ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆ ಬಹಳ ಮುಂದೆ ಬಂದಿದೆ. ಮೂರು ದಿನಗಳಲ್ಲಿ ಮಾಧ್ಯಮಗೊಷ್ಠಿ ನಡೆಸಿ ಮಾಹಿತಿ ಕೊಡುತ್ತೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಗೃಹ ಲಕ್ಷ್ಮಿ ಯೋಜನೆಗೆ ಪಡಿತರ ಕಾರ್ಡ್ ಕಡ್ಡಾಯ. ಯೋಜನೆಗೆ ಅರ್ಜಿ ಹಾಕಿದ ಬಳಿಕ ಸ್ವೀಕೃತಿ ಆದಾಗ ವಾಯ್ಸ್ ಮೆಸೇಜ್ ಬರುತ್ತದೆ. ಪ್ರತಿ ತಿಂಗಳು ಹಣ ಜಮೆ ಆದಾಗಲಾ ಮೆಸೇಜ್ ಬರುತ್ತದೆ ಎಂದರು. ಉಡುಪಿ ಜಿಲ್ಲೆಯಲ್ಲಿ ಮಳೆಯಿಂದಾದ ಹಾನಿ ವಿಚಾರವಾಗಿ ಪ್ರತಿಕ್ರಿಯಿಸಿ, ಉಡುಪಿ …
Read More »ಬಾಲಕಿಯರ ವಾಶ್ ರೂಂನಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ ಎಂದು ಕೆಲವು ಪೋಷಕರು ಗಂಭೀರ ಆರೋಪ ಮಾಡಿದ್ದು, ಶಾಲೆಯ ಪ್ರಾಂಶುಪಾಲರ ಮೇಲೆ ಹಲ್ಲೆ
ಮಹಾರಾಷ್ಟ್ರ: ಪುಣೆ ಜಿಲ್ಲೆಯ ಖಾಸಗಿ ಶಾಲೆಯೊಂದರ ಬಾಲಕಿಯರ ವಾಶ್ ರೂಂನಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ ಎಂದು ಕೆಲವು ಪೋಷಕರು ಗಂಭೀರ ಆರೋಪ ಮಾಡಿದ್ದು, ಶಾಲೆಯ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ್ದಾರೆ. ಮಂಗಳವಾರ ಮಧ್ಯಾಹ್ನ ನಡೆದ ಈ ಘಟನೆಯ ವಿಡಿಯೋ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ತಲೇಗಾಂವ್ ದಭಾಡೆ ಪ್ರದೇಶದ ಶಾಲಾ ಆವರಣದಲ್ಲಿ ಬಲಪಂಥೀಯ ಗುಂಪೊಂದು ಪ್ರಾಂಶುಪಾಲರನ್ನು ಹಿಂಬಾಲಿಸುತ್ತಿರುವ ದೃಶ್ಯವಿದೆ. ಘಟನೆ ಕುರಿತು ಶಿಕ್ಷಣ ಇಲಾಖೆ ತನಿಖೆ ನಡೆಸುತ್ತಿದೆ. …
Read More »ಗುಂಡು ಹಾರಿಸಿಕೊಂಡು ಡಿಐಜಿ ವಿಜಯಕುಮಾರ್ ಆತ್ಮಹತ್ಯೆ
ಕೊಯಮತ್ತೂರು : ಕೊಯಮತ್ತೂರು ಕಾರ್ಗೋ ವಿಭಾಗದ ಡಿಐಜಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯಕುಮಾರ್ (45) ಅವರು ಬಂಟ ರಸ್ತೆಯ ಪಾಂಥಯ ಸಲೈನಲ್ಲಿರುವ ತಮ್ಮ ಕ್ಯಾಂಪ್ ಕಚೇರಿಯಲ್ಲಿ ಶುಕ್ರವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 2009ರ ಐಪಿಎಸ್ ಬ್ಯಾಚ್ನವರಾಗಿದ್ದ ಇವರು, 2022 ಜನವರಿ 6ರಂದು ಚೆನ್ನೈನ ಅಣ್ಣಾನಗರ ಡೆಪ್ಯುಟಿ ಕಮಿಷನರ್ನಿಂದ ಕೊಯಮತ್ತೂರು ಡಿಐಜಿಯಾಗಿ ಬಡ್ತಿ ಪಡೆದಿದ್ದರು. ಕಾಂಚೀಪುರಂ, ಕಡಲೂರು, ನಾಗಪಟ್ಟಿಣಂ ಮತ್ತು ತಿರುವರೂರ್ನಲ್ಲಿ ಡಿಎಸ್ಪಿಯಾಗಿ ಕೆಲಸ ಮಾಡಿದ್ದಾರೆ. ನಿನ್ನೆ ರಾತ್ರಿ ಜಿಲ್ಲಾಧಿಕಾರಿ ಸಂದೀಶ್ ಅವರ ಮಗುವಿನ …
Read More »ಕೊಪ್ಪಳ ,ಕಲಬುರಗಿಯಲ್ಲಿ ಜಾನಪದ ಲೋಕಸ್ಥಾಪನೆ
ಬೆಂಗಳೂರು: ಚಿತ್ರರಂಗದ ಬೇಡಿಕೆಯಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲೇ ಸ್ಥಾಪಿಸುವುದಾಗಿ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಈ ಹಿಂದಿನ ಸರ್ಕಾರದಲ್ಲಿ ಈ ಫಿಲ್ಮ್ ಸಿಟಿಯನ್ನು ಬೆಂಗಳೂರಿಗೆ ವರ್ಗಾಯಿಸುವ ಉದ್ದೇಶ ಹೊಂದಿತು. ಇದೀಗ ಮತ್ತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪನೆ ಮಾಡುವ ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ ಕನ್ನಡ ಚಿತ್ರರಂಗದ ಇತಿಹಾಸ, ಅದು ಬೆಳೆದು ಬಂದ ಇತಿಹಾಸ ತಿಳಿಸುವ ಸಂಗ್ರಹಾಯಲವನ್ನು ಬೆಂಗಳೂರಿನ ಕಂಠೀರವದಲ್ಲಿರುವ ಡಾ ರಾಜ್ ಕುಮಾರ್ …
Read More »ಬಜೆಟ್ ಮಂಡನೆ ಯಾವ ಇಲಾಖೆಗೆ ಎಷ್ಟು ಅನುದಾನ ಹಂಚಿಕೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24 ರ ಸಾಲಿನ ಮಧ್ಯಂತರ ಬಜೆಟ್ ಅನ್ನು ಇಂದು ಮಂಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ನಡುವೆ ಹಲವು ಯೋಜನೆಗಳಿಗೆ ಒತ್ತು ನೀಡಿ ಮಂಡಿಸಿರುವ ಸಿದ್ದರಾಮಯ್ಯ ಬಜೆಟ್ನಲ್ಲಿ ಈ ಹಿಂದಿನ ಸರ್ಕಾರವನ್ನು ಟೀಕಿಸಿದರು. ರಾಜ್ಯದ ಅರ್ಥವ್ಯವಸ್ಥೆಯು ಹಿಂದಿನ ಸರ್ಕಾರದ ಅವಧಿಯಲ್ಲಿ ಹದಗೆಟ್ಟಿರುತ್ತದೆ. ಕೋವಿಡ್ನಿಂದ ತತ್ತರಿಸಿದ ರಾಜ್ಯದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಈ ಹಿಂದಿದ್ದ ಸರ್ಕಾರವು ವಿಫಲವಾಗಿದೆ ಎಂದು ದೂರಿದರು. ಕಲ್ಯಾಣ ರಾಜ್ಯದ ಕನಸಿನ ಬಜೆಟ್ ಅನ್ನು ಮಂಡಿಸಿರುತ್ತಿರುವುದಾಗಿ ಹೇಳಿದ ಅವರು, …
Read More »ಬಜೆಟ್ನಲ್ಲಿ ವಿವಿಧ ಜಿಲ್ಲೆಗಳನ್ನು ಕೇಂದ್ರೀಕರಿಸಿ ಘೋಷಣೆಯಾದ ಪ್ರಮುಖ ಅನುದಾನ,
ಮೈಸೂರು ಜಿಲ್ಲೆ: ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್ ಉತ್ತೇಜಿಸಲು ನೂತನ ಕಾರ್ಯಕ್ರಮ ಜಾರಿ. ಮೈಸೂರಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಸೈಕ್ಲಿಂಗ್ ವೆಲೋಡ್ರೋಮ್ ಸ್ಥಾಪನೆ. ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ ಮತ್ತು ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕೈಗೊಳ್ಳುವ …
Read More »ಸಿದ್ದರಾಮಯ್ಯ ರಾಜ್ಯದ ಮಟ್ಟಿಗೆ ಇಂದು ತಮ್ಮ ದಾಖಲೆಯ 14ನೇ ಬಜೆಟ್ ಮಂಡಿಸಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 14ನೇ ಬಜೆಟ್ ಮಂಡಿಸಿದ್ದು ಮುಖ್ಯಾಂಶಗಳು ಹೀಗಿವೆ… 20% ಅಬಕಾರಿ ಸುಂಕ ಹೆಚ್ಚಳ ಮಾಡಲಾಗಿದೆ. ಬಿಯರ್ ಮೇಲಿನ ಅಬಕಾರಿ ಸುಂಕವನ್ನು 175% ರಿಂದ 185%ಗೆ ಹೆಚ್ಚಳ ಮಾಡಲಾಗಿದೆ. ರಾಜ್ಯದ ಎಲ್ಲ ಆಸ್ತಿ ಮಾರ್ಗಸೂಚಿ ದರ ಪರಿಷ್ಕರಿಸಲು ತೀರ್ಮಾನಿಸಲಾಗಿದೆ. ಆಯ್ದ ವಾಹನಗಳ ವರ್ಗಗಳಿಗೆ ವಿಧಿಸುವ ತೆರಿಗೆ ಪರಿಷ್ಕರಣೆ ಬಗ್ಗೆ ಸಿಎಂ ಪ್ರಸ್ತಾಪ ಮಾಡಿದ್ದಾರೆ. 2023-24ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3,27,747 ಲಕ್ಷ ಕೋಟಿ ರೂಪಾಯಿ. ಈ …
Read More »ಉಚಿತ ಬಸ್ ಪ್ರಯಾಣಕ್ಕಾಗಿ ವ್ಯಕ್ತಿಯೋರ್ವ ಬುರ್ಖಾ ಧರಿಸಿ ಜನರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಹುಬ್ಬಳ್ಳಿ: ಸರ್ಕಾರದ ಯೋಜನೆಗಳನ್ನು ಪಡೆಯಲು ಜನರು ನಕಲಿ ಆಧಾರ್, ವೋಟರ್ ಐಡಿ ಸೇರಿದಂತೆ ಅನೇಕ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಆದರೆ, ಇಲ್ಲೊಬ್ಬ ವ್ಯಕ್ತಿ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ತನ್ನ ವೇಷ ಬದಲಿಸಿಕೊಂಡಿದ್ದಾನೆ. ಮುಸ್ಲಿಂ ಮಹಿಳೆಯರಂತೆ ಬುರ್ಖಾ ಧರಿಸಿಕೊಂಡ ಪುರುಷ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಕುಂದಗೋಳ ತಾಲೂಕಿನ ಸಂಶಿ ಬಸ್ ನಿಲ್ದಾಣದಲ್ಲಿ ಘಟನೆ ನಡೆಯಿತು. ಗ್ರಾಮದ ಸಾರ್ವಜನಿಕ ಬಸ್ …
Read More »ಅಶೋಕ್ ಮಣ್ಣಿಕೇರಿ ಅನುಮಾನಸ್ಪದ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್
ಬೆಳಗಾವಿ: ನಗರದಲ್ಲಿ ತಹಶೀಲ್ದಾರ್ (Tahsildar) ಅಶೋಕ್ ಮಣ್ಣಿಕೇರಿ ಅನುಮಾನಸ್ಪದ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ತಮ್ಮ ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್ (Death Note) ಪತ್ತೆಯಾಗಿದೆ. ಬೆಳಗಾವಿ (Belagavi) ನಗರದ ಎಸಿ ಕಚೇರಿಯ ಲಾಕರ್ ಪರಿಶೀಲನೆ ವೇಳೆಯಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಜೂನ್ 20ರಂದು ಬರೆದಿಟ್ಟಿದ್ದ ಪತ್ರ ಪೊಲೀಸ್ ಪರಿಶೀಲನೆ ವೇಳೆ ಪತ್ತೆಯಾಗಿದ್ದು, ಸಾವಿಗೆ ಪತ್ನಿಯ ಕಿರುಕುಳವೇ (Harassment) ಕಾರಣ ಎಂದು ನೋಟ್ನಲ್ಲಿ ಉಲ್ಲೇಖಿಸಲಾಗಿದೆ. ತಹಶೀಲ್ದಾರ್ ಹುದ್ದೆಗೆ …
Read More »ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹೈಕೋರ್ಟ್ನಲ್ಲಿ ಇಂದು ವಿಚಾರಣೆ
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಥಮ ವರ್ತಮಾನ ವರದಿ (ಎಫ್ಐಆರ್) ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್ನಲ್ಲಿ ಇಂದೂ ಕೂಡ ನಡೆಯಲಿದೆ. ಪ್ರಕರಣ ಸಂಬಂಧ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಗುರುವಾರ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಪೀಠ, ಡಿಕೆಶಿ ಪರ ಸುದೀರ್ಘ ವಾದ ಆಲಿಸಿದ್ದು, ಸಿಬಿಐ ವಾದ ಆಲಿಸಲು ಶುಕ್ರವಾರಕ್ಕೆ ಮುಂದೂಡಿತ್ತು. ವಿಚಾರಣೆ ವೇಳೆ ಅರ್ಜಿದಾರರ …
Read More »