Breaking News

ಕಾಮಗಾರಿ ಮುಗಿದು ಐದು ವರ್ಷ ಕಳೆದರೂ ಸಾರ್ವಜನಿಕ ಬಳಕೆಗೆ ಮುಕ್ತವಾಗಿಲ್ಲ.

ಬೆಳಗಾವಿ: ರಾಜ್ಯದಲ್ಲಿ ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅಧಿಕಾರವಧಿಯಲ್ಲಿ ಇಲ್ಲಿನ ಅಶೋಕ ನಗರದಲ್ಲಿ ನಿರ್ಮಾಣಗೊಂಡಿದ್ದ ಕ್ರೀಡಾ ಸಂಕೀರ್ಣಕ್ಕೆ ಹಿಡಿದ ಗ್ರಹಣ ಇನ್ನೂ ಬಿಟ್ಟಿಲ್ಲ. ಕಾಮಗಾರಿ ಮುಗಿದು ಐದು ವರ್ಷ ಕಳೆದರೂ ಸಾರ್ವಜನಿಕ ಬಳಕೆಗೆ ಮುಕ್ತವಾಗಿಲ್ಲ.   ಈಗ ಸಿದ್ದರಾಮಯ್ಯ ಅವರೇ ಮತ್ತೆ ಮುಖ್ಯಮಂತ್ರಿಯಾಗಿದ್ದು, ಈಗಲಾದರೂ ಅದು ಬಳಕೆಯಾಗುವುದೇ? ಅಥವಾ ನಿಷ್ಪ್ರಯೋಜಕವಾಗಿಯೇ ಉಳಿಯುವುದೇ? ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್‌ನ ಫಿರೋಜ್‌ ಸೇಠ್‌ ಉತ್ತರ ಕ್ಷೇತ್ರದ ಶಾಸಕರಾಗಿದ್ದಾಗ ಮಹಾನಗರ ಪಾಲಿಕೆ …

Read More »

ಮನಬಂದಂತೆ ವಾಹನಗಳನ್ನು ನಿಲುಗಡೆ ಮಾಡುತ್ತಿರುವುದಕ್ಕೆ ಕಡಿವಾಣ ಹಾಕಬೇಕು

ಬೆಳಗಾವಿ: ಇಲ್ಲಿನ ಸರ್ಕಾರಿ ಸರ್ದಾರ್ಸ್‌ ಪ್ರೌಢಶಾಲೆಯಿಂದ ಲಿಂಗರಾಜ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದ ರಸ್ತೆಯಲ್ಲಿ ಜನರು ಬೇಕಾಬಿಟ್ಟಿಯಾಗಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ.ಇದೇ ರಸ್ತೆಯಲ್ಲಿ ಆಟದ ಮೈದಾನವಿದೆ. ಅಕ್ಕ-ಪಕ್ಕದಲ್ಲೇ ಶಿಕ್ಷಣ ಸಂಸ್ಥೆಗಳಿವೆ. ಈ ರಸ್ತೆ ಸದಾ ಜನದಟ್ಟಣೆಯಿಂದ ಕೂಡಿರುತ್ತದೆ. ಆದರೆ, ಕೆಲವರು ದ್ವಿಚಕ್ರ ವಾಹನ ಮತ್ತು ಕಾರುಗಳನ್ನು ರಸ್ತೆಬದಿ ಬೇಕಾಬಿಟ್ಟಿಯಾಗಿ ನಿಲ್ಲಿಸುತ್ತಿರುವುದರಿಂದ ಸಂಚಾರ ಸಮಸ್ಯೆ ತಲೆದೋರುತ್ತಿದೆ. ಸಂಬಂಧಿತ ಅಧಿಕಾರಿಗಳು ಇತ್ತ ಗಮನಹರಿಸಿ, ಮನಬಂದಂತೆ ವಾಹನಗಳನ್ನು ನಿಲುಗಡೆ ಮಾಡುತ್ತಿರುವುದಕ್ಕೆ ಕಡಿವಾಣ ಹಾಕಬೇಕು. …

Read More »

ಗುಣಮಟ್ಟದ ಶಿಕ್ಷಣ ಪಡೆದು ಮಕ್ಕಳು ಸಾಧನೆಯ ಶಿಖರ ಏರಬೇಕೆಂದು ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ

ಎಂ.ಕೆ.ಹುಬ್ಬಳ್ಳಿ: ಮಕ್ಕಳಲ್ಲಿ ಉತ್ತಮ ಆಚಾರ-ವಿಚಾರಗಳನ್ನು ಬೆಳೆಸಬೇಕು. ಗುಣಮಟ್ಟದ ಶಿಕ್ಷಣ ಪಡೆದು ಮಕ್ಕಳು ಸಾಧನೆಯ ಶಿಖರ ಏರಬೇಕೆಂದು ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು. ಸಮೀಪದ ದಾಸ್ತಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಬುಧವಾರ ನಡೆದ 2023-24ನೇ ಸಾಲಿನ ಶಾಲಾ ಪ್ರಾರಂಭೋತ್ಸವದಲ್ಲಿ ಮಾತನಾಡಿದರು. ಸ ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ಅನುದಾನದ ಜೊತೆಗೆ ಸಾರ್ವಜನಿಕರ ಸಹಾಯ, ಸಹಕಾರವು ಮುಖ್ಯ ಎಂದರು. ಶಾಸಕ ಬಾಬಾಸಾಹೇಬ ಪಾಟೀಲ ಹೂ ಕೊಟ್ಟು, ಸಿಹಿ ತಿನ್ನಿಸಿ ವಿದ್ಯಾರ್ಥಿಗಳನ್ನು …

Read More »

ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿದರೆ ಮಾತ್ರ ನನಗೆ ಹೆಚ್ಚಿನ ನೆಮ್ಮದಿಯೆಂದು ಶಾಸಕ ವಿಶ್ವಾಸ್ ವೈದ್ಯ

ಸವದತ್ತಿ: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿದರೆ ಮಾತ್ರ ನನಗೆ ಹೆಚ್ಚಿನ ನೆಮ್ಮದಿಯೆಂದು ಶಾಸಕ ವಿಶ್ವಾಸ್ ವೈದ್ಯ ಹೇಳಿದರು. ಇಲ್ಲಿನ ಯಲ್ಲಮ್ಮ ಪುರಸಭೆ ಸಭಾಂಗಣದಲ್ಲಿ ಜರುಗಿದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ ಅವರು, ನಗರದಲ್ಲಿ ಮನೆಗಳಿಗೆ ಪ್ರತಿದಿನ ನೀರು ಪೂರೈಕೆಯಾಗಬೇಕಿದೆ. ಆ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಸಹಕರಿಸಿರಿ. ಜನರ ಮೂಲ ಸೌಕರ್ಯಗಳಿಗೆ ಹೆಚ್ಚು ಆಧ್ಯತೆ ನೀಡಬೇಕಿರುವುದು ಆಧ್ಯ ಕರ್ತವ್ಯವಾಗಿದೆ. 18 ಸಾವಿರ ಜನತೆಗಾಗಿ 1997ರಲ್ಲಿ ಜಾಕ್ವೆಲ್ ಸ್ಥಾಪನೆಯಾಗಿತ್ತು. ಸಧ್ಯ …

Read More »

ಕುಡಚಿ: ಇನ್ನೂ ಕಾಡುತ್ತಿದೆ ಮೂಲಸೌಕರ್ಯ ಕೊರತೆ

ಕುಡಚಿ: ಪರಿಶಿಷ್ಟ ಜಾತಿಗೆ ಮೀಸಲಾದ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಕುಡಚಿ ಕೂಡ ಒಂದು. ಹಿಂದುಳಿದ, ಪರಿಶಿಷ್ಟ ಹಾಗೂ ತುಳಿತಕ್ಕೊಳಗಾದ ಸಮುದಾಯಗಳ ಜನ ಇಲ್ಲಿ ಹೆಚ್ಚಾಗಿದ್ದಾರೆ. ನೂತನ ಶಾಸಕ ಮಹೇಂದ್ರ ತಮ್ಮಣ್ಣವರ ಅವರು ಈ ಎಲ್ಲ ಸಮುದಾಯಗಳನ್ನು ಹೇಗೆ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ ಮತ್ತು ಅವರ ಬೇಡಿಕೆಗೆ ಹೇಗೆ ಸ್ಪಂದಿಸುತ್ತಾರೆ ಎಂಬುದರ ಮೇಲೆ ಅವರ ಯಶಸ್ಸು ನಿಂತಿದೆ.   ಕುಡಚಿಯು ಬೆಳಗಾವಿ ಜಿಲ್ಲಾ ಕೇಂದ್ರದಿಂದ 104 ಕಿ.ಮೀ ದೂರವಿದೆ. ಕ್ಷೇತ್ರದ ಜನ …

Read More »

K.S.R.T.C. ಬಸ್ ಮತ್ತು ಕಾರ್ ನಡುವೆ ಬುಧವಾರ ಮಧ್ಯಾಹ್ನ ಮುಖಾಮುಖಿ ಡಿಕ್ಕಿ

ಶಿರಸಿ: ಇಲ್ಲಿನ ಕುಮಟಾ ರಸ್ತೆಯ ಬೆಣ್ಣೆಹೊಳೆ ಬಳಿ ಕೆ‌ಎಸ್‌ಆರ್ ಟಿಸಿ ಬಸ್ ಮತ್ತು ಕಾರ್ ನಡುವೆ ಬುಧವಾರ ಮಧ್ಯಾಹ್ನ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಹಾಗೂ ಬಸ್ ನಲ್ಲಿದ್ದವರು ಎಲ್ಲರೂ ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಬಸ್ ಭಟ್ಕಳದಿಂದ ಗೋಕಾಕ ಕಡೆ ಸಾಗುತ್ತಿತ್ತು. ಕಾರು ಗುಜರಾತ್ ಮೂಲದ ಕುಟುಂಬಕ್ಕೆ ಸೇರಿದೆ. ಅಪಘಾತ ಸಂಭವಿಸಿದ ವೇಳೆ ಸ್ಥಳದಲ್ಲಿದ್ದ ಆರ್ ಎನ್ ಎಸ್ ಕಂಪನಿಯ ಗೋವಿಂದ ಭಟ್ ಅವರು  ಪೋಲೀಸರಿಗೆ ಮಾಹಿತಿ ನೀಡಿದರಲ್ಲದೆ  ವಾಹನ …

Read More »

ಒಂದೇ ಕುಟುಂಬದ ಇಬ್ಬರು ಮೃತಪಟ್ಟ ಹೃದಯ ವಿದ್ರಾವಕ ಘಟನೆ

ಸುರೇಬಾನ: ಮಗ ಮೃತಪಟ್ಟ ಸುದ್ದಿ ತಿಳಿದು ತಾಯಿ ಸಹ ಮೃತಪಟ್ಟಿದ್ದು, ಒಂದೇ ಕುಟುಂಬದ ಇಬ್ಬರು  ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬುಧವಾರ ಸಂಜೆ ರಾಮದುರ್ಗ ತಾಲೂಕಿನ ಸುರೇಬಾನ ಸಮೀಪದ ಹಂಪಿಹೊಳಿ ಗ್ರಾಮದಲ್ಲಿ ನಡೆದಿದೆ.  ಬಾಲಪ್ಪ ವೆಂಕಪ್ಪ ತಳವಾರ(೫೦), ಬಾಲಪ್ಪನ ತಾಯಿ ರುದ್ರವ್ವ ವೆಂ‌ ತಳವಾರ(೭೦) ಮೃತಪಟ್ಟ ದುರ್ದೈವಿಗಳು.   ಹಣ್ಣಿನ ಸುಗ್ಗಿ ಬಂತೆಂದರೆ ಸಾಕು ಮೃತ ಬಾಲಪ್ಪ ಮರವೆರಿ ನೇರಲ ಹಣ್ಣು ಹರಿಯತ್ತಿದ್ದ. ಆದರೆ ಆಯತಪ್ಪಿ ಮರದಿಂದ ಕೆಳಗೆ ಬಿದ್ದು …

Read More »

ಭಾರಿ ಸೇಕೆಯಿಂದ ಕೂಡಿದ್ದ ಬೆಳಗಾವಿಗೆ ನಿನ್ನೆ ರಾತ್ರಿಯಿಂದ ಕೊಂಚ ನಿರಾಳ

ಬೆಳಗಾವಿ: ಬುಧವಾರ ರಾತ್ರಿ ಬೆಳಗಾವಿಯಲ್ಲಿ ಉತ್ತಮ ಮಳೆಯಾಗಿದೆ. ರಾತ್ರಿ 11 ಗಂಟೆ ಸುಮಾರಿಗೆ ಆರಂಭವಾದ ಮಳೆ ಮಧ್ಯರಾತ್ರಿ ನಂತರವೂ ಮುಂದುವರಿದಿತ್ತು.  ರಾತ್ರಿಯಾಗುತ್ತಿದ್ದಂತೆ ಅನಿರೀಕ್ಷಿತವಾಗಿ ಮಳೆ ಆರಂಭವಾಯಿತು. ಅಬ್ಬರವಿಲ್ಲದಿದ್ದರೂ ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ನಿರಂತರವಾಗಿ ಮಳೆ ಮುಂದುವರಿದಿತ್ತು. ಭಾರೀ ಸೆಕೆಯಿಂದಾಗಿ ಜನರು ತತ್ತರಿಸುತ್ತಿದ್ದ ಸಂದರ್ಭದಲ್ಲಿ ಮಳೆ ತಂಪೆರೆಯಿತು.

Read More »

ಜಗದೀಶ ಶೆಟ್ಟರ್ ಜೊತೆ ಕಾಂಗ್ರೆಸ್ ಪಕ್ಷ ಇರಲಿದೆ

ಹುಬ್ಬಳ್ಳಿ: ‘ಕಷ್ಟ ಕಾಲದಲ್ಲಿ ಜಗದೀಶ ಶೆಟ್ಟರ್ ಕಾಂಗ್ರೆಸ್ ಜೊತೆಯಿದ್ದು, ರಾಜ್ಯದಲ್ಲಿ ಸರ್ಕಾರ ಬರಲು ಕಾರಣರಾಗಿದ್ದಾರೆ. ಅವರ ಜೊತೆ ಕಾಂಗ್ರೆಸ್ ಪಕ್ಷ ಇರಲಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.   ಹುಬ್ಬಳ್ಳಿಯ ಮಧುರಾ ಎಸ್ಟೇಟ್‌ನಲ್ಲಿರುವ ಪ್ರಕಲ್ಪ ನಿವಾಸದಲ್ಲಿ ಬುಧವಾರ ಶೆಟ್ಟರ್ ಜೊತೆ ಚರ್ಚಿಸಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ‘ಶೆಟ್ಟರ್, ಸವದಿ, ಪುಟ್ಟಣ್ಣ, ಶಿವಲಿಂಗೇಗೌಡ, ಗುಬ್ಬಿ ಶ್ರೀನಿವಾಸ, ಬಾಬುರಾವ್ ಚಿಂಚನಸೂರು ಅವರು ಪಕ್ಷ ಸೇರ್ಪಡೆಯಾಗಿದ್ದರಿಂದ ನಮಗೆ ದೊಡ್ಡ ಶಕ್ತಿ ಬಂದಿದೆ. ಅವರು ಸಂಘಟನೆಯಲ್ಲಿ ತೊಡಗಿಕೊಂಡು …

Read More »

ಶೆಟ್ಟರ್ ಜೊತೆ ಉಪಹಾರ ಸೇವಿಸಿದ ಮುಖಂಡರು

ಹುಬ್ಬಳ್ಳಿ: ಇಲ್ಲಿನ ಕೇಶ್ವಾಪುರದ ಮಧುರಾ ಎಸ್ಟೇಟ್’ನಲ್ಲಿರುವ ಕಾಂಗ್ರೆಸ್ ಮುಖಂಡ ಜಗದೀಶ ಶೆಟ್ಟರ್ ನಿವಾಸಕ್ಕೆ ಬುಧವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು. ಶೆಟ್ಟರ್ ಜೊತೆ ಉಪಹಾರ ಸೇವಿಸಿದ ಮುಖಂಡರು ಅರ್ಧ ತಾಸಿಗೂ ಹೆಚ್ಚು ಹೊತ್ತು ಗೋಪ್ಯ ಚರ್ಚೆ ನಡೆಸಿದರು. ಸಚಿವರಾದ ಲಕ್ಷ್ಮಿ ಹೆಬ್ಬಾಳಕರ, ಸತೀಶ ಜಾರಕಿಹೊಳಿ ಮತ್ತು ಶಾಸಕ ಎನ್.ಎಚ್. ಕೋನರಡ್ಡಿ ಇದ್ದರು. ‘ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಪಕ್ಷದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು’ …

Read More »