Breaking News

ಗೋಹತ್ಯೆ ನಿಷೇಧ ಅಷ್ಟೇ ಅಲ್ಲ, ಯಾವುದೇ ಪ್ರಾಣಿಯ ಹತ್ಯೆಯನ್ನು ನಾನು ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಸದ್ಯ ಕಾಂಗ್ರೆಸ್​ ಸರ್ಕಾರದ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಸಂಪುಟ ಸಚಿವರು ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಗೋಹತ್ಯೆ ನಿಷೇಧ ಕಾನೂನು ಮತ್ತು ಇತರೆ ಕಾಯ್ದೆಗಳನ್ನು ಪರಿಶೀಲಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಸರ್ಕಾರದ ಈ ನಿಲುವನ್ನು ವಿರೋಧಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ಸಹ ಹಮ್ಮಿಕೊಂಡಿದೆ. ಈ ಮಧ್ಯೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಅವರು, ಈ ಕುರಿತಂತೆ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಾನು ಮಹಿಳೆಯಾಗಿ ಹೇಳುತ್ತೇನೆ. ಗೋಹತ್ಯೆ …

Read More »

ಹಳೆಯ ರಾಜಕೀಯ ದ್ವೇಷವನ್ನು ಇಟ್ಟುಕೊಂಡು ಕಾಗವಾಡ ಶಾಸಕ ರಾಜು ಕಾಗೆ ಅವರು ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ

ಚಿಕ್ಕೋಡಿ: ಹಳೆಯ ರಾಜಕೀಯ ದ್ವೇಷವನ್ನು ಇಟ್ಟುಕೊಂಡು ಕಾಗವಾಡ ಶಾಸಕ ರಾಜು ಕಾಗೆ ಅವರು ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ರೂಪಿಸಿ ನಮಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಮಾಡಲಾದ ಆರೋಪವನ್ನ ಶಾಸಕ ರಾಜು ಕಾಗೆ ತಳ್ಳಿ ಹಾಕಿದ್ದಾರೆ. ತಮ್ಮ ವಿರುದ್ಧದ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಕಾಗೆ, ”ನನ್ನ ವಿರುದ್ಧ ಅವರೇ ರಾಜಕೀಯ ಷಡ್ಯಂತ್ರ ರೂಪಿಸಿ ತಮ್ಮ ಮಾನ ಕಳೆಯುವ ಕೆಲಸ ಮಾಡುತ್ತಿದ್ದಾರೆ. ಅವರು ನನ್ನ ಹಳೆಯ ಸ್ನೇಹಿತ. …

Read More »

ಪಾಠ ನಡೆಯುತ್ತಿದ್ದ ಸಂದರ್ಭದಲ್ಲೇ ಶಾಲಾ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ

ಬಳ್ಳಾರಿ: ಪಾಠ ನಡೆಯುತ್ತಿದ್ದ ಸಂದರ್ಭದಲ್ಲೇ ಶಾಲಾ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದಲ್ಲಿರುವ ಸುದೀಕ್ಷಾ ಇಂಟರ್​ ನ್ಯಾಷನಲ್ ಸ್ಕೂಲ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪವರ್ ಕಟ್ ಆಗಿ ಜನರೇಟರ್​ ಆನ್ ಮಾಡಿದಾಗ ಜನರೇಟರ್ ರೂಮ್ ಹಾಗೂ ಮತ್ತೊಂದು ರೂಮ್​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಶಾಲೆಯಲ್ಲಿದ್ದ 150 ವಿದ್ಯಾರ್ಥಿಗಳನ್ನು ಶಾಲಾ ಸಿಬ್ಬಂದಿ ರಕ್ಷಿಸಿದ್ದಾರೆ. ಶಾಲೆಯಲ್ಲಿ ಪಾಠ ನಡೆಯುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ವಿದ್ಯುತ್ ಸ್ಥಗಿತ ಕೊಂಡಿತ್ತು. ಈ …

Read More »

ರಸ್ತೆ ಅಪಘಾತ : ಉರುಸ್‌ಗೆ ಹೊರಟಿದ್ದ ಐದು ಜನರು ಸ್ಥಳದಲ್ಲೇ ಸಾವು ; 13 ಜನರಿಗೆ ಗಾಯ.!

ಯಾದಗಿರಿ : ಯಾದಗಿರಿ ತಾಲೂಕಿನ ಚಕ್ರ ಗ್ರಾಮದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 150(a)ರಲ್ಲಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಲಾರಿಗೆ ಕ್ರೂಸರ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ನಡೆದಿರುವ ಬಗ್ಗೆ ತಿಳಿದು ಬಂದಿದೆ. ಈ ದುರ್ಘಟನೆಯಲ್ಲಿ ಮೂರು ಜನ ಗಂಡು ಮಕ್ಕಳು ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದು, ಒಟ್ಟಾರೆ 13 ಜನರಿಗೆ ಗಾಯವಾಗಿದೆ ಎಂದು ಹೇಳಲಾಗುತ್ತಿದೆ. ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಿಂದ ಕ್ರೂಸರ್​ ವಾಹನವು ಗುಲ್ಬರ್ಗಾ ಕಡೆಗೆ ತೆರಳುತ್ತಿತ್ತು. ವಾಹನದಲ್ಲಿ …

Read More »

40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ರೌಡಿಶೀಟರ್​ ಬರ್ಬರ ಕೊಲೆ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸಹಚರರ ಕೃತ್ಯ

ಬೆಂಗಳೂರು: ನಗರದ ಮಹದೇವಪುರದಲ್ಲಿ ಮೇ 25ರಂದು ಬರ್ಬರವಾಗಿ ಕೊಲೆಯಾದ ರೌಡಿಶೀಟರ್ ರೇಣುಕುಮಾರ್ ಹತ್ಯೆಯ ದೃಶ್ಯ ವೈರಲ್​ ಆಗುತ್ತಿದೆ(Murder). ಸಿಸಿಟಿವಿಯಲ್ಲಿ ರೆಕಾರ್ಡ್​ ಆದ ಹತ್ಯೆಯ ದೃಶ್ಯಗಳು ಎಂತವರನ್ನೂ ಬೆಚ್ಚಿಬೀಳಿಸುವಂತಿವೆ. ರೇಣುಕುಮಾರ್(​Rowdy Sheeter Renukumar)  ಸಹಚರರಾದ ಶ್ರೀಕಾಂತ್ ಹಾಗೂ ಪ್ರಶಾಂತ್ ಇಬ್ಬರು ಸೇರಿಕೊಂಡು ಹತ್ಯೆ ಮಾಡಿದ್ದರು. 40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ರೌಡಿಶೀಟರ್​ ಬರ್ಬರ ಕೊಲೆ ಮಾಡಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಧಮ್ಕಿ ಹಾಕಿದ ಎಂಬ ಕಾರಣಕ್ಕೆ ಕೊಲೆ ಈ ಹಿಂದೆ ಜೈಲಿನಿಂದ …

Read More »

ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಜೂನ್ 11ರಿಂದ ಜಾರಿ: ಸರ್ಕಾರದ ಗೈಡ್​ಲೈನ್ಸ್​​ ಏನು?

ಬೆಂಗಳೂರು: ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್​ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸುವ ‘ಶಕ್ತಿ ಯೋಜನೆ’ ಯನ್ನು ಜಾರಿಗೊಳಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ಅಡಿ ರಾಜ್ಯದ ಎಲ್ಲಾ ಮಹಿಳೆಯರು ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕರಾರಸಾ ನಿಗಮ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾಕರಸಾ …

Read More »

ಕಲುಷಿತ ನೀರು ಸೇವಿಸಿ ವೃದ್ಧೆ ಸಾವು: 15 ಜನ ಅಸ್ವಸ್ಥ

ಗಂಗಾವತಿ: ಕಲುಷಿತ ನೀರು ಸೇವಿಸಿ ವೃದ್ಧೆಯೊಬ್ಬರು ಸಾವನ್ನಪ್ಪಿ ಹದಿನೈದಕ್ಕೂ ಹೆಚ್ಚು ಜನರ ಆರೋಗ್ಯದಲ್ಲಿ ಏರುಪೇರಾದ ಘಟನೆ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ನಡೆದಿದೆ. ಹೊನ್ನಮ್ಮ ಶಿವಪ್ಪ (65) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಸುಮಾರು ಹದಿನೈದಕ್ಕೂ ಹೆಚ್ಚು ಜನ ಕನಕಗಿರಿ, ಗಂಗಾವತಿಯ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತೀವ್ರ ಅಸ್ವಸ್ಥಗೊಂಡಿದ್ದ ಮಹಿಳೆ ಹೊನ್ನಮ್ಮ ಅವರನ್ನು …

Read More »

ಬಾಡಿಗೆದಾರರಿಗೂ 200 ಯೂನಿಟ್​ ವಿದ್ಯುತ್​ ಉಚಿತ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿನ ಬಾಡಿಗೆ ಮನೆಗಳಲ್ಲಿ ವಾಸಿಸುವವರೂ ಸೇರಿದಂತೆ ಎಲ್ಲ ಗೃಹಬಳಕೆದಾರರಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು. ಕಾಂಗ್ರೆಸ್​ ಸರ್ಕಾರ ಘೋಷಿಸಿರುವ ಉಚಿತ ವಿದ್ಯುತ್​ ನೀಡುವ ಗೃಹಜ್ಯೋತಿ ಯೋಜನೆಯಿಂದ ಬಾಡಿಗೆದಾರರು ವಂಚಿತರಾಗಲಿದ್ದಾರೆ ಎಂಬ ಆಪಾದನೆ ಕೇಳಿ ಬಂದ ಹಿನ್ನೆಲೆ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದ್ದಾರೆ. ಬಾಡಿಗೆದಾರರೂ ಸೇರಿದಂತೆ ಗೃಹಬಳಕೆಯ ಎಲ್ಲರಿಗೂ ಗೃಹಜ್ಯೋತಿ ಯೋಜನೆಯ ಲಾಭ ಸಿಗಲಿದೆ. ಸರ್ಕಾರ ಘೋಷಿಸಿದಂತೆ 200 ಯೂನಿಟ್​ವರೆಗೆ ಬಾಡಿಗೆದಾರರೂ ಬಿಲ್​ ಪಾವತಿ …

Read More »

ಅಖಂಡ ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗ ಮಾಡಿರುವುದು ಅತ್ಯಂತ ನೋವು ತಂದಿದೆ.:ಸಚಿವ ಬಿ ನಾಗೇಂದ್ರ

ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗ ಮಾಡಿರುವುದು ಅತ್ಯಂತ ನೋವು ತಂದಿದೆ. ವಿಜಯನಗರ ಜಿಲ್ಲೆಯ ಜನಪ್ರತಿನಿಧಿಗಳು ಮತ್ತೆ ಒಂದು ಮಾಡೋಕೆ ಒಪ್ಪಿದರೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಯುವಜನ ಸೇವಾ, ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರು ಹೇಳಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಈ ಕುರಿತು ಮಾತನಾಡಿದ ಅವರು, ವಿಶ್ವ ಪ್ರಸಿದ್ಧ ಹಂಪಿ, ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಸೇರಿದಂತೆ ಇತರ ಪ್ರೇಕ್ಷಣೀಯ ಸ್ಥಳಗಳು ನಮ್ಮ ಜಿಲ್ಲೆಯಿಂದ …

Read More »

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ತಾಂತ್ರಿಕ ಸ್ಪರ್ಶ: ಕ್ಷಣಾರ್ಧದಲ್ಲಿಯೇ ಆರೋಗ್ಯ ತಪಾಸಣೆ ವರದಿ ಆನ್​ಲೈನ್​ನಲ್ಲಿ ಲಭ್ಯ..

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆ ಉತ್ತರ ಕರ್ನಾಟಕದ ಅತೀ ದೊಡ್ಡ ಸರ್ಕಾರಿ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.‌ ನಿತ್ಯ ಹತ್ತಕ್ಕೂ ಹೆಚ್ಚು ಜಿಲ್ಲೆಗಳ ಸಾವಿರಾರು ರೋಗಿಗಳು ಇಲ್ಲಿಗೆ ಬರುತ್ತಾರೆ. ಹೀಗೆ ಬರುವ ರೋಗಿಗಳು ಗಂಟೆಗಟ್ಟಲೆ ಕಾಯಲೇ ಬೇಕಾಗುತ್ತಿತ್ತು. ಆದರೆ ಇದೀಗ ಎಕ್ಸರೇ, ಸ್ಕ್ಯಾನಿಂಗ್ ಹಾಗೂ ರಕ್ತ ತಪಾಸಣೆ ರಿಪೋರ್ಟ್ ಅನ್ನು ಆನ್‌ಲೈನ್‌ನಲ್ಲೇ ನೀಡುವ ಹೊಸ ತಂತ್ರಜ್ಞಾನ ಅಳವಡಿಸಿಕೊಂಡಿರುವ ವಿಚಾರವು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಂಡ ಕಿಮ್ಸ್: ಕರ್ನಾಟಕ ವಿಜ್ಞಾನ ಮತ್ತು ವೈದ್ಯಕೀಯ …

Read More »