ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿನ ಅಕ್ರಮಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳದಿದ್ದರೆ ಎಸ್ಪಿ, ಡಿಸಿಪಿ‌ಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದ ಸಿಎಂ

ಬೆಂಗಳೂರು: ರಾಜ್ಯದ ಆಯಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ನಡೆಯುತ್ತಿದ್ದರೆ, ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದರೆ ಎಸ್ಪಿ ಅಥವಾ ಡಿಸಿಪಿ‌ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿಂದು ಐಪಿಎಸ್ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು.‌ ಇದಕ್ಕೂ ಮೊದಲು ವಾಹನ ಕಳುವಾದರೆ ಆನ್ ಲೈನ್‌ನಲ್ಲಿ ದೂರು ನೀಡಲು ಇ-ಎಫ್‌ಐಆರ್ ಹಾಗೂ ದಂಡ …

Read More »

ಅಧಿಕಾರಿಗಳು ಫೀಲ್ಡ್‌ಗೆ ಬಂದು ಸರ್ವೆ ಮಾಡಿಲ್ಲ ಎಂದು ರೈತರು ಆರೋಪ,ನಮ್ಮ ತಾಲೂಕುಗಳನ್ನೂ ‘ಬರಪೀಡಿತ’ ಎಂದು ಘೋಷಿಸಿ

ಧಾರವಾಡ: ರಾಜ್ಯದಲ್ಲಿ ಬರದ ಛಾಯೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬರಪೀಡಿತ ತಾಲೂಕುಗಳನ್ನು ಘೋಷಿಸಿದ್ದು, ಇದರಿಂದ ಹೊರಗುಳಿದ ಜಿಲ್ಲೆಯ ಕೆಲ ತಾಲೂಕುಗಳ ರೈತರು ಆಕ್ರೋಶಗೊಂಡಿದ್ದಾರೆ.   ಸರ್ಕಾರ ತೀವ್ರ ಮತ್ತು ಸಾಧಾರಣ ಬರ ತಾಲೂಕುಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಜಿಲ್ಲೆಯ ಮೂರು ತಾಲೂಕುಗಳು ಹೊರಗುಳಿದಿವೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪ್ರತಿನಿಧಿಸುವ ಕಲಘಟಗಿ, ಅಳ್ನಾವರವನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಹೊರಗಿಡಲಾಗಿದೆ. ಇನ್ನು ನವಲಗುಂದ ವಿಧಾನಸಭಾ ವ್ಯಾಪ್ತಿಯ ಅಣ್ಣಿಗೇರಿ ತಾಲೂಕು ಕೂಡ …

Read More »

ಕಾವೇರಿ ವಿಚಾರ, ರಾಜ್ಯದ ಹಿತಾಸಕ್ತಿಯ ವಿಚಾರಗಳಿಗೆ ಪ್ರಧಾನಿ ಮೋದಿಯವರ ಎದುರು ನಿಂತು ಮಾತನಾಡುವ ಧೈರ್ಯ ರಾಜ್ಯ ಬಿಜೆಪಿ ನಾಯಕರಿಗಿಲ್ಲ

ಬೆಂಗಳೂರು : ಕಾವೇರಿ ವಿಚಾರ, ರಾಜ್ಯದ ಹಿತಾಸಕ್ತಿಯ ವಿಚಾರಗಳಿಗೆ ಪ್ರಧಾನಿ ಮೋದಿಯವರ ಎದುರು ನಿಂತು ಮಾತನಾಡುವ ಧೈರ್ಯ ರಾಜ್ಯ ಬಿಜೆಪಿ ನಾಯಕರಿಗಿಲ್ಲ. ಕರ್ನಾಟಕಕ್ಕೆ ತೊಂದರೆ ಆಗಿರುವುದೇ ಇಂತಹ ನಾಯಕರಿಂದ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಕುಮಾರಕೃಪಾ ಅತಿಥಿಗೃಹದ ಬಳಿ ಇಂದು ಮಾತನಾಡಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸುತ್ತಾ, ಕೇಂದ್ರ ಪರಿಸರ ಇಲಾಖೆಯಿಂದ ಅನೇಕ ಕಾಮಗಾರಿಗೆ ನಿರಾಕ್ಷೇಪಣಾ ಪತ್ರ ತರಲು …

Read More »

ನಲವತ್ತು ವರ್ಷಗಳಿಂದ ಬಿಡಾಡಿ ದನಗಳನ್ನು ತಂದು ಪೋಷಿಸುತ್ತಿದ್ದಾರೆ. ಜಾನುವಾರು ಪೋಷಣೆಗೆ ಬದುಕನ್ನೇ ಮುಡಿಪಾಗಿಟ್ಟ ವೈದ್ಯ ದಂಪತಿ

ದಾವಣಗೆರೆ : ಬಸನಗೌಡ ಕುಸುಗೂರು ಮತ್ತು ವಿಜಯಲಕ್ಷ್ಮಿ ಬಿ.ಕುಸುಗೂರು ವೃತ್ತಿಯಲ್ಲಿ ವೈದ್ಯ ದಂಪತಿ. ವೃತ್ತಿ ಜೀವನದಲ್ಲಿ ಬಿಡುವು ಮಾಡಿಕೊಂಡು ತಮ್ಮ ಕೈಲಾದಷ್ಟು ಸಮಾಜಸೇವೆ ಮಾಡುತ್ತಿದ್ದಾರೆ. ಕಳೆದ ನಲವತ್ತು ವರ್ಷಗಳಿಂದ ಬಿಡಾಡಿ ದನಗಳನ್ನು ತಂದು ಪೋಷಣೆ ಮಾಡುತ್ತಿದ್ದಾರೆ. ಹೀಗೆ ಪೋಷಿಸಿದ ಜಾನುವಾರುಗಳನ್ನು ಬಡ ರೈತರಿಗೆ ಉಚಿತವಾಗಿ ಉಳುಮೆಗೆ ಕೊಡುತ್ತಿದ್ದಾರೆ. ಚನ್ನಗಿರಿ ತಾಲೂಕಿನ ಬಸವಪಟ್ಟಣ ಎಂಬ ಪುಟ್ಟ ಗ್ರಾಮದಲ್ಲಿ ಇವರು ಕುಸುಗೂರು ಡಾಕ್ಟರ್ ಎಂದೇ ಪರಿಚಿತರು. ದಶಕಗಳಿಂದ ವೈದ್ಯ ವೃತ್ತಿ ಮಾಡುತ್ತಾ ಅದರೊಂದಿಗೆ ಜಾನುವಾರುಗಳ …

Read More »

ಬಾಂಗ್ಲಾ ವಿರುದ್ಧ ಸೋಲು ಕಂಡ ಭಾರತ…

ಕೊಲಂಬೊ (ಶ್ರೀಲಂಕಾ): ಯುವ ಆಟಗಾರ ಶುಭಮನ್​ ಗಿಲ್​ ಶತಕದ ಹೊರತಾಗಿಯೂ ಭಾರತ ತಂಡ ಬಾಂಗ್ಲಾದೇಶ ವಿರುದ್ದದ ಪಂದ್ಯದಲ್ಲಿ ಮುಗ್ಗಿಸಿದೆ. ಪ್ರಿನ್ಸ್​ ಗಿಲ್​ ಶತಕವು ತಂಡದ ಜಯಕ್ಕೆ ಕೊಡುಗೆ ಆಗಲಿಲ್ಲ, ಅವರ ಆಟ ವ್ಯರ್ಥ ಪ್ರಯತ್ನದಂತಾಯಿತು. ಭಾರತ 49.5 ಓವರ್​ಗೆ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು 259 ರನ್​ ಗಳಿಸಲಷ್ಟೇ ಶಕ್ತವಾಯಿತು. ಇದರಿಂದ ಬಾಂಗ್ಲಾ ಆರು ರನ್​ಗಳ​ ಗೆಲುವು ದಾಖಲಿಸಿತು. ಏಷ್ಯಾ ಕಪ್​ ಟೂರ್ನಿಯ ಆರನೇ ಸೂಪರ್​ 4 ಪಂದ್ಯದಲ್ಲಿ ಐದು ಬದಲಾವಣೆಗಳೊಂದಿಗೆ ಮೈದಾನಕ್ಕಿಳಿದ …

Read More »

5 ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್​ ಭರ್ಜರಿ ತಯಾರಿ.

ಹೈದರಾಬಾದ್​: 2024 ರ ಲೋಕಸಭಾ ಚುನಾವಣೆ ಸಮರಕ್ಕೆ ಕಾಂಗ್ರೆಸ್​ ಸಿದ್ಧವಾಗಿದೆ. ನಿರ್ಣಾಯಕ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಸಿದ್ಧತೆಗಳನ್ನು ಭರ್ಜರಿಯಾಗೇ ಆರಂಭಿಸಿದೆ. ಪ್ರಸ್ತುತ ಆರ್ಥಿಕ ಮತ್ತು ರಾಜಕೀಯ ಸಮಸ್ಯೆಗಳು ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​​​​​​​​​ಗೆ ಮರು ಚೇತರಿಕೆ. ಮೈತ್ರಿಗಳೊಂದಿಗೆ ಸಮನ್ವಯ, ಇಂಡಿಯಾ ಒಕ್ಕೂಟದ ಬಲಪಡಿಸುವಿಕೆ ಸೇರಿದಂತೆ ಹಲವು ಮಹತ್ವದ ಅಂಶಗಳ ಬಗ್ಗೆ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸದಸ್ಯರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರ ನೇತೃತ್ವದಲ್ಲಿ, ಕಾಂಗ್ರೆಸ್​ ವರಿಷ್ಠೆ ಸೋನಿಯಾ ಗಾಂಧಿ …

Read More »

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಇಂದು ಭಾರತ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮ

ಬೆಂಗಳೂರು : ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ಯ ಅಂಗವಾಗಿ ಇಂದು ಬೆಳಗ್ಗೆ 10:00 ಗಂಟೆಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ, ಬಾಂಕ್ವೆಟ್ ಹಾಲ್‌ನಲ್ಲಿ ಭಾರತ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತ ಸಂವಿಧಾನದ ಪೀಠಿಕೆಯನ್ನು ಏಕಕಾಲದಲ್ಲಿ ಓದುವ ಕಾರ್ಯಕ್ರಮದಲ್ಲಿ ಅಧಿಕಾರಿ, ಸಿಬ್ಬಂದಿ ಹಾಜರಾಗಬೇಕೆಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಮಾಜ ಕಲ್ಯಾಣ ಸಚಿವರ ನೇತೃತ್ವದಲ್ಲಿ ಬಾಂಕ್ವೆಟ್ ಹಾಲ್‌ನಲ್ಲಿ ಭಾರತ …

Read More »

ಕಾಂತಾರ 2′ ಚಿತ್ರಕ್ಕಾಗಿ 11 ಕೆ.ಜಿ ತೂಕ ಇಳಿಸಿಕೊಂಡ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ

ಬಹುನಿರೀಕ್ಷೆಯ ಕಾಂತಾರ 2 ಸಿನಿಮಾಗಾಗಿ ಡಿವೈನ್ ಸ್ಟಾರ್ ಖ್ಯಾತಿಯ ರಿಷಬ್​ ಶೆಟ್ಟಿ ಸುಮಾರು 11 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ. ಭಾರತೀಯ ಚಿತ್ರರಂಗ ಮಾತ್ರವಲ್ಲದೇ ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ಚಿತ್ರ ‘ಕಾಂತಾರ’. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಈ ಸಿನಿಮಾ ಕಳೆದ ವರ್ಷ ತೆರೆಕಂಡು ಬ್ಲಾಕ್‌ ಬಸ್ಟರ್ ಹಿಟ್ ಆಗಿ, ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸಿತ್ತು. ಕರಾವಳಿ ಭಾಗದ ದೈವಾರಾಧನೆ ಕಥೆ ಹೊಂದಿರುವ …

Read More »

ಬಿಜೆಪಿ-ಜೆಡಿಎಸ್‌ ಮೈತ್ರಿ ನೂರಕ್ಕೆ ನೂರರಷ್ಟು ನಡೆಯುತ್ತದೆ: ಜಿ.ಟಿ.ದೇವೇಗೌಡ

ಬೆಂಗಳೂರು : ಬಿಜೆಪಿ-ಜೆಡಿಎಸ್‌ ಮೈತ್ರಿ ನೂರಕ್ಕೆ ನೂರರಷ್ಟು ಆಗುತ್ತದೆ. ಕ್ಷೇತ್ರ ಹಂಚಿಕೆ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ ಎಂದು ಮಾಜಿ ಸಚಿವ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗು ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಮೈತ್ರಿ ಆಗಲಿದೆ. ಆದರೆ ಕ್ಷೇತ್ರ ಹಂಚಿಕೆ …

Read More »

ಉಪ್ಪಿ ಮನವಿ ಈ ವರ್ಷದ ಗಣೇಶ ಹಬ್ಬದಂದು ರಿಯಲ್​ ಸ್ಟಾರ್​ ಉಪೇಂದ್ರ ಅಭಿಮಾನಿಗಳಿಗೆ ಡಬಲ್​ ಖುಷಿ. ಒಂದೆಡೆ ಇಡೀ ದೇಶವೇ ಗಣೇಶ ಚತುರ್ಥಿಯ ಸಂಭ್ರಮದಲ್ಲಿ ಮುಳುಗಿದ್ರೆ, ಈ ಕಡೆ ಉಪ್ಪಿಗೆ ಹುಟ್ಟುಹಬ್ಬದ ಸಂಭ್ರಮ. ಅದರ ಜೊತೆಗೆ ಎಂಟು ವರ್ಷಗಳ ಬಳಿಕ ಆಯಕ್ಷನ್ ಕಟ್​ ಹೇಳಿರುವ ಯುಐ ಸಿನಿಮಾದ ಟೀಸರ್​ ಲಾಂಚ್​ ಕಾರ್ಯಕ್ರಮವಿದೆ. ಹೀಗಾಗಿ ಉಪ್ಪಿ ಸೆಪ್ಟೆಂಬರ್​ 18ರಂದು ಫುಲ್​ ಬ್ಯುಸಿಯಾಗಿರುತ್ತಾರೆ. ​ಈ ಕಾರಣಕ್ಕಾಗಿ ಅವರು ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಬರ್ತ್​ಡೇ ದಿನ ಮನೆಯಲ್ಲಿ ಸಿಗಲ್ಲ ಉಪ್ಪಿ!: “ಎಲ್ಲಾ ಅಭಿಮಾನಿ ದೇವರುಗಳಿಗೆ ನಮಸ್ಕಾರ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಸೆಪ್ಟೆಂಬರ್​ 18 ಈ ವರ್ಷ ಬಾರಿ ವಿಶೇಷ. ಯಾಕಂದ್ರೆ ಗಣೇಶ ಚತುರ್ಥಿ ಹಬ್ಬ ಆ ದಿನಾನೇ. ಅಭಿಮಾನಿಗಳ ಹಬ್ಬನೂ ಅದೇ ದಿನ. ನಿಮ್ಮೆಲ್ಲರ ಬಹುನಿರೀಕ್ಷಿತ ‘ಯುಐ’ ಸಿನಿಮಾದ ಟೀಸರ್​ ಕೂಡ ಅಂದೇ ಲಾಂಚ್​ ಮಾಡುತ್ತಿದ್ದೇವೆ. ಈ ಪ್ರಯುಕ್ತ ನಾನು ತುಂಬಾ ಬ್ಯುಸಿ ಇರುತ್ತೇನೆ. ಸೆಪ್ಟೆಂಬರ್​ 17ರ ರಾತ್ರಿ ಅಥವಾ 18ರ ಬೆಳಗ್ಗೆ ಕತ್ರಿಗುಪ್ಪೆ ಹಾಗೂ ಸದಾಶಿವನಗರದ ಮನೆಯಲ್ಲಿ ಸಿಗುವುದಿಲ್ಲ. ನನಗೆ ತುಂಬಾ ಕೆಲಸಗಳಿರುವುದರಿಂದ ಸೆಪ್ಟೆಂಬರ್​ 18ರಂದು ಮಧ್ಯಾಹ್ನ 2 ಗಂಟೆಯ ಮೇಲೆ ಊರ್ವಶಿ ಥಿಯೇಟರ್​ನಲ್ಲಿ ನಿಮಗಾಗಿ ಕಾಯುತ್ತಿರುತ್ತೇನೆ. ನೀವೆಲ್ಲರೂ ಅಲ್ಲೇ ಬನ್ನಿ. ಕೇಕ್​ ಕತ್ತರಿಸೋಣ. ಎಲ್ಲ ಸಂಭ್ರಮವನ್ನು ಆಚರಿಸೋಣ. 2 ಗಂಟೆಯಿಂದ 8 ಗಂಟೆಯವರೆಗೂ ಈ ಸಂಭ್ರಮಾಚರಣೆ ಇರುತ್ತದೆ. 6 ಗಂಟೆಯ ನಂತರ ಥಿಯೇಟರ್​ ಒಳಗಡೆ ‘ಯುಐ’ ಟೀಸರ್​ ಲಾಂಚ್ ಮಾಡುತ್ತೇವೆ. ಬನ್ನಿ, ಎಲ್ಲರೂ ಪಾಲ್ಗೊಳ್ಳೋಣ” ಎಂದು ರಿಯಲ್​ ಸ್ಟಾರ್​ ಉಪೇಂದ್ರ ವಿಡಿಯೋ ಮೂಲಕ ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ. ಪ್ಯಾನ್​​ ಇಂಡಿಯಾ ಮಟ್ಟದಲ್ಲಿ ನಿರ್ಮಾಣ ಆಗುತ್ತಿರುವ ಯುಐ ಚಿತ್ರದಲ್ಲಿ ನಟ ಉಪೇಂದ್ರ ನಟಿಸುವುದರ ಜೊತೆಗೆ ಆಯಕ್ಷನ್​ ಕಟ್​ ಕೂಡ ಹೇಳಿದ್ದಾರೆ. ಉಪ್ಪಿ 2 ಸಿನಿಮಾ ಬಳಿಕ ಉಪೇಂದ್ರ ಡೈರೆಕ್ಟರ್​ ಕ್ಯಾಪ್​ ತೊಟ್ಟ ಚಿತ್ರವಿದು. ಉಪ್ಪಿ 2 ಸಿನಿಮಾ 2015ರಲ್ಲಿ ತೆರೆಕಂಡಿತ್ತು. ಉಪೇಂದ್ರ ಅವರ ನಟನೆಗೆ ಮಾತ್ರವಲ್ಲ, ನಿರ್ದೇಶನ ಶೈಲಿಗೂ ಕೂಡ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಇವರು ನಟಿಸುವುದರ ಜೊತೆಗೆ ನಿರ್ದೇಶನ ಮಾಡಿರುವ ಯುಐ ಚಿತ್ರದ ಟೀಸರ್ ಸೆಪ್ಟಂಬರ್​ 18ರಂದು ಅವರ ಹುಟ್ಟುಹಬ್ಬದ ದಿನವೇ ಅನಾವರಣಗೊಳ್ಳಲು ತಯಾರಾಗಿದೆ. ಸದ್ಯ ಯುಐ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಎಡಿಟಿಂಗ್​ ಕೆಲಸ ನಡೆಯುತ್ತಿದೆ. ಉಪೇಂದ್ರ ಈ ಚಿತ್ರದಲ್ಲಿ 3ಡಿ ಬಾಡಿ ಸ್ಕ್ಯಾನ್​ ಬಳಸಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಕ್ಯಾಮರಾಗಳನ್ನು ಬಳಸಿ ಶೂಟ್​ ಮಾಡಲಾಗಿದ್ದು, ಈ ತಂತ್ರಜ್ಞಾನ ಬಳಸಿದ್ದು ಏಷ್ಯಾದಲ್ಲಿಯೇ ಮೊದಲ ಸಿನಿಮಾ ಎನ್ನಲಾಗಿದೆ. ಹೊಸ ತಂತ್ರಜ್ಞಾನವನ್ನು ಜೇಮ್ಸ್​ ಕ್ಯಾಮರಾನ್​ ‘ಅವತಾರ್​ 2’ ಸಿನಿಮಾಗೆ ಬಳಸಲಾಗಿತ್ತು. ಇಷ್ಟೇ ಅಲ್ಲ, ಸುಮಾರು 14 ಸಾವಿರ ವಿಎಫ್​ಎಕ್ಸ್​ ಶಾಟ್ಸ್​ ಅನ್ನು ಬಳಸಲಾಗಿದೆ. ಹಿಂದೆಂದೂ ಕನ್ನಡದಲ್ಲಿ ಈ ಟೆಕ್ನಾಲಜಿ ಬಳಸಿಲ್ಲ ಅನ್ನೋದು ಗಮನಾರ್ಹ. ಉಪ್ಪಿ ನಿರ್ದೇಶಿಸಿದ ಈವರೆಗಿನ ಸಿನಿಮಾಗಳಲ್ಲಿ ಇದು ದುಬಾರಿ ಎನ್ನಲಾಗಿದೆ. ಸಿನಿಮಾ ಬಜೆಟ್​ ಸುಮಾರು 100 ಕೋಟಿ ರೂಪಾಯಿ ಎಂದು ವರದಿಯಾಗಿದೆ. ಅಲ್ಲದೇ ತಾಂತ್ರಿಕವಾಗಿಯೂ ಈ ಚಿತ್ರ ಅಡ್ವಾನ್ಸ್​ ಆಗಿರುತ್ತೆ ಅನ್ನೋದು ಗೊತ್ತಾಗಿದೆ. ಮತ್ತೊಂದೆಡೆ ಯುಐ ಚಿತ್ರ ರಿಲೀಸ್​ ಯಾವಾಗ? ಅನ್ನೋ ಪ್ರಶ್ನೆ ಅಭಿಮಾನಿಗಳ ವಲಯದಲ್ಲಿದೆ. ನಿರ್ಮಾಪಕರ ಮೂಲಗಳ ಪ್ರಕಾರ, ಈ ಸಿನಿಮಾ ವರ್ಷದ ಕೊನೆಯಲ್ಲಿ ಬಿಡುಗಡೆಯಾಗಬಹುದು ಎನ್ನಲಾಗಿದೆ. ಸದ್ಯ ಕನ್ನಡ ಚಿತ್ರರಂಗದಲ್ಲಿ ನಿರ್ಮಾಣವಾಗುತ್ತಿರುವ ಹೈ ಬಜೆಟ್​ ಚಿತ್ರಗಳಲ್ಲಿ ಯುಐ ಕೂಡ ಒಂದು. ಹಲವಾರು ಸ್ಪೆಷಾಲಿಟಿಗಳಿಗೆ ಸೌತ್​ ಇಂಡಸ್ಟ್ರಿಯಲ್ಲಿ ಟಾಕ್​ ಆಗುತ್ತಿರುವ ಈ ಚಿತ್ರದ ಮೂಲಕ ಉಪ್ಪಿ ಪ್ರೇಕ್ಷಕರಿಗೆ ಏನು ಹೇಳಲು ಹೊರಟಿದ್ದಾರೆ ಅನ್ನೋದನ್ನು ಕಾದು ನೋಡಬೇಕು.

ಉಪ್ಪಿ ಮನವಿಈ ವರ್ಷದ ಗಣೇಶ ಹಬ್ಬದಂದು ರಿಯಲ್​ ಸ್ಟಾರ್​ ಉಪೇಂದ್ರ ಅಭಿಮಾನಿಗಳಿಗೆ ಡಬಲ್​ ಖುಷಿ. ಒಂದೆಡೆ ಇಡೀ ದೇಶವೇ ಗಣೇಶ ಚತುರ್ಥಿಯ ಸಂಭ್ರಮದಲ್ಲಿ ಮುಳುಗಿದ್ರೆ, ಈ ಕಡೆ ಉಪ್ಪಿಗೆ ಹುಟ್ಟುಹಬ್ಬದ ಸಂಭ್ರಮ. ಅದರ ಜೊತೆಗೆ ಎಂಟು ವರ್ಷಗಳ ಬಳಿಕ ಆಯಕ್ಷನ್ ಕಟ್​ ಹೇಳಿರುವ ಯುಐ ಸಿನಿಮಾದ ಟೀಸರ್​ ಲಾಂಚ್​ ಕಾರ್ಯಕ್ರಮವಿದೆ. ಹೀಗಾಗಿ ಉಪ್ಪಿ ಸೆಪ್ಟೆಂಬರ್​ 18ರಂದು ಫುಲ್​ ಬ್ಯುಸಿಯಾಗಿರುತ್ತಾರೆ. ​ಈ ಕಾರಣಕ್ಕಾಗಿ ಅವರು ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಬರ್ತ್​ಡೇ …

Read More »