ಮಚ್ಚೆ ಪಟ್ಟಣ ಪಂಚಾಯತ್ ಮುಂದೆ ರಾತೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಪ್ರತಿಷ್ಠಾಪನೆ ಮಾಡಲಾಗಿದೆ.ಬೆಳಗಾವಿ ಜಿಲ್ಲೆ ಮಚ್ಚೆ ಪಟ್ಟಣ ಪಂಚಾಯತ್ ಎದುರು ಸಂಗೋಳ್ಳಿ ರಾಯಣ್ಣ ಪ್ರತಿಷ್ಠಾಪನೆ ಮಾಡಿದ ಹಿನ್ನಲೆಯಲ್ಲಿ ಪರಸ್ಥಿತಿ ಉದ್ವಿಗ್ನ ಸ್ಥಿತಿಯಲ್ಲಿದ್ದು ಬೂದಿ ಮುಚ್ಚಿದ ಕೆಂಡದಂತೆ ಪರಸ್ಥಿತಿ ನಿರ್ಮಾಣ ವಾಗಿದೆ. ಕಳೆದ ಹಲವು ವರ್ಷಗಳಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ಕನ್ನಡಪರ ಸಂಘಟನೆಗಳ ಮನವಿ ಮಾಡಿದ್ದವು ಅದೇ ರೀತಿಯಾಗಿ ನಿನ್ನೆ ರಾತ್ರಿ ಪ್ರತಿಷ್ಠಾಪನೆ ಮಾಡಲಾಗಿದ್ದು ಜೀಜಾಮಾತಾ ಅಥವಾ ಶಿವಾಜಿ …
Read More »6.2 ಕೋಟಿ ರೂಪಾಯಿ ಮೌಲ್ಯದ 10 ಕೆ.ಜಿ ಚಿನ್ನವನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಭಾನುವಾರ ವಶಪಡಿಸಿಕೊಂಡಿದೆ.
ಮುಂಬೈ(ಮಹಾರಾಷ್ಟ್ರ): ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್ಐ) ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 6.2 ಕೋಟಿ ರೂಪಾಯಿ ಮೌಲ್ಯದ 10 ಕೆ.ಜಿ ಚಿನ್ನವನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಭಾನುವಾರ ವಶಪಡಿಸಿಕೊಂಡಿದೆ. ಈ ಎರಡೂ ಪ್ರಕರಣಗಳಲ್ಲಿ ಒಟ್ಟು 4 ಮಂದಿಯನ್ನು ಬಂಧಿಸಲಾಗಿದೆ. ಮೊದಲ ಪ್ರಕರಣದಲ್ಲಿ ದುಬೈನಿಂದ ಬಂದ ಭಾರತೀಯ ಪ್ರಜೆಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪರಿಶೀಲಿಸಲಾಯಿತು. ಈ ವೇಳೆ, ಪ್ರಯಾಣಿಕರ ಸಾಮಾನು ಸರಂಜಾಮುಗಳನ್ನು ಪರಿಶೀಲಿಸಲಾಗಿದ್ದು, 56 ಮಹಿಳೆಯರ ಪರ್ಸ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪರ್ಸ್ಗಳಲ್ಲಿ 24 ಕ್ಯಾರೆಟ್ …
Read More »ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಹೊಸ ತಿರುವು
ಹುಬ್ಬಳ್ಳಿ: ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ವಿವಾಹಿತ ಮಹಿಳೆ ಜೊತೆ ಯುವಕ ಹೊಂದಿದ್ದ ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಕಳೆದ ಎರಡು ದಿನಗಳ ಹಿಂದೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ತೋಟದ ಮನೆಯಲ್ಲಿ ಮಲಗಿದ್ದ ನಿಂಗಪ್ಪ ನವಲೂರ (33) ಎಂಬ ಯುವಕನ ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆಗೈಯ್ಯಲಾಗಿತ್ತು. ಈ ಪ್ರಕರಣ ಜಿಲ್ಲೆಯಲ್ಲಿ ಆತಂಕಕ್ಕೆ …
Read More »ರಾಜ್ಯಾದ್ಯಂತ ನಿನ್ನೆ (ಬುಧವಾರ) ಲೋಕಾಯುಕ್ತ ಅಧಿಕಾರಿಗಳು ಕೆಲವು ಭ್ರಷ್ಟ ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ
ಬೆಂಗಳೂರು: ರಾಜ್ಯಾದ್ಯಂತ ನಿನ್ನೆ (ಬುಧವಾರ) ಲೋಕಾಯುಕ್ತ ಅಧಿಕಾರಿಗಳು ಕೆಲವು ಭ್ರಷ್ಟ ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ ವ್ಯಾಪಕ ಶೋಧ ನಡೆಸಿದ್ದರು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಕೊಪ್ಪಳ, ಮಂಗಳೂರು, ಹಾವೇರಿ, ಉಡುಪಿ ಸೇರಿದಂತೆ ಒಟ್ಟು 57 ಕಡೆ ನಡೆದ ಕಾರ್ಯಾಚರಣೆಯಲ್ಲಿ ಅಧಿಕಾರಿಗಳ ಕೋಟಿ ಕೋಟಿ ಮೌಲ್ಯದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಅಧಿಕಾರಿಗಳು, ಅಕ್ರಮ ಸಂಪತ್ತು: ಬೆಸ್ಕಾಂ ಚೀಫ್ ಇಂಜಿನಿಯರ್ಎಚ್.ಜೆ. ರಮೇಶ್ – ನಾಲ್ಕು …
Read More »2 ಲಕ್ಷಕ್ಕೂ ಅಧಿಕ ಗಿಡ ನೆಟ್ಟ ಶಿವಾಜಿ ಕಾಗಣಿಕರ್
ಬೆಳಗಾವಿ: ಇಂದು ವಿಶ್ವ ಪರಿಸರ ದಿನ. ಉಸಿರಾಡಲು ಶುದ್ಧ ಗಾಳಿಯನ್ನು ನೀಡುವ ಮರಗಳನ್ನು ವರ್ಷಕ್ಕೊಮ್ಮೆ ಪರಿಸರ ದಿನದಂದು ಮಾತ್ರ ನೆನಪು ಮಾಡಿಕೊಳ್ಳುವ ಪರಿಸ್ಥಿತಿ ಇದೆ. ಆದರೆ, ಮರಗಳನ್ನು ಕೇವಲ ನೆನಪು ಮಾಡಿಕೊಂಡರೆ ಸಾಲದು. ಅವುಗಳನ್ನು ಉಳಿಸಿ, ಬೆಳೆಸುವತ್ತ ಗಮನಹರಿಸಬೇಕಿದೆ. ಆಧುನೀಕರಣ ಹಾಗೂ ಹೆಚ್ಚುತ್ತಿರುವ ಜನಸಂಖ್ಯೆಯ ಪರಿಣಾಮದಿಂದ ಅರಣ್ಯ ನಾಶವಾಗುತ್ತಿದೆ. ಇದರಿಂದ ಹಲವು ದುಷ್ಪರಿಣಾಮಗಳು ಎದುರಾಗುತ್ತಿದೆ. ಈ ನಡುವೆ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ವ್ಯಕ್ತಿಯೊಬ್ಬರು ನೆಲವನ್ನು ಹಚ್ಚ ಹಸಿರಾಗಿಸುವ ಧ್ಯೇಯವೊಂದರಲ್ಲಿ ತೊಡಗಿಸಿಕೊಂಡಿದ್ದು, …
Read More »ನಮ್ಮ ಸಮಾಜಕ್ಕೆ ಒತ್ತು ಕೊಡದೇ ಇರುವುದರಿಂದ ಮುಂಬರುವ ಲೋಕಸಭೆ ಚುನಾವಣೆ ಮೇಲೆ ಪ್ರಭಾವ ಬೀರುತ್ತದೆ ಎಂದು ವಿನಯ್ ಕುಲಕರ್ಣಿ
ಬೆಳಗಾವಿ : ರಾಜ್ಯದಲ್ಲಿ ವಿರೇಂದ್ರ ಪಾಟೀಲರ ನಂತರ ಇಷ್ಟೊಂದು ದೊಡ್ಡ ಬಹುಮತ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿದೆ. ಹೀಗಾಗಿ ಹಿಂದೆ ಮಾಡಿದ ತಪ್ಪು ಮತ್ತೆ ಪುನರಾವರ್ತನೆ ಆಗಬಾರದು ಎಂದು ತಮ್ಮದೇ ಪಕ್ಷದ ನಾಯಕರಿಗೆ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಕಳೆದ ಚುನಾವಣೆಗಳಲ್ಲಿ ನಮ್ಮ ಸಮಾಜದಿಂದ ಕಾಂಗ್ರೆಸ್ ಪಕ್ಷಕ್ಕೆ ಮತಗಳು ಕಡಿಮೆ ಸಂಖ್ಯೆಯಲ್ಲಿ ಬರುತ್ತಿದ್ದವು. ಆದರೆ …
Read More »ಅಪರೂಪದ ಕಾಯಿಲೆಗೆ ತುತ್ತಾಗಿರುವ ಶೌರ್ಯ ಹುಲಿಗೆ ಸೂಕ್ತ ಚಿಕಿತ್ಸೆ
ಬೆಳಗಾವಿ : ಜಿಲ್ಲೆಯ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯದಲ್ಲಿರುವ ಶೌರ್ಯ ಎಂಬ ಹುಲಿಯು ಅಪರೂಪದ ಕಾಯಿಲೆಯಿಂದ ಬಳಲುತ್ತಿರುವುದನ್ನು ವನ್ಯಜೀವಿ ವೈದ್ಯ ಡಾ. ಮದನ್ ಪತ್ತೆ ಹಚ್ಚಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹುಲಿಗೆ ಸದ್ಯ ಅರಣ್ಯಾಧಿಕಾರಿಗಳು ಹಾಗೂ ವನ್ಯಜೀವಿ ವೈದ್ಯರು ಹುಲಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದ್ದು ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ. ವನ್ಯಜೀವಿ ವೈದ್ಯರಿಗೆ ಸುಲಭವಾಗಿ ಗುರುತಿಸಲಾಗದ cytauxzoon felis ಮತ್ತು mycoplasma ಎಂಬ ಅಪರೂಪದ …
Read More »ತಾಯಿ ಕೆಲಸಕ್ಕೆ ಹೋದಾಗ ಆತ್ಮಹತ್ಯೆ ಶರಣಾದ ಸಹೋದರಿಯರು
ಹುಬ್ಬಳ್ಳಿ : ನೇಣು ಬಿಗಿದುಕೊಂಡು ಇಬ್ಬರು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಇಂದು ನಡೆದಿದೆ. ಕಾವೇರಿ ಹಡಪದ (17) ಮತ್ತು ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು ಎಂದು ಗುರುತಿಸಲಾಗಿದೆ. ಮನೆಯಲ್ಲಿ ತಾಯಿ ಇಲ್ಲದ ವೇಳೆ ಇಬ್ಬರೂ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ಇವರು ವಾಸವಾಗಿದ್ದರು. ತಾಯಿ ಕೆಲಸಕ್ಕೆಂದು ಹೊರಗಡೆ ಹೋದಾಗ ಸೀರೆಯಿಂದ ನೇಣು ಬಿಗಿದುಕೊಂಡು ಅಕ್ಕ ಮತ್ತು …
Read More »ಒಡಿಶಾ ರೈಲು ದುರಂತ.. ಸಂತ್ರಸ್ತ ಮಕ್ಕಳ ಶಿಕ್ಷಣದ ಜವಾಬ್ದಾರಿ ಹೊತ್ತ ಗೌತಮ್ ಅದಾನಿ
ಅಹಮದಾಬಾದ್ (ಗುಜರಾತ್): ಒಡಿಶಾದ ಭೀಕರ ರೈಲು ದುರಂತದಲ್ಲಿ ಪೋಷಕರನ್ನು ಕಳೆದುಕೊಂಡು ಸಂತ್ರಸ್ತರಾಗಿರುವ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಅದಾನಿ ಗ್ರೂಪ್ ಮುಂದಾಗಿದೆ. ಈ ಬಗ್ಗೆ ಖ್ಯಾತಿ ಉದ್ಯಮಿ, ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಪ್ರಕಟಿಸಿದ್ದಾರೆ. ಒಡಿಶಾ ರೈಲು ಅಪಘಾತದ ಸುದ್ದಿಯಿಂದ ತಾನು ತೀವ್ರ ದುಃಖಿತನಾಗಿದ್ದೇನೆ. ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಶಕ್ತಿಯನ್ನು ನೀಡುವುದು ಮತ್ತು ಮಕ್ಕಳಿಗೆ ಉತ್ತಮ ನಾಳೆಗಳನ್ನು ಒದಗಿಸುವುದು ನಮ್ಮೆಲ್ಲರ ಜಂಟಿ ಜವಾಬ್ದಾರಿಯಾಗಿದೆ ಎಂದು ಗೌತಮ್ ಅದಾನಿ …
Read More »ಭೂಮಿ ಮತ್ತು ಮನುಕುಲವನ್ನು ರಕ್ಷಿಸಲು ಪರಿಸರವನ್ನು ರಕ್ಷಿಸುವುದು ಅತ್ಯಂತ ಅವಶ್ಯಕ.
ಮಾನವರ ಜೀವನ ಮತ್ತು ಪರಿಸರದ ಮಧ್ಯೆ ಆಳವಾದ ಸಂಬಂಧವಿದೆ. ಪ್ರಕೃತಿಯಿಲ್ಲದೇ ಜೀವನವು ಅಸ್ತಿತ್ವದಲ್ಲಿರಲು ಸಾಧ್ಯವೇ ಇಲ್ಲ. ಪ್ರಕೃತಿಯೊಂದಿಗೆ ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ಎಲ್ಲ ಮಾನವರಿಗೆ ಅವಶ್ಯಕವಾಗಿದೆ. ಆದರೆ, ತಂತ್ರಜ್ಞಾನದ ಆಮೂಲಾಗ್ರ ಬೆಳವಣಿಗೆ ಮತ್ತು ಆಧುನಿಕ ಜೀವನಶೈಲಿಯ ಹೆಚ್ಚಳದಿಂದ ಪರಿಸರಕ್ಕೆ ಸರಿಪಡಿಸಲಾಗದ ಅಪಾಯವಾಗುತ್ತಿದೆ ಎನ್ನುವುದು ಕೂಡ ಸತ್ಯ. ಇದಕ್ಕಾಗಿಯೇ ಪರಿಸರ ರಕ್ಷಣೆಯ ಬಗ್ಗೆ ಮತ್ತು ಪರಿಸರದ ಸ್ವಚ್ಛತೆಗಾಗಿ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪರಿಸರ …
Read More »