Breaking News

ಪಂಢರಪುರ್ ವಿಠ್ಠಲನ ದರ್ಶನ ಪಡೆದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಕುಟುಂಬ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಪತ್ನಿಸಮೇತ ಪಂಢರಪುರ್ ವಿಠ್ಠಲನ ದರ್ಶನ ಪಡೆದು ಪೂಜೆ ನೆರವೇರಿಸಿದರು ಆಷಾಢಿ ಏಕಾದಶಿಯಂದು ಪಂಢರಪುರದಲ್ಲಿ ವೈಷ್ಣವ ಜಾತ್ರೆ ನಡೆಯುತ್ತದೆ. ಈ ಆಷಾಢಿ ವಾರದ ಸಂದರ್ಭದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಅವರ ಪತ್ನಿ ಲತಾ ಶಿಂಧೆ ಅವರು ಶ್ರೀ ವಿಠ್ಠಲ-ರುಕ್ಮಿಣಿಯವರ ಅಧಿಕೃತ ಮಹಾಪೂಜೆಯನ್ನು ನೆರವೇರಿಸಿದರು ಈ ವರ್ಷ ಅಹಮದ್ನಗರ ಜಿಲ್ಲೆಯ ನೆವಾಸಾ ತಾಲೂಕಿನ ವಕ್ಡಿ ಗ್ರಾಮದ ರೈತ ದಂಪತಿಗಳಾದ ಬಾವುಸಾಹೇಬ್ ಮೋಹಿನಿರಾಜ್ ಕಾಳೆ ಮತ್ತು …

Read More »

ಮನೆಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ‌

ಶಿವಮೊಗ್ಗ: ತಡರಾತ್ರಿ ಮನೆಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ‌ ನಡೆಸಿರುವ ಘಟನೆ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಪ್ರದೇಶವಾದ ಬ್ಯಾಕೋಡು ಸಮೀಪದ ಎಸ್.ಎಸ್.ಬೋಗ್ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಮರಾಠಿ ಗ್ರಾಮದ ಗಣೇಶ್ (47) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬುಧವಾರ ರಾತ್ರಿ ಸುಮಾರು 3 ಗಂಟೆಗೆ ಘಟನೆ ನಡೆದಿದೆ. ಗಣೇಶ್ ತಮ್ಮ ಗುಡಿಸಲಿನಲ್ಲಿ ಮಲಗಿದ್ದರು. ಈ ವೇಳೆ ನುಗ್ಗಿದ ಹುಲಿ ದಾಳಿ ನಡೆಸಿದೆ. ಇದರಿಂದಾಗಿ ಗಣೇಶ್ ಅವರ ಬಲಗೈಗೆ ಗಂಭೀರ ಸ್ವರೂಪದ …

Read More »

ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆದ್ಯತೆ’: ಬೆಳಗಾವಿ ಉತ್ತರ ವಲಯ ನೂತನ ಐಜಿಪಿ ವಿಕಾಸ್‌ ಕುಮಾರ್ ಅಧಿಕಾರ ಸ್ವೀಕಾರ

ಬೆಳಗಾವಿ: ಮರಳು ಮಾಫಿಯಾ ಸೇರಿದಂತೆ ‌ಇನ್ನಿತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣಕ್ಕೆ ಕ್ರಮ ವಹಿಸುವುದು ಸೇರಿದಂತೆ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆದ್ಯತೆ ‌ನೀಡಲಾಗುವುದು ಎಂದು ಉತ್ತರ ವಲಯ ನೂತನ ಐಜಿಪಿ ವಿಕಾಶಕುಮಾರ್​ ವಿಕಾಸ್‌ ಹೇಳಿದರು. ಬೆಳಗಾವಿಯ ಐಜಿಪಿ ಕಚೇರಿಯಲ್ಲಿ ಇಂದು ಉತ್ತರ ವಲಯ ನೂತನ ಐಜಿಪಿ ಆಗಿ ಅವರು ಅಧಿಕಾರ ಸ್ವೀಕರಿಸಿದರು. ನೂತನ ಐಜಿಪಿಯನ್ನು ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ ಆತ್ಮೀಯವಾಗಿ ಬರಮಾಡಿಕೊಂಡರು. ಇದಕ್ಕೂ ಮೊದಲು ಜಿಲ್ಲಾ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು. …

Read More »

17 ವರ್ಷಗಳ ನಂತರ ನಡೆದಹಳ್ಳೂರ ಗ್ರಾಮ ದೇವತೆ ಜಾತ್ರಾ ಮಹೋತ್ಸವ ಸಕಲರಿಗೂ ದೇವಿ ಒಳ್ಳೆದನ್ನು ಮಾಡಲಿ:. ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : 17 ವರ್ಷಗಳ ನಂತರ ಸಡಗರ ಸಂಭ್ರಮದಿಂದ ನಡೆದಿರುವ ಹಳ್ಳೂರ ಗ್ರಾಮ ದೇವತೆ ಜಾತ್ರಾ ಮಹೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ಮಾಡಿರುವ ಗ್ರಾಮದ ಮುಖಂಡರು ಮತ್ತು ಜಾತ್ರಾ ಕಮೀಟಿ ಪದಾಧಿಕಾರಿಗಳನ್ನು ಅಭಿನಂದಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಸಕಲರಿಗೂ ದೇವಿಯು ಒಳ್ಳೆಯದನ್ನು ಮಾಡಲಿ. ನಾಡು ಸಂಪದ್ಭರಿತವಾಗಿ ಹಚ್ಚ ಹಸಿರಿನಿಂದ ಕಂಗೊಳಿಸಲಿ ಎಂದು ಅವರು ಪ್ರಾರ್ಥಿಸಿದರು.   ತಾಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, …

Read More »

ಒಂದೇ ಕುಟುಂಬದ ಮೂವರ ಮೃತದೇಹ ಪತ್ತೆ; ಹೆಂಡತಿ ಮಗನ ಕೊಂದು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಕಾರವಾರ (ಉತ್ತರ ಕನ್ನಡ) : ಒಂದೇ ಕುಟುಂಬದ ಮೂವರ ಮೃತದೇಹ ಕಾರವಾರ ಹಾಗೂ ಗೋವಾ ಬಳಿ ಪತ್ತೆಯಾಗಿದ್ದು, ಹೆಂಡತಿ ಮಗನ‌ನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗೋವಾ ಮೂಲದ ಶ್ಯಾಮ್​ ಪಾಟೀಲ್ (45), ಜ್ಯೋತಿ (38) ಇವರ 12 ವರ್ಷದ ಮಗ ಮೃತಪಟ್ಟವರಾಗಿದ್ದಾರೆ. ಜ್ಯೋತಿ ಹಾಗೂ ಅವರ ಮಗನ ಮೃತದೇಹ ಕಾರವಾರದ ದೇವಭಾಗ ಬೀಚ್ ಬಳಿ ಪತ್ತೆಯಾಗಿವೆ. ಇನ್ನು ಶ್ಯಾಮ್​ ಪಾಟೀಲ್ ಅವರ ಮೃತದೇಹ ಗೋವಾದ ಕುಕ್ಕಳ್ಳಿ ಪಾಡಿಯಲ್ಲಿ …

Read More »

ಗೃಹಜ್ಯೋತಿ, ಗೃಹಲಕ್ಷ್ಮಿ ಹೆಸರಲ್ಲಿ ಜನರಿಗೆ ಮೋಸದ ಆರೋಪ.. ಬಳ್ಳಾರಿಯಲ್ಲಿ ಓರ್ವ ವಶಕ್ಕೆ

ಬಳ್ಳಾರಿ: ರಾಜ್ಯ ಸರ್ಕಾರವು ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಈ ಬೆನ್ನಲ್ಲೇ ಗೃಹಲಕ್ಷ್ಮಿ ಯೋಜನೆ ನೆಪ ಮಾಡಿಕೊಂಡು ಅಪ್ಲಿಕೇಶನ್​ ಭರ್ತಿ ಮಾಡುವ ಹೆಸರಿನಲ್ಲಿ ನೂರಾರು ಜನರಿಂದ ಹಣ ಪಡೆದಿದ್ದಾನೆ ಎಂದು ಆರೋಪಿಸಿ, ವ್ಯಕ್ತಿಯೊಬ್ಬನನ್ನು ಜನರೇ ಪೊಲೀಸರಿಗೆ ಹಿಡಿದೊಪ್ಪಿಸಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ದಿಶಾ ಒನ್​ ಎಂಬ ಖಾಸಗಿ ಏಜೆನ್ಸಿ ಹೆಸರಿನಲ್ಲಿ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೇರಿದಂತೆ ಇತರ ಗ್ಯಾರಂಟಿ ಯೋಜನೆಗಳ ಫಾರ್ಮ್​ ಭರ್ತಿ …

Read More »

ತಹಶೀಲ್ದಾರ್ ಅಶೋಕ್​ ಮಣ್ಣಿಕೇರಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎನ್ನಲಾದ ಪ್ರಕರಣ ಮಗ್ಗಲು ಬದಲಿಸಿದೆ.

ಬೆಳಗಾವಿ: ಬೆಳಗಾವಿಯ ಉಪವಿಭಾಗಾಧಿಕಾರಿ ಕಚೇರಿಯ ತಹಶೀಲ್ದಾರ್ ಅಶೋಕ್​ ಮಣ್ಣಿಕೇರಿ ಅವರು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎನ್ನಲಾದ ಪ್ರಕರಣ ಮಗ್ಗಲು ಬದಲಿಸಿದೆ. ಇದು ಸಹಜ ಸಾವಲ್ಲ ಎಂದು ಅಶೋಕ್ ಅವರ ಸಹೋದರಿಯರು ಆರೋಪಿಸಿದ್ದಾರೆ. ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಅಶೋಕ್ ಮಣ್ಣಿಕೇರಿ ಪತ್ನಿ ಭೂಮಿ, ಸಹೋದರ ಸ್ಯಾಮ್ಯುಯೆಲ್ ವಿರುದ್ಧ ಕೊಲೆ ಆರೋಪ ಹೊರಿಸಿದ್ದಾರೆ. ಬೆಳಗಾವಿಯ ಕಾಳಿ ಅಂಬ್ರಾಯದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಅಶೋಕ್ ಮಣ್ಣಿಕೇರಿ ಕುಟುಂಬ ವಾಸವಿತ್ತು. ತಡರಾತ್ರಿ ಹೃದಯಾಘಾತವಾಗಿದೆ ಎಂದು ಖಾಸಗಿ ಆಸ್ಪತ್ರೆಗೆ ಅಶೋಕ್​ …

Read More »

ಸಕ್ಕರೆನಾಡಲ್ಲಿ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ.. ಭಯಾನಕ ಕೊಲೆ ಕಂಡು ಬೆಚ್ಚಿಬಿದ್ದ ಮಂಡ್ಯ ಜನರು

ಮಂಡ್ಯ: ಜಿಲ್ಲೆಯಲ್ಲಿ ಜನರು ಬೆಚ್ಚಿ ಬೀಳುವಂತಹ ಭಯಾನಕ ಕೊಲೆ ಪ್ರಕರಣ ಇಂದು ನಡೆದಿದೆ. ರೌಡಿಶೀಟರ್ ಒಬ್ಬನನ್ನು ಸ್ನೇಹಿತರೇ ಕತ್ತು ಕತ್ತರಿಸಿ ಕೊಲೆ ಮಾಡಿರುವಂತಹ ಭೀಕರ ಘಟನೆ ಶ್ರೀರಂಗಪಟ್ಟಣದ ಬಳಿ ನಡೆದಿದೆ.   ಸ್ನೇಹಿತರು ಪಾರ್ಟಿ ಮಾಡುವ ವೇಳೆಯಲ್ಲಿ ಗಲಾಟೆ: ಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆಯ ಕೆಆರ್​ಎಸ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದಂತಹ ಸುಧೀರ್ (35) ಎಂಬಾತನನ್ನು ಭಯಾನಕವಾಗಿ ಹತ್ಯೆ ಮಾಡಲಾಗಿದೆ. ರೌಡಿ ಶೀಟರ್ ಸುಧೀರ್ ಹಾಗೂ ಸ್ನೇಹಿತರೊಂದಿಗೆ ಇಂದು ಎಣ್ಣೆ ಪಾರ್ಟಿ …

Read More »

ಬಿಪಿಎಲ್ ಕಾರ್ಡ್‌ದಾರರ ಆಧಾರ್ ಲಿಂಕ್ ಕಡ್ಡಾಯ: ಅನ್ನಭಾಗ್ಯದ ಹಣ ಪಡೆಯುವುದು ಹೇಗೆ ಗೊತ್ತೇ?

ಬೆಂಗಳೂರು : ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಕೊಡಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಕೊಡಬೇಕಿರುವ 5 ಕೆಜಿ ಅಕ್ಕಿ ಬದಲು ಹಣ ಕೊಡಲು ರಾಜ್ಯ ಸರ್ಕಾರ ಈಗಾಗಲೇ ನಿರ್ಧರಿಸಿದೆ. ಈ ಬೆನ್ನಲ್ಲೇ ಬಿಪಿಎಲ್ ಕಾರ್ಡ್‌ದಾರರಿಗೆ ಆಧಾರ್ ಲಿಂಕ್ ಕಡ್ಡಾಯ ಮಾಡಲಾಗಿದೆ. ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯನ ಖಾತೆಗೆ 5 ಕೆಜಿ ಅಕ್ಕಿಯ ಜೊತೆ ಇನ್ನುಳಿದ 5 ಕೆಜಿ ಅಕ್ಕಿ ಬದಲಿಗೆ ಮಾಸಿಕ ತಲಾ 170 ರುಪಾಯಿ ಹಣ ನೀಡಲು …

Read More »

ಬೇಡ್ತಿ ನಾಲಾ ಯೋಜನಾ ಪ್ರದೇಶಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ

ಧಾರವಾಡ, ಜೂನ್ 27: ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಇಂದು ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ರೈತರೊಂದಿಗೆ ಬೇಡ್ತಿ ನಾಲಾ ನೀರಾವರಿ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಲಘಟಗಿ ತಾಲೂಕಿನ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಬೇಡ್ತಿ ನಾಲಾ ಯೋಜನೆಯಲ್ಲಿ ನೀರಿನ ಸದ್ಬಳಕೆಯಾಗಲು ಅಗತ್ಯ ಕ್ರಮಗಳನ್ನು ಕಾಲಮಿತಿಯಡಿ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಯೋಜನೆಯ ಕಾರ್ಯಪ್ರಗತಿಯ ಬಗ್ಗೆ …

Read More »