Breaking News

ಹಾವೇರಿ: ಒನ್​ಟೈಮ್​ ಸೆಟಲ್​ಮೆಂಟ್​ಗೆ ಸ್ಪಂದಿಸದ ಆರೋಪ.. ಬ್ಯಾಂಕ್​ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೈತ

ಹಾವೇರಿ: ಒಟಿಎಸ್ ಸೌಲಭ್ಯದಿಂದ ವಂಚಿತ ರೈತನೊಬ್ಬ ಬ್ಯಾಂಕನಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಮಾಕನೂರು ಗ್ರಾಮದಲ್ಲಿ ನಡೆದಿದೆ. ಬ್ಯಾಂಕ್​ನಲ್ಲಿ ಬೆಳೆಸಾಲ ಮಾಡಿದ್ದ ಸಂಜೀವ ಕುರುಬರ ಅನ್ನೋ ರೈತ ಸಂಜೀವ್​ ಆತ್ಮಹತ್ಯೆಗೆ ಮುಂದಾಗಿದ್ದ. ಸಂಜೀವ್ ಬ್ಯಾಂಕನಲ್ಲಿ 3 ಲಕ್ಷದ 45 ಸಾವಿರ ರೂಪಾಯಿ ಸಾಲ ಮಾಡಿಕೊಂಡಿದ್ದಾನೆ. ಈ ಸಾಲಕ್ಕೆ ವರ್ಷದಿಂದ ವರ್ಷಕ್ಕೆ ಬಡ್ಡಿ ಹೆಚ್ಚಾಗಿ ಸುಮಾರು 10 ಲಕ್ಷ ರೂಪಾಯಿ ಆಗಿ ಬೆಳೆದಿದೆ. ಒನ್ ಟೈಮ್ ಸೆಟಲಮೆಂಟ್ (ಒಟಿಎಸ್) …

Read More »

ನಿವೃತ್ತ ಶಿಕ್ಷಕನಿಂದ ಮಣ್ಣಿನ ಗಣಪತಿ ನಿರ್ಮಾಣ; ತಂದೆಯ ನೆರವಿಗೆ ವಿದೇಶದಿಂದ ಬರುವ ಮಕ್ಕಳು

ವಿಜಯಪುರ: ನಿಮಗೆ ಗಣೇಶನ ಮೂರ್ತಿ ಬೇಕಿದ್ದರೆ ನೀವು ಇವರ ಬಳಿ ಒಂದು ತಿಂಗಳ ಮುಂಚಿತವೇ ಕಾಯ್ದಿರಿಸಬೇಕು. ಮೂರ್ತಿಗಳ ಆಕರ್ಷಕ ವಿನ್ಯಾಸವೇ ಇದಕ್ಕೆ ಕಾರಣ. ಹೌದು, ಇವರ ಹೆಸರು ಮನೋಹರ ಪತ್ತಾರ. ನಿವೃತ್ತ ಚಿತ್ರಕಲಾ ಶಿಕ್ಷಕರು. ಶಿಲ್ಪ ಅಕಾಡೆಮಿ ನಿರ್ದೇಶಕರಾಗಿದ್ದವರು. ತಲೆತಲಾಂತರದಿಂದ ಬಳುವಳಿಯಾಗಿ ಬಂದ ಆಭರಣ ತಯಾರಿಕೆ ಇವರ ಮೂಲ ಕಸುಬು. ಆದರೆ ಇವರ ಕುಟುಂಬ ಆಯ್ದುಕೊಂಡಿದ್ದು ಮಾತ್ರ ಮಣ್ಣಿನ ಗಣೇಶ ಮೂರ್ತಿ ತಯಾರಿಕೆ ಕೆಲಸ. ಇವರ ಪುತ್ರರು ಸಾಫ್ಟ್‌ವೇರ್ ಇಂಜಿನಿಯರ್‌ಗಳಾಗಿದ್ದಾರೆ. ಗಣೇಶ …

Read More »

ಲೋಕಸಭಾ ಚುನಾವಣೆ 2024: ಬಾಗಲಕೋಟೆ ಟಿಕೆಟ್ ಆಕಾಂಕ್ಷಿಗಳ‌ ಪಟ್ಟಿ

ಬಾಗಲಕೋಟೆ: ಲೋಕಸಭೆ ಚುನಾವಣೆಗೆ ಇನ್ನು 9 ತಿಂಗಳು ಬಾಕಿ ಇರುವಾಗಲೇ ‌ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿ ಹನಮಂತನ ಬಾಲದಂತೆ ಬೆಳೆಯುತ್ತಿದ್ದು, ನಾನಾ..ನೀನಾ ಎಂಬ ಸ್ಪರ್ಧೆ ಏರ್ಪಟ್ಟಿದೆ. ಕಳೆದ‌ ಲೋಕಸಭಾ‌ ಚುನಾವಣೆಗೆ ಕಾಂಗ್ರೆಸ್ ‌ಪಕ್ಷದಿಂದ‌ ಸ್ಪರ್ಧೆ ಮಾಡಿ ಸೋಲು ಕಂಡಿರುವ ವೀಣಾ ಕಾಶಪ್ಪನವರ ಮತ್ತೆ ಅಖಾಡಕ್ಕಿಳಿಯುವ ಬಗ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ಹಲವರು ತಾವೂ ಕೂಡ ಲೋಕಸಭಾ ಚುನಾವಣೆಯಲ್ಲಿ ಪ್ರಮುಖ ಆಕಾಂಕ್ಷಿ ಎಂದು ಹೇಳುತ್ತಿದ್ದಾರೆ. ಈ ಮೂಲಕ‌ ಕಾಂಗ್ರೆಸ್ ಪಕ್ಷದಲ್ಲಿ ಸ್ಪರ್ಧೆಗೆ …

Read More »

ಚೈತ್ರಾ ಕುಂದಾಪುರಗೆ ಸೇರಿದ ಕಾರು ಮುಧೋಳದಲ್ಲಿ ಪತ್ತೆ..

ಬಾಗಲಕೋಟೆ: ಚೈತ್ರಾ ಕುಂದಾಪುರ ಟಿಕೆಟ್ ಡೀಲ್ ಪ್ರಕರಣದ ಹಿನ್ನೆಲೆ ಜಿಲ್ಲೆಯ ಮುಧೋಳ ಪಟ್ಟಣದಲ್ಲಿ ಚೈತ್ರಾ ಕುಂದಾಪುರ ಅವರಿಗೆ ಸೇರಿದ ಕಾರು ಪತ್ತೆಯಾಗಿದೆ. ಈ ಪ್ರಕರಣ ಮುಧೋಳ ಪಟ್ಟಣದವರೆಗೆ ವ್ಯಾಪಿಸಿದ್ದು ನೋವಿನ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅರ್ ಬಿ‌ ತಿಮ್ಮಾಪುರ ಹೇಳಿದ್ದಾರೆ. ಬಾಗಲಕೋಟೆ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಟಿಕೆಟ್​ ಡೀಲ್​ನಲ್ಲಿ​ ದೊಡ್ಡ ಜಾಲವೇ ಇರಬಹುದು ಎಂಬ ಭಾವನೆ ನನ್ನದು. ಕುಂದಾಪುರ ಎಲ್ಲಿ, ಮುಧೋಳ ಎಲ್ಲಿ, ಪೊಲೀಸ್ ಇಲಾಖೆ …

Read More »

ಹಳೆ ಸಂಸತ್ ಭವನಕ್ಕೆ ಗುಡ್‌ ಬೈ: ಲೋಕಸಭಾ, ರಾಜ್ಯಸಭಾ ಸದಸ್ಯರ ಗ್ರೂಪ್​ ಫೋಟೋ

ನವದೆಹಲಿ: ಹಳೆ ಸಂಸತ್ ಭವನದಿಂದ ಕಲಾಪಗಳು ಹೊಸ ಸಂಸತ್ ಕಟ್ಟಡಕ್ಕೆ ಸ್ಥಳಾಂತರಗೊಳ್ಳುವ ಮುನ್ನ ಇಂದು (ಮಂಗಳವಾರ) ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ಒಟ್ಟಾಗಿ ಫೋಟೋ ತೆಗೆಸಿಕೊಂಡರು. ಉಪರಾಷ್ಟ್ರಪತಿ, ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರ ಎರಡೂ ಬದಿಗಳಲ್ಲಿ ನಿಂತು ಸದಸ್ಯರು ಫೋಟೋಗೆ ಪೋಸ್ ಕೊಟ್ಟರು.     ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, …

Read More »

ಭವ್ಯ ಮೆರವಣಿಗೆ ಮೂಲಕ ಈದ್ಗಾ ಮೈದಾನಕ್ಕೆ ಗಣಪತಿ ಮೂರ್ತಿ ಪ್ರತಿಷ್ಠಾಪನೆ

ಹುಬ್ಬಳ್ಳಿ: ಅದ್ದೂರಿ ಮೆರವಣಿಗೆಯ ಮೂಲಕ ಸಾಗಿ ಬಂದು ಇಂದು ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ನಗರದ ಮೂರುಸಾವಿರ ಮಠದ ಆವರಣದಿಂದ ಆರಂಭವಾದ ಮೆರವಣಿಗೆ ಮಹಾವೀರಗಲ್ಲಿ, ತುಳಜಾಭವಾನಿ ವೃತ್ತ, ದಾಜೀಬಾನ್ ಪೇಟೆ, ಅಂಚಟಗೇರಿ ಓಣಿ, ರಾಯಣ್ಣ ವೃತ್ತ ಮೂಲಕ ಈದ್ಗಾ ಮೈದಾನಕ್ಕೆ ಆಗಮಿಸಿತು. ಮೆರವಣಿಗೆಯುದ್ದಕ್ಕೂ ಪಂಚವಾದ್ಯ, ಡೋಲು, ನಾಶಿಕ್ ಜಾಂಝ್ ಮೇಳ ಕಂಡುಬಂತು. ಶಾಸಕ ಅರವಿಂದ ಬೆಲ್ಲದ ನೃತ್ಯ ಮಾಡುವ ಮೂಲಕ ಗಮನ ಸೆಳೆದರು. ಭಾರತ ಮಾತೆಯ ಆಳೆತ್ತರದ ಭಾವಚಿತ್ರ, …

Read More »

ಯುನೆಸ್ಕೋ ವಿಶ್ವಪಾರಂಪರಿಕ ತಾಣಗಳ ಪಟ್ಟಿಗೆ ರಾಜ್ಯದ ಹೊಯ್ಸಳರ ದೇವಾಲಯ: ಪಿಎಂ ಮೋದಿ, ಸಿಎಂ ಸಿದ್ದರಾಮಯ್ಯ ಹರ್ಷ

ಬೆಂಗಳೂರು: ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ)ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರುನಾಡಿನ ಪ್ರಸಿದ್ಧ ಹೊಯ್ಸಳರ ಕಾಲದ ದೇವಾಲಯಗಳು ಸೇರ್ಪಡೆಗೊಂಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ.       ವಿಶ್ವಮಟ್ಟದ ಮೂಲಸೌಲಭ್ಯ, ಸುರಕ್ಷತೆ ಒದಗಿಸಲು ಬದ್ಧ: ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಸಿಎಂ, “ಇದು ಖುಷಿ, ಹೆಮ್ಮೆಯ ಸಂಗತಿ. ನಾಡಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ವಿಶ್ವಮಟ್ಟದ …

Read More »

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಆರೋಪಿಗಳ ಬ್ಯಾಂಕ್ ಖಾತೆ ಸ್ಥಗಿತ, ಕಾರು ಜಪ್ತಿ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಹಂತ-ಹಂತವಾಗಿ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ್ದ ಪ್ರಕರಣದ ಆರೋಪಿಗಳ ಆಸ್ತಿ ಶೋಧ ಪ್ರಕ್ರಿಯೆಯನ್ನು ಸಿಸಿಬಿ ಪೊಲೀಸರು ಮುಂದುವರಿಸಿದ್ದಾರೆ. ಆರೋಪಿಗಳ ಬ್ಯಾಂಕ್‌ ಖಾತೆಯಲ್ಲಿದ್ದ ಠೇವಣಿ ಹಾಗೂ ಕಾರು ಜಪ್ತಿ ಮಾಡಲಾಗಿದೆ. ಶನಿವಾರ, 81 ಲಕ್ಷ ನಗದು ಜಪ್ತಿ ಮಾಡಲಾಗಿದ್ದು, ನಂತರ ಆರೋಪಿಗಳ ಎಫ್.ಡಿ ಖಾತೆಯಲ್ಲಿ ಒಟ್ಟು 1.08 ಕೋಟಿ ಠೇವಣಿ ಪತ್ತೆಯಾಗಿದೆ. ಬ್ಯಾಂಕ್‌ಗಳ ಮೂಲಕ ಠೇವಣಿಗಳ ವ್ಯವಹಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಿಸಿಬಿ …

Read More »

ಮೂವರು ಡಿಸಿಎಂ ಬೇಡಿಕೆಗೆ ಮುಖ್ಯಮಂತ್ರಿಯೇ ಉತ್ತರ ಕೊಡಬೇಕು, :D.C.M.

ಬೆಂಗಳೂರು : ಸಚಿವ ಕೆ ಎನ್​ ರಾಜಣ್ಣ ಹೇಳಿರುವಂತೆ ಮೂವರು ಡಿಸಿಎಂ ಬೇಡಿಕೆ ಸಂಬಂಧ ಮುಖ್ಯಮಂತ್ರಿಗಳೇ ಇದಕ್ಕೆಲ್ಲಾ ಉತ್ತರ ಕೊಡಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ ಎನ್​ ರಾಜಣ್ಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಬಹಳ ಸಂತೋಷ. ಎಲ್ಲರ ಮನಸ್ಸಿಗೂ ಸಮಾಧಾನ. ನನ್ನನ್ನು ಡಿಸಿಎಂ ಆಗಿ ನೇಮಕ ಮಾಡಿರುವುದು ಮುಖ್ಯಮಂತ್ರಿಗಳು ಮತ್ತು ಗವರ್ನರ್​. ಇದಕ್ಕೆಲ್ಲಾ ಮುಖ್ಯಮಂತ್ರಿಗಳೇ …

Read More »

ಹಣದ ಆಸೆಗೆ ಮಾಲೀಕನನ್ನೇ ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ಬನವಾಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿರಸಿ(ಉತ್ತರ ಕನ್ನಡ): ಹಣದ ಆಸೆಗಾಗಿ ಕೆಲಸ ನೀಡಿದ ಮಾಲೀಕನನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ಶಿರಸಿಯ ಬನವಾಸಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ನಡೆದ 48 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯ ಶವ ಶಿರಸಿಯ ವಡ್ಡಿನಕೊಪ್ಪ ಅರಣ್ಯ ಭಾಗದಲ್ಲಿ ಪತ್ತೆಯಾಗಿತ್ತು. ಕೊಲೆ ಎಂದು ಪ್ರಾಥಮಿಕ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ನಂತರ ತನಿಖೆ ಕೈಗೊಂಡ ಬನವಾಸಿ ಠಾಣೆ ಪೊಲೀಸರು ಕೊಲೆಯಾದ ವ್ಯಕ್ತಿಯ ಗುರುತು ಪತ್ತೆ …

Read More »