ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರವಾಗಿರುವ ವಿಧಾನಸೌಧಕ್ಕೆ ಕಳೆದ ವಾರ ಶಾಸಕ ಸೋಗಿನಲ್ಲಿ ವ್ಯಕ್ತಿಯೋರ್ವ ತೆರಳಿ ಸದನದೊಳಗೆ ಪ್ರವೇಶಿಸಿದ ಪ್ರಕರಣ ಬೆಳಕಿಗೆ ಬಂದ ನಂತರ ತಪಾಸಣೆ ಚುರುಕುಗೊಳಿಸಿದ್ದ ಪೊಲೀಸರು ಕಳೆದ ನಾಲ್ಕು ದಿನಗಳಲ್ಲಿ 250ಕ್ಕಿಂತ ಹೆಚ್ಚು ನಕಲಿ ಪಾಸ್ಗಳನ್ನು ಪತ್ತೆ ಹಚ್ಚಿದ್ದಾರೆ. ಸಚಿವರ ಹಾಗೂ ಶಾಸಕರ ಪಾಸ್ಗಳನ್ನು ಕಲರ್ ಝರಾಕ್ಸ್ ಮಾಡಿ ಭದ್ರತಾ ಸಿಬ್ಬಂದಿ ಹಾಗೂ ಮಾರ್ಷಲ್ಗಳಿಗೆ ಯಾಮಾರಿಸುತ್ತಿದ್ದವರ ಖರ್ತನಾಕ್ ಪ್ಲಾನ್ ಬಹಿರಂಗಗೊಂಡಿದೆ. ಇದೀಗ ನಕಲಿ ಪಾಸ್ ಬಳಸಿ ವಿಧಾನಸೌಧಕ್ಕೆ ಒಳಪ್ರವೇಶಿಸುತ್ತಿದ್ದವರಿಗೆ …
Read More »ತಿಯೊಂದು ಸಮಸ್ಯೆಗಳಿಗೂ ಪರಿಹಾರ ಎಂಬುದು ಇದ್ದೇ ಇರುತ್ತದೆ.: ಬಾಲ್ಯದಲ್ಲೇ ಉದ್ಯಮಿಗಳಾದ ಅಪ್ಪಟ ಗ್ರಾಮೀಣ ಪ್ರತಿಭೆಗಳು
ಬೆಳಗಾವಿ : ಪ್ರತಿಯೊಂದು ಸಮಸ್ಯೆಗಳಿಗೂ ಪರಿಹಾರ ಎಂಬುದು ಇದ್ದೇ ಇರುತ್ತದೆ. ನಾವು ಪರಿಹಾರವನ್ನು ಹುಡುಕುವ ಮನಸು ಮಾಡಬೇಕು ಅಷ್ಟೇ. ಇದಕ್ಕೆ ಉದಾಹರಣೆ ಎಂಬಂತೆ ಬೆಳಗಾವಿ ವಿದ್ಯಾರ್ಥಿಗಳು ವಿದ್ಯುತ್ ವ್ಯತ್ಯಯದಿಂದ ಓದು ಬರಹಕ್ಕೆ ತೊಂದರೆ ಆಗುತ್ತಿದ್ದರೂ ಸಹಾ ಕೈಕಟ್ಟಿ ಕೂರದೇ ಸ್ವತಃ ತಾವೇ ಲೈಟ್ ಪೆನ್ ಕಂಡು ಹಿಡಿಯುವ ಮೂಲಕ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದಾರೆ. ಬಾಲ್ಯದಲ್ಲೇ ಇಂತಹ ಕ್ರಿಯಾತ್ಮಕ ಕೆಲಸದಿಂದ ಉದ್ಯಮಿಗಳಾಗುವತ್ತ ಹೆಜ್ಜೆ ಇಟ್ಟಿದ್ದಾರೆ. ಹೌದು, ಈ ಸಾಧನೆ ಮಾಡಿರುವ ಆರು …
Read More »ಬೆಂಗಳೂರಿನಲ್ಲಿ ಸಿಇಒ, ಎಂಡಿ ಜೋಡಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಬೆಂಗಳೂರು : ಖಾಸಗಿ ಕಂಪನಿಗೆ ನುಗ್ಗಿ ಎಂ.ಡಿ ಹಾಗೂ ಸಿಇಒ ಇಬ್ಬರನ್ನೂ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಡರಾತ್ರಿ ವಿಶೇಷ ಕಾರ್ಯಾಚರಣೆ ಕೈಗೊಂಡ ಪೊಲೀಸರ ತಂಡ ಆರೋಪಿಗಳಾದ ಫಿಲಿಕ್ಸ್, ವಿನಯ್ ರೆಡ್ಡಿ ಹಾಗೂ ಶಿವು ಎಂಬವರನ್ನು ಕುಣಿಗಲ್ ಸಮೀಪ ಬಂಧಿಸಿದೆ. ಪ್ರಕರಣದ ವಿವರ: ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಮಾರಕಾಸ್ತ್ರ ಹಿಡಿದು ಕಂಪನಿ ಕಚೇರಿಗೆ ನುಗ್ಗಿದ್ದ ಫಿಲಿಕ್ಸ್ ಹಾಗೂ ಇತರರು ಖಾಸಗಿ ಕಂಪನಿಯ …
Read More »ಶಕ್ತಿ ಬಂದ ನಂತರ ಸಾರಿಗೆ ಸಂಸ್ಥೆ ಆದಾಯ ವೃದ್ಧಿಸಿದೆ: ಕೃಷ್ಣ ಬೈರೇಗೌಡ
ಬೆಂಗಳೂರು : ಶಕ್ತಿ ಯೋಜನೆಯಿಂದ ಸರ್ಕಾರಿ ಸಾರಿಗೆ ಸಂಸ್ಥೆಯಲ್ಲಿ ಮೌನಕ್ರಾಂತಿ ಹೆಚ್ಚಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನ ಪರಿಷತ್ನಲ್ಲಿ ಮಾತನಾಡಿದ ಅವರು, ಜನ ಬಸ್ಗಳಲ್ಲಿ ಹೆಚ್ಚಾಗಿ ಓಡಾಡುತ್ತಿದ್ದಾರೆ. ಪ್ರವಾಸೋದ್ಯಮ ಹೆಚ್ಚಾಗುತ್ತಿದೆ. ಮಹಿಳೆಯರು ಮಾತ್ರವಲ್ಲ, ಪುರುಷ ಪ್ರಯಾಣಿಕರು ಹೆಚ್ಚಾಗಿದ್ದಾರೆ . ಶೇ. 20 ರಿಂದ 30 ರಷ್ಟು ಪ್ರಯಾಣಿಕರು ಹೆಚ್ಚಾಗಿದ್ದಾರೆ. ಇದರಿಂದ ಸಾರಿಗೆ ಸಂಸ್ಥೆಗೆ ಆದಾಯ ಬಂದಿದೆ ಎಂದು ಹೇಳಿದ್ದಾರೆ. ಪ್ರಯಾಣಿಕರ ಹೆಚ್ಚಳದಿಂದ ಸಾರಿಗೆ ನಿಗಮ ಸ್ವಾವಲಂಬಿ ಆಗುತ್ತದೆ. ಇಂದು …
Read More »ಬಿಜೆಪಿಯವರು ಪ್ರತಿಪಕ್ಷದ ನಾಯಕರಾಗಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಮಾಡುತ್ತಾರೆ ಎಂದು ಲಕ್ಷ್ಮಣ್ ಸವದಿ ಲೇವಡಿ ಮಾಡಿದರು.
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದೂವರೆ ತಿಂಗಳು ಕಳೆದರೂ ಪ್ರತಿಪಕ್ಷ ನಾಯಕನ ನೇಮಕ ಮಾಡಲು ಬಿಜೆಪಿ ಹೈಕಮಾಂಡ್ಗೆ ಸಾಧ್ಯವಾಗಿಲ್ಲ. ಮತ್ತೊಂದೆಡೆ ವಿಧಾನಸಭೆ ಅಧಿವೇಶನ ಪ್ರಾರಂಭವಾಗಿವಾರ ಕಳೆದರೂ ಇನ್ನೂ ಕೂಡ ಬಿಜೆಪಿ ಪ್ರತಿಪಕ್ಷ ನಾಯಕನ ಹೆಸರನ್ನು ಕೇಂದ್ರ ನಾಯಕರು ಬಹಿರಂಗಪಡಿಸಿಲ್ಲ. ಈ ವಿಷಯವಾಗಿಯೇ ಇಂದು ವಿಧಾನಸಭೆಯಲ್ಲಿ ಸ್ವಲ್ಪ ದಿನ ತಟಸ್ಥವಾಗಿರಿ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರೇ ಆರಂಭದಲ್ಲಿ ಪ್ರತಿಪಕ್ಷದ ನಾಯಕರಾಗಿ ಸಮರ್ಥವಾಗಿ ಕೆಲಸ ಮಾಡುತ್ತಾರೆ. …
Read More »ಗ್ರಾಹಕರಿಗೆ ಚಿಲ್ಲರೆ ಮಳಿಗೆಗಳ ಮೂಲಕ ರಿಯಾಯಿತಿ ದರದಲ್ಲಿ ಟೊಮೆಟೊ ವಿತರಿಸಲಾಗುವುದು ಎಂದು ಗ್ರಾಹಕ
ನವದೆಹಲಿ: ದೇಶದಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ ಪ್ರಮುಖ ಗ್ರಾಹಕ ಕೇಂದ್ರಗಳಲ್ಲಿ ಟೊಮೆಟೊ ಕಡಿಮೆ ಬೆಲೆಗೆ ಲಭ್ಯವಾಗುವಂತೆ ಮಾಡಲು, ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಟೊಮೆಟೊ ಖರೀದಿಸುವಂತೆ ಕೇಂದ್ರ ಸರ್ಕಾರ ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (ನಾಫೆಡ್) ಮತ್ತು ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (ಎನ್ಸಿಸಿಎಫ್)ಗೆ ಬುಧವಾರ ನಿರ್ದೇಶನ ನೀಡಿದೆ. ‘ಕ್ವೀನ್ ಆಫ್ ಕಿಚನ್’ ಎಂದು ಕರೆಯಲ್ಪಡುವ ಟೊಮೆಟೊದ ಚಿಲ್ಲರೆ ಬೆಲೆಯೂ ಭಾರೀ ಮಳೆಯಿಂದಾಗಿ ಉಂಟಾದ …
Read More »ಅನುದಾನಿತ ಶಾಲೆಗಳ ಫಲಿತಾಂಶ ಇಳಿಕೆ ಗಂಭೀರವಾಗಿ ಪರಿಗಣನೆ: ಮಧು ಬಂಗಾರಪ್ಪ
ಬೆಂಗಳೂರು: ಅನುದಾನಿತ ಶಾಲೆಗಳಲ್ಲಿ ಫಲಿತಾಂಶ ಗಣನೀಯವಾಗಿ ಇಳಿಯುತ್ತಿರುವುದು ದೊಡ್ಡ ಸಮಸ್ಯೆ. ಇದರ ಸುಧಾರಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ನಲ್ಲಿ ಬಿಜೆಪಿ ಸದಸ್ಯ ಡಾ. ವೈ.ಎ.ನಾರಾಯಣ ಸ್ವಾಮಿ ನಿಯಮ 72ರ ಅಡಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಯನ್ನು ಕಾಲಕಾಲಕ್ಕೆ ಭರ್ತಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಫಲಿತಾಂಶ ಹೆಚ್ಚಳಕ್ಕೆ 2020ರ ನಂತರದ ಖಾಲಿ …
Read More »ಪಾಲಿಕೆ ಮುಖ್ಯ ಆಯುಕ್ತರಿಂದ ಇಂದಿರಾ ಕ್ಯಾಂಟೀನ್ಗಳ ಪರಿಶೀಲನೆ
ಬೆಂಗಳೂರು : ನಗರದ ಪೂರ್ವ ವಲಯದ ಹೆಬ್ಬಾಳ ಹಾಗೂ ವಿಶ್ವನಾಥ ನಾಗೇನಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಎರಡು ಇಂದಿರಾ ಕ್ಯಾಂಟೀನ್ ಗಳಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಈ ವೇಳೆ ಅವರು, ಬಾಕಿ ಇರುವ ದುರಸ್ತಿ ಕಾರ್ಯಗಳನ್ನು ಕೂಡಲೇ ಕೈಗೆತ್ತಿಕೊಂಡು ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೊದಲು ಪೂರ್ವ ವಲಯ ವ್ಯಾಪ್ತಿಯಲ್ಲಿ ಹೆಬ್ಬಾಳ ವಾರ್ಡ್ ಬಳ್ಳಾರಿ ಮುಖ್ಯ ರಸ್ತೆಯಲ್ಲಿ ಇರುವ ಇಂದಿರಾ ಕ್ಯಾಂಟೀನ್ಗೆ ಭೇಟಿ …
Read More »ರಾಜ್ಯದಲ್ಲಿ 2,000 ಕೋಟಿ ರೂಪಾಯಿ ಹೂಡಿಕೆಗೆ ಮುಂದಾದ ಟಾಟಾ ಟೆಕ್ನಾಲಜೀಸ್
ಬೆಂಗಳೂರು: ಪ್ರತಿಷ್ಠಿತ ಟಾಟಾ ಟೆಕ್ನಾಲಜೀಸ್ ಕಂಪನಿಯು 2,000 ಕೋಟಿ ರೂ. ಹೂಡಿಕೆ ಮಾಡಿ ರಾಜ್ಯದಲ್ಲಿ ಮೂರು ಸಾಮಾನ್ಯ ಎಂಜಿನಿಯರಿಂಗ್ ಸೌಲಭ್ಯಗಳ ಕೇಂದ್ರ (ಸಿಇಎಫ್ಸಿ- ಕಾಮನ್ ಎಂಜಿನಿಯರಿಂಗ್ ಫೆಸಿಲಿಟಿ ಸೆಂಟರ್)ಗಳನ್ನು ಸ್ಥಾಪಿಸಲು ಮುಂದೆ ಬಂದಿದೆ. ವಿಧಾನಸೌಧದಲ್ಲಿ ಬುಧವಾರ ಕಂಪನಿಯ ಉನ್ನತ ಅಧಿಕಾರಿಗಳು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರನ್ನು ಭೇಟಿಯಾಗಿ ಈ ಸಂಬಂಧ ಪ್ರಸ್ತಾವನೆ ಸಲ್ಲಿಸಿ ಮಾತುಕತೆ ನಡೆಸಿದ್ದಾರೆ. ವಿಶೇಷವಾಗಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ …
Read More »ಅಪರಿಚಿತ ವ್ಯಕ್ತಿಯೋರ್ವ ಬಾಲಕಿಯನ್ನು ಅಪಹರಿಸಲು ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪ್ರಕರಣ ದಾಖಲಾದ 12 ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಖೆಡ್ಡಾಕ್ಕೆ ಬೀಳಿಸಿದ್ದಾರೆ.
ಬೆಳಗಾವಿ: ಅಪರಿಚಿತ ವ್ಯಕ್ತಿಯೋರ್ವ 12 ವರ್ಷದ ಬಾಲಕಿಯನ್ನು ಅಪಹರಿಸಲು ಯತ್ನಿಸಿ ಸಿಕ್ಕಿ ಬಿದ್ದಿರುವ ಘಟನೆ ನಗರದ ಹಿಂದವಾಡಿಯ ಮಹಾವೀರ ಗಾರ್ಡನ್ ಬಳಿ ಮಂಗಳವಾರ ಸಂಜೆ ನಡೆದಿದೆ. ಆರೋಪಿ ಬಾಲಕಿಯನ್ನು ಹೊತ್ತೊಯ್ಯುವ ದೃಶ್ಯ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈ ಬಗ್ಗೆ ದೂರು ದಾಖಲಾದ 12 ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಖೆಡ್ಡಾಕ್ಕೆ ಕೆಡವಿದ್ದಾರೆ. ಮಾರುತಿ ನಗರದ ಗಜಾನನ ಪಾಟೀಲ (40) ಖೆಡ್ಡಾಕ್ಕೆ ಬಿದ್ದ ಆರೋಪಿ. ಆರೋಪಿ ಗಜಾನನ ಟ್ಯೂಶನ್ಗೆ ಹೊರಟಿದ್ದ ಬಾಲಕಿಗೆ ಚಾಕಲೇಟ್ ಆಮಿಷವೊಡ್ಡಿ …
Read More »
Laxmi News 24×7