ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬನ ಕತ್ತು ಕೊಯ್ದು ರಕ್ತ ಕುಡಿದಿರುವ ಬೀಭತ್ಸಕಾರಿ ಘಟನೆ ನಾಲ್ಕು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬನ ಕತ್ತಿನ ರಕ್ತ ಕುಡಿಯುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ನಿವಾಸಿ ವಿಜಯ್ ಎಂಬಾತ ಚೇಳೂರು ತಾಲೂಕಿನ ಮಾಡೇಂಪಲ್ಲಿ ನಿವಾಸಿ ಮಾರೇಶ್ ಮೇಲೆ ಹಲ್ಲೆ ಮಾಡಿ, ರಕ್ತ ಕುಡಿದಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ …
Read More »ರಸ್ತೆ ಅಪಘಾತದಲ್ಲಿ ಕಾಲು ಕಳೆದುಕೊಂಡ ಪಾರ್ವತಮ್ಮ ರಾಜ್ಕುಮಾರ್ ತಮ್ಮನ ಮಗ
ಚಾಮರಾಜನಗರ: ಕನ್ನಡ ಚಿತ್ರರಂಗದ ವರನಟ, ದಿ. ಡಾ.ರಾಜ್ಕುಮಾರ್ ಅವರ ಪತ್ನಿ ದಿ. ಪಾರ್ವತಮ್ಮ ರಾಜ್ಕುಮಾರ್ ಅವರ ಸಹೋದರ ಎಸ್.ಎ. ಶ್ರೀನಿವಾಸ್ ಅವರ ಪುತ್ರ ಸೂರಜ್ ಕುಮಾರ್ (ಧೀರಜ್) ಅವರು ಅಪಘಾತಕ್ಕೀಡಾಗಿ ಕಾಲು ಕಳೆದುಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಚಿಕ್ಕಹುಂಡಿ ಗೇಟ್ ಬಳಿ ನಡೆದಿದೆ. ಇವರು ಕೆಲವು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದಾರೆ. ಬೈಕ್ಗೆ ಟಿಪ್ಪರ್ ಡಿಕ್ಕಿ, ಬಲಗಾಲು ಕಟ್: ಊಟಿಗೆ ಸೋಲೋ (ಏಕಾಂಗಿ) ಟ್ರಿಪ್ ತೆರಳಿದ್ದ ಸೂರಜ್ ಕುಮಾರ್ …
Read More »ಟ್ರೈಥ್ಲಾನ ಸೈಕ್ಲಿಂಗ ಸ್ಪರ್ದೆಗೆ ಖಜಕಿಸ್ತಾನಗೆ ಪ್ರವಾಸ ಸಿಪಿಐ ಬ್ಯಾಕೋಡ
ಟ್ರೈಥ್ಲಾನ ಸೈಕ್ಲಿಂಗ ಸ್ಪರ್ದೆಗೆ ಖಜಕಿಸ್ತಾನಗೆ ಪ್ರವಾಸ ಸಿಪಿಐ ಬ್ಯಾಕೋಡ ಖಜಕಿಸ್ತಾನ ವಿದೇಶಿಯಲ್ಲಿ (INTERNATIONAL LEVEL IRON MAN) CYCLING, SWIMMING,RUNNING. ನಡೆಯುವ ಟ್ರೈಥ್ಲಾನ ಐರನ್ ಮ್ಯಾನ್ ಸ್ಪರ್ದೆಗೆ ಪ್ರತಿನಿದಿಸುತ್ತಿರುವ ಸಿಪಿಐ ಶ್ರೀಶೈಲ ಬ್ಯಾಕೋಡ ಇವರಿಗೆ ಜಿಲ್ಲಾ ಪೋಲಿಸರ ವತಿಯಿಂದ ಶುಭಾಶಯಗಳು ಬೆಳಗಾವಿ ಜಿಲ್ಲೆಯ ಗೋಕಾಕ ಸಮೀಪ ಮೂಡಲಗಿ ಠಾಣೆಯ ಸಿಪಿಐ ಶ್ರೀ: ಶ್ರೀಶೈಲ. ಕೆ. ಬ್ಯಾಕೋಡ ಸಿಪಿಐ ಮೂಡಲಗಿ ಇವರು ಖಜಕಿಸ್ತಾನ ದೇಶದಲ್ಲಿ ನಡೆಯಲಿರುವ ಏ. 02.07.2023ರಂದು ಅಂತರಾಷ್ಟ್ರೀಯ ಮಟ್ಟದ …
Read More »ಫ್ಲೈಓವರ್ ಮೇಲೆ ಬೈಕ್ನಲ್ಲಿ ಹೋಗುತ್ತಿದ್ದ ಅತ್ತೆಗೆ ಚಾಕು ಇರಿದು ಕೊಂದು ಪರಾರಿಯಾದ ಅಳಿಯ!
ವಿಜಯವಾಡ (ಆಂಧ್ರಪ್ರದೇಶ): ಅತ್ತೆಯನ್ನೇ ಅಳಿಯನೋರ್ವ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆ ವಿಜಯವಾಡದ ಚಿಟ್ಟಿನಗರ ಸಮೀಪ ಇರುವ ಹಾಲಿನ ಕಾರ್ಖಾನೆ ಪಕ್ಕದ ಚನುಮೋಳು ವೆಂಕಟರಾವ್ ಮೇಲ್ಸೇತುವೆ ಮೇಲೆ ಶನಿವಾರ ರಾತ್ರಿ ನಡೆದಿದೆ. ರಾತ್ರಿ 9 ಗಂಟೆ ಸುಮಾರಿಗೆ ರಾಜೇಶ್ (37) ಎಂಬಾತ ನಾಗಮಣಿ (48) ಎಂಬವರನ್ನು ಹತ್ಯೆಗೈದಿದ್ದಾನೆ. ಆರೋಪಿಯ ಪತ್ನಿಯು ವಿಚ್ಛೇದನ ಕೋರಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರಿಂದ ಕೋಪಗೊಂಡು ಕೃತ್ಯ ಎಸಗಿದ್ದಾನೆ ಎಂದು ವಿಜಯವಾಡ ಪಶ್ಚಿಮ ಎಸಿಪಿ ಹನುಮಂತ ರಾವ್ ತಿಳಿಸಿದರು. …
Read More »ಹೈದರಾಬಾದ್ ಮೂಲದ ಯುವತಿಯ ಹತ್ಯೆ ಪ್ರಕರಣ: ಆರೋಪಿ ಪ್ರಿಯಕರನ ಪತ್ತೆಗಾಗಿ ಲುಕ್ ಔಟ್ ನೋಟಿಸ್
ಬೆಂಗಳೂರು: ಪ್ರಿಯತಮೆಯನ್ನು ಕೊಂದು ನಾಪತ್ತೆಯಾಗಿರುವ ಆರೋಪಿಯ ಪತ್ತೆಗಾಗಿ ಬೆಂಗಳೂರು ಎಲ್ಓಸಿ (ಲುಕ್ ಔಟ್ ಸರ್ಕ್ಯೂಲರ್) ಹೊರಡಿಸಿದ್ದಾರೆ. ಹೈದರಾಬಾದ್ ಮೂಲದ ಆಕಾಂಕ್ಷಾ(23) ಎಂಬಾಕೆಯನ್ನ ಉಸಿರುಗಟ್ಟಿಸಿ ಕೊಂದು ಪರಾರಿಯಾಗಿರುವ ಆಕೆಯ ಪ್ರಿಯಕರ ದೆಹಲಿ ಮೂಲದ ಅರ್ಪಿತ್ ಕರಿತು ಇನ್ನೂ ಸಹ ಸುಳಿವಿಲ್ಲ. ಆದ್ದರಿಂದ ತನಿಖೆಯ ಗತಿಯನ್ನ ಮತ್ತಷ್ಟು ಚುರುಕುಗೊಳಿಸಿರುವ ಜೀವನ್ ಭೀಮಾ ನಗರ ಠಾಣಾ ಪೊಲೀಸರು ಆರೋಪಿ ದೇಶ ಬಿಟ್ಟು ತೆರಳದಂತೆ ಲುಕ್ ಔಟ್ ಸರ್ಕ್ಯೂಲರ್ ಹೊರಡಿಸಿದ್ದಾರೆ ಎಂಬುದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. …
Read More »ತುಂಗೆಯಿಂದ ಭದ್ರೆಗೆ 15 ಟಿಎಂಸಿ ನೀರು ತರುವ ಯೋಜನೆ 1 ವರ್ಷದೊಳಗೆ ಪೂರ್ಣ: ಸಚಿವ ಡಿ ಸುಧಾಕರ್
ಶಿವಮೊಗ್ಗ: ತುಂಗೆಯಿಂದ ಭದ್ರೆಗೆ 15 TMC ನೀರನ್ನು ತೆಗೆದುಕೊಂಡು ಹೋಗುವ ಯೋಜನೆ ಮುಂದಿನ ಒಂದು ವರ್ಷದೊಳಗೆ ಪೂರ್ಣವಾಗುವುದು ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಮುತ್ತಿನಕೊಪ್ಪ ಗ್ರಾಮದ ಬಳಿಯ ಕಾಮಗಾರಿ ವೀಕ್ಷಿಸಿ, ಭದ್ರಾವತಿಯ ಬಿ ಆರ್ ಪ್ರಾಜೆಕ್ಟ್ ಯ ಮುಖ್ಯ ಇಂಜಿನಿಯರ್ ಅವರ ಕಚೇರಿಯಲ್ಲಿ ಶನಿವಾರ ಮಾತನಾಡಿದ ಅವರು, ಭದ್ರಾ ಮೆಲ್ದಂಡೆ ಯೋಜನೆಯ ಭಾಗವಾಗಿ ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರು …
Read More »ಕಾಂಗ್ರೆಸ್ ಸರ್ಕಾರದಲ್ಲಿರುವ ಅಧಿಕಾರಿಗಳೇ ದಲ್ಲಾಳಿಗಳು: ಮುನಿರತ್ನ
ಬೆಂಗಳೂರು: ”ಈ ಸರ್ಕಾರದಲ್ಲಿ ಅಧಿಕಾರಿಗಳೇ ದಲ್ಲಾಳಿಗಳು ಆಗಿದ್ದಾರೆ. ಸರ್ಕಾರ ಸೇವೆಗೆ ಬಂದವರು ದಲ್ಲಾಳಿ ಸೇವೆ ಮಾಡ್ತಿದ್ದಾರೆ” ಎಂದು ಮಾಜಿ ಸಚಿವ ಮುನಿರತ್ನ ವಾಗ್ದಾಳಿ ನಡೆಸಿದ್ದಾರೆ. ಅರಮನೆ ಮೈದಾನದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ”ಕಾಂಗ್ರೆಸ್ ನವರಿಗೆ ತುಂಬಾ ಪ್ರೀತಿ ಇರೋದು ನನ್ನ ಮೇಲೆ ಹಾಗೂ ಅಶ್ವಥ್ ನಾರಾಯಣ್ ಮೇಲೆ. ಆದರೆ ಬಿಜೆಪಿ ಏನು ನಿದ್ದೆ ಮಾಡ್ತಿಲ್ಲ. ಬಹಳ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ನಾವು ಕೂಡ ಹೋರಾಟ ಮಾಡೋಕೆ ಸಿದ್ದರಿದ್ದೇವೆ. …
Read More »5 ಗ್ಯಾರಂಟಿ ಜಾರಿ ಮಾಡಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಿ: B.S.Y.
ಬೆಂಗಳೂರು: ಕಾಂಗ್ರೆಸ್ ಪಕ್ಷ ಕೊಟ್ಟ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು. ಇಲ್ಲವಾದಲ್ಲಿ ಅವರು ಅಧಿಕಾರ ಬಿಟ್ಟು ತೊಲಗಬೇಕು ಎಂದು ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಅರಮನೆ ಮೈದಾನದಲ್ಲಿ ಶನಿವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಸರ್ಕಾರದ ಮೂಗು ಹಿಂಡುವ ಕೆಲಸವನ್ನು ನಾವು ಮಾಡೋಣ. ಉಪವಾಸ ಸತ್ಯಾಗ್ರಹ ಮಾಡುವ ಅವಶ್ಯಕತೆ ಇಲ್ಲ. ಅಧಿವೇಶನ ಆರಂಭದ ದಿನದಿಂದ ನಾವು ಗಾಂಧಿ ಪ್ರತಿಮೆ ಮುಂದೆ ಕೂತು ಪ್ರತಿಭಟನೆ ಮಾಡಬೇಕು …
Read More »ಅಕ್ಕಿ ಪೂರೈಕೆಗೆ ಟೆಂಡರ್ ಮಾಡಿ ಕ್ರಮ ಕೈಗೊಳ್ಳುವಂತೆ ಮೂರು ಸಂಸ್ಥೆಗಳಿಗೆ ಮನವಿ- ಸಚಿವ ಮುನಿಯಪ್ಪ
ಬೆಂಗಳೂರು: ಅಕ್ಕಿ ಪೂರೈಸಲು ಟೆಂಡರ್ ಮಾಡಿ ಕ್ರಮ ಕೈಗೊಳ್ಳುವಂತೆ ಎನ್ಸಿಸಿಎಫ್ ಸೇರಿದಂತೆ ಮೂರು ಸಂಸ್ಥೆಗಳಿಗೆ ಮನವಿ ಮಾಡಿದ್ದೇವೆ. ಒಂದು ವಾರದೊಳಗೆ ಗಿರಣಿಗಳ ಮಾಲೀಕರು ಮತ್ತು ವ್ಯಾಪಾರಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಅಕ್ಕಿ ಪೂರೈಕೆ ಕುರಿತು ಎನ್ಸಿಸಿಎಫ್, ನಾಫೆಡ್ ಮತ್ತು ಕೇಂದ್ರೀಯ ಭಂಡಾರ ಕೊಟ್ಟಿರುವ ದರ ಪಟ್ಟಿ ಕುರಿತು ಸಭೆ ನಡೆಯಿತು. …
Read More »ಜಯದೇವ ಹೃದ್ರೋಗ ಸಂಸ್ಥೆಯಿಂದ 52 ಲಕ್ಷ ರೋಗಿಗಳಿಗೆ ಚಿಕಿತ್ಸೆ ನೀಡಿ ದಾಖಲೆ: ಡಾ.ಸಿ.ಎನ್.ಮಂಜುನಾಥ್
ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆಯಿಂದ 52 ಲಕ್ಷ ಹೃದಯ ರೋಗಿಗಳಿಗೆ ಚಿಕಿತ್ಸೆ ನೀಡಿ ದಾಖಲೆ ನಿರ್ಮಿಸಲಾಗಿದೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ತಿಳಿಸಿದರು. ಜಯನಗರದ ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ಶನಿವಾರ ರಕ್ಷಾ ಫೌಂಡೇಷನ್ನಿಂದ 11ನೇ ವರ್ಷದ ಸಮಾಜ ಸೇವಾ ಕಾರ್ಯಕ್ರಮದಲ್ಲಿ 10 ಸಾವಿರ ಮಕ್ಕಳಿಗೆ 1.5 ಲಕ್ಷ ಉಚಿತ ನೋಟ್ ಪುಸ್ತಕಗಳು, ಕಲಿತಾ ಪರಿಕರಗಳ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ …
Read More »