ಬೆಳಗಾವಿ: 25 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬೆಳಗಾವಿ ವಿಭಾಗದ ವಾಣಿಜ್ಯ ತೆರಿಗೆ ಜಂಟಿ ಆಯುಕ್ತೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ದಾಕ್ಷಾಯಿಣಿ ಚೌಶೆಟ್ಟಿ ಎಂಬವರು ತನಿಖಾಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಅಧಿಕಾರಿ. ಬೆಳಗಾವಿಯ ಆಟೊ ನಗರದಲ್ಲಿರುವ ವಿಕಾಸ ಕಂಪೋಸಿಟ್ಸ್ ಕಂಪನಿಯಿಂದ ಪೂರೈಸಲಾದ ಸಾಮಗ್ರಿಗಳಿಗೆ ಸಂಬಂಧಿಸಿದಂತೆ, ಸಿ ಫಾರ್ಮ್ ಸ್ಟೇಟ್ ಜಿಎಸ್ಟಿ ಸಲ್ಲಿಸಿದ ಬಳಿಕ, 41 ಸಾವಿರ ರೂ ಮರಳಿ ಪಡೆಯಲು ದಾಕ್ಷಾಯಣಿ ಚೌಶೆಟ್ಟಿ ಲಂಚಕ್ಕೆ ಬೇಡಿಕೆ …
Read More »ಅ.28, 29ರಂದು ಬೆಳಗಾವಿ ಜಿಲ್ಲೆಯಲ್ಲಿ ಸರ್ಕಾರದ ವಿವಿಧ ನೇಮಕಾತಿ ಪರೀಕ್ಷೆ ನಡೆಯಲಿದೆ.:D.C.
ಬೆಳಗಾವಿ: ಜಿಲ್ಲೆಯಲ್ಲಿ 28 ಹಾಗೂ 29 ರಂದು ಸರ್ಕಾರದ ವಿವಿಧ ನೇಮಕಾತಿ ಪರೀಕ್ಷೆಗಳು ನಡೆಯಲಿವೆ. ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಮಾರ್ಗಸೂಚಿ ಪ್ರಕಾರ ಸುರಕ್ಷಿತವಾಗಿ ಸಾಗಣೆ ಮಾಡುವುದು ಸೇರಿದಂತೆ ಒಟ್ಟಾರೆ ಪರೀಕ್ಷೆಯನ್ನು ಸುಗಮ ಮತ್ತು ಸುಸೂತ್ರವಾಗಿ ನಡೆಸಲು ಜಾಗರೂಕತೆಯಿಂದ ಕೆಲಸ ಮಾಡಬೇಕೆಂದು ಎಂದು ಸಿಬ್ಬಂದಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅ.28 ಹಾಗೂ 29 ರಂದು ವಿವಿಧ ನೇಮಕಾತಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆ …
Read More »ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃನಾಲ್ ಹೆಬ್ಬಾಳ್ಕರ್ ಅವರ ಕೊರಳಲ್ಲಿ ಹುಲಿ ಉಗುರು ಹೋಲುವ ಲಾಕೆಟ್ ಚಿತ್ರ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್
ಬೆಳಗಾವಿ : ಸಧ್ಯ ರಾಜ್ಯದಲ್ಲಿ ಹುಲಿ ಉಗುರು ವಿವಾದ ಜೋರಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿಯೂ ಸದ್ದು ಮಾಡುತ್ತಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೊರಳಲ್ಲೂ ಹುಲಿ ಉಗುರು ಹೋಲುವ ಚೈನ್ ಪೋಟೋ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃನಾಲ್ ಹೆಬ್ಬಾಳ್ಕರ್ ಅವರ ಕೊರಳಲ್ಲಿ ಹುಲಿ ಉಗುರು ಹೋಲುವ ಲಾಕೆಟ್ ಚಿತ್ರ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಫೇಸ್ಬುಕ್ ಖಾತೆಯಲ್ಲಿ ಹಾಕಿಕೊಂಡ …
Read More »ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣ: ಕುಡಿದ ಮತ್ತಿನಲ್ಲಿ ಸ್ನೇಹಿತರಿಂದಲೇ ಹತ್ಯೆ: ಇಬ್ಬರ ಬಂಧನ
ಹುಬ್ಬಳ್ಳಿ: ನಗರದ ಶಿವಳ್ಳಿ ರಸ್ತೆಯ ರೈಲ್ವೆ ಹಳಿ ಪಕ್ಕದ ಜಮೀನಿನಲ್ಲಿ ಯುವಕನೊಬ್ಬ ಕೊಲೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಅಶೋಕ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಸಪ್ತಗಿರಿ ಪಾರ್ಕ್ನ ಆಟೋ ರಿಕ್ಷಾ ಚಾಲಕ ಮಂಜುನಾಥ ಕಟ್ಟಿಮನಿ ಹಾಗೂ ಬಿಡ್ತಾಳ ಮಾರುತಿ ನಗರದ ಟೇಲರ್ ಕಿರಣ ಶಿರಸಂಗಿ ಎಂದು ಪೊಲೀಸರು ತಿಳಿಸಿದ್ದಾರೆ. ಇವರಿಂದ ಎರಡು ಬೈಕ್, ಎರಡು ಮೊಬೈಲ್ ಫೋನ್ ಜಪ್ತಿ ಮಾಡಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳಾದ ಅರುಣ ವನಹಳ್ಳಿ ಬೆಂಡೆ …
Read More »ಹೆಚ್ ಡಿ ಕುಮಾರಸ್ವಾಮಿ ಏನೇ ಟೀಕೆ ಮಾಡಿದರೂ ಕೇವಲ ಹಿಟ್ ಅಂಡ್ ರನ್ ಕೇಸ್: ಜಗದೀಶ್ ಶೆಟ್ಟರ್
ಹುಬ್ಬಳ್ಳಿ : ಏನೇ ಟೀಕೆ ಮಾಡಿದರೂ ಅದಕ್ಕೆ ಬೇಸ್ ಇರಬೇಕು. ಆದರೆ, ಮಾಜಿ ಮುಖ್ಯಮಂತ್ರಿ ಹೆಚ್ ಡಿಕುಮಾರಸ್ವಾಮಿ ಹಿಟ್ ಅಂಡ್ ರನ್ ಮಾಡುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದರು. ಬಿಜೆಪಿಯೊಂದಿಗೆ ಕೈ ಜೋಡಿಸಿದ ಮೇಲೆ ಹೆಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಟೀಕೆ ಮಾಡುತ್ತಿದ್ದು, ಸಚಿವ ಜಾರ್ಜ್ ಮನೆಯಲ್ಲಿ ಸಿಎಂ ಸಿದ್ದರಾಮಯ್ಯ ಏನು ಮಾಡುತ್ತಿದ್ದರು? ಎಂದೆಲ್ಲ ಪ್ರಶ್ನೆ ಕೇಳುತ್ತಿರುವ ಬಗ್ಗೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿ, ಕೆಲ ತಿಂಗಳ …
Read More »ಟೊಮೆಟೊ ಲಾಭ ಗಳಿಕೆ ಕಂಡು ಹೊಟ್ಟೆಕಿಚ್ಚು.. ಹತ್ತಿಗೆ ಕಳೆನಾಶಕ ಸಿಂಪಡನೆ ಮಾಡಿದ ಕಿಡಿಗೇಡಿಗಳು: ರೈತನ ಆರೋಪ
ಧಾರವಾಡ: ಮುಂಗಾರು ಮಳೆ ಕೈಕೊಟ್ಟರೂ ಟೊಮೆಟೊ ಬೆಳೆಯಲ್ಲಿ ಭರ್ಜರಿ ಲಾಭ ಗಳಿಸಿದ್ದನ್ನು ಕಂಡು ಸಹಿಸಲಾಗದೇ ಕಿಡಿಗೇಡಿಗಳು ರಾತ್ರೋರಾತ್ರಿ ತಮ್ಮ ಒಂದೂವರೆ ಎಕರೆ ಹತ್ತಿ ಬೆಳೆಗೆ ಕಳೆನಾಶಕ ಹೊಡೆದು ಹಾಳು ಮಾಡಿದ್ದಾರೆ ಎಂದು ರೈತ ಧಾರವಾಡ ತಾಲೂಕಿನ ಗರಗ ಗ್ರಾಮದ ಗಂಗಪ್ಪ ಬಾರ್ಕಿ ಎಂಬ ರೈತ ಆರೋಪಿಸಿದ್ದಾರೆ. ಗಂಗಪ್ಪ ಬಾರ್ಕಿ ಅವರು ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ಹತ್ತಿ ಬೆಳೆ ಬೆಳೆದಿದ್ದರು. ಬರಗಾಲ ಇದ್ದರೂ, ಈ ರೈತ ನೀರು ಹಾಯಿಸಿ ಹತ್ತಿ ಬೆಳೆದಿದ್ದರು. …
Read More »ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ
ರಾಯಚೂರು: ಇಲ್ಲಿನ ಲಿಂಗಸುಗೂರು (Lingasaguu Taluku) ತಾಲೂಕಿನ ಹಟ್ಟಿ ಚಿನ್ನದಗಣಿಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಹಟ್ಟಿ ಚಿನ್ನದಗಣಿ ಕ್ಯಾಂಪಿನ ಗುಂಡುರಾವ್ ಕಾಲೋನಿಯಲ್ಲಿ ಘಟನೆ ನಡೆದಿದೆ. ಮೃತ ಮಹಿಳೆಯನ್ನ ಮಂಜುಳಾ (45) ಅಂತ ಗುರುತಿಸಲಾಗಿದೆ. ಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಲ್ಯಾಬ್ ಟೆಕ್ನೀಷಿಯನ್ ಆಗಿದ್ದ ಮಂಜುಳಾ ಸಾವನ್ನಪ್ಪಿದ್ದಾರೆ. ಕೊಲೆ ಮಾಡಿ ಬೆಂಕಿ ಹಚ್ಚಿರಬಹುದು ಅಂತ ಶಂಕಿಸಲಾಗಿದೆ. ಮಂಜುಳಾ ಮನೆಯಿಂದ ಸ್ವಲ್ಪ ದೂರದಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ …
Read More »ಹುಲಿ ಉಗುರು ಮಾದರಿ ಪೆಂಡೆಂಟ್ ಪ್ರಕರಣ: ತಲೆತಗ್ಗಿಸುವ ಯಾವ ಕೆಲಸವನ್ನೂ ಮಾಡಿಲ್ಲ, ಮಾಡುವುದೂ ಇಲ್ಲ ಎಂದ ನಟ ಜಗ್ಗೇಶ್
ಬೆಂಗಳೂರು: ಹುಲಿ ಉಗುರಿನ ಮಾದರಿ ಪೆಂಡೆಂಟ್ ಹೊಂದಿರುವ ಆರೋಪದ ಮೇಲೆ ನಟ ದರ್ಶನ್, ರಾಜ್ಯಸಭಾ ಸದಸ್ಯ ಹಾಗೂ ನಟ ಜಗ್ಗೇಶ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಮತ್ತು ನಟ ನಿಖಿಲ್ ಕುಮಾರಸ್ವಾಮಿ ನಿವಾಸಗಳಲ್ಲಿ ಅರಣ್ಯ ಅಧಿಕಾರಿಗಳು ಬುಧವಾರ ಶೋಧ ಕಾರ್ಯಾಚರಣೆ ನಡೆಸಿದರು. ಆ ಬಳಿಕ ಪ್ರಕರಣ ಕುರಿತು ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ತಾವು ಧರಿಸುವ ಲಾಕೆಟ್ ನಮ್ಮ ತಾಯಿ ಕೊಟ್ಟಿರುವ ಕಾಣಿಕೆಯಾಗಿದ್ದು, ಅದನ್ನು …
Read More »ಚಿಕ್ಕಬಳ್ಳಾಪುರ ರಸ್ತೆ ಅಪಘಾತ: ಮೃತರ ಸಂಖ್ಯೆ 13ಕ್ಕೆ ಏರಿಕೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ ಆಗಿದೆ. ಇಂದು ಮುಂಜಾನೆ ತಾಲೂಕಿನ ಚಿತ್ರಾವತಿ ಬಳಿಯ ಆರ್ಟಿಒ ಕಚೇರಿ ಸಮೀಪ ಹೆದ್ದಾರಿ ಬದಿ ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಾಟಾ ಸುಮೊ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಮೃತರಲ್ಲಿ 8 ಜನ ಪುರುಷರು, 4 ಮಹಿಳೆಯರು, ಒಂದು …
Read More »ನ.1ರ ಬಳಿಕ ಯಾವ ದಿನವಾದರೂ ಸರಿ, ಬಹಿರಂಗ ಚರ್ಚೆಗೆ ಸಮಯ ಫಿಕ್ಸ್ ಮಾಡಿ; ಡಿ ಕೆ ಶಿವಕುಮಾರ್
ಬೆಂಗಳೂರು: ಯಾವಾಗಾದ್ರೂ ಸರಿ. ಚರ್ಚೆಗೆ ಸಮಯ ಫಿಕ್ಸ್ ಮಾಡಿ. ನವೆಂಬರ್ 1ರ ನಂತರ ಯಾವ ದಿನಾಂಕವಾದ್ರೂ ನಿಗದಿಪಡಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಚರ್ಚೆಗೆ ಒಪ್ಪಿದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೂಡ ಬಹಿರಂಗ ಚರ್ಚೆಗೆ ಒಪ್ಪಿಗೆ ಸೂಚಿಸಿ ಸಮಯ ನಿಗದಿಪಡಿಸುವಂತೆ ಹೇಳಿದ್ದಾರೆ. ಇಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಡಿ.ಕೆ ಶಿವಕುಮಾರ್ ಪಟಾಲಮ್ನಿಂದ ರೈತರ ಪರಿಹಾರದಲ್ಲಿ ಲೂಟಿ ಎಂಬ ಹೆಚ್ಡಿಕೆ ಆರೋಪದ ವಿರುದ್ಧ ವಾಗ್ದಾಳಿ ನಡೆಸಿದರು. …
Read More »
Laxmi News 24×7