Breaking News

ಬಳ್ಳಾರಿ : ಸಂಡೂರು ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರ ಸಮೀಕ್ಷೆ ನಡೆಸಿದ ಕೇಂದ್ರ ತಂಡ

ಬಳ್ಳಾರಿ : ಜಿಲ್ಲೆಯಲ್ಲಿ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ, ಕೇಂದ್ರ ಕುಡಿಯುವ ನೀರು ಹಾಗು ನೈರ್ಮಲ್ಯ ಸಚಿವಾಲಯದ ಹೆಚ್ಚುವರಿ ಸಲಹೆಗಾರ ಡಿ. ರಾಜಶೇಖರ್ (ಐ.ಎ.ಎಸ್) ನೇತೃತ್ವದ ಮೂವರು ಅಧಿಕಾರಿಗಳನ್ನೊಳಗೊಂಡ ಕೇಂದ್ರ ಬರ ಅಧ್ಯಯನ ತಂಡವು ಶನಿವಾರ ಸಂಡೂರು ತಾಲೂಕಿನ ಕೆಲ ಗ್ರಾಮ ವ್ಯಾಪ್ತಿಯ ಕೃಷಿ ಭೂಮಿಗಳಿಗೆ ಭೇಟಿ ನೀಡಿ ಬರ ಸಮೀಕ್ಷೆ ನಡೆಸಿತು. ಕೇಂದ್ರ ಕುಡಿಯುವ ನೀರು ಹಾಗು ನೈರ್ಮಲ್ಯ ಸಚಿವಾಲಯದ ಹೆಚ್ಚುವರಿ ಸಲಹೆಗಾರರಾದ ಡಿ. ರಾಜಶೇಖರ್ ಐ.ಎ.ಎಸ್ ನೇತೃತ್ವದಲ್ಲಿ ಪಶುಸಂಗೋಪನೆ ಇಲಾಖೆಯ …

Read More »

ಉದ್ಯೋಗಗಳಲ್ಲಿ ಏರುಪೇರು, ಆರೋಗ್ಯ ಸಮಸ್ಯೆ: ನಿಮ್ಮ ವಾರದ ರಾಶಿಫಲ ಹೇಗಿದೆ?

ಮೇಷ: ಕುಟುಂಬದಲ್ಲಿ ಔತಣಕೂಟಗಳು ನಡೆಯಲಿದ್ದು ಎಲ್ಲರೂ ಆನಂದಿಸಲಿದ್ದಾರೆ. ಈ ವಾರದಲ್ಲಿ ಉದ್ಯೋಗಿಗಳು ಸಾಕಷ್ಟು ಏರುಪೇರು ಕಾಣಲಿದ್ದಾರೆ. ಕೆಲಸದಲ್ಲಿ ಸಾಕಷ್ಟು ಚಟುವಟಿಕೆಗಳು ಇರಲಿವೆ. ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ಜನರು ಹಠಾತ್‌ ಆಗಿ ದೊಡ್ಡ ಪ್ರಮಾಣದ ಲಾಭವನ್ನು ಪಡೆಯಲಿದ್ದಾರೆ. ಹೂಡಿಕೆ ಮಾಡುವ ಮೂಲಕ ನಿಮ್ಮ ವ್ಯವಹಾರವನ್ನು ನೀವು ಮುಂದಕ್ಕೆ ಕೊಂಡೊಯ್ಯಲಿದ್ದೀರಿ. ಆದರೆ ನಿಮ್ಮ ಪಾಲುದಾರರ ಜೊತೆಗಿನ ನಿಮ್ಮ ಸಂಬಂಧವು ಹದಗೆಡಲಿದೆ. ವಿವಾಹಿತ ಜೋಡಿಗಳು ತಮ್ಮ ಜೀವನ ಸಂಗಾತಿಯ ಬದಲಾದ ವರ್ತನೆಯ ಕಾರಣ ಕೌಟುಂಬಿಕ ಜೀವನದಲ್ಲಿ ಸಮಸ್ಯೆ …

Read More »

ಬಳ್ಳಾರಿಯಲ್ಲಿ ಸ್ವಾಧೀನಪಡಿಸಿಕೊಂಡಿದ್ದ 2,643 ಎಕರೆ ಭೂಮಿ ಹಿಂದಿರುಗಿಸಲು ಅರ್ಸೆಲರ್​ ಮಿತ್ತಲ್​ ನಿರ್ಧಾರ

ನವದೆಹಲಿ: ಕರ್ನಾಟಕದ ಬಳ್ಳಾರಿಯಲ್ಲಿ ಉಕ್ಕಿನ ಸ್ಥಾವರ ಸ್ಥಾಪಿಸಲು ಸ್ವಾಧೀನಪಡಿಸಿಕೊಂಡಿದ್ದ 2,643 ಎಕರೆ ಭೂಮಿಯನ್ನು ಹಿಂದಿರುಗಿಸಲು ನಿರ್ಧರಿಸಿರುವುದಾಗಿ ವಿಶ್ವದ ಅತಿದೊಡ್ಡ ಉಕ್ಕು ಉತ್ಪಾದಕ ಅರ್ಸೆಲರ್​ ಮಿತ್ತಲ್​ ಕಂಪನಿಯು ಸುಪ್ರೀಂ ಕೋರ್ಟ್​ಗೆ ತಿಳಿಸಿದೆ. ಈಗಾಗಲೇ ಪಾವತಿಸಿರುವ 267 ಕೋಟಿ ರೂಪಾಯಿ ಮೊತ್ತವನ್ನೂ ಕೂಡ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಮುಟ್ಟುಗೋಲು ಹಾಕಿಕೊಳ್ಳಬಹುದು ಎಂದು ತಿಳಿಸಿದೆ. ಈ ಪ್ರಕರಣವು ನ್ಯಾಯಮೂರ್ತಿಗಳಾದ ಸಂಜಯ್​ ಕಿಶನ್​ ಕೌಲ್​ ಮತ್ತು ಸುಧಾಂಶು ಧುಲಿಯಾ ಅವರ ಪೀಠದ ಮುಂದೆ ಶುಕ್ರವಾರ …

Read More »

ಶಿಕ್ಷಕ ವರ್ಗಾವಣೆಗೊಂಡು ಅವರ ಸ್ವಗ್ರಾಮಕ್ಕೆ ತೆರಳುತ್ತಿದ್ದಂತೆ, ತೀರ್ಥ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಕಣ್ಣೀರಿನ ವಿದಾಯ

ಚಿಕ್ಕೋಡಿ (ಬೆಳಗಾವಿ): ಪಾಠ ಮಾಡಿದ ಪ್ರೀತಿಯ ಶಿಕ್ಷಕರೊಬ್ಬರು ವರ್ಗಾವಣೆಯಾಗಿ, ಅವರ ಸ್ವಗ್ರಾಮಕ್ಕೆ ತೆರಳುವ ವೇಳೆ ವಿದ್ಯಾರ್ಥಿಗಳು ಹಾಗೂ ತೀರ್ಥ ಗ್ರಾಮಸ್ಥರು ಕಣ್ಣೀರ ವಿದಾಯ ಹೇಳಿ ಬೀಳ್ಕೊಟ್ಟ ಭಾವನಾತ್ಮಕ ಘಟನೆಗೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೀರ್ಥ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಸಾಕ್ಷಿಯಾಯಿತು. ತೀರ್ಥ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 18 ವರ್ಷಗಳಿಂದ ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಶಿಕ್ಷಕ ಅರುಣ್ ಕುಮಾರ್ ಶೆಟ್ಟಿ ಅವರು ತಮ್ಮ …

Read More »

ಅತ್ತಿಬೆಲೆ ಪಟಾಕಿ ದುರಂತ: ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಣೆ

ಆನೇಕಲ್​: ಅತ್ತಿಬೆಲೆ ಗಡಿಯ ಬಾಲಾಜಿ ಕ್ರ್ಯಾಕರ್ಸ್ ಪಟಾಕಿ ದಾಸ್ತಾನು ಮಳಿಗೆಯಲ್ಲಿ ಶನಿವಾರ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಸಾವಿಗೀಡಾದ 12 ಜನರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ನಿನ್ನೆ ರಾತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆದು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. “ಮೃತಪಟ್ಟ ಅಮಾಯಕ ಯುವಕರನ್ನು ಕಂಡರೆ ದುಃಖ ಉಮ್ಮಳಿಸಿ ಬರುತ್ತಿದೆ. 19 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು …

Read More »

ಹುಬ್ಬಳ್ಳಿ : ಬಾಲಕಿ ವಿದ್ಯಾಭ್ಯಾಸಕ್ಕೆ ನೆರವಾದ ಖ್ಯಾತ ಕ್ರಿಕೆಟಿಗ ಕೆ ಎಲ್ ರಾಹುಲ್

ಹುಬ್ಬಳ್ಳಿ : ಭಾರತ ತಂಡದ ಖ್ಯಾತ ಕ್ರಿಕೆಟ್​ ಆಟಗಾರ, ಕನ್ನಡಿಗ ಕೆ ಎಲ್​ ರಾಹುಲ್ ಹಲವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡಿದ್ದಾರೆ. ಇದೀಗ ಸುಡಗಾಡು ಸಿದ್ಧರ ಸಮುದಾಯದ ವಿದ್ಯಾರ್ಥಿನಿಯೋರ್ವಳ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ನೆರವು ನೀಡಿರುವ ರಾಹುಲ್​, ವಿದ್ಯಾರ್ಥಿನಿ ಶಾಲೆಗೆ ಸೇರಲು ಸಹಕರಿಸಿದ್ದಾರೆ. ಈ ಹಿಂದೆ ಜಮಖಂಡಿಯ ವಿದ್ಯಾರ್ಥಿಯೊಬ್ಬನಿಗೆ ಹುಬ್ಬಳ್ಳಿಯ ಪ್ರತಿಷ್ಠಿತ ಕಾಲೇಜಿನಲ್ಲಿ ದಾಖಲಾಗಲು ರಾಹುಲ್​ ಹಣಕಾಸಿ‌ನ ನೆರವು ನೀಡಿದ್ದರು. ಧಾರವಾಡದ ಸಿದ್ದೇಶ್ವರ ಕಾಲೋನಿ ನಿವಾಸಿಯಾಗಿರುವ ಸೃಷ್ಟಿ ಕುಲಾವಿ ಎಂಬ ಬಾಲಕಿಯ ವಿದ್ಯಾಭ್ಯಾಸಕ್ಕೆ …

Read More »

ಅರಣ್ಯ ಇಲಾಖೆ ಕಚೇರಿಯಲ್ಲಿದ್ದ ಲಕ್ಷ ಮೌಲ್ಯದ ಶ್ರೀಗಂಧದ ಕಟ್ಟಿಗೆ ಕಳ್ಳತನ..!

ಯಾದಗಿರಿ, ಅ.06: ಅರಣ್ಯ ಇಲಾಖೆ ಕಚೇರಿಯಲ್ಲಿದ್ದ ಲಕ್ಷ ಮೌಲ್ಯದ ಶ್ರೀಗಂಧದ ಕಟ್ಟಿಗೆ (Sandal Wood) ಕಳ್ಳತನವಾದ ಘಟನೆ ಯಾದಗಿರಿ(Yadagiri) ನಗರದ ಅರಣ್ಯ ಕಚೇರಿಯಲ್ಲಿ ನಡೆದಿದೆ. ಹೌದು, ಕಳೆದ ತಿಂಗಳು ಖದೀಮರು ತಾಲೂಕಿನ ಬಾಲಗಮಡು-ಹಂದರಕಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಗಿಡಗಳನ್ನು ಕಡಿದು ಸಾಗಿಸುತ್ತಿದ್ದರು. ಈ ವೇಳೆ ಅರಣ್ಯ ಅಧಿಕಾರಿಗಳು ದಾಳಿ ಮಾಡಿ ಬರೊಬ್ಬರಿ 8 ಲಕ್ಷ ಮೌಲ್ಯದ 85 ಕೆ.ಜಿ ಕಟ್ಟಿಗೆಗಳನ್ನು ಹಾಗೂ ಕಳ್ಳನನ್ನು ವಶಕ್ಕೆ ಪಡೆದಿದ್ದರು. ಬಳಿಕ ಅದನ್ನು ನಗರದ ಅರಣ್ಯ ಕಚೇರಿಯಲ್ಲಿ …

Read More »

ಬೆಳಗಾವಿ ಕರ್ನಾಟಕ ರಾಜ್ಯೋತ್ಸವಕ್ಕೆ ರಾಜ್ಯ ಸರ್ಕಾರ ಎರಡು ಕೋಟಿ ಅನುದಾನ ಕೊಡಬೇಕು

ಬೆಳಗಾವಿ ಕರ್ನಾಟಕ ರಾಜ್ಯೋತ್ಸವಕ್ಕೆ ರಾಜ್ಯ ಸರ್ಕಾರ ಎರಡು ಕೋಟಿ ಅನುದಾನ ಕೊಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ   ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮ ಸಡಗರ ದಿಂದ ಆಚರಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು ಬೆಳಗಾವಿ ಕರವೇ ಅಧ್ಯಕ್ಷ ದೀಪಕ ಗುಡಗನಟ್ಟಿ ಮಾತುನಾಡಿ ಇಡೀ ರಾಜ್ಯದಲ್ಲಿ …

Read More »

ಮಹಿಳಾ ಮೀಸಲಾತಿಯಿಂದ ಮಹಿಳೆಯರದ್ದೇ ಪಾರುಪತ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮಹಿಳಾ ಮೀಸಲಾತಿಯಿಂದ ಮಹಿಳೆಯರದ್ದೇ ಪಾರುಪತ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ ಯಾದವಾಡದಲ್ಲಿ ಎನ್‍ಆರ್‍ಎಂಎಲ್ ಯೋಜನೆಯಡಿ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ     ಮೂಡಲಗಿ : ಈಗಾಗಲೇ ಮಹಿಳಾ ಮೀಸಲಾತಿಯು ಜಾರಿಯಾಗಿರುವುದರಿಂದ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೇ 33 ರಷ್ಟು ಮಹಿಳಾ ಮೀಸಲು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ದೊರೆತಂತಾಗಿದೆ. ಮುಂದಿನ ವರ್ಷಗಳಲ್ಲಿ ಪುರುಷರಂತೆ ಮಹಿಳೆಯರು ಕೂಡ ರಾಜಕೀಯ ಸ್ಥಾನಮಾನ ಪಡೆಯಲಿದ್ದಾರೆ ಎಂದು ಶಾಸಕ ಬಾಲಚಂದ್ರ …

Read More »

ಆರ.ಎಂ.ಪಿ ವೈದ್ಯರ ನಿರ್ಲಕ್ಷದಿಂದ ಗರ್ಭಿಣಿ ಮಹಿಳೆ ಸಾವನ್ನಪ್ಪಿದ್ದಾಳೆ.

ಆರ್. ಎಂ. ಪಿ. ವೈದ್ಯ ಮಹಾವೀರ ಬಂಕಾಪುರೆಯವರ ನಿರ್ಲಕ್ಷ್ಯದಿಂದ ಗರ್ಭಿಣಿ ಮಹಿಳೆ ಸಾವನಪ್ಪಿದ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವ ಪಟ್ಟಣದಲ್ಲಿ ನಡೆದಿದೆ. ಮೃತ ಮಹಿಳೆಯ ಹೆಸರು ಶೇಜಲ ಅನಿಕೇತ್ ಮಾಳಿ (22) ಎಂದು ತಿಳಿದು‌ ಬಂದಿದೆ.‌ಆರ.ಎಂ.ಪಿ ವೈದ್ಯ ಬಂಕಾಪುರೆಯ ನಿರ್ಲಕ್ಷದಿಂದಲೇ ಆಗಿದೆ ಎಂದು ಪ. ಪಂ. ಸದಸ್ಯ ಪ್ರದೀಪ ಮಾಳಿ ಜತೆಗೆ ಸಂಬಂಧಿಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.ಶೇಜಲ್ ಮಾಳಿ ಎಂಬ ಗರ್ಭಿಣಿ ಮಹಿಳೆಯು ಬಂಕಾಪುರೆಯ ಆಸ್ಪತ್ರೆಗೆ ಹೆರಿಗೆಗಾಗಿ …

Read More »