Breaking News

ವ್ಯವಸ್ಥೆಯಲ್ಲಿ ಸುಧಾರಣೆ ನಮ್ಮಿಂದ ಮಾತ್ರ ಸಾಧ್ಯ, ಯಾರೂ ಒಳ್ಳೆಯವರಲ್ಲ ಎಂದಾದರೆ ನೋಟಾಕ್ಕೆ ಮತ ಹಾಕಬೇಕು.: ಸಂತೋಷ್ ಹೆಗ್ಡೆ

ಮಂಡ್ಯ: ಪ್ರಜಾಪ್ರಭುತ್ವದಲ್ಲಿ ರಾಜಕೀಯದ ಅಗತ್ಯತೆ ಬಹಳಷ್ಟು ಇದೆ. ಅದರೆ ರಾಜಕೀಯ ವೃತ್ತಿಯಾಗಬಾರದು, ಸೇವೆಯಾಗಬೇಕು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಹೇಳಿದರು. ಕನ್ನಡ ಸೇನೆ ಕರ್ನಾಟಕ ವತಿಯಿಂದ ನಗರದ ಗಾಂಧಿ ಭವನದಲ್ಲಿ ಭಾನುವಾರ ನಡೆದ ಪ್ರಸ್ತುತ ರಾಜಕೀಯದಲ್ಲಿ ಯುವಜನರ ಪಾತ್ರ ಕುರಿತ ವಿಚಾರಣ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ಎಸಿಬಿಯನ್ನು ಜಾರಿಗೆ ತಂದು ಲೋಕಾಯುಕ್ತಕ್ಕೆ ಇದ್ದ ಎರಡು ಅಧಿಕಾರಗಳಲ್ಲಿ ಒಂದು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುವ ಅಧಿಕಾರವನ್ನು ಕಿತ್ತುಕೊಂಡು …

Read More »

ಪಂಚ ಗ್ಯಾರಂಟಿಗಳಿಗೆ ಅಂದಾಜು 30,000 – 40,000 ಕೋಟಿ ರೂ. ಬೇಕಾಗಬಹುದು?: ಆರ್ಥಿಕ ಇಲಾಖೆ

ಬೆಂಗಳೂರು: 2023-24ನೇ ಸಾಲಿನ ಬಜೆಟ್ (ಆಯವ್ಯಯ) ಮಂಡನೆಗೆ (ಜುಲೈ 7) ಸಿಎಂ ಸಿದ್ದರಾಮಯ್ಯ ಅಂತಿಮ ಸ್ಪರ್ಶ ಕೊಡುತ್ತಿದ್ದಾರೆ. ಮುಖ್ಯಮಂತ್ರಿಗಳು ಹಣಕಾಸು ವರ್ಷದ ಉಳಿದ ಒಂಬತ್ತು ತಿಂಗಳಿಗೆ ಮಂಡಿಸುವ ಈ ಬಜೆಟ್​ನಲ್ಲಿ ಒಂದಷ್ಟು ಹೊರೆಗಳು ಸವಾಲಾಗಿವೆ. ಈ ಬಾರಿಯ ಬಜೆಟ್​ನಲ್ಲಿ ಹೊಸ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಕಡಿಮೆ. ಬೊಮ್ಮಾಯಿ ಸರ್ಕಾರ ಮಂಡಿಸಿದ್ದ ಲೇಖಾನುದಾನದಲ್ಲಿ ಮೀಸಲಿರಿಸಿದ ಅನುದಾನಗಳನ್ನೇ ಪೂರ್ಣಪ್ರಮಾಣದ ಬಜೆಟ್​ನಲ್ಲಿ ಮರು ಹಂಚಿಕೆ ಮಾಡುವ ಸಂಭವ ಹೆಚ್ಚು. ಅಂದಾಜು 3.35 ಲಕ್ಷ …

Read More »

ಇಂದಿನಿಂದ 10 ದಿನಗಳ ಕಾಲ ರಾಜ್ಯ ವಿಧಾನಸಭೆ ಅಧಿವೇಶನ

ಬೆಂಗಳೂರು: ಇಂದಿನಿಂದ ಅಂದರೇ ಜುಲೈ 3 ರಿಂದ 10 ದಿನಗಳ ಕಾಲ 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ.‌ ಇಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದು, ಹೊಸ ಕಾಂಗ್ರೆಸ್ ಸರ್ಕಾರದ ಮುನ್ನೋಟವನ್ನು ಮುಂದಿಡಲಿದ್ದಾರೆ. ಮಂಗಳವಾರದಿಂದ ಉಭಯ ಸದನ ಆಡಳಿತಾರೂಢ ಹಾಗೂ ಪ್ರತಿಪಕ್ಷಗಳ ನಡುವಿನ ಸದನ ಕದನಕ್ಕೆ ಸಾಕ್ಷಿಯಾಗಲಿದೆ. 10 ದಿನಗಳ ಕಾಲ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನ ನಡೆಯಲಿದ್ದು, ಇಂದು ಜಂಟಿ ಅಧಿವೇಶನ …

Read More »

ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆ ಲಭ್ಯ: ಸೆ.30 ರೊಳಗೆ ಪಾವತಿಸುವಂತೆ ಮೂರು ತಿಂಗಳು ಕಾಲಾವಕಾಶ

ಬೆಂಗಳೂರು: ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆಯ ಪ್ರಯೋಜನ ಸಿಗಲಿದೆ ಎಂದು ಇಂಧನ ಇಲಾಖೆ ಸ್ಪಷ್ಟಪಡಿಸಿದೆ. ಇದೇ ವೇಳೆ ಹಿಂಬಾಕಿಯನ್ನು ಸೆ.30 ರೊಳಗೆ ಪಾವತಿಸುವಂತೆ ಮೂರು ತಿಂಗಳು ಕಾಲಾವಕಾಶ ನೀಡಲಾಗಿದೆ.   ಜುಲೈ 25ರೊಳಗೆ ಯೋಜನೆಗೆ ನೋಂದಾಯಿಸಿಕೊಂಡಲ್ಲಿ ಆಗಸ್ಟ್ ತಿಂಗಳ ಬಿಲ್​ನಲ್ಲಿ ಯೋಜನೆಯ ಪ್ರಯೋಜನ ದೊರಕಲಿದೆ. ಹಾಗೆಯೇ, ಜುಲೈ 25 ರಿಂದ ಆಗಸ್ಟ್ 25ರೊಳಗೆ ನೋಂದಾಯಿಸಿದಲ್ಲಿ ಸೆಪ್ಟೆಂಬರ್ ತಿಂಗಳ ಬಿಲ್​ನಲ್ಲಿ ಯೋಜನೆಯ ಪ್ರಯೋಜನ ಸಿಗಲಿದೆ. (ಬಿಲ್ಲಿಂಗ್ ಅವಧಿ …

Read More »

ರಾಷ್ಟ್ರಪತಿ ಅವರೊಂದಿಗೆ ಸಂವಾದಕ್ಕೆ ಚಾಮರಾಜನಗರದ ಬುಡಕಟ್ಟು ಜನರು ಆಯ್ಕೆ

ಚಾಮರಾಜನಗರ : ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಜು.3ರಂದು ಸಂಜೆ 7ರಿಂದ 7.30ರವರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಬುಡಕಟ್ಟು ಜನಾಂಗದವರ ಸಂವಾದ ನಡೆಯಲಿದೆ. ಇದರಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ಜೇನುಕುರುಬ, ಕೊರಗ ಸಮಾಜದವರನ್ನು ಆಯ್ಕೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯಿಂದ ಗುಂಡ್ಲುಪೇಟೆಯ ಮೂವರು ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ ತಿಳಿಸಿದ್ದಾರೆ. ಅಲ್ಲದೆ ಜು.3ರಂದು ನಡೆಯಲಿರುವ ಸಂವಾದಕ್ಕೆ ಚಾಮರಾಜನಗರ ಜಿಲ್ಲೆ ಸೇರಿದಂತೆ ಮೈಸೂರು, ಕೊಡಗು, …

Read More »

ಈ ವರ್ಷದ ಬಜೆಟ್​ನಲ್ಲೇ ಐದೂ ಘೋಷಣೆಗಳಿಗೂ ಹಣ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಮಸ್ತ ಶೋಷಿತ ಸಮುದಾಯಗಳ ಮಹಾಸಂಸ್ಥಾನ ಆಗಬೇಕು ಎನ್ನುವ ಮಹಾ ಉದ್ದೇಶದಿಂದ ಕಾಗಿನೆಲೆ ಮಹಾಸಂಸ್ಥಾನವನ್ನು ಸ್ಥಾಪಿಸಲಾಗಿದೆ. ಆದ್ದರಿಂದ ಇದು ಕೇವಲ ಒಂದು ಜಾತಿ-ಸಮಾಜದ ಮಠ ಅಲ್ಲ. ಸರ್ವ ಶೋಷಿತ ಸಮಾಜಗಳಿಗೆ ಸೇರಿದ ಮಹಾಸಂಸ್ಥಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಶೋಷಿತ ಸಮುದಾಯಗಳಿಗೆ ಧ್ವನಿ ಆಗುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಸಮುದಾಯವನ್ನು ಒಟ್ಟಾಗಿಸಿ ಕಾಗಿನೆಲೆ …

Read More »

ತಾಳಿಕೋಟೆಯ ಖಾಸ್ಗತೇಶ್ವರ ಮಠದ ಅದ್ಧೂರಿ ರಥೋತ್ಸವ

ವಿಜಯಪುರ: ಜಿಲ್ಲೆಯ ಐತಿಹಾಸಿಕ ನಗರಿ ತಾಳಿಕೋಟೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಶ್ರೀ ಖಾಸ್ಗತೇಶ್ವರ ಅಜ್ಜನ ಜಾತ್ರೆ ವಿಜೃಂಭಣೆಯಿಂದ ಜರುಗಿತು. ರಾಜ್ಯ, ಹೊರರಾಜ್ಯ ಸೇರಿದಂತೆ ಲಕ್ಷಾಂತರ ಭಕ್ತರನ್ನ ಹೊಂದಿರುವ ಈ ಖಾಸ್ಗತೇಶ್ವರ ಮಠದ ಜಾತ್ರೆ ಇಲ್ಲಿನ ವಿರಕ್ತ ಮಹಾಸ್ವಾಮಿಗಳ ಆಶೀರ್ವಾದದಿಂದ ಶ್ರೀ ಸಿದ್ದಲಿಂಗ ದೇವರು ಇವರ ಅಧ್ಯಕ್ಷತೆಯಲ್ಲಿ ಜಾತ್ರೆಯನ್ನ ಮಠದ ಭಕ್ತರು ಅಚ್ಚುಕಟ್ಟಾಗಿ ಆಯೋಜಿಸಿದ್ದರು. ಜಾತ್ರೆಯ ಅಂಗವಾಗಿ ಕಳೆದೊಂದು ವಾರದಿಂದ ಮಠದ ಅಂಗಳದಲ್ಲಿ ಮತ್ತು ತಾಳಿಕೋಟೆಯಲ್ಲಿ ವಿವಿಧ ಧಾರ್ಮಿಕ ಹಾಗೂ …

Read More »

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ, 30 ಮಂದಿ ಅಂದರ್​

ಮೈಸೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಿದ ಸಿಸಿಬಿ ಪೊಲೀಸರು ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಬೋಗಾದಿ, ಬಸವೇಶ್ವರ ನಗರದ ಆಶ್ರಯ ಮನೆಯ ಮೇಲೆ ದಾಳಿ ಮಾಡಿದ ವೇಳೆ ಸಿಸಿಬಿ ಪೊಲೀಸರು ಬಂಧಿತರಿಂದ ನಾಲ್ಕು ಸಾವಿರ ರೂ. ವಶಕ್ಕೆ ಪಡೆದಿದ್ದಾರೆ. ಇವರು ವೇಶ್ಯಾವಾಟಿಕೆ ನಡೆಸುವುದಲ್ಲದೇ, ಗಿರಾಕಿ ಮತ್ತು ಹುಡುಗಿಯರ ಫೋನ್ ಸಂಪರ್ಕವಿಟ್ಟುಕೊಂಡು, ಅವರುಗಳಿಗೆ ಬೇಕಾದ ಸ್ಥಳಗಳಿಗೆ ಹುಡುಗಿಯರನ್ನು ಫೋನ್ ಸಂಪರ್ಕಿಸುವ ಮೂಲಕ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವುದು ವಿಚಾರಣೆ …

Read More »

ದಿವಂಗತ ನಟ ಪುನೀತ್​ ರಾಜ್​ಕುಮಾರ್​ಗೆ ‘ಕಿಚ್ಚ 46’ ಟೀಸರ್​ನಲ್ಲಿ ಗೌರವ ಸಲ್ಲಿಸದೇ ಇರುವುದು ನಿರ್ದೇಶಕ ದುನಿಯಾ ಸೂರಿ ಬೇಸರಕ್ಕೆ ಕಾರಣ

ದಿವಂಗತ ನಟ ಪುನೀತ್​ ರಾಜ್​ಕುಮಾರ್​ಗೆ ‘ಕಿಚ್ಚ 46’ ಟೀಸರ್​ನಲ್ಲಿ ಗೌರವ ಸಲ್ಲಿಸದೇ ಇರುವುದು ನಿರ್ದೇಶಕ ದುನಿಯಾ ಸೂರಿ ಬೇಸರಕ್ಕೆ ಕಾರಣವಾಗಿದೆ. ಸ್ಯಾಂಡಲ್​ವುಡ್​ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಅವರ ಮುಂದಿನ ಸಿನಿಮಾದ ಬಗ್ಗೆ ಇಂದಿನವರೆಗೆ ಅಭಿಮಾನಿಗಳಲ್ಲಿ ಕುತೂಹಲವಿತ್ತು. ‘ಕಿಚ್ಚ 46’ ಅನ್ನೋದು ಸೋಷಿಯಲ್​ ಮೀಡಿಯಾದಲ್ಲಿ ಕೆಲ ದಿನಗಳಿಂದ ಟ್ರೆಂಡಿಂಗ್​ನಲ್ಲಿತ್ತು. ಸುದೀಪ್​ ಮುಂದಿನ ಸಿನಿಮಾದ ಲುಕ್​ ಹೇಗಿರಬಹುದು? ಅನ್ನೋ ಕ್ಯೂರಿಯಾಸಿಟಿ ಕನ್ನಡಿಗರಲ್ಲಿತ್ತು. ಇಂದು ನಟನ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಿಚ್ಚನ …

Read More »

ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ಸಂಚಲನ

ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ಸಂಚಲನ ಉಂಟಾಗಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್​ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ. ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಹಾಗೂ ಇತರ ಒಂಬತ್ತು ಎನ್​ಸಿಪಿ ನಾಯಕರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಎನ್​ಸಿಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಸಿಗದಿರುವುದಕ್ಕೆ ಅಜಿತ್ ಅಸಮಾಧಾನಗೊಂಡಿದ್ದರು ಎಂದು ತಿಳಿದುಬಂದಿದೆ. ಅಜಿತ್ ಪವಾರ್ ರಾಜ್ಯಪಾಲರನ್ನು ಭೇಟಿಯಾಗಿ ಡಿಸಿಎಂ ಆಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ …

Read More »