ಬೆಂಗಳೂರು: ಪ್ರತಿವರ್ಷ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ. ಮೈಸೂರು ರಾಜ್ಯವು ಈಗಿನ ಕರ್ನಾಟಕ 1956ರ ನವೆಂಬರ್ 1ರಂದು ಏಕೀಕರಣವಾಗಿದ್ದು, ಇದರ ಸಂಕೇತವಾಗಿ ರಾಜ್ಯೋತ್ಸವ ಆಚರಿಸುತ್ತೇವೆ. ರಾಜ್ಯ ಸರ್ಕಾರ ಕೂಡ ಈ ವರ್ಷ ಕನ್ನಡ ರಾಜ್ಯೋತ್ಸವವನ್ನು ಮನೆ ಮನೆಗಳಲ್ಲಿ ರಂಗೋಲಿ ಹಾಗೂ ದೀಪಗಳನ್ನು ಹಚ್ಚುವ ಮೂಲಕ ಅದ್ಧೂರಿಯಾಗಿ ಆಚರಿಸುವಂತೆ ಮನವಿ ಮಾಡಿದೆ. ವಿಶಾಲ ಮೈಸೂರು ರಾಜ್ಯಕ್ಕೆ ನವೆಂಬರ್ 1, 1973ರಂದು ‘ಕರ್ನಾಟಕ’ ಎಂದು ಮರುನಾಮಕರಣ ಮಾಡಲಾಯಿತು. ಈ ಕುರಿತು ಹಿರಿಯ ನಟ …
Read More »ಡಾ.ಪುನೀತ್ ರಾಜ್ಕುಮಾರ್ ಹೆಸರಿನಲ್ಲಿ ಮುಂದಿನ ತಿಂಗಳಿನಿಂದ ‘ಹೃದಯ ಜ್ಯೋತಿ’ ಯೋಜನೆ ಜಾರಿ
ಬೆಂಗಳೂರು: ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಯುವಕರು ಹೆಚ್ಚು ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಈ ರೀತಿ ಹೃದಯಾಘಾತಕ್ಕೆ ಒಳಗಾದವರಿಗೆ (Golden Hour) ಒಳಗೆ ಚಿಕಿತ್ಸೆ ಕೊಡುವುದು ಬಹಳ ಮುಖ್ಯ. ಹಾಗಾಗಿ, ರಾಜ್ಯ ಸರ್ಕಾರ ಕರ್ನಾಟಕ ರತ್ನ ಡಾ.ಪುನೀತ್ ರಾಜ್ಕುಮಾರ್ ಹೆಸರಿನಲ್ಲೇ ‘ಹೃದಯ ಜ್ಯೋತಿ’ ಎಂಬ ಹೊಸ ಯೋಜನೆಯನ್ನು ಜಾರಿಗೆ ತರುತ್ತಿದೆ. ಈ ವಿಚಾರವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಇಂದು ವಿಕಾಸಸೌಧದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯನವರು ‘ಪುನೀತ್ …
Read More »ಇಂದಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ವಿದ್ಯುತ್, ಕುಡಿಯುವ ನೀರು ಉಚಿತ: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಉಚಿತವಾಗಿ ವಿದ್ಯುತ್ ಹಾಗು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಓದಬೇಕು, ಕನಿಷ್ಠ ಎಸ್ಎಸ್ಎಲ್ಸಿವರೆಗಾದರೂ ಕನ್ನಡ ಮಾಧ್ಯಮದಲ್ಲಿ ಓದಬೇಕು ಎಂದು ಕರೆ ನೀಡಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿಂದು ಶಿಕ್ಷಣ ಇಲಾಖೆ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವದಲ್ಲಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ, ರಾಜ್ಯ ಏಕೀಕರಣವಾದಾಗ ಮೈಸೂರು ರಾಜ್ಯ ಎಂದು ಕರೆಯಲಾಯಿತು. …
Read More »ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಬೆಳಗಾವಿಯಲ್ಲಿ ಸಕಲ ಸಿದ್ಧತೆ ನಡೆದಿದೆ. ಕರಾಳ ದಿನಾಚರಣೆಗೆ ಯಾವುದೇ ರೀತಿಯ ಅನುಮತಿ ಇಲ್ಲ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವಕ್ಕೆ ಕುಂದಾನಗರಿ ಬೆಳಗಾವಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಎಲ್ಲೆಲ್ಲೂ ಹಳದಿ, ಕೆಂಪು ಬಣ್ಣದ ಧ್ವಜಗಳೇ ರಾರಾಜಿಸುತ್ತಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಲಕ್ಷಾಂತರ ಕನ್ನಡಿಗರ ಸಮಾಗಮಕ್ಕೆ ರಾಣಿ ಚನ್ನಮ್ಮ ವೃತ್ತ ಸಾಕ್ಷಿಯಾಗಲಿದೆ. ಇಡೀ ರಾಜ್ಯದಲ್ಲೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತದೆ. ಇಲ್ಲಿನ ಗಲ್ಲಿ ಗಲ್ಲಿಯಲ್ಲಿ ಕನ್ನಡದ ಝೇಂಕಾರ ಮೊಳಗುತ್ತಿದ್ದು, ಕನ್ನಡಮ್ಮನ ಹಬ್ಬಕ್ಕೆ ಕುಂದಾನಗರಿಯಲ್ಲಿ ಸಕಲ ತಯಾರಿ ನಡೆದಿದೆ. ರಾಣಿ ಚನ್ನಮ್ಮ ವೃತ್ತವಂತೂ ಅಕ್ಷರಶಃ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಚನ್ನಮ್ಮ …
Read More »ರಾಜ್ಯೋತ್ಸವಕ್ಕೆ ರಜೆ ಹಾಕಿ ಬೆಂಗಳೂರಿನಿಂದ ಬಂದ ಪೊಲೀಸ್
ಬೆಳಗಾವಿ : ನವೆಂಬರ್ 1 ರಂದು ಕುಂದಾನಗರಿ ಬೆಳಗಾವಿಯಲ್ಲಿ ಕನ್ನಡದ ಝೇಂಕಾರ ಮೊಳಗುತ್ತದೆ. ಇಲ್ಲಿನ ರಾಜ್ಯೋತ್ಸವ ಕಣ್ತುಂಬಿಕೊಳ್ಳಲು ಜಿಲ್ಲೆ ಸೇರಿ ರಾಜ್ಯದ ನಾನಾ ಮೂಲೆಗಳಿಂದ ಕನ್ನಡಿಗರು ಬರುತ್ತಿದ್ದಾರೆ. ಅದರಂತೆ ಈ ಬಾರಿ ಕನ್ನಡ ರಾಜ್ಯೋತ್ಸವಕ್ಕೆ ಬೆಂಗಳೂರಿನ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರು ರಜೆ ಹಾಕಿ ಬಂದಿರುವುದು ವಿಶೇಷವಾಗಿದೆ. ಕಳೆದ 10 ವರ್ಷಗಳಿಂದ ತಪ್ಪದೇ ಕನ್ನಡ ರಾಜ್ಯೋತ್ಸವಕ್ಕೆ ಆಗಮಿಸುತ್ತಿರುವ ಈ ವಿಶೇಷ ಕನ್ನಡ ಅಭಿಮಾನಿ ಅಮಿತ್ ರಾಮಚಂದ್ರ ಮಿರಜಕರ್ ಎಂಬುವವರು …
Read More »ಕೊರತೆಯಿಂದ ಗೋವಿನ ಜೋಳ ಫಸಲಿನ ನೀಡುವ ಹಂತದಲ್ಲಿ ಒಣಗುತ್ತಿದೆ. ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ.
ಚಿಕ್ಕೋಡಿ: ಉತ್ತರ ಕರ್ನಾಟಕ ಭಾಗದಲ್ಲಿ ಹೇರಳವಾಗಿ ಮೆಕ್ಕೆಜೋಳ ಬೆಳೆಯುವುದು ವಾಡಿಕೆ. ಸದ್ಯ ಈ ಭಾಗದಲ್ಲಿ ಗಣನೀಯ ಪ್ರಮಾಣದಲ್ಲಿ ಮಳೆ ಕೊರತೆಯಿಂದಾಗಿ ಕಷ್ಟಪಟ್ಟು ಬೆಳೆದ ಬೆಳೆಗಳು ರೈತನ ಕಣ್ಣ ಮುಂದೆಯೇ ಒಣಗುತ್ತಿವೆ. ಅನ್ನದಾತ ವಿಲಿವಿಲಿ ಒದ್ದಾಡುವಂತಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಾದ್ಯಂತ ಈ ವರ್ಷ ಮುಂಗಾರು, ಹಿಂಗಾರು ಮಳೆ ಕೈಕೊಟ್ಟಿದ್ದು ಲಕ್ಷಾಂತರ ಹೆಕ್ಟೇರ್ನಲ್ಲಿ ಬೆಳೆದ ಗೋವಿನ ಜೋಳ ಫಸಲಿನ ಅಂಚಿಗೆ ಬಂದು ಒಣಗುತ್ತಿದ್ದು, ರೈತನನ್ನು ಸಂಕಷ್ಟದಲ್ಲಿ ಸಿಲುಕಿಸಿದೆ. ಅಲ್ಪ ಮಳೆಯಲ್ಲಿ ಕಷ್ಟಪಟ್ಟು …
Read More »ಬಿಜೆಪಿಯವರಿಂದ 40 ಶಾಸಕರ ಆಪರೇಷನ್ ಸಾಧ್ಯವಿಲ್ಲ, ತಿರುಕನ ಕನಸು: ಎಸ್.ಮಲ್ಲಿಕಾರ್ಜುನ್
ದಾವಣಗೆರೆ: “ಬಿಜೆಪಿಯವರು ಮೊದಲಿನಿಂದಲೂ ಆಪರೇಷನ್ ಕಮಲ ಮಾಡುತ್ತಿದ್ದಾರೆ. ಅವರಿಗಿದು ಹೊಸತಲ್ಲ. ಈ ಹಿಂದೆ 17 ಜನ ಶಾಸಕರನ್ನು ಆಪರೇಷನ್ ಮಾಡಿದ್ದರು. ಈಗ 40 ಶಾಸಕರನ್ನು ಆಪರೇಷನ್ ಕಮಲ ಮಾಡಲಾಗದು. ಅವರದ್ದು ತಿರುಕನ ಕನಸು” ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವ್ಯಂಗ್ಯವಾಡಿದರು. ದಾವಣಗೆರೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಡಿಸಿಎಂ ಡಿ.ಕೆ.ಶಿವಕುಮಾರ್ ಕುರಿತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ನೀಡಿರುವ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ಅವರ ಅನಿಸಿಕೆ ಹೇಳಿದ್ದಾರೆ. ನಮ್ಮ …
Read More »ಮಹಾರಾಷ್ಟ್ರದ ಜತ್ತ ಪಟ್ಟಣದ ಸಮೀಪ ಕೆಲವು ದುಷ್ಕರ್ಮಿಗಳು ಕೆಎಸ್ಆರ್ಟಿಸಿ ಬಸ್ಗೆ ಕಲ್ಲು ತೂರಿದ್ದಾರೆ.
ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ. ಮತ್ತೊಂದೆಡೆ, ಮಹಾರಾಷ್ಟ್ರದ ಜತ್ತ ಪಟ್ಟಣದ ಸಮೀಪ ಕೆಲ ದುಷ್ಕರ್ಮಿಗಳು ಕೆಎಸ್ಆರ್ಟಿಸಿ ಬಸ್ಗೆ ಕಲ್ಲು ತೂರಿರುವ ಘಟನೆ ನಡೆದಿದೆ. ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ವಿಜಯಪುರ ತಾಲೂಕಿನ ಇಂಡಿ ಘಟಕಕ್ಕೆ ಸೇರಿದ ಬಸ್ ಇದಾಗಿದ್ದು, ಜತ್ತ ಪಟ್ಟಣದಿಂದ ವಿಜಯಪುರಕ್ಕೆ ತೆರಳುತ್ತಿತ್ತು. ದುಷ್ಕರ್ಮಿಗಳು ಬಸ್ ಅಡ್ಡಗಟ್ಟಿ ಕಲ್ಲು ತೂರಿದ್ದಾರೆ. ಬಸ್ನ ಹಿಂಬದಿಯ ಗಾಜು ಪುಡಿಯಾಗಿದೆ. ಗಾಜಿನ ಚೂರುಗಳು …
Read More »ಕನ್ನಡ ರಾಜ್ಯೋತ್ಸವ ಕಳೆಗಟ್ಟಿದೆ. ಕುಂದಾನಗರಿ ಬೆಳಗಾವಿಯಲ್ಲಿ ಸಂಭ್ರಮ ಜೋರಾಗಿದೆ.
ಬೆಳಗಾವಿ: ಕನ್ನಡ ರಾಜ್ಯೋತ್ಸವ ಕಳೆಗಟ್ಟಿದೆ. ಕುಂದಾನಗರಿ ಬೆಳಗಾವಿಯಲ್ಲಿ ಸಂಭ್ರಮ ಜೋರಾಗಿದೆ. ರಾಜ್ಯೋತ್ಸವಕ್ಕೆ ಟೀಶರ್ಟ್ಗಳ ಖರೀದಿ ಭರಾಟೆ ಹೆಚ್ಚಾಗಿದ್ದು, ಕನ್ನಡ ನಾಡು, ನುಡಿ ಕುರಿತು ಜಾಗೃತಿ ಜೊತೆ ಕನ್ನಡಾಭಿಮಾನ ಮೂಡಿಸುವ ಟೀಶರ್ಟ್ಗಳ ಖರೀದಿಗೆ ಕನ್ನಡಮ್ಮನ ಕಂದಮ್ಮಗಳು ಮುಗಿ ಬಿದ್ದಿದ್ದಾರೆ. ಬೆಳಗಾವಿಯಿಂದ ಲಂಡನ್ಗೂ ಟೀಶರ್ಟ್ ಕಳಿಸಿದ್ದು ವಿಶೇಷವಾಗಿದೆ. ಇಡೀ ರಾಜ್ಯದಲ್ಲಿ ರಾಜ್ಯೋತ್ಸವ ಆಚರಣೆ ಒಂದೆಡೆಯಾದರೆ, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆಚರಿಸುವ ರಾಜ್ಯೋತ್ಸವ ತುಂಬಾ ವಿಶೇಷವಾಗಿಯೇ ಇರುತ್ತದೆ. ಅಷ್ಟೊಂದು ಸಂಭ್ರಮ, ಸಡಗರದಿಂದ ಇಲ್ಲಿ ರಾಜ್ಯೋತ್ಸವ ಆಚರಿಸಲಾಗುತ್ತದೆ. …
Read More »”ದೇಶಕ್ಕಾಗಿ ನೆಹರು ಕುಟುಂಬದವರು ಬಲಿದಾನ ಮಾಡಿದ್ದಾರೆ. ಬಿಜೆಪಿ ದೇಶಕ್ಕಾಗಿ ಏನೂ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ”ದೇಶಕ್ಕಾಗಿ ನೆಹರು ಕುಟುಂಬದವರು ಬಲಿದಾನ ಮಾಡಿದ್ದಾರೆ. ಆದ್ರೆ, ಬಿಜೆಪಿಯವರು ದೇಶಕ್ಕಾಗಿ ಏನೂ ಮಾಡಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿ ಬಳಿಯ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಇಂದಿರಾ ಗಾಂಧಿ 39ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ”ಇಂದಿರಾ ಗಾಂಧಿ ದೇಶಕ್ಕಾಗಿ ಪ್ರಾಣ ಕಳೆದುಕೊಂಡರು. ಅಟಲ್ ಬಿಹಾರಿ ವಾಜಪೇಯಿ ಅವರು ಇಂದಿರಾ ಗಾಂಧಿಯನ್ನು ದುರ್ಗೆ ಎಂದು ಕರೆದಿದ್ದರು. ಬಿಜೆಪಿಗರು ರಾಷ್ಟ್ರ ಪ್ರೇಮದ ಬಗ್ಗೆ ಮಾತನಾಡುತ್ತಾರೆ. ಆದರೆ, ದೇಶಕ್ಕಾಗಿ ಅವರ್ಯಾರು …
Read More »
Laxmi News 24×7