Breaking News

ಆಗಸ್ಟ್​ 3ರವರೆಗೆ ಅಮರನಾಥ ಯಾತ್ರೆ ಸ್ಥಗಿತ

ಜಮ್ಮು: ಭಾರಿ ಮಳೆಯಿಂದ ಸಂಚಾರಕ್ಕೆ ಅಡಚಣೆಯಾಗಿದ್ದು, ತುರ್ತು ದುರಸ್ತಿ ಮತ್ತು ನಿರ್ವಹಣೆ ಅಗತ್ಯವಿರುವ ಹಿನ್ನೆಲೆಯಲ್ಲಿ ಆಗಸ್ಟ್​ 3ರವರೆಗೆ ಪವಿತ್ರ ಅಮರನಾಥ ಯಾತ್ರೆಯನ್ನು ಎರಡೂ ಮಾರ್ಗದಲ್ಲೂ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ಪಹಲ್ಗಾಮ್​ ಮಾರ್ಗದಿಂದ ಯಾವುದೇ ಹೊಸ ಯಾತ್ರಿಕರ ತಂಡ ಪ್ರಯಾಣ ಕೈಗೊಂಡಿಲ್ಲ. ಆದರೆ, ಬಾಲ್ಟಾಲ್​ ಮಾರ್ಗವಾಗಿ ಗುಹಾಂತರ ದೇಗುಲಕ್ಕೆ ಯಾತ್ರಿಕರು ತೆರಳಿದ್ದಾರೆ. ಬಳಿಕ ಭಾರಿ ಮಳೆಯಿಂದಾಗಿ ಬಲ್ಟಾಲಾ ಮಾರ್ಗದಲ್ಲೂ ಯಾತ್ರೆಯನ್ನು ಸ್ಥಗಿತಗೊಳಿಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಕಳೆದೆರಡು ದಿನದಿಂದ …

Read More »

ಕಳಚಿತು ದೊಡ್ಮನೆಯ ಹಿರಿಯ ಕೊಂಡಿ

ಚಾಮರಾಜನಗರ: ವರನಟ ದಿ.ಡಾ.ರಾಜ್​​ಕುಮಾರ್ ಅವರ ಸಹೋದರಿ ನಾಗಮ್ಮ(94) ಇಂದು ಬೆಳಗ್ಗೆ ವಯೋಸಹಜ ಕಾಯಿಲೆಯಿಂದ ನಿಧನರಾದರು. ನಾಗಮ್ಮ ಅಣ್ಣಾವ್ರ ಅಚ್ಚುಮೆಚ್ಚಿನ ಸಹೋದರಿಯಾಗಿದ್ದರು. ಜೊತೆಗೆ, ಇಡೀ ರಾಜ್ ಪರಿವಾರಕ್ಕೆ ಅಕ್ಕರೆಯ ನಾಗಮ್ಮತ್ತೆಯಾಗಿದ್ದರು. ಅಣ್ಣಾವ್ರು ಅಂದಿನ ಮದ್ರಾಸ್​ನಲ್ಲಿದ್ದಾಗ ನಾಗಮ್ಮ ಮಕ್ಕಳ ಲಾಲನೆ-ಪಾಲನೆ ಮಾಡುತ್ತಿದ್ದರು. ತಂಗಿ ಹಾಗೂ ಕುಟುಂಬದ ಜೊತೆ ವಿರಾಮದ ಕಾಲ ಕಳೆಯಬೇಕೆಂದು ಅಣ್ಣಾವ್ರು ಗಾಜನೂರಿನಲ್ಲಿ ಮನೆಯನ್ನೂ ಕಟ್ಟಿಸಿದ್ದರು. ಅಷ್ಟರಲ್ಲಿ, ವೀರಪ್ಪನ್​​ನಿಂದ ಅಪಹರಣಕ್ಕೊಳಗಾದ ಬಳಿಕ ಅನಿವಾರ್ಯವಾಗಿ ಗಾಜನೂರಿನಲ್ಲಿ ನೆಲೆ ನಿಲ್ಲುವ ಆಸೆ ಕೈಬಿಟ್ಟಿದ್ದರು.ಪುನೀತ್ ರಾಜ್ ಕುಮಾರ್ …

Read More »

ಧರ್ಮಸ್ಥಳದಲ್ಲಿ ಸಿಕ್ಕ ಪ್ಯಾನ್ ಕಾರ್ಡ್, ಎಟಿಎಂ ಕಾರ್ಡ್​ ಸುಳಿವು ಪತ್ತೆ

ನೆಲಮಂಗಲ: ಧರ್ಮಸ್ಥಳದಲ್ಲಿ SIT ತಂಡ ಶವಗಳ ಪತ್ತೆಗಾಗಿ ಉತ್ಖನನ ಮಾಡುವ ವೇಳೆ ಸಿಕ್ಕ ಪ್ಯಾನ್ ಕಾರ್ಡ್ ಮತ್ತು ಎಟಿಎಂ ಕಾರ್ಡ್​ ವಾರಸುದಾರರು ನೆಲಮಂಗದ ದಾಬಸ್ ಪೇಟೆಯ ನಿವಾಸಿಗಳು ಎಂದು ತಿಳಿದು ಬಂದಿದೆ. ಧರ್ಮಸ್ಥಳದಲ್ಲಿ ಸ್ವಚ್ಛತೆಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಧರ್ಮಸ್ಥಳ ಗ್ರಾಮದಲ್ಲಿ ಹಲವು ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿರುವ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ SIT ತಂಡ ರಚನೆ ಮಾಡಿದೆ. ಅನಾಮಧೇಯ ವ್ಯಕ್ತಿ ನೀಡಿರುವ ಮಾಹಿತಿಯಂತೆ ನೇತ್ರಾವತಿ ನದಿಯ ದಡದಲ್ಲಿ …

Read More »

ಕಾಮಿಡಿ ಕಿಲಾಡಿಗಳು ಶೋ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ

ಯಲ್ಲಾಪುರ (ಉತ್ತರ ಕನ್ನಡ): ಕಾಮಿಡಿ ಕಿಲಾಡಿಗಳು ಶೋ ಮೂಲಕ ಪ್ರೇಕ್ಷಕರನ್ನು ನಕ್ಕು ನಲಿಸಿದ್ದ ಯಲ್ಲಾಪುರ ತಾಲೂಕಿನ ಚಿಮ್ಮಳ್ಳಿ ಗ್ರಾಮದ ಚಂದ್ರಶೇಖರ್ ಸಿದ್ದಿ (31) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಯಲ್ಲಾಪುರ ತಾಲೂಕಿನ ತೆಲಂಗಾರ ವಜ್ರಳ್ಳಿಯ ನಿವಾಸಿಯಾದ ಚಂದ್ರಶೇಖರ್, ಕಬ್ಬಿಗೆ ಗ್ರಾಮಕ್ಕೆ ಪತ್ನಿಯೊಂದಿಗೆ ಕೆಲಸಕ್ಕೆಂದು ಹೋಗಿ ಅಲ್ಲೇ ಉಳಿದುಕೊಂಡಿದ್ದರು. ಶನಿವಾರ (ಜುಲೈ 31) ಮಧ್ಯಾಹ್ನ 2 ಗಂಟೆಗೆ ತನ್ನ ಮಗನನ್ನು ಶಾಲೆಯಿಂದ ಕರೆದುಕೊಂಡು ಮನೆಗೆ ಬಂದಿದ್ದ ಚಂದ್ರಶೇಖರ್, ಬಳಿಕ ಶೌಚಾಲಯಕ್ಕೆ …

Read More »

ಹುಬ್ಬಳ್ಳಿಗೆ 10 ಹೊಸ ಮೆಮು ರೈಲು ಸಂಚಾರ ಆರಂಭಿಸುವಂತೆ ರೈಲ್ವೆ ಸಚಿವರಿಗೆ ಜೋಶಿ ಮನವಿ

ನವದೆಹಲಿ/ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅಕ್ಕಪಕ್ಕದ ಪಟ್ಟಣಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರ ಅನುಕೂಲಕ್ಕಾಗಿ 10 ಹೊಸ ಮೆಮು ರೈಲುಗಳ ಸಂಚಾರ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಲ್ಲಿ ಪ್ರಲ್ಹಾದ್ ಜೋಶಿ ಮನವಿ ಮಾಡಿದರು. ನವದೆಹಲಿಯಲ್ಲಿ ಬುಧವಾರ ಕೇಂದ್ರ ರೈಲ್ವೆ ಸಚಿವರನ್ನು ಭೇಟಿ ಮಾಡಿದ ಜೋಶಿ, ಪಟ್ಟಣ ಹಾಗೂ ಗ್ರಾಮಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರಿಗಾಗಿ 10 ಹೊಸ ಮೆಮು (MEMU) ರೈಲುಗಳ ಸಂಚಾರ ಆರಂಭಿಸಬೇಕೆಂದು ಕೋರಿದರು. ಹುಬ್ಬಳ್ಳಿ ಉತ್ತರ ಕರ್ನಾಟಕದ ವಾಣಿಜ್ಯ ರಾಜಧಾನಿಯಾಗಿದೆ. ಅಕ್ಕಪಕ್ಕದ ಪಟ್ಟಣ, …

Read More »

ಛತ್ತೀಸಗಢದಲ್ಲಿ ಬಂಧಿಸಿದ ಕ್ರೈಸ್ತ ಸನ್ಯಾನಿಯರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಇಂದು ಬೆಳಗಾವಿಯಲ್ಲಿ ಕ್ಯಾಥೋಲಿಕ್ ಅಸೋಸಿಯೇಷನ್ ಆಫ್ ಬೆಲಗಾಮನ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.

ಛತ್ತೀಸಗಢದಲ್ಲಿ ಬಂಧಿಸಿದ ಕ್ರೈಸ್ತ ಸನ್ಯಾನಿಯರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಇಂದು ಬೆಳಗಾವಿಯಲ್ಲಿ ಕ್ಯಾಥೋಲಿಕ್ ಅಸೋಸಿಯೇಷನ್ ಆಫ್ ಬೆಲಗಾಮನ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಛತ್ತೀಸಗಢದಲ್ಲಿ ಕ್ರೈಸ್ತ ಸನ್ಯಾನಿಯರನ್ನು ಬಂಧಿಸಿದ ಘಟನೆಯನ್ನು ಖಂಡಿಸಿ ಇಂದು ಕ್ಯಾಥೋಲಿಕ್ ಅಸೋಸಿಯೇಷನ್ ಆಫ್ ಬೆಲಗಾಮನ ವತಿಯಿಂದ ಪ್ರತಿಭಟನೆಯನ್ನು ನಡೆಸಿದರು. ನಗರ ಪ್ರಮುಖ ಮಾರ್ಗಗಳಲ್ಲಿ ಪ್ರತಿಭಟನಾ ಪಾದಯಾತ್ರೆಯನ್ನು ನಡೆಸಿ, ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ತಲುಪಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು. ಛತ್ತೀಸಗಢದಲ್ಲಿ ಕ್ರೈಸ್ತ ಸನ್ಯಾನಿಯರನ್ನು ಬಂಧಿಸಿದ್ದು ಖಂಡನೀಯ. ಅವರಿಬ್ಬರು ಬಡ …

Read More »

ಪ್ರಥಮ್ ವಿಚಾರದಲ್ಲಿ ನಾನು ದರ್ಶನ್ ಸರ್ ಪರವಾಗಿ ನಿಲ್ತೀನಿ: ಧ್ರುವ ಸರ್ಜಾ

ಪ್ರಥಮ್ ವಿಚಾರದಲ್ಲಿ ನಾನು ದರ್ಶನ್ ಸರ್ ಪರವಾಗಿ ನಿಲ್ತೀನಿ: ಧ್ರುವ ಸರ್ಜಾ ನಟ ಪ್ರಥಮ್ ವಿಚಾರದಲ್ಲಿ ನಾನು ದರ್ಶನ್ ಪರ ನಿಲ್ಲುತ್ತೇನೆ ಎಂದು ಸರ್ಜಾ ಸ್ಪಷ್ಟಪಡಿಸಿದ್ದಾರೆ. ಪ್ರಥಮ್ ವಿರುದ್ಧ ಕಿಡಿಕಾರಿದ ಧ್ರುವ ಸರ್ಜಾ, ಪ್ರಥಮ್ ವಿಚಾರದಲ್ಲಿ ನಾನು ದರ್ಶನ್ ಸರ್ ಪರ ನಿಲ್ತೀನಿ. ಐ ಸ್ಟ್ಯಾಂಡ್ ವಿತ್ ದರ್ಶನ್ ಸರ್ ಎಂದಿದ್ದಾರೆ. ಚಿಟುಕೆ ಹೊಡೆದು ವಿಗ್ ಬಗ್ಗೆ ಮಾತಾಡೋದು ಸರಿ ಇಲ್ಲ. ಪ್ರಥಮ್ ಮಾತಾಡೋದು ಸರಿ ಇಲ್ಲ. ಅವರಿಗೆ ಯಾರಾದ್ರೂ …

Read More »

ರಕ್ಷಕ್‌ ಬುಲೆಟ್‌ ಎಡವಟ್ಟಿನಿಂದ ಯುವಕನ ಕಾಲು ಮುರಿತ…

ರಕ್ಷಕ್‌ ಬುಲೆಟ್‌ ಎಡವಟ್ಟಿನಿಂದ ಯುವಕನ ಕಾಲು ಮುರಿತ… ಬಿಗ್‌ ಬಾಸ್‌ ಖ್ಯಾತಿಯ ರಕ್ಷಕ್‌ ಬುಲೆಟ್‌ ಎಡವಟ್ಟಿನಿಂದ ಯುವಕನ ಕಾಲು ಮುರಿತ ಆಗಿರುವ ಘಟನೆ ನಡೆದಿದೆ. ಗುರುವಾರ ಬೆಳಗ್ಗೆ 11:30ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ರಕ್ಷಕ್‌ ಬುಲೆಟ್‌ ಅಜಾಗರೂಕತೆಯಿಂದ ಕಾರು ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ವೇಣುಗೋಪಾಲ ಕಾಲು ಮುರಿದುಕೊಂಡ ಯುವಕ. ಯುವಕನ ಬೈಕ್ ಮತ್ತು ರಕ್ಷಕ್ ಕಾರು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಯುವಕನ ಎಡಗಾಲಿನ ಮೂಳೆ ಮುರಿತವಾಗಿದೆ. ಶಿಡ್ಲಘಟ್ಟ ಮೂಲದ …

Read More »

ಮಹಿಳಾ ಆಯೋಗದ ನಿಜವಾದ ಕೆಲಸ ಏನು ಅಂತ ತೋರಿಸಿದ ನಾಗಲಕ್ಷ್ಮೀ ಚೌಧರಿ

ಮಹಿಳಾ ಆಯೋಗದ ನಿಜವಾದ ಕೆಲಸ ಏನು ಅಂತ ತೋರಿಸಿದ ನಾಗಲಕ್ಷ್ಮೀ ಚೌಧರಿ ಅಂದು ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಆ ದಿಟ್ಟ ನಿರ್ಧಾರ ತೆಗೆದುಕೊಳ್ಳದಿದ್ದಾರೆ ಪ್ರಜ್ವಲ್ ಕೇಸ್ ಲ್ಲಿ ಎಸ್ಐಟಿ ರಚನೆ ಆಗ್ತಿರಲಿಲ್ಲ ಧರ್ಮಸ್ಥಳದಲ್ಲಿ ಬುರುಡೆ ಪ್ರಕರಣ ಬರೀ ಚರ್ಚೆಗೆ ಅಷ್ಟೇ ಸಮೀತವಾಗುತ್ತಿತ್ತು ದರ್ಶನ್ ಪ್ರಕರಣದಲ್ಲಿ ರಮ್ಯ ಪರ ನಿಲ್ಲೋದಕ್ಕೆ ಸಿನಿಮಾದವರಿಗೆ ಧೈರ್ಯ ಬರ್ತಿರಲಿಲ್ಲ.. ಎಲ್ಲ ಹೈಫ್ರೋಫೈಲ್ ಕೇಸ್ ಗಳಲ್ಲಿ ಸರ್ಕಾರ ನಡೆಸುವವರ ಒತ್ತಡ ಬಂದಾಗಲೂ ಅದನ್ನ ಎದುರಿಸಿ ಮುಂದೆ ನಿಂತಿದ್ದಾರೆ. …

Read More »

ಮಹಾರಾಷ್ಟ್ರದ ಆಲಮಟ್ಟಿ ತಕರಾರಿನ ಹಿಂದೆ ರಾಜಕೀಯ ದುರುದ್ದೇಶ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: “ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು ಈಗಿರುವ 519.60 ಮೀಟರ್‌ನಿಂದ 524.256 ಮೀ.ಗೆ ಎತ್ತರಿಸುವುದರಿಂದ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗುತ್ತದೆ ಎನ್ನುವ ಮಹಾರಾಷ್ಟ್ರದ ತಕರಾರಿಗೆ ಅರ್ಥವಿಲ್ಲ. ಇಂಥ ವಾದ ಈಗಾಗಲೇ ನ್ಯಾಯಾಧೀಕರಣ, ಸುಪ್ರೀಂ ಕೋರ್ಟ್‌ ಮತ್ತು ಲೋಕಸಭೆಗಳಲ್ಲಿ ತಿರಸ್ಕೃತವಾಗಿದೆ” ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಇಂದು ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಆಲಮಟ್ಟಿ ಅಣೆಕಟ್ಟೆಯನ್ನು ನಾವು ಕಟ್ಟುವುದಕ್ಕೂ ಮೊದಲೇ ಸಾಂಗ್ಲಿಯಲ್ಲಿ …

Read More »