Breaking News

ಸುವರ್ಣ ವಿಧಾನಸೌಧಕ್ಕೆ ಕಚೇರಿಗಳ ಸ್ಥಳಾಂತರ: ಹೊಸ ಸರ್ಕಾರದತ್ತ ನಿರೀಕ್ಷೆಯ ನೋಟ

ಬೆಳಗಾವಿ: ದಶಕದ ಹಿಂದೆ ಉದ್ಘಾಟನೆಯಾದ ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಬೆಂಗಳೂರಿನಲ್ಲಿರುವ ಪ್ರಮುಖ ಇಲಾಖೆಗಳ ಕಚೇರಿಗಳನ್ನು ಸ್ಥಳಾಂತರ ವಿಚಾರವಾಗಿ, ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಾವ ನಿಲುವು ತಳೆಯಲಿದೆ ಎಂಬ ಜಿಜ್ಞಾಸೆ ಈಗ ಗಡಿಭಾಗದ ಕನ್ನಡಿಗರಲ್ಲಿ ಉಂಟಾಗಿದೆ.   2013ರಲ್ಲಿ ಅಧಿಕಾರಕ್ಕೇರಿದ್ದ ಕಾಂಗ್ರೆಸ್‌ ಸರ್ಕಾರದಲ್ಲಿ ಸಿದ್ದರಾಮಯ್ಯ ಐದು ವರ್ಷಗಳ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿದ್ದರು. ಆದರೆ, ಸೌಧಕ್ಕೆ ಕಚೇರಿಗಳ ಸ್ಥಳಾಂತರಕ್ಕೆ ಸಕಾರಾತ್ಮಕ ನಿಲುವು ತಳೆಯಲಿಲ್ಲ ಎಂಬುದು ಗಡಿ ಕನ್ನಡಿಗರ ಅಸಮಾಧಾನಕ್ಕೆ ಕಾರಣವಾಗಿತ್ತು. ಅವರನ್ನು ಐದು …

Read More »

ಉದ್ಯೋಗ ಅರಸಿ ವಲಸೆ ಹೋಗುವವರ ಸಮಸ್ಯೆ ನೀಗಿಸುರುವರೇ ಶಾಸಕ ಮಹಾಂತೇಶ ಕೌಜಲಗಿ?

ಬೈಲಹೊಂಗಲ: ಬೈಲಹೊಂಗಲ ಮತಕ್ಷೇತ್ರದ ಹೆಸರಲ್ಲೇ ಒಂದು ಐತಿಹಾಸಿಕ, ಕ್ರಾಂತಿಕಾರಕ ಶಕ್ತಿ ಅಡಗಿದೆ. ಎರಡನೇ ಬಾರಿ ಆಯ್ಕೆಯಾದ ಶಾಸಕ ಮಹಾಂತೇಶ ಕೌಜಲಗಿ ಅವರು ಹಳೆಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಜೊತೆಗೆ ಕ್ಷೇತ್ರದ ಜನರ ಹೊಸ ನಿರೀಕ್ಷೆಗಳನ್ನು ಈಡೇರಿಸುವ ಸವಾಲು ಎದುರಿಸಬೇಕಾಗಿದೆ.‌ ಈ ಕ್ಷೇತ್ರದಲ್ಲಿ ಅವರ ಎರಡೂ ಗೆಲುವುಗಳಿಗೆ ಅವರಿಗಿಂತ ಹೆಚ್ಚಾಗಿ ಬಿಜೆಪಿ ನಾಯಕರ ಒಳಜಗಳವೇ ಕಾರಣ ಎಂಬುದು ಈಗ ಜನಜನಿತ. ಈ ಅವಕಾಶವು ಮಹಾಂತೇಶ ಅವರಿಗೆ ಎರಡು ಬಾರಿ ಒಲಿದಿದೆ. ಆದರೆ, ಇದು …

Read More »

ಕಾಳಮ್ಮವಾಡಿ ಜಲಾಶಯದಿಂದ ದೂಧಗಂಗೆಗೆ ನೀರು

ಚಿಕ್ಕೋಡಿ: ಮಹಾರಾಷ್ಟ್ರದ ಕಾಳಮ್ಮವಾಡಿ ಜಲಾಶಯದಿಂದ ಎರಡನೇ ಬಾರಿಗೆ ತಾಲ್ಲೂಕಿನ ದೂಧಗಂಗಾ ನದಿಗೆ ನೀರು ಬಿಡುಗಡೆ ಮಾಡಲಾಗಿದ್ದು, ರೈತರು ಹಾಗೂ ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಹೇಳಿದರು.   ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 18ರಂದು ಮಹಾರಾಷ್ಟ್ರದ ಕೊಲ್ಹಾಪುರದ ನೀರಾವರಿ ಇಲಾಖೆಯ ಸೂಪರಿಟೆಂಡೆಂಟ್ ಎಂಜಿನಿಯರ್ ಸುರವೆ ಹಾಗೂ ಎಇ ಎಬಾಂದಿವಾಡೇಕರ ಅವರನ್ನು ಭೇಟಿ ಮಾಡಿ ನೀರಿನ ಸಮಸ್ಯೆ ಕುರಿತು ಮನವರಿಕೆ ಮಾಡಿ ದೂಧಗಂಗಾ ನದಿಗೆ …

Read More »

ಯಾರ ಒತ್ತಡಕ್ಕೂ ಮಣಿಯದೆ ಪಾರದರ್ಶಕ ಮತ್ತು ನ್ಯಾಯಸಮ್ಮತವಾಗಿ ಕೆಲಸ ಮಾಡಬೇಕು: ಬಾಬಾಸಾಹೇಬ ಪಾಟೀಲ

ಕಿತ್ತೂರು: ‘ಯಾರ ಒತ್ತಡಕ್ಕೂ ಮಣಿಯದೆ ಪಾರದರ್ಶಕ ಮತ್ತು ನ್ಯಾಯಸಮ್ಮತವಾಗಿ ಕೆಲಸ ಮಾಡಬೇಕು. ಕಚೇರಿಗೆ ಬರುವ ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತ ನೀಡಬೇಕು’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು. ಇಲ್ಲಿಯ ತಾಲ್ಲೂಕು ಪಂಚಾಯ್ತಿ ಸಭಾಭವನದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮನ್ವಯತೆಯಿಂದ ಕೆಲಸ ಮಾಡೋಣ. ಸಾರ್ವಜನಿಕರಿಗೆ ಒಳ್ಳೆಯ ಆಡಳಿತ ನೀಡುವ ಸಂದೇಶ ಕೊಡೋಣ’ ಎಂದರು. ‘ಎಲ್ಲ ಕೆಲಸಗಳಲ್ಲೂ ಉತ್ತಮ ಗುಣಮಟ್ಟವಿರಲಿ. ಚುನಾವಣೆ ಪ್ರಚಾರದ ವೇಳೆ …

Read More »

ರಾಯಬಾಗ: ಹಣ ಕೇಳಿದ ಅಧಿಕಾರಿ ವಿರುದ್ಧ ಪ್ರತಿಭಟನೆ

ರಾಯಬಾಗ: ‘ಭ್ರಷ್ಟರೇ ಅಧಿಕಾರ ಬಿಟ್ಟು ತೊಲಗಿ, ಇಲ್ಲವೇ ಬಡ ಜನರ ಕೆಲಸಗಳನ್ನು ಮಾಡಿ ಕೊಡಿ’ ಎಂದು ತಾಲ್ಲೂಕಿನ ಬಸ್ತವಾಡ ಗ್ರಾಮದ ರೈತ ಅನಿಲ ಕಾಂಬಳೆ ಶುಕ್ರವಾರ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು.   ತಮ್ಮ ಜಮೀನು ಸರ್ವೆ ಮಾಡಲು ರಾಯಬಾಗ ಸರ್ವೇಯರ್ ಹಣದ ಬೇಡಿಕೆ ಇಟ್ಟಿದ್ದು, ಅವರ ವಿರುದ್ಧ ಮೇಲಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಿದರು. ತಮ್ಮ ಜಮೀನನ್ನು ಸರ್ವೆ ಮಾಡಿ ಕೊಡಿ …

Read More »

ದೇಶದ ಅಭಿವೃದ್ಧಿಗೆ ಸಾಕ್ಷಿಯಾಗಿದ್ದ ಹಳೆಯ ಸಂಸತ್ ಭವನದ ಗತವೈಭವ..

ಹೈದರಾಬಾದ್: ಭಾರತದ ಸಂಸತ್ತಿನ ಭವನ ದಶಕಗಳಿಂದ ದೇಶದ ಜನರ ಏಕತೆ, ಶಕ್ತಿ ಮತ್ತು ಸಾಮೂಹಿಕ ಇಚ್ಛೆಯ ಸಂಕೇತವಾಗಿದೆ. ಆದರೆ ಬದಲಾವಣೆ ಸಹಜ. ಅಂತೆಯೇ ನೂತನ ಸಂಸತ್ ಭವನ ಉದ್ಘಾಟನೆ ಬಳಿಕ ಹಳೆಯ ಸಂಸತ್ ಭವನವು ಮೂಕ ಪ್ರೇಕ್ಷಕನಾಗಲಿದೆ. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಆಗಸ್ಟ್ 15, 1947 ರಂದು ಮಧ್ಯರಾತ್ರಿ ‘ಟ್ರಿಸ್ಟ್ ವಿತ್ ಡೆಸ್ಟಿನಿ’ ಭಾಷಣದ ಮೂಲಕ ಆರಂಭವಾದ ಇತಿಹಾಸಕ್ಕೆ ಇಂದು (2023ರ ಮೇ 28) ಔಪಚಾರಿಕ ವಿದಾಯ ಹೇಳಿ ಹೊಸದಕ್ಕೆ …

Read More »

ಬೆಂಗಳೂರಲ್ಲಿ ವೃದ್ಧೆಯ ಕೈಕಾಲು ಕಟ್ಟಿ ಹತ್ಯೆಗೈದು ದರೋಡೆ

ಬೆಂಗಳೂರು: ಒಂಟಿ ವೃದ್ಧೆಯ ಕೈಕಾಲು ಕಟ್ಟಿ ಬರ್ಬರವಾಗಿ ಹತ್ಯೆಗೈದು, ಮನೆಯಲ್ಲಿದ್ದ ಚಿನ್ನಾಭರಣ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿರುವ ಘಟನೆ ಶನಿವಾರ ಸಂಜೆ‌ ಮಹಾಲಕ್ಷ್ಮಿ ಲೇಔಟಿನಲ್ಲಿ ನಡೆದಿದೆ. ಕಮಲಮ್ಮ (80) ಹತ್ಯೆಯಾದ ವೃದ್ಧೆ. ಮೃತಳ ಪತಿ ಆರು ತಿಂಗಳ ಹಿಂದೆಷ್ಟೇ ಸಾವನ್ನಪ್ಪಿದ್ದರು. ಮೂವರು ಮಕ್ಕಳಿದ್ದು, ಅವರು ಸಹ ಬೇರೆ ಬೇರೆ ಕಡೆ ವಾಸವಿದ್ದರಿಂದ ಕಮಲಮ್ಮ ಒಬ್ಬರೇ ವಾಸವಿದ್ದರು. ನಿನ್ನೆ(ಶನಿವಾರ) ಸಂಜೆ ಮನೆ ಪ್ರವೇಶಿಸಿರುವ ಹಂತಕರು‌ ವೃದ್ಧೆಯ ಕೈಕಾಲು‌ ಕಟ್ಟಿ, ಬಾಯಿಗೆ ಪ್ಲಾಸ್ಟರ್ ಅಂಟಿಸಿ …

Read More »

ನೀತಿ ಆಯೋಗದ ಸಭೆ ಬಹಿಷ್ಕರಿಸಿದ 7 ಸಿಎಂಗಳು

ನವದೆಹಲಿ, ಮೇ 27- ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ನೀತಿ ಆಯೋಗದ ಸಭೆಗೆ ದೇಶದ ಏಳು ಮುಖ್ಯಮಂತ್ರಿಗಳು ಗೈರು ಹಾಜರಾಗಿದ್ದಾರೆ.ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಹಾಜರಾಗದಿರಲು ಆರೋಗ್ಯದ ಕಾರಣಗಳನ್ನು ಉಲ್ಲೇಖಿಸಿದ್ದರೆ, ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗೈರು ಹಾಜರಿಗೆ ಯಾವುದೇ ನಿರ್ದಿಷ್ಟ ಕಾರಣ ನೀಡಿಲ್ಲ. ಕೇಂದ್ರದ ಇತ್ತೀಚಿನ ಸುಗ್ರೀವಾಜ್ಞೆಗೆ ಸಭೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ ಮತ್ತು ದೇಶದಲ್ಲಿ …

Read More »

ಶಾಂತಿ ಕದಡುವ ಸಂಘಟನೆಯ ಮೇಲೆ ಕಠಿಣ ಕ್ರಮ : ಸಿಎಂ ವಾರ್ನಿಂಗ್

ಬೆಂಗಳೂರು, ಮೇ 27- ಸಮಾಜದಲ್ಲಿ ಶಾಂತಿ ಹಾಗೂ ಸಾಮರಸ್ಯ ಕದಡುವ ಕೆಲಸ ಮಾಡುವ ಯಾವುದೇ ಸಂಘಟನೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 59 ನೇ ಪುಣ್ಯ ತಿಥಿಯ ಅಂಗವಾಗಿ ಇಂದು ವಿಧಾನಸೌಧದ ಬಳಿ ನೆಹರು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘ ಪರಿವಾರ ನಿಷೇಧ ಮಾಡುವ ಬಗ್ಗೆ ಸರ್ಕಾರ ಹೇಳಿಲ್ಲ. ಕಾನೂನು …

Read More »

ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ

ಬೆಂಗಳೂರು,ಮೇ 27- ಸಚಿವ ಸಂಪುಟದಲ್ಲಿ ಅವಕಾಶ ವಂಚಿತರು ಅಸಮಾಧಾನಗೊಂಡಿದ್ದು, ಹೈಕಮಾಂಡ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಚಿವಾಕಾಂಕ್ಷಿಗಳ ಬೆಂಬಲಿಗರು ಮೈಸೂರು ಸೇರಿಂತೆ ಕೆಲವು ಕಡೆ ರಸ್ತೆಗಿಳಿದು ಪ್ರತಿಭಟನೆಯನ್ನೂ ನಡೆಸಿದ್ದಾರೆ.ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಸಂಪುಟದಲ್ಲಿರುವ ಎಲ್ಲಾ 34 ಸ್ಢಾನಗಳಿಗೂ ಸಚಿವರನ್ನು ನಿಯೋಜಿಸುವ ದಿಟ್ಟ ನಿರ್ಧಾರ ಕೈಗೊಂಡಿದೆ. ಸಚಿವ ಸ್ಥಾನದ ಮೇಲೆ ಸುಮಾರು 70ಕ್ಕೂ ಹೆಚ್ಚು ಮಂದಿ ಕಣ್ಣಿಟ್ಟಿದ್ದರು, ಅವರಲ್ಲಿ ಬಹುತೇಕರು ದೆಹಲಿಗೆ ತೆರಳಿ ಲಾಬಿ ನಡೆಸಿದ್ದರು. ಮುಖ್ಯಮಂತ್ರಿ …

Read More »