ಬಾಗಲಕೋಟೆ: 200 ಯುನಿಟ್ ವಿದ್ಯುತ್ ಉಚಿತ ನೀಡುವುದಾಗಿ ಘೋಷಣೆ ಮಾಡಿದ ಕಾಂಗ್ರೆಸ್ ಸರ್ಕಾರ ಈಗ ವಿದ್ಯುತ್ ದರ ಏರಿಕೆ ಮಾಡಿರುವುದು ನೇಕಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಒಂದೆಡೆ ಉಚಿತ ವಿದ್ಯುತ್ ಘೋಷಣೆ ಮಾಡಿ, ಇನ್ನೊಂದೆಡೆ ವಿದ್ಯುತ್ ದರ ಏರಿಕೆ ಮಾಡಿರುವುದು ಜಿಲ್ಲೆಯ ನೇಕಾರರಿಗೆ ಸಂಕಷ್ಟ ಎದುರಾಗಿದೆ. ರಬಕವಿ, ಬನ್ನಹಟ್ಟಿ, ಮಹಾಲಿಂಗಪುರ, ತೇರದಾಳ, ಕೆರೂರ, ಗುಳೇದಗುಡ್ಡ, ಇಳಕಲ್ ಸೇರಿದಂತೆ ಇತರ ಪ್ರದೇಶದಲ್ಲಿ ನೇಕಾರರ ಸಂಖ್ಯೆ ಹೆಚ್ಚಾಗಿದೆ. ಇದರ ಜೊತೆಗೆ ಮಹಿಳೆಯರೇ ಈಗ …
Read More »ಬಳ್ಳಾರಿ ವಿಮ್ಸ್ನಲ್ಲಿದೆ ಉದ್ಯೋಗಾವಕಾಶ: ವಾಕ್-ಇನ್ನಲ್ಲಿ ನೀವೂ ಭಾಗಿಯಾಗಿ!
ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳಲ್ಲಿ (ವಿಮ್ಸ್) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆಗೆ ಆಹ್ವಾನಿಸಲಾಗಿದೆ. ವೈದ್ಯಕೀಯ ಸಂಸ್ಥೆಯಲ್ಲಿ ಖಾಲಿ ಇರುವ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಮೆಡಿಕಲ್ ಆಫೀಸರ್ ಸೇರಿದಂತೆ 93 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ವಾಕ್ ಇನ್ ಇಂಟರ್ವ್ಯೂ ಮೂಲಕ ಈ ಹುದ್ದೆಗೆ ಆಯ್ಕೆ ನಡೆಯಲಿದೆ ಆಸಕ್ತಿ ಮತ್ತು …
Read More »ಶಿರಹಟ್ಟಿ ಗ್ರಾಮದಲ್ಲಿ ಸಂಭ್ರಮದ ಹನುಮಾನ್ ಓಕುಳಿ: ಕಂಬ ಹತ್ತುವುದೇ ಹಬ್ಬಕ್ಕೆ ಮೆರುಗು
ಚಿಕ್ಕೋಡಿ (ಬೆಳಗಾವಿ): ಆಧುನಿಕತೆ ಎಷ್ಟೇ ಬೆಳೆದರೂ ಇನ್ನೂ ಕೂಡ ಗ್ರಾಮೀಣ ಭಾಗದಲ್ಲಿ ಜಾತ್ರೆ ಹಬ್ಬ ಹರಿದಿನಗಳನ್ನು ಗ್ರಾಮಸ್ಥರು ಒಟ್ಟಾಗಿ ಸೇರಿ ಆಚರಿಸಿ ಸಂಭ್ರಮಿಸುವ ಪದ್ಧತಿ ಇದೆ. ಇಂದು ಶಿರಹಟ್ಟಿ ಗ್ರಾಮದಲ್ಲಿ ಕಣ್ಮನ ಸೆಳೆಯುವ ಹನುಮಾನ್ ಓಕುಳಿ ನಡೆಯಿತು. ಗ್ರಾಮಸ್ಥರೆಲ್ಲ ಸೇರಿ ಆಚರಿಸಿ ಖುಷಿಪಟ್ಟರು. ಒಂದೆಡೆ ಡಿಜೆ ಶಬ್ದಕ್ಕೆ ಹೆಜ್ಜೆ ಹಾಕುತ್ತಿರುವ ಯುವಕರಾದರೆ, ಮತ್ತೊಂದೆಡೆ ಗ್ರಾಮದ ಹಿರಿಯರು ಓಕುಳಿ ಕಂಬಕ್ಕೆ ಪೂಜೆ ಸಲ್ಲಿಸುತ್ತಿರುವ ದೃಶ್ಯ ಕಂಡುಬಂತು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ …
Read More »ಕರುನಾಡಿನಲ್ಲೂ ವಿವಾದಾತ್ಮಕ ಸ್ಟೇಟಸ್ ಪೋಸ್ಟ್: ನಿಪ್ಪಾಣಿಯಲ್ಲಿ ಪ್ರಕರಣ ದಾಖಲು
ಚಿಕ್ಕೋಡಿ : ಕೋಮು ಗಲಭೆಗೆ ಕಾರಣವಾದ ಸ್ಟೇಟಸ್ವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಭಾರಿ ವಿವಾದ ಸೃಷ್ಟಿಯಾಗಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ನಗರ ಈಗ ಶಾಂತ ಸ್ಥಿತಿಗೆ ಬರುವಷ್ಟರಲ್ಲಿಯೇ ಆ ವಿವಾದ ಕರ್ನಾಟಕದ ನೆಲಕ್ಕೂ ಕಾಲಿಟ್ಟಿದೆ. ಸದ್ಯಕ್ಕೆ ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದೆ. ನಿಪ್ಪಾಣಿ ನಗರದ ಬಾಲಕನೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ಸ್ಟೇಟಸ್ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ನಿಪ್ಪಾಣಿ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. …
Read More »ಜಾಮೀನು ಕೋರಿ ಮುರುಘಾ ಶರಣರಿಂದ ಹೈಕೋರ್ಟ್ಗೆ ಅರ್ಜಿ
ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಸ್ವರೂಪದ ಪ್ರಕರಣದಲ್ಲಿ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ನಿಯಮಿತ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಮುರುಘಾ ಶರಣರ ಪರವಾಗಿ ವಕೀಲ ಸಂದೀಪ್ ಪಾಟೀಲ್ ಬುಧವಾರ ಅರ್ಜಿ ದಾಖಲಿಸಿದರು. ಶರಣರು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕಿಯರು ಮೈಸೂರಿನ ನಜರ್ಬಾದ್ …
Read More »ಸಿಇಟಿ ಪರೀಕ್ಷೆ 2023: ಆರ್ಡಿ ಸಂಖ್ಯೆ ತಿದ್ದುಪಡಿಗೆ ಮತ್ತೊಂದು ಅವಕಾಶ
ಬೆಂಗಳೂರು : ಸಿಇಟಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಆನ್ಲೈನ್ ಅರ್ಜಿಯಲ್ಲಿ ನಮೂದಿಸಿರುವ ಜಾತಿ/ಆದಾಯ/ಕಲ್ಯಾಣ ಕರ್ನಾಟಕ ಪ್ರಮಾಣ ಪತ್ರಗಳ ಆರ್ಡಿ ಸಂಖ್ಯೆಯನ್ನು ಕಂದಾಯ ಇಲಾಖೆಯ ಆರ್.ಡಿ ಸಂಖ್ಯೆ ಜೊತೆ ನಮೂದಿಸುವ ಪ್ರಕ್ರಿಯೆ ಈಗ ನಡೆಯುತ್ತಿದೆ. ಆದರೆ, ಸಾವಿರಾರು ಅಭ್ಯರ್ಥಿಗಳ ಈ ಸಂಖ್ಯೆಗಳು ನಾನಾ ಕಾರಣಗಳಿಗಾಗಿ ತಾಳೆಯಾಗದೆ ಇರುವ ಹಿನ್ನೆಲೆಯಲ್ಲಿ ಸೂಕ್ತ ತಿದ್ದುಪಡಿಗೆ ಜೂನ್ 7ರ ಸಂಜೆ 4 ಗಂಟೆಯಿಂದ ಜೂನ್ 12ರ ಬೆಳಿಗ್ಗೆ 11 ಗಂಟೆಯವರೆಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಈ …
Read More »ಹಾವೇರಿಯಲ್ಲಿ ಪತ್ನಿ ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಪತಿ
ಹಾವೇರಿ: ಅವರಿಬ್ಬರದು ನಲವತ್ತು ವರ್ಷಗಳ ದಾಂಪತ್ಯ. ಆದರೆ, ಈ ದಾಂಪತ್ಯದಲ್ಲಿ ಅನುಮಾನ ಎಂಬ ಪಿಶಾಚಿ ಮನೆ ಮಾಡಿತ್ತು. ನಿರಂತರವಾಗಿ ಪತಿ ಮತ್ತು ಪತ್ನಿಯ ನಡುವೆ ಜಗಳವಾಗುತ್ತಿತ್ತು. ಅನೇಕ ಬಾರಿ ರಾಜಿ ಮಾಡಿಸುತ್ತಿದ್ದ ಗ್ರಾಮಸ್ಥರು, ಅವರಿಬ್ಬರ ಜಗಳ ಕಂಡು ಬೇಸತ್ತು ಹೋಗಿದ್ದರು. ಮಂಗಳವಾರ ಸಂಜೆ ಗಂಡ, ಹೆಂಡ್ತಿ ನಡುವೆ ಮತ್ತೆ ಜಗಳ ನಡೆದಿದೆ. ಪ್ರಕರಣ ಹಾವೇರಿ ಗ್ರಾಮಾಂತರ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಇಬ್ಬರಿಗೂ ಬುದ್ಧಿ ಮಾತು ಹೇಳಿದ ಅಧಿಕಾರಿಗಳು ರಾಜಿ ಮಾಡಿಸಿ ಕಳುಹಿಸಿದ್ದರು. …
Read More »ಅಕ್ರಮ ಡಿನೋಟಿಫಿಕೇಷನ್: ಬಿಎಸ್ವೈ ವಿರುದ್ಧದ ಎಫ್ಐಆರ್ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು : ಬೆಂಗಳೂರಿನ ಹಳಗೇವಡೇರನಹಳ್ಳಿಯಲ್ಲಿ 2.5 ಎಕರೆ ಭೂಮಿ ಡಿನೋಟಿಫೈ ಮಾಡಿದ್ದ ಕುರಿತು ಮಹಾಲೇಖಪಾಲರು ಮತ್ತು ಲೆಕ್ಕಪರಿಶೋಧಕರ (ಸಿಎಜಿ) ವರದಿ ಆಧರಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ವಜಾ ಮಾಡಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಪುರಸ್ಕರಿಸಿದೆ. ಸಿಎಜಿ …
Read More »ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ: ತನಿಖೆಗೆ ಆದೇಶ
ಬೆಂಗಳೂರು : ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ನಡೆದಿದ್ದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ. ಕಳೆದ ವರ್ಷ ಜುಲೈ 23 ಮತ್ತು 24 ರಂದು ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರ, ಅಕ್ರಮ ನಡೆದಿರುವ ಕುರಿತು ವ್ಯಾಪಕ ದೂರುಗಳು ಕೇಳಿ ಬಂದಿದ್ದವು. ಈ ಕುರಿತು ಸಲ್ಲಿಸಿದ್ದ …
Read More »ಪರಿಷತ್ ಚುನಾವಣೆ: 3 ಸ್ಥಾನಗಳಲ್ಲೂ ಕಾಂಗ್ರೆಸ್ಗೆ ಜಯ, ಬಿಜೆಪಿಗೆ ಶೂನ್ಯ ಸಾಧ್ಯತೆ
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ತಿನ ಮೂರg ಸ್ಥಾನಗಳಿಗೆ ಈ ತಿಂಗಳ ಅಂತ್ಯದಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಎಲ್ಲ ಮೂರು ಸ್ಥಾನಗಳನ್ನು ಗೆದ್ದುಕೊಳ್ಳಲಿದೆ. ಉಪ ಚುನಾವಣೆಗೆ ಪ್ರತ್ಯೇಕ ಚುನಾವಣೆ ಅಧಿಸೂಚನೆ ಹೊರಡಿಸುವುದರಿಂದ ವಿಧಾನಸಭೆಯಲ್ಲಿ ಅತಿಹೆಚ್ಚಿನ ಶಾಸಕರ ಬಲ ಹೊಂದಿರುವ ಆಡಳಿತ ಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳೇ ಜಯಗಳಿಸುವುದು ನಿಶ್ಚಿತವಾಗಿದೆ. ಉಪ ಚುನಾವಣೆಗೆ ಚುನಾವಣೆ ಅಧಿಕಾರಿಗಳು ಪ್ರತ್ಯೇಕ ಅಧಿಸೂಚನೆ ಹೊರಡಿಸುವುದರಿಂದ ಹಾಗೂ ಚುನಾವಣೆಯು ರಾಜೀನಾಮೆ ನೀಡಿರುವ ಸದಸ್ಯರ ಬಾಕಿ ಇರುವ ಅವಧಿಗೆ ನಡೆಯುವುದರಿಂದ ಹೆಚ್ಚಿನ …
Read More »