ರಾಮನಗರ: “ರಾಮನ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು, ತಮ್ಮ ಅವಧಿಯಲ್ಲಿ ಜಿಲ್ಲೆಗೆ ಕೊಟ್ಟಿರುವ ಕೊಡುಗೆ ಮುಂದಿಟ್ಟು ಮಾತನಾಡಲಿ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಪ್ರತಿಪಕ್ಷಗಳ ನಾಯಕರ ವಿರುದ್ಧ ಹರಿಹಾಯ್ದರು. ರಿಯಲ್ ಎಸ್ಟೇಟ್ ಉತ್ತೇಜನಕ್ಕೆ ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡಲಾಗಿದೆ, ರಾಮನಗರದಲ್ಲಿ ಯಾರು ನಿವೇಶನ ಖರೀದಿಸಿದ್ದಾರೆಂದು ಹೆಸರು ಬಹಿರಂಪಡಿಸಲಿ ಎಂಬ ವಿಜಯೇಂದ್ರ ಅವರ ಟೀಕೆ ಕುರಿತು ಮಾತನಾಡಿದ ಅವರು, “ಈ ರೀತಿ ಹೇಳುತ್ತಿರುವವರೇ ಇದನ್ನು ಬಹಿರಂಗಪಡಿಸಬೇಕಲ್ಲವೇ? ಅವರು ಸ್ಥಿಮಿತ ಇಲ್ಲದೇ …
Read More »ದೂರವಾಣಿ ಮಾತುಕತೆ ಧ್ವನಿಮುದ್ರಣ ಸೋರಿಕೆ ಆರೋಪ; ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಇಲಾಖಾ ತನಿಖೆಗೆ ತಡೆ ನೀಡಿದ ಸಿಎಟಿ
ಬೆಂಗಳೂರು : ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿ ಸರ್ಕಾರ ಜಾರಿಗೊಳಿಸಿದ್ದ ನೋಟಿಸ್ಗೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಮಧ್ಯಂತರ ತಡೆ ನೀಡಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧದ ನೋಟಿಸ್ ರದ್ದುಪಡಿಸುವಂತೆ ಕೋರಿ ಎಡಿಜಿಪಿ ಅಲೋಕ್ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಕೆ. ಶ್ರೀವಾಸತ್ಸವ ಅವರ ಪೀಠವು ಈ ಆದೇಶ ಮಾಡಿದೆ. ಜೊತೆಗೆ, ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ …
Read More »ಮಳೆಯ ನೀರಿನಿಂದ ಜಲಾವೃತಗೊಂಡ ರಸ್ತೆ
ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಪೂರ್ವ ಮುಂಗಾರು ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಅದರಲ್ಲೂ ಎರಡು ದಿನ ಸುರಿದ ಭಾರೀ ಮಳೆ ಬೆಂಗಳೂರಿಗರನ್ನು ನಲುಗಿಸಿದೆ. ಕಳೆದ ವಾರ ಸುರಿದ ಮಳೆಯ ಆರ್ಭಟಕ್ಕೆ ಸಂಭವಿಸಿದ ಮೂಲಸೌಕರ್ಯ ಹಾನಿ ವರದಿ ಇಲ್ಲಿದೆ. ಕಳೆದ ವಾರ ಸುರಿದ ಭಾರೀ ಮಳೆಗೆ ಬೆಂಗಳೂರಿಗರು ತತ್ತರಿಸಿ ಹೋಗಿದ್ದು, ಮಳೆಯ ಅಬ್ಬರಕ್ಕೆ ನಗರದ ಬಹುತೇಕ ಸ್ಥಳಗಳು ಜಲಾವೃತಗೊಂಡಿದ್ದವು. ಮಹದೇವಪುರದ ಸಾಯಿ ಲೇಔಟ್, ಯಲಹಂಕದ ಕೆಂಪೇಗೌಡ ವಾರ್ಡ್, ಹೆಚ್ಎಸ್ಆರ್ ಲೇಔಟ್, ಆರ್.ಆರ್ ನಗರ …
Read More »ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ಗೆ ಡಿಕ್ಕಿ, ಬೈಕ್ನಲ್ಲಿದ್ದ ಇಬ್ಬರು ಸಾವು
ಬಳ್ಳಾರಿ: ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಳಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಬೈಕ್ನಲ್ಲಿದ್ದ ಗುಗ್ಗರಹಟ್ಟಿಯ ಅಬ್ದುಲ್ ಅರ್ಮಾನ್ (21) ಮತ್ತು ಸೋದರನ ಪುತ್ರಿ ಹಸೀನಾ ನಯಾಜ್ (5) ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು – ಲಾರಿ ನಡುವೆ ಭೀಕರ ರಸ್ತೆ ಅಪಘಾತ, ನಾಲ್ವರು ಸಾವು: ಕಾರು ಮತ್ತು ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ, …
Read More »ವಿದೇಶಗಳಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದವರ ಬಳಿ 3 ಸಾವಿರಕ್ಕೂ ಹೆಚ್ಚು ಆಮೆ, ಉಡ ಪತ್ತೆ!
ಬೆಂಗಳೂರು, ಮೇ 27: ವಿಚಿತ್ರ ಪ್ರಕರಣವೊಂದರಲ್ಲಿ, ವಿದೇಶಗಳಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ (Bengaluru Airport) ಬಂದ ಪ್ರಯಾಣಿಕರ ಬಳಿ 3 ಸಾವಿರಕ್ಕೂ ಹೆಚ್ಚು ಆಮೆ (Turtles), ಉಡ, ಆಫ್ರಿಕನ್ ಆಮೆಗಳು ಪತ್ತೆಯಾಗಿವೆ. ಅವುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಶಂಕಿತ ವನ್ಯಜೀವಿ ಕಳ್ಳಸಾಗಣೆದಾರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಥಾಯ್ ಏರ್ವೇಸ್ ವಿಮಾನದಲ್ಲಿ ಥಾಯ್ಲೆಂಡ್ನಿಂದ ಶನಿವಾರ ಬೆಳಿಗ್ಗೆ 11.17 ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಾಲಸುಬ್ರಮಣಿಯನ್ ಷಣ್ಮುಗಂ, ವಿಜಯರಾಘವನ್ ಧನಪಾಲ್ ಹಾಗೂ ಭಾನುವಾರ ಮಲೇಷ್ಯಾದಿಂದ ಬಂದ ಅರುಣ್ಕುಮಾರ್ ನಾರಾಯಣಸ್ವಾಮಿ ಎಂಬವರ …
Read More »ಭೂಕುಸಿತವಾಗಿರುವ ಪ್ರದೇಶಗಳಿಗೆ ಭೇಟಿ ನೀಡಿದ ಸಂಸದ ಶ್ರೇಯಸ್ ಪಟೇಲ್ (
ಹಾಸನ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತವಾಗಿರುವ ಪ್ರದೇಶಗಳಿಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂಸದ ಶ್ರೇಯಸ್ ಪಟೇಲ್, ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಸುಗಮ ಸಂಚಾರಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಎರಡು ಕಿ.ಮೀ ರಸ್ತೆ ಕಾಮಗಾರಿಗೆ ಭೂಕುಸಿತವೇ ದೊಡ್ಡ ಸವಾಲಾಗಿದೆ. ತಡೆಗೊಡೆ ಕಟ್ಟಿರುವ ಕೆಲವು ಕಡೆಗಳಲ್ಲಿ ಮಣ್ಣು ಕುಸಿದಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಜವಾಬ್ದಾರಿಯುತವಾಗಿ ಕೆಲಸ ನಿರ್ವಹಣೆ ಮಾಡುವಂತೆ ಎನ್.ಹೆಚ್.ಎ.ಐ ಅಧಿಕಾರಿಗಳಿಗೆ ಸೂಚಿಸಿದರು.ಈ ಬಾರಿಯೂ ಭೂ ಕುಸಿತ …
Read More »ಭಾರೀ ಮಳೆಯಿಂದಾಗಿ KRS ಒಳಹರಿವು ಹೆಚ್ಚಳ
ಮಂಡ್ಯ, ಮೇ 26): ಕಳೆದ ಹಲವು ದಿನಗಳಿಂದ ಕರ್ನಾಟಕದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ. ಪರಿಣಾಮ ಜಲಾಶಯಗಳಿಗೆ ಜೀವಕಳೆ ಬಂದಿದೆ. ಅದರಲ್ಲೂ ಕೆಆರ್ ಎಸ್ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಈ ಬಾರಿಯ ಬಿರು ಬೇಸಿಗೆ ಬಿಸಿಲಿನ ತಾಪಕ್ಕೆ ಕೃಷ್ಣರಾಜ ಸಾಗರ ಜಲಾಶಯದ (KRS) ನೀರಿನ ಪ್ರಮಾಣ 89 ಅಡಿಗೆ ಕುಸಿದಿತ್ತು.ಆದ್ರೆ, ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವಿನ ಪ್ರಮಾಣದಲ್ಲಿ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಸದ್ಯ ಜಲಾಶಯಕ್ಕೆ 8869 ಕ್ಯೂಸೆಕ್ ನೀರು …
Read More »ಪ್ರಜ್ವಲ್ ರೇವಣ್ಣ ಕೇಸ್: ಅಶ್ಲೀಲ ವಿಡಿಯೋಗಳ ಬಗ್ಗೆ ಕೋರ್ಟ್ ಮುಂದೆ ಸ್ಫೋಟಕ ಸಾಕ್ಷ್ಯ ನುಡಿದ ಕಾರು ಚಾಲಕ
ಬೆಂಗಳೂರು, (ಮೇ 26): ಅಶ್ಲೀಲ ವಿಡಿಯೋ (obscene video) ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಜೈಲಿನಲ್ಲಿದ್ದು, ಇತ್ತ ಪ್ರಜ್ವಲ್ ರೇವಣ್ಣ ಕಾರಿನ ಚಾಲಕ ಕಾರ್ತಿಕ್ ಕೋರ್ಟ್ ಮುಂದೆ ಸ್ಫೋಟಕ ಸಾಕ್ಷ್ಯ ನುಡಿದಿದ್ದಾರೆ. ಪ್ರಜ್ವಲ್ ರೇವಣ್ಣ ಮೊಬೈಲ್ ನಲ್ಲಿ 2000 ಅಶ್ಲೀಲ ಫೋಟೋ, 40 ರಿಂದ 50 ವಿಡಿಯೋಗಳಿದ್ದವು ಎಂದು ಕಾರ್ತಿಕ್, ಇಂದು (ಮೇ 26) ಜನಪ್ರತಿನಿಧಿಗಳ ವಿಶೇಷ ಕೋರ್ಟ್ (Special Court) ನಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಅಲ್ಲದೇ ಮೊಬೈಲ್ ನಲ್ಲಿದ್ದ ಅಶ್ಲೀಲ …
Read More »ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡ, ಮೇ 26: ಮಲೆನಾಡು ಮತ್ತು ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗುತ್ತಿದೆ (Rain). ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಅಂಗನವಾಡಿ, ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಮೇ.27 ಮತ್ತು 28 ರಂದು ಎರಡು ದಿನ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ ಮತ್ತು ಪದವಿ ಪೂರ್ವ …
Read More »ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಎನ್.ವಿ. ಅಂಜಾರಿಯಾ
ಬೆಂಗಳೂರು : ಕರ್ನಾಟಕ ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯನ್ನಾಗಿ ಪದೋನ್ನತಿ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಬಿ.ವಿ. ನಾಗರತ್ನ, ವಿಕ್ರಮ್ ನಾಥ್ ಮತ್ತು ಜೆ.ಕೆ. ಮಹೇಶ್ವರಿ ಅವರನ್ನೊಳಗೊಂಡ ಕೊಲಿಜಿಯಂ ಮೇ 26ರಂದು ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದರು. ಇದೇ ವೇಳೆ ಗೌಹಟಿ ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿ ವಿಜಯ್ ಬಿಶ್ಣೋಯಿ ಮತ್ತು ಬಾಂಬೆ ಹೈಕೋರ್ಟ್ನ …
Read More »