Breaking News

ಮಾರುಕಟ್ಟೆಯಲ್ಲಿ ತೊಗರಿ ಆವಕ ಕೊರತೆ: ಭಾರೀ ಡಿಮ್ಯಾಂಡ್​, ಕ್ವಿಂಟಾಲ್​ಗೆ 10 ಸಾವಿರ ರೂವರೆಗೆ ಏರಿಕೆ

ವಿಜಯಪುರ: ಅಕಾಲಿಕ ಮಳೆಯಿಂದ ತೊಗರಿ ಆವಕದ ಕೊರತೆ ಹಾಗೂ ನಿರೀಕ್ಷಿತ ಪ್ರಮಾಣದಲ್ಲಿ ತೊಗರಿ ಮಾರುಕಟ್ಟೆಗೆ ಬಾರದ ಹಿನ್ನೆಲೆ ವಿಜಯಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಶುಕ್ರವಾರ ತೊಗರಿ ಬೆಲೆ ಏಕಾಏಕಿ ಕ್ವಿಂಟಾಲ್‌ಗೆ ನಾಲ್ಕು ಸಾವಿರದಿಂದ ಹತ್ತು ಸಾವಿರದವರೆಗೆ ಏರಿಕೆಯಾಗಿದೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ವಿಜಯಪುರ ಭಾಗದ ರೈತರು ಹಿಂದಿನಂತೆ ಜೋಳವನ್ನು ಹೆಚ್ಚಾಗಿ ಬೆಳೆಯುವುದನ್ನು ಕೈಬಿಟ್ಟಿದ್ದಾರೆ. ಬದಲಾಗಿ ಕಳೆದ ಐದು ವರ್ಷಗಳಿಂದ ತೊಗರಿ ಬೆಳೆಗೆ ಆದ್ಯತೆ ನೀಡುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 7 ಲಕ್ಷ …

Read More »

ರಾಜ್ಯದ ರೈತರ ಕೃಷಿ ಪಂಪ್​​ಸೆಟ್​ಗಳಿಗೆ ಆಧಾರ್ ಲಿಂಕ್ ಮಾಡಲು ರೈತರು ಬಿಡುವುದಿಲ್ಲ.

ಬೆಳಗಾವಿ: ರಾಜ್ಯದ ರೈತರ ಕೃಷಿ ಪಂಪ್​​ಸೆಟ್​ಗಳಿಗೆ ಆಧಾರ್ ಲಿಂಕ್ ಮಾಡಲು ರೈತರು ಬಿಡುವುದಿಲ್ಲ. ಕೆಇಆರ್‌ಸಿ ಆದೇಶ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರದ್ದುಗೊಳಿಸಬೇಕು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಒತ್ತಾಯಿಸಿದರು. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 40 ಲಕ್ಷ ಕೃಷಿ ರೈತರು ಕೃಷಿ ಉತ್ಪನ್ನಗಳನ್ನು ಕಷ್ಟದಲ್ಲಿ ಬೆಳೆದು ನಷ್ಟ ಅನುಭವಿಸುತ್ತಿದ್ದಾರೆ ಎಂದರು. ಇಂತಹ ಸಂದರ್ಭದಲ್ಲಿ ಆಧಾರ್ ಲಿಂಕ್ ಮಾಡಿದರೆ ಸಬ್ಸಿಡಿ ನೀಡುವುದಾಗಿ, ಇಲ್ಲವೇ …

Read More »

ಸಾರ್ವಜನಿಕರ ಬಳಕೆಗಾಗಿ ಹೊಸ ರೂಪದಲ್ಲಿ ಬರಲಿದೆ ಟ್ರಿಣ್ ಟ್ರಿಣ್ ಸೈಕಲ್: ವಿಶೇಷತೆಗಳೇನು?

ಮೈಸೂರು : ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಟ್ರಿಣ್ ಟ್ರಿಣ್ ಪಬ್ಲಿಕ್ ಸೈಕಲ್​ ಷೇರಿಂಗ್ ಯೋಜನೆಯಡಿ ಕಳೆದ ಆರು ವರ್ಷಗಳ ಹಿಂದೆ ಮೈಸೂರಿನಲ್ಲಿ ಪರಿಚಯ ಮಾಡಲಾಯಿತು. ಅಂದು ಕರ್ನಾಟಕದ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಈ ಸೈಕಲ್ ಯೋಜನೆಗೆ ಚಾಲನೆ ನೀಡಿದ್ದರು. ಮೈಸೂರು ನಗರದಲ್ಲಿ ಈ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗಾ ಟ್ರಿಣ್ ಟ್ರಿಣ್ ಸೈಕಲ್ ಮತ್ತೇ ಹೊಸ ರೂಪದಲ್ಲಿ ರಸ್ತೆಗೆ ಇಳಿಯಲಿದ್ದು. ಈ ಸೈಕಲ್ ಗಳ ವಿಶೇಷತೆಗಳೇನು ಎಂಬ …

Read More »

ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮಗು ಸಾವು; 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ರಾಯಚೂರು: ಕಲುಷಿತ ನೀರು ಸೇವಿಸಿ ಮಗು ಸಾವನ್ನಪ್ಪಿ, 30 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ‌ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದ ಜನರು ಕಳೆದ ಎರಡು ದಿನಗಳ ಹಿಂದೆ ಕಲುಷಿತ ನೀರು ಸೇವಿಸಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ. ಘಟನೆಗೆ ಗ್ರಾ.ಪಂ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಅರಕೇರಾ, ದೇವದುರ್ಗ ಹಾಗೂ ರಾಯಚೂರಿನ ರಿಮ್ಸ್​ನಲ್ಲಿ ಅನಾರೋಗ್ಯಪೀಡಿತರು ದಾಖಲಾಗಿದ್ದಾರೆ. ರೇಕಲಮರಡಿ ಗ್ರಾಮದ …

Read More »

ಮಹಿಳಾ KAS ಅಧಿಕಾರಿಗೆ ಸಹೋದರನಿಂದಲೇ ಜೀವ ಬೆದರಿಕೆ: ಪ್ರಕರಣ ದಾಖಲು

ಬೆಂಗಳೂರು : ಕರ್ನಾಟಕ ಆಡಳಿತ ಸೇವೆ (ಕೆಎಎಸ್) ಮಹಿಳಾ ಅಧಿಕಾರಿಗೆ ಸ್ವಂತ ಸಹೋದರನೇ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್​​​ ಅಧಿಕಾರಿ ಡಾ. ಮೈತ್ರಿ ನೀಡಿರುವ ದೂರಿನನ್ವಯ ಅವರ ಸಹೋದರ ಡಾ.ಸಂಜಯ್ ವಿರುದ್ಧ ಹಲ್ಲೆ, ಜೀವ ಬೆದರಿಕೆ ಆರೋಪದಡಿ ಪ್ರಕರಣ ದಾಖಲಾಗಿದೆ. ಜಯನಗರದಲ್ಲಿ ತಮ್ಮ ಕುಟುಂಬದೊಂದಿಗೆ ಡಾ. ಮೈತ್ರಿ ವಾಸವಿದ್ದು, ಸಹೋದರ ಡಾ. ಸಂಜಯ್ ಪ್ರತ್ಯೇಕವಾಗಿ ವಾಸವಿದ್ದರು. ಎರಡು ವರ್ಷಗಳಿಂದ ತಾನು …

Read More »

ಕರೆಂಟ್ ಬಿಲ್ ಕಟ್ಬೇಡಿ, ಬಸ್ ಟಿಕೆಟ್ ತಗೋಬೇಡಿ: ಜನರಿಗೆ ಆರ್. ಅಶೋಕ್ ಕರೆ

ಬೆಂಗಳೂರು: ಗ್ಯಾರಂಟಿಗಳ ಜಾರಿಗೆ ನೀಡಿದ್ದ ಸಮಯ ಮುಗಿದಿದ್ದು ಇನ್ಮುಂದೆ ಯಾರೂ ರಾಜ್ಯದಲ್ಲಿ ವಿದ್ಯುತ್ ಬಿಲ್ ಕಟ್ಟಬಾರದು, ಮಹಿಳೆಯರು ಬಸ್ ಟಿಕೆಟ್ ಪಡೆಯಬಾರದು ಎಂದು ನಾಡಿನ ಜನತೆಗೆ ಬಿಜೆಪಿ ನಾಯಕ ಆರ್. ಅಶೋಕ್ ಕರೆ ನೀಡಿದ್ದಾರೆ. ಯಾವುದೇ ಷರತ್ತುಗಳಿಲ್ಲದೆ ಗ್ಯಾರಂಟಿ ಜಾರಿ ಮಾಡಬೇಕು, ಭರವಸೆ ವೇಳೆ ಷರತ್ತು ಇರಲಿಲ್ಲ, ಈಗಲೂ ಷರತ್ತು ಬೇಡ, ಷರತ್ತು ಹಾಕಿದರೂ ನಮ್ಮ ಹೋರಾಟ ಇರಲಿದೆ, ರಾಜ್ಯ ಪ್ರವಾಸ ಮಾಡಿ ಸರ್ಕಾರಕ್ಕೆ ಚಳಿ ಜ್ವರ ಬಿಡಿಸಲಿದ್ದೇವೆ ಎಂದು ಎಚ್ಚರಿಕೆ …

Read More »

ಸಿಎ ಬಿಟ್ಟು ಕೃಷಿಗಿಳಿದ ವಿದ್ಯಾರ್ಥಿನಿ: ಮೆಣಸಿನಕಾಯಿ ಬೆಳೆದು 6 ತಿಂಗಳಲ್ಲಿ 8 ಲಕ್ಷ ಆದಾಯ

ಬೆಳಗಾವಿ: ಕೃಷಿ ಎಂದರೆ ಮೂಗು ಮುರಿಯುವವರ ಮಧ್ಯ ಇಲ್ಲೋಬ್ಬ ವಿದ್ಯಾವಂತ ಯುವತಿಯೋರ್ವರು 30 ಗುಂಟೆ ಜಮೀನಿನಲ್ಲಿ ಕೇವಲ ಆರು ತಿಂಗಳಲ್ಲೇ ಮೆಣಸಿನಕಾಯಿ ಬೆಳೆದು ಬರೊಬ್ಬರಿ 8 ಲಕ್ಷ ರೂ. ಗಳಿಸುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಹೌದು ಬೆಳಗಾವಿ ತಾಲೂಕಿನ ಜಾಫರವಾಡಿ ಗ್ರಾಮದ ನಿಕಿತಾ ವೈಜು ಪಾಟೀಲ (26) ಎಂಬ ಯುವತಿಯೇ ಕೃಷಿಯಲ್ಲಿ ಸಾಧನೆ ಮಾಡುತ್ತಿರುವ ಯುವತಿ. ತಮ್ಮ 30 ಗುಂಟೆ ಜಮೀನಿನಲ್ಲಿ ನವಲ್ ಭಟಕಾ ತಳಿಯ ಮೆಣಸಿನಕಾಯಿ ಬೆಳೆದಿರುವ ನಿಕಿತಾ …

Read More »

ನೀರು ಪೂರೈಕೆಗೆ ಹಣ ಬಿಡುಗಡೆ ಮಾಡದ ಜಿಲ್ಲಾಡಳಿತ: ಸಗಣಿ, ಗೋಮೂತ್ರದಲ್ಲಿ ಸ್ನಾನಮಾಡಿ ಗ್ರಾ ಪಂ ಅಧ್ಯಕ್ಷರ ಪ್ರತಿಭಟನೆ

ಶಿವಮೊಗ್ಗ: ಕುಡಿವ ನೀರು ಪೂರೈಕೆ‌ಗೆ ಹಣ ಬಿಡುಗಡೆಯಾಗದ ಹಿನ್ನೆಲೆ ನಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಮಲಕರ ಶೆಟ್ಟಿ ಎಂಬುವವರು ಸಗಣಿ ಹಾಗೂ ಗೋಮೂತ್ರದಲ್ಲಿ ಸ್ನಾನ ಮಾಡುವ ಮೂಲಕ ಜಿಲ್ಲಾಡಳಿತದ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ. ಕಮಲಕರ ಶೆಟ್ಟಿ ಹೊಸನಗರ ತಾಲೂಕು ಪಂಚಾಯಿತಿ ಮುಂಭಾಗ ಪ್ರತಿಭಟನ ರೂಪದಲ್ಲಿ ಸಗಣಿ ಹಾಗೂ ಗೋಮೂತ್ರದಲ್ಲಿ ಸ್ನಾನ ಮಾಡಿ ಜಿಲ್ಲಾಡಳಿತದ ವಿರುದ್ದ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಹೊಸನಗರ ತಾಲೂಕಿನಲ್ಲಿ‌ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ‌ ಉಂಟಾಗಿದೆ. …

Read More »

ತಾಕತ್ತಿದ್ದರೆ ಆರ್​ಎಸ್‌ಎಸ್, ಬಜರಂಗದಳ ನಿಷೇಧಿಸಲಿ: ಬೊಮ್ಮಾಯಿ

ಬೆಂಗಳೂರು: ಆರ್​ಎಸ್​ಎಸ್​ ಮತ್ತು ಬಜರಂಗದಳ ನಿಷೇಧ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ತುಷ್ಟೀಕರಣಕ್ಕಾಗಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಈ ಹಿಂದೆಯೂ ಆರ್​ಎಸ್​ಎಸ್​ ಅನ್ನು ನಿಷೇಧ ಮಾಡುವ ಕೆಲಸ ನಡೆದಿತ್ತು. ಅವರನ್ನು ಜನತೆ ಮನೆಗೆ ಕಳಿಸಿದ್ದಾರೆ. ಸಂಘ ಪರಿವಾರವನ್ನು ನಿಷೇಧ ಮಾಡುವ ಶಕ್ತಿ ಯಾರಿಗೂ ಇಲ್ಲ. ಅವರಿಗೆ ತಾಕತ್ತಿದ್ದರೆ ಆರ್​ಎಸ್​ಎಸ್ ಮತ್ತು ಬಜರಂಗದಳವನ್ನು ನಿಷೇಧಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಗೆ ಮಾಜಿ ಸಿಎಂ ಬಸವರಾಜ …

Read More »

ಮೇ 29ರಿಂದ ಸರ್ಕಾರಿ ಶಾಲೆಗಳು, ಪ್ರೌಢಶಾಲೆಗಳು ಪುನರಾರಂಭ ಹಿನ್ನೆಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿ ಬಳಸದಂತೆ ಶಿಕ್ಷಣ ಇಲಾಖೆ ವಾರ್ನಿಂಗ್

ಬೆಂಗಳೂರು: ಮೇ 29ರಿಂದ ಸರ್ಕಾರಿ ಶಾಲೆಗಳು, ಪ್ರೌಢಶಾಲೆಗಳು ಪುನರಾರಂಭ ಹಿನ್ನೆಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿ ಬಳಸದಂತೆ ಶಿಕ್ಷಣ ಇಲಾಖೆ ವಾರ್ನಿಂಗ್ ನೀಡಿದೆ. ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ಎಚ್ಚರವಹಿಸಿ, ಶಾಲೆಗಳು ಆರಂಭವಾಗುವ ಮೊದಲೇ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸರ್ಕಾರಿ ಶಾಲಾ ಶಿಕ್ಷಕರಿಗೆ ಆದೇಶ ನೀಡಿದೆ. ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಈಗಾಗಲೇ ಆರಂಭವಾಗಿದೆ. ಶಾಲಾ ಕೊಠಡಿ, ಕಾಂಪೌಂಡ್, ಶೌಚಾಲಯಗಳನ್ನು ಪರಿಶಿಲಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಉಪನಿರ್ದೇಶಕರ ಗಮನಕ್ಕೆ ತರಬೇಕು. …

Read More »