Breaking News

ಕಾಂಗ್ರೆಸ್ ಬಿಜೆಪಿ ನಡುವೆ ಅನ್ನಭಾಗ್ಯ ಅಕ್ಕಿ ವಾರ್: ಸಿದ್ದು ಸರ್ಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ ನಾಯಕರು

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಅಕ್ಕಿ ವಿಚಾರದಲ್ಲಿ ಆರೋಪ ಪ್ರತ್ಯಾರೋಪ ನಡೆದಿದೆ. ಸಿದ್ದರಾಮಯ್ಯ ಆರೋಪಕ್ಕೆ ರಾಜ್ಯ ಬಿಜೆಪಿ ನಾಯಕರು ಸರಣಿ ಟ್ವೀಟ್​ಗಳನ್ನು ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ. ಮಾಜಿ ಸಚಿವ ಆರ್. ಅಶೋಕ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಬೆನ್ನಲ್ಲೇ ಮಾಜಿ ಸಚಿವ ಸುನೀಲ್ ಕುಮಾರ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸಹ ಸಿದ್ದರಾಮಯ್ಯ ವಿರುದ್ಧ …

Read More »

ಕೌಟುಂಬಿಕ ಕಲಹದಿಂದ ಗಾಯಗೊಂಡಿದ್ದ ಅತ್ತೆ ಸಾವು.. ಸೊಸೆ ವಿರುದ್ಧ ಕೊಲೆ ಕೇಸ್ ದಾಖಲು

ಬೆಳಗಾವಿ : ಕೌಟುಂಬಿಕ ಕಲಹದಲ್ಲಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಮಂಗಳವಾರ ಮೃತಪಟ್ಟಿರುವ ಘಟನೆ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ. ಈ ಮಹಿಳೆಯ ಸಾವಿಗೆ ಸೊಸೆ ಕಾರಣ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸ್ವತಃ ಮೃತ ಮಹಿಳೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದಾರೆ. ಬೈಲಹೊಂಗಲ ಪಟ್ಟಣದ ಮಹೆಬೂಬಿ ಯಾಕೂಶಿ (53) ಎಂಬವರು ನಿನ್ನೆ(ಮಂಗಳವಾರ) ಮೃತಪಟ್ಟಿದ್ದರು. ಈ ಸಂಬಂಧ ಸೊಸೆ ಮೆಹರೂನಿ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಸುಬಾನ್​ ಯಾಕೂಶಿ ಪೊಲೀಸರಿಗೆ ದೂರು ನೀಡಿದ್ದಾರೆ. …

Read More »

 ಬೈಕ್ ಮತ್ತು ಟೆಂಪೋ ನಡುವೆ ಭೀಕರ ಅಪಘಾತ ಮೂವರ ಸಾವು

ಚಿಕ್ಕೋಡಿ: ಬೈಕ್ ಮತ್ತು ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಯುವಕರು ಮೃತಪಟ್ಟಿರುವ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಸವನಾಳಗಡ್ಡೆ ಬಳಿ ಮಂಗಳವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು, ಇದಲ್ಲಿ ಕೇರೂರು ಗ್ರಾಮದ ಪ್ರಶಾಂತ ಬೈರು ಖೋತ(22), ಸತೀಶ ಕಲ್ಲಪ್ಪ ಹಿರೇಕೊಡಿ(23), ಯಲಗೌಡ ಚಂದ್ರಕಾಂತ ಪಾಟೀಲ (22) ಮೃತ ದುರ್ದೈವಿಗಳು. ಯುವಕರು ಬೈಕ್​​ ಮೇಲೆ ಚಿಕ್ಕೋಡಿ ಕಡೆಯಿಂದ ಕೇರೂರು ಗ್ರಾಮಕ್ಕೆ ತೆರಳುವ ಸಮಯದಲ್ಲಿ ಚಿಕ್ಕೋಡಿ ಅಂಕಲಿ …

Read More »

ಸಂಸದ ಪ್ರತಾಪ್ ಸಿಂಹ ಎಳಸು,: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿಯ ಕೆಲವು ಹಿರಿಯ ನಾಯಕರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಜೊತೆಹೊಂದಾಣಿಕೆ ರಾಜಕಾರಣಮಾಡುತ್ತಿದ್ದಾರೆ ಎಂದು ಹೇಳಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಸಹಕಾರ ಇಲಾಖೆಯ ವತಿಯಿಂದ ಅಲಿ ಆಸ್ಕರ್ ರಸ್ತೆಯ ಸಹಕಾರ ಸಂಘಗಳ ನಿಬಂಧಕರ ಕಚೇರಿ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಸಹಕಾರ ಸಮೃದ್ಧಿ ಸೌಧ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. “ಪ್ರತಾಪ್ ಸಿಂಹ ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ. ಇನ್ನೂ ಎಳಸು. …

Read More »

ಜೆಡಿಎಸ್ ಆಡಳಿತದಲ್ಲಿ ಇದ್ದಾಗ ಅಪ್ಪ ಮಕ್ಕಳು ಭ್ರಷ್ಟಾಚಾರ ಬಿಟ್ಟರೆ ಬೇರೆ ಏನೂ ಮಾಡಿಲ್ಲ: ಕಾಶಪ್ಪನವರ

ಬಾಗಲಕೋಟೆ: ಜೆಡಿಎಸ್ ಅಪ್ಪ ಮಕ್ಕಳ ಪಕ್ಷ, ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ ಮಾಡುವುದನ್ನು ಬಿಟ್ಟರೆ, ಬೇರೆ ಏನು ಮಾಡಿಲ್ಲ ಎಂದು ಹುನಗುಂದ ಮತಕ್ಷೇತ್ರ ಶಾಸಕ ವಿಜಯಾನಂದ ಕಾಶಪ್ಪನವರ ತಿರುಗೇಟು ನೀಡಿದ್ದಾರೆ.   ಬಾಗಲಕೋಟೆ ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಈಗ 45% ಸರ್ಕಾರ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಕಿಡಿಕಾರಿದರು. ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ರಾಜ್ಯದ ಜನ ಎಲ್ಲಿ ಕೂರಿಸಿದ್ದಾರೆ ಅನ್ನೋದನ್ನು ಅರ್ಥ ಮಾಡಿಕೊಳ್ಳಬೇಕು. ಬೇಜವಾಬ್ದಾರಿ ಮಾತು …

Read More »

ಗೋಧಿ ವ್ಯಾಪಾರಿಗಳಿಂದ ದಾಸ್ತಾನು ಮಾಹಿತಿ ಪಡೆಯುವಂತೆ ರಾಜ್ಯಗಳಿಗೆ ಕೇಂದ್ರದ ಸೂಚನೆ

ನವದೆಹಲಿ : ಸಗಟು ವ್ಯಾಪಾರಿಗಳು ಮತ್ತು ಇತರ ವ್ಯಾಪಾರಿಗಳು ಹೊಂದಿರುವ ಗೋಧಿ ದಾಸ್ತಾನು ಮಾಹಿತಿಯನ್ನು ಪಡೆದುಕೊಳ್ಳುವಂತೆ ಆಹಾರ ಮತ್ತು ಸಾರ್ವಜನಿಕ ವಿತರಣಾ ಕಾರ್ಯದರ್ಶಿ ಸಂಜೀವ್ ಚೋಪ್ರಾ ಆಯಾ ರಾಜ್ಯಗಳಿಗೆ ಸೂಚಿಸಿದ್ದಾರೆ. ಗೋಧಿ ಬೆಲೆ ತಗ್ಗಿಸಲು ಮತ್ತು ಸಂಗ್ರಹಣೆಯನ್ನು ತಡೆಯಲು ಸರ್ಕಾರವು ಮಾರ್ಚ್ 31, 2024 ರವರೆಗೆ ಗೋಧಿ ಮೇಲೆ ದಾಸ್ತಾನು ಮಿತಿಯನ್ನು ವಿಧಿಸಿದ ಒಂದು ದಿನದ ನಂತರ ಕೇಂದ್ರದ ಈ ಸೂಚನೆ ಬಂದಿದೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆದ ಸಭೆಯಲ್ಲಿ ಎಲ್ಲ …

Read More »

ಉತ್ತರ ಕನ್ನಡದಲ್ಲಿ ಪ್ರತ್ಯೇಕ ಪ್ರಕರಣ: ಅಕ್ರಮ ನಾಟಾ ಸಾಗಣೆ ಪ್ರಕರಣದಲ್ಲಿ ಐವರು ಡಿಆರ್ ಎಫ್‌ಓಗಳು ಅಮಾನತು: ಸಂಬಂಧಿ ಕೊಂದವನಿಗೆ ಜೀವಾವಧಿ ಶಿಕ್ಷೆ

ಕಾರವಾರ (ಉತ್ತರ ಕನ್ನಡ): ಮುಂಡಗೋಡದಿಂದ ಶಿರಸಿಗೆ ಅಕ್ರಮ ನಾಟ ಸಾಗಣೆ ಪ್ರಕರಣದಲ್ಲಿ ಅರಣ್ಯಾಧಿಕಾರಿಗಳು ಭಾಗಿಯಾದ ಹಿನ್ನೆಲೆಯಲ್ಲಿ ಐದು ಮಂದಿ ಡಿಆರ್​ಎಫ್​ಒಗಳನ್ನು ಜಿಲ್ಲಾ ಅರಣ್ಯ ಮುಖ್ಯಾಧಿಕಾರಿ ವಸಂತ್‌ ರೆಡ್ಡಿ (CCF) ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಶಿರಸಿಯ ಸುರೇಶ್ ವಡ್ಡರ್, ಮಾರುತಿ ಸೋರಗಾವಿ, ಮಹೇಶ್ ಬೋರ್ಕರ್, ಹನುಮಂತ ಬಂಡಿವಡ್ಡರ್, ಗುರುಚಂದ್ರ ಎಮ್. ಬ್ಯಾಳಿ ಅಮಾನತುಗೊಂಡ ಡಿ.ಆರ್.ಎಫ್.ಒ ಗಳು. ವಲಯ ಅರಣ್ಯ ಅಧಿಕಾರಿ ಜಿ.ಟಿ ರೇವಣಕರ್ ವಿರುದ್ಧ ಕ್ರಮಕ್ಕೆ ರಾಜ್ಯ ಅರಣ್ಯ ಮುಖ್ಯಸ್ಥರಿಗೆ ಶಿಫಾರಸು …

Read More »

ಸೀಟ್ ಮೇಲೆ ನಿಂತು ಪ್ರಯಾಣಿಕರಿಗೆ ಟಿಕೆಟ್ ನೀಡಿರುವ ಕಂಡಕ್ಟರ್‌

ಶಕ್ತಿ ಯೋಜನೆ ಜಾರಿ ಹಿನ್ನೆಲೆ ಕಂಡಕ್ಟರ್‌ನೋರ್ವ ಸೀಟ್ ಮೇಲೆ ನಿಂತು ಪ್ರಯಾಣಿಕರಿಗೆ ಟಿಕೆಟ್ ನೀಡಿರುವ ಪ್ರಸಂಗ ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ಪಟ್ಟಣದ ಇಂಗಳೇಶ್ವರ ಗ್ರಾಮದಲ್ಲಿ ಬುಧವಾರ ನಡೆದಿದೆ. ಇಂಗಳೇಶ್ವರ ಮಾರ್ಗವಾಗಿ ವಿಜಯಪುರಕ್ಕೆ ಬಸ್ ಬರುತ್ತಿದ್ದ ಬಸ್‌ ನಲ್ಲಿ ಈ ಪ್ರಸಂಗ ಆಗಿದೆ. ಈ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರು ಜಾಸ್ತಿಯಾಗಿದ್ದರು. ಅದಕ್ಕಾಗಿ ನಿಂತುಕೊಳ್ಳಲು ಸ್ಥಳ ಇಲ್ಲದ ಕಾರಣಕ್ಕೆ ಬಸ್‌ನ ಸೀಟ್ ಮೇಲೇರಿ ಕಂಡಕ್ಟರ್ ಟಿಕೆಟ್ ನೀಡಿದ್ದಾನೆ.

Read More »

ರಸ್ತೆ ಅಪಘಾತದಲ್ಲಿ ನವವಿವಾಹಿತರ ಸಾವು

ವಿಧಿಯಾಟ ಬಲ್ಲವರಾರು… ಈ ವರದಿ ನೋಡಿದ್ರೆ ಹೇ ವಿಧಿಯೇ ನಿನೇಷ್ಟೂ ಕ್ರೂರಿ ಅನ್ನಿಸದಿರದು. ರಸ್ತೆ ಅಪಘಾತವೊಂದು ನವ ವಿವಾಹಿತರನ್ನು ಬಲಿ ತೆಗೆದು ಕೊಂಡಿದೆ. ಮದುವೆಯಾಗಿ ಒಂದು ತಿಂಗಳಾಗುವ ಮುನ್ನ ಇಬ್ಬರೂ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ವಿಜಯಪುರ ನಗರದ ಹೊರವಲಯದ ಸೋಲಾಪುರ ಬೈಪಾಸ್ ಬಳಿ ತಡರಾತ್ರಿ ಬೈಕ್‌ ಹಾಗೂ ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಹೊನಮಲ್ಲ ತೆರದಾಳ (31) ಹಾಗೂ ಪತ್ನಿ ಗಾಯತ್ರಿ (24) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಸೇವೆ …

Read More »

ಸವದಿಯಿಂದ ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಹೊಡೆತ: ರಮೇಶ್ ಜಿಗಜಿಣಗಿ

ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದು, ಬಿಜೆಪಿ ಸ್ವಲ್ಪ ಮಟ್ಟಿಗೆ ನಷ್ಟ ಅನುಭವಿಸಿದೆ. ಬಿಜಾಪುರ ಸಂಸದ ರಮೇಶ್ ಜಿಗಜಿಣಗಿ ಪ್ರತಿಕ್ರಿಯಿಸಿ, ಉತ್ತರ ಕರ್ನಾಟಕ ಸ್ವಲ್ಪ ಜಾಸ್ತಿ ಈ ಇಬ್ಬರು ನಾಯಕರ ಪಕ್ಷಾಂತರ ಮಾಡಿದ್ದು ಲೋಕಸಭೆ ಚುನಾವಣೆ ಮೇಲೆ ಯಾವ ಪರಿಣಾಮ ಬೀರುವುದಿಲ್ಲ ಜನ ಕಾಂಗ್ರೇಸ್ ಗೆ ಓಟು ಹಾಕಿದ್ದು ಗ್ಯಾರಂಟಿ ಭರವಸೆಯ ಹಿನ್ನೆಲೆಯಲ್ಲಿ ಆಯ್ಕೆ ಮಾಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಮೇಲೆ ರಾಜ್ಯ ಸರ್ಕಾರ ನಡೆಸುತ್ತಿದೆ. …

Read More »