರಾಜ್ಯದಲ್ಲಿ ಕಾರ್ಮಿಕರ ಕಲ್ಯಾಣವನ್ನು ಸಂವರ್ಧನೆಗೊಳಿಸುವುದಕ್ಕಾಗಿ ಒಂದು …

Read More »

ಪ್ರಧಾನಮಂತ್ರಿ ಧನ ಧಾನ್ಯ ಯೋಜನೆಗೆ ರಾಜ್ಯದ 6 ಜಿಲ್ಲೆ ಆಯ್ಕೆ: ಹಾವೇರಿಯಲ್ಲಿ ಸಂಸದ ಬೊಮ್ಮಾಯಿ ಚಾಲನೆ

ಹಾವೇರಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆಯನ್ನು ಉದ್ಘಾಟನೆ ಮಾಡಿದ್ದು, ಈ ಯೋಜನೆಗೆ ದೇಶದಲ್ಲಿ 100 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಅವುಗಳಲ್ಲಿ ಕರ್ನಾಟಕದ ಆರು ಜಿಲ್ಲೆಗಳಿದ್ದು, ಅದರಲ್ಲಿ ಹಾವೇರಿಯೂ ಒಂದಾಗಿದೆ. ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚ್ಯುವಲ್ ಮೂಲಕ ಯೋಜನೆಗೆ ಚಾಲನೆ ನೀಡಿದ್ದು, ಸಂಸದ ಬಸವರಾಜ ಬೊಮ್ಮಾಯಿ ಅವರು ಹಾವೇರಿಯ ಹನುಮನಹಟ್ಟಿಯ ಐಸಿಎಆರ್​ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜಿಲ್ಲೆಯ ಧನ ಧಾನ್ಯ ಅಭಿಯಾನಕ್ಕೆ …

Read More »

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ ಸಮಸ್ತರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ​ಈ ಅವಿರೋಧ ಆಯ್ಕೆಯು ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಮತ್ತು ಸಹಕಾರದ ಸಂಕೇತವಾಗಿದೆ. ಮುಖ್ಯವಾಗಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ Satish Jarkiholi, ಅರಭಾವಿ ಶಾಸಕರಾದ ಶ್ರೀ ಬಾಲಚಂದ್ರ ಜಾರಕಿಹೊಳಿ, ಯರಗಟ್ಟಿ ತಾಲ್ಲೂಕಿನ ಎಲ್ಲಾ ಪಿ.ಕೆ.ಪಿ.ಎಸ್. (PKPS) ಸೊಸೈಟಿಗಳ ಅಧ್ಯಕ್ಷರುಗಳಿಗೆ, ಸರ್ವ ಸದಸ್ಯರುಗಳಿಗೆ, ಮತ್ತು ಎಲ್ಲ …

Read More »

ಮಾರ್ಗದರ್ಶಿ ಚಿಟ್ಸ್ ಕರ್ನಾಟಕ ಪ್ರಾದೇಶಿಕ ವಿಭಾಗದ ನೂತನ ಕೇಂದ್ರ ಕಚೇರಿ ಉದ್ಘಾಟನೆ

ಬೆಂಗಳೂರು: ಪ್ರತಿಷ್ಠಿತ ರಾಮೋಜಿ ಗ್ರೂಪ್ ಆಫ್ ಕಂಪನೀಸ್​​ಗೆ ಸೇರಿದ ಅತ್ಯಂತ ವಿಶ್ವಾಸಾರ್ಹ ಸಂಸ್ಥೆ ಮಾರ್ಗದರ್ಶಿ ಚಿಟ್ಸ್ ಕಂಪನಿಯ ಮೂರು ಹೊಸ ಶಾಖೆಗಳನ್ನು ಈ ವರ್ಷಾಂತ್ಯದೊಳಗೆ ಕರ್ನಾಟಕದಲ್ಲಿ ಪ್ರಾರಂಭಿಸಲಾಗವುದು ಎಂದು ಮಾರ್ಗದರ್ಶಿ ಚಿಟ್ಸ್​​ನ ಕರ್ನಾಟಕ ಪ್ರಾದೇಶಿಕ ವಿಭಾಗದ ಮುಖ್ಯಸ್ಥರಾದ ಪಿ.ಲಕ್ಷ್ಮಣರಾವ್ ಅವರು ತಿಳಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದ ಅರಮನೆ ರಸ್ತೆಯ ಬಳಿ ಮಾರ್ಗದರ್ಶಿ ಚಿಟ್ಸ್ ಕರ್ನಾಟಕ ಪ್ರಾದೇಶಿಕ ವಿಭಾಗದ ನೂತನ ಕೇಂದ್ರ ಕಚೇರಿ ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ‘ ಮಾತನಾಡಿದ ಅವರು, ಸಿಲಿಕಾನ್ ಸಿಟಿ …

Read More »

ಕ್ರಿಕೆಟ್ ಮಹೋತ್ಸವ 2025 ಟಿ-10 ಲೆದರ್ ಬಾಲ್ ಕ್ರಿಕೆಟ್ ಪಂದ್ಯ

ಕ್ರಿಕೆಟ್ ಮಹೋತ್ಸವ 2025 ಟಿ-10 ಲೆದರ್ ಬಾಲ್ ಕ್ರಿಕೆಟ್ ಪಂದ್ಯ ಆಲ್ ರೌಂಡರ್ ಆಟಗಾರ ಅಮೇಯ ಮೀಲಿಂದ್ ಭಾತಕಾಂಡೆ ವಿಶೇಷ ಸಾಧನೆ ಇಂಗ್ಲೆಂಡ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಆಹ್ವಾನಿತರ ಕ್ರಿಕೆಟ್ ಮಹೋತ್ಸವ 2025 ಟಿ-10 ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೆಳಗಾವಿಯ ಪ್ರತಿಭಾನ್ವಿತ ಆಲ್ ರೌಂಡರ್ ಆಟಗಾರ ಅಮೇಯ ಮೀಲಿಂದ್ ಭಾತಕಾಂಡೆ ಅವರು ತಮ್ಮ ಸ್ಮರಣೀಯ ಆಟದ ಮೂಲಕ ಭಾರತ್ ಬ್ರಿಸ್ಟಲ್ ತಂಡಕ್ಕೆ ಪಾಕಿಸ್ತಾನ್ ಬ್ರಿಸ್ಟೋಲಿಯನ್ಸ್ ವಿರುದ್ಧ ಅದ್ಭುತ ವಿಜಯ ತಂದುಕೊಟ್ಟಿದ್ದಾರೆ. …

Read More »

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ನಡೆದ ಕಾರ್ಯಕ್ರಮ ಬೆಳಗಾವಿ: ಮಹಿಳೆಯರ ಸ್ವಾಭಿಮಾನ ಎತ್ತಿಹಿಡಿದು, ಆರ್ಥಿಕ ಸ್ವಾವಲಂಬನೆ ಮಾಡಲು ನನಗೆ ಅವಕಾಶ ಸಿಕ್ಕಿದೆ. ಮಹಿಳೆ ಅಭಿವೃದ್ಧಿಯಾದರೆ ಮನೆ, ಗ್ರಾಮ, ರಾಜ್ಯ, ದೇಶ ಅಭಿವೃದ್ಧಿಯಾದಂತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಕಂಗ್ರಾಳಿ ಕೆ.ಎಚ್ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ …

Read More »

ಅ.13 ರಂದು ಸಿಎಂಗೆ ಘೇರಾವ್ ಹಾಕಲು ಮುಂದಾದ ವಾಲ್ಮೀಕಿ ಸಮಾಜ

ಅ.13 ರಂದು ಸಿಎಂಗೆ ಘೇರಾವ್ ಹಾಕಲು ಮುಂದಾದ ವಾಲ್ಮೀಕಿ ಸಮಾಜ ರಾಜ್ಯದಲ್ಲಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಸೇರ್ಪಡೆ ಮಾಡುವ ಪ್ರಯತ್ನ ಹಾಗೂ ನಕಲಿ ಜಾತಿ ಪ್ರಮಾಣ ಪತ್ರಗಳ ಹಾವಳಿ ವಿರೋಧಿಸಿ ವಾಲ್ಮೀಕಿ ಸಮುದಾಯವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅಕ್ಟೋಬರ್ 13 ರಂದು ಜಿಲ್ಲೆಗೆ ಭೇಟಿ ನೀಡಲಿರುವ ಮುಖ್ಯಮಂತ್ರಿಗಳಿಗೆ ಘೇರಾವ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಾಲ್ಮೀಕಿ …

Read More »