Breaking News

ಸಂಸತ್ತಿನ ಕಾರ್ಯಗಳನ್ನು ಸೋನಿಯಾ ರಾಜಕೀಯಗೊಳಿಸ್ತಿದ್ದಾರೆ’

ನವದೆಹಲಿ :ಸಂಸತ್ತಿನ ಕಾರ್ಯವ್ಯಾಪ್ತಿಯಲ್ಲಿ ಸೋನಿಯಾ ಗಾಂಧಿ ರಾಜಕೀಯಯ ಬೆರೆಸಲು ಹೊರಟಿದ್ದಾರೆ. ಅವರು ಸಂಸತ್ತಿನ ವಿಶೇ‍ಷ ಅಧಿವೇಶನದಲ್ಲಿ ವಿವಾದಗಳಿಗೆ ಮುನ್ನುಡಿ ಬರೆಯಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ಕರೆದಿರುವ ವಿಶೇ‍ಷ ಅಧಿವೇಶನದ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬರೆದಿರುವ ಪತ್ರದ ಬಗ್ಗೆ ಬುಧವಾರ ಮಾತನಾಡಿರುವ ಅವರು, ಸೋನಿಯಾ ಅವರ ಪತ್ರವು …

Read More »

ಬ್ಲ್ಯಾಕ್ ಆ್ಯಂಡ್ ವೈಟ್ ಮನಿ ಹೆಸರಿನಲ್ಲಿ ರೈತನಿಗೆ ಮೋಸ

ಬ್ಲ್ಯಾಕ್ ಆ್ಯಂಡ್ ವೈಟ್ ಮನಿ ಹೆಸರಿನಲ್ಲಿ ರೈತನಿಗೆ ಮೋಸಗೈದಿರುವ ನಾಲ್ವರನ್ನು ಬಂಧಿಸಲಾಗಿದೆ ಎಂದು ಎಸ್ಪಿ ಎಚ್‌ಡಿ ಆನಂದಕುಮಾರ ಹೇಳಿದರು. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಲಕ್ಷ್ಮೀ ಕಂಕನವಾಡಿ, ಈರಣ್ಣ ಕೌಜಲಗಿ, ಅಪ್ಪಾಸಾಹೇಬ್ ಇಂಚಲ್, ಸುನೀಲ ದೊಡಮನಿ ಅವರನ್ನು ಬಂಧನ ಮಾಡಲಾಗಿದೆ. ಅಲ್ಲದೇ, ಬಬಲೇಶ್ವರದ ರೈತ ಚಂದ್ರಶೇಖರ ಕನ್ನೂರ ಅವರಿಗೆ ನಾಲ್ವರು ಮೋಸ ಮಾಡಿದ್ದಾರೆ . ವೈಟ್ ಮನಿ ನೀಡಿದ್ರೇ ದುಪ್ಪಟ್ಟು ಹಣದ ಆಸೆ ತೋರಿಸಿದ್ದಾರೆ. ಇದನ್ನು ನಂಬಿ ರೈತ ಅವರಿಗೆ …

Read More »

ಭೀಮಾತೀರದ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ

ಭೀಮಾತೀರದ ನದಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ ಗ್ರಾಮದ ಬಳಿಯ ನದಿಯಲ್ಲಿ ನಡೆದಿದೆ. ಕಪನಿಂಬರಗಿ ಗ್ರಾಮದ ಶಾಂತಯ್ಯ ಹಿರೇಮಠ ಮೃತಪಟ್ಟಿರುವ ದುರ್ದೈವಿಯಾಗಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಪೊಲೀಸ ತನಿಖೆ ಬಳಿಕ ತಿಳಿದುಬರಬೇಕಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಝಳಕಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

Read More »

ನಿಪ್ಪಾಣಿ ತಾಲೂಕಿನ ನಂತರ ಅಥಣಿ, ಕಾಗವಾಡ, ರಾಯಬಾಗ, ಚಿಕ್ಕೋಡಿ ಕ್ಷೇತ್ರಗಳಲ್ಲೂ ಸಂಚರಿಸಿ ಮೀಸಲಾತಿಯ ಹೋರಾಟದ ಜಾಗೃತಿ

ಚಿಕ್ಕೋಡಿ: ‘ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಇಷ್ಟಲಿಂಗಪೂಜೆ ಮಾಡುವ ಮೂಲಕ ಸರ್ಕಾರದ ಗಮನ ಸಲ್ಲಿಸಿ ಮೀಸಲಾತಿಗಾಗಿ ಒತ್ತಡ ಹೇರಲಾಗುವುದು. ನಗರದಲ್ಲಿ ಸೆ.೧೦ರಂದು ಬೆಳಗಾವಿ ಜಿಲ್ಲಾ ಮಟ್ಟದ ಹೋರಾಟ ನಡೆಸಿ ಲಿಂಗಾಯತ ಸಮುದಾಯಕ್ಕೆ ೨ಎ ಮೀಸಲಾತಿ ಸಿಗಬೇಕು ಹಾಗೂ ಕೇಂದ್ರ ಸರ್ಕಾರವು ಓಬಿಸಿ ಪಟ್ಟಿಯಲ್ಲಿ ಸೇರ್ಪಡಿಸಿಕೊಳ್ಳಬೇಕೆಂದು ಒತ್ತಾಯಿಸಲಾಗುವುದು’ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಪ್ರಸಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು …

Read More »

ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ನಾಗನೂರಲ್ಲಿ ನಡೆಯುತ್ತಿರುವ ಜಕನೆಮ್ಮ ದೇವಿ ಜಾತ್ರೆ ಹೆಸರಲ್ಲಿ ರಸ್ತೆ ಹಾಳು

ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ನಾಗನೂರಲ್ಲಿ ನಡೆಯುತ್ತಿರುವ ಜಕನೆಮ್ಮ ದೇವಿ ಜಾತ್ರೆ ಹೆಸರಲ್ಲಿ ರಸ್ತೆ ಹಾಳುಮಾಡಲಾಗುತ್ತಿದೆ ಟೈಯರ ಸವೆದು ಹೋದ ವಾಹನಗಳಿಗೆ ಮಾತ್ರ ಸ್ಪರ್ದೆಯಲ್ಲಿ ಅವಕಾಶ ಇರುವ ನಿಯಮ ಹಿನ್ನೆಲೆ ನಾಗನೂರ ಹಳ್ಳದ ಸೇತುವೆ ರಸ್ತೆ ಮೇಲೆ ಟ್ರ್ಯಾಕ್ಟರನಿಂದ ಡಾಂಬರಿ ರಸ್ತೆ ಅಗೆಯುತ್ತಿರುವ ವಾಹನ ಮಾಲಿಕರು ರಸ್ತೆ ಹಾಳು ಮಾಡುತಿದ್ದರೂ ನೋಡುತ್ತ ನಿಂತ ಮುಖಂಡರು ರಸ್ತೆ ಹಾಳು ಮಾಡಿದ ಸದಸ್ಯರ ಮೇಲೆ ಕ್ರಮಕ್ಕಾಗಿ ಬುದ್ದಿಜೀವಿಗಳ ಒತ್ತಾಯಿಸಿದರು

Read More »

ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಬೇಕಾದರೆ ಜೆಡಿಎಸ್​ನೊಂದಿಗೆ ಮೈತ್ರಿ ಅಗತ್ಯ: ಸಿ ಪಿ ಯೋಗೇಶ್ವರ್

ರಾಮನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಬೇಕಾದರೆ ಜೆಡಿಎಸ್​ನೊಂದಿಗೆ ಮೈತ್ರಿ ಅಗತ್ಯವಿದೆ ಎಂದು ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಪ್ರತಿಪಾದಿಸಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ 9 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ರಾಮನಗರ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್​ನೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡರೆ 25 ಸ್ಥಾನಗಳನ್ನು ಗೆಲ್ಲಬಹುದು ಎನ್ನುವುದು ನನ್ನ ವೈಯುಕ್ತಿಕ ಅಭಿಪ್ರಾಯ. ಆದರೆ, ಇದರ ಬಗ್ಗೆ ನಮ್ಮ ಪಕ್ಷದ …

Read More »

ಮೂಕಪ್ಪ ಶ್ರೀಗಳಿಗೆ ಶ್ರಾವಣ ಮಾಸದ ವಿಶೇಷ ಪೂಜೆ ಸಲ್ಲಿಸಿದ ಭಕ್ತರು

ಹಾವೇರಿ: ಶ್ರಾವಣ ಮಾಸ ಪವಿತ್ರವಾದ ಮಾಸವಾಗಿದೆ. ಶ್ರಾವಣ ಮಾಸದಲ್ಲಿ ಹಲವು ಆಚರಣೆಗಳನ್ನು ಮಾಡಲಾಗುತ್ತದೆ. ಶ್ರಾವಣ ಮಾಸದಲ್ಲಿ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಲಾಗುತ್ತದೆ. ಮನೆದೇವರು ಸೇರಿದಂತೆ ವಿವಿಧ ಮಠಗಳಿಗೆ ತೆರಳಿ ಮಠಾಧೀಶರನ್ನು ದರ್ಶಿಸಿ ಆಶೀರ್ವಾದ ಪಡೆಯಲಾಗುತ್ತದೆ. ಈ ರೀತಿ ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ. ಕೆಲವು ಭಕ್ತರು ಮಠಾಧೀಶರನ್ನು ತಮ್ಮ ಮನೆಗೆ ಕರೆಸಿಕೊಂಡು ಪಾದಪೂಜೆ ಅಭಿಷೇಕ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸುತ್ತಾರೆ. ಶ್ರಾವಣ ಮಾಸದಲ್ಲಿ ಭಕ್ತರ ಮನೆಗೆ …

Read More »

ಬೆಂಗಳೂರು: ಇನ್ಸ್​ಪೆಕ್ಟರ್​​​ ವಿರುದ್ಧವೇ ದೂರು ನೀಡಿದ ಪತ್ನಿ

ಬೆಂಗಳೂರು : ಸಿಐಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇನ್​ಸ್ಪೆಕ್ಟರ್ ಮಲ್ಲಿಕಾರ್ಜುನ್ ವಿರುದ್ಧ ಪತ್ನಿಯೇ ಯಶವಂತಪುರ‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪತ್ನಿ ನೀಡಿದ ದೂರಿನ ಮೇರೆಗೆ ಇನ್​ಸ್ಪೆಕ್ಟರ್ ಮಲ್ಲಿಕಾರ್ಜುನ ಸೇರಿ ಒಟ್ಟು ನಾಲ್ವರ ವಿರುದ್ಧ ವಂಚನೆ ಹಾಗೂ ವರದಕ್ಷಿಣೆಯಡಿ ಪ್ರಕರಣ ದಾಖಲಾಗಿದೆ.   ದೂರಿನಲ್ಲಿ ಇರುವುದೇನು?: ದೂರುದಾರ ಮಹಿಳೆ ದೂರಿನಲ್ಲಿ ಹೇಳಿರುವ ಪ್ರಕಾರ, ನಾನು ಹಾಗೂ ಮಲ್ಲಿಕಾರ್ಜುನ್ ಇಬ್ಬರು 2012ರಲ್ಲಿ ಮದುವೆ ಮಾಡಿಕೊಂಡಿದ್ದೆವು. ವಿವಾಹದ ವೇಳೆ 8 ಲಕ್ಷ‌ ನಗದು, 250 ಗ್ರಾಂ ಚಿನ್ನ ಹಾಗೂ …

Read More »

ಧರ್ಮದ ಹೆಸರಿನಲ್ಲಿ ಮನುಷ್ಯರನ್ನು ದ್ವೇಷಿಸುವುದು ಅಧರ್ಮ ಎಂದು ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಧರ್ಮಕ್ಕೋಸ್ಕರ ಮನುಷ್ಯ ಅಲ್ಲ. ಮನುಷ್ಯನಿಗಾಗಿ ಧರ್ಮ ಇದೆ. ಮಾನವನಾಗಿ ಹುಟ್ಟಿದ ಕೃಷ್ಣ ಯಾವತ್ತೂ ಕೈಯಲ್ಲಿ ಶಸ್ತ್ರ ಹಿಡಿಯದೇ ದೈವತ್ವಕ್ಕೆ ಏರಿದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಇಂದು ಸಂಜೆ ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಮನುಷ್ಯನನ್ನು ಪ್ರೀತಿಸುವುದೇ ಧರ್ಮ. ಧರ್ಮದ ಹೆಸರಿನಲ್ಲಿ ಮನುಷ್ಯರನ್ನು ದ್ವೇಷಿಸುವುದು ಅಧರ್ಮ. ಮನುಷ್ಯ ದ್ವೇಷ- ಅಧರ್ಮದ ವಿರುದ್ಧವೇ ಕೃಷ್ಣ ಕೈಯಲ್ಲಿ …

Read More »

ಕೃಷ್ಣ ಜನ್ಮಾಷ್ಟಮಿ ನಿಯಮ ಜಾರಿ: ಮೊಸರು ಗಡಿಗೆ ಆಚರಣೆಗೆ ಸಿಸಿಟಿವಿ.. ಮಫ್ತಿಯಲ್ಲಿ ಪೊಲೀಸರ ಕಣ್ಗಾವಲು

ಮುಂಬೈ: ಕೃಷ್ಣಾ ಎಂದಾಗ ಅವನು ಗೋಪಿಕೆಯರೊಂದಿಗೆ ಮಾಡುತ್ತಿದ್ದ ತುಂಟಾಟಗಳು ನೆನಪಿಗೆ ಬರುತ್ತವೆ. ಆದರೆ ಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆಯನ್ನು ಆಚರಿಸುವಾಗ ಕುಚೇಷ್ಟೆಗಳನ್ನು ಮಾಡಿ ಅನುಚಿತವಾಗಿ ವರ್ತಿಸಿದರೆ ಅಂತಹವರ ಮೇಲೆ ನಿಗಾ ಇಡಲು ಮುಂಬೈ ಪೊಲೀಸರು ನಿರ್ಧರಿಸಿದ್ದಾರೆ. ಇದಕ್ಕಾಗಿ ಮಫ್ತಿಯಲ್ಲಿ ಪೊಲಿಸರು ಜನರ ಜೊತೆಯೇ ಇದ್ದು, ಆ ರೀತಿ ನಡೆದುಕೊಂಡದ್ದು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲು ಸಿದ್ಧರಾಗಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಬಣ್ಣದ ನೀರನ್ನು ಅಜಾಗರೂಕತೆಯಿಂದ ಎಸೆಯುವುದು ಮತ್ತು ಮೊಸರು ಗಡಿಗೆ ಹಬ್ಬದ ಸಮಯದಲ್ಲಿ ಮಹಿಳೆಯರಿಗೆ …

Read More »