ಚಿಕ್ಕಮಗಳೂರು : ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆಯುತ್ತಿವೆ. ಹೀಗಿದ್ದರೂ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಶುದ್ಧ ಕುಡಿಯುವ ನೀರು, ಸರಿಯಾದ ರಸ್ತೆ ಸೇರಿದಂತೆ ಇನ್ನೂ ಅನೇಕ ಅಗತ್ಯ ಕನಿಷ್ಟ ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಇದಕ್ಕೆ ಹೊಸದೊಂದು ನಿದರ್ಶನ ಸಿಕ್ಕಿದೆ. ಚಿಕ್ಕಮಗಳೂರಿನ ಅರಣ್ಯ, ಪರ್ವತ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಸರಿಯಾದ ರಸ್ತೆಗಳಿಲ್ಲ. ಔಷಧೋಪಚಾರಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಬೀದಿ ದೀಪಗಳಿಲ್ಲದೆ ಜನರು ಶೋಚನೀಯ ಜೀವನ ನಡೆಸುತ್ತಿದ್ದಾರೆ. ವಾಹನಗಳು ಓಡಾಡುವ ರಸ್ತೆಗಳಿಲ್ಲದ …
Read More »ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ
ಬೆಳಗಾವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಂಡ ವಿಚಾರದ ಹಿನ್ನೆಲೆ ಮೌನ ಪ್ರತಿಭಟನೆಗೆ ಅಖಿಲ ಭಾರತೀಯ ಕಾಂಗ್ರೆಸ್ ಕರೆ ನೀಡಿತ್ತು. ಇಂದು ಬುಧವಾರ ಬೆಳಗಾವಿಯ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಜಿಲ್ಲೆಯ ಕೈ ಕಾರ್ಯಕರ್ತರು ಧರಣಿ ನಡೆಸಿದರು. ಈ ವೇಳೆ ಎಂಎಲ್ಸಿ ಬಿ.ಕೆ. ಹರಿಪ್ರಸಾದ್ ಸಾಥ್ ನೀಡಿದರು. ರಾಹುಲ್ ಗಾಂಧಿಯವರ ಸತ್ಯದ ನಡಿಗೆಯಲ್ಲಿ ನಮ್ಮ ಹೆಜ್ಜೆ, ಸರ್ವಾಧಿಕಾರಿ ಧೋರಣೆಯ ಮೋದಿಯವರಿಗೆ ಧಿಕ್ಕಾರ, ನಮ್ಮ ಹೆಜ್ಜೆ ಜನತಾ ನ್ಯಾಯಾಲಯದತ್ತ …
Read More »ಶಿವರಾಜ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.:C.M.
ಕನ್ನಡ ಚಿತ್ರರಂಗದ ಖ್ಯಾತ ಹಾಗೂ ಪ್ರತಿಭಾವಂತ ನಟ ಶಿವರಾಜ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ನಟನಾ ಕೌಶಲದಿಂದ ಮಾತ್ರವಲ್ಲ ತಮ್ಮ ವಿನಯಶೀಲ ನಡೆ-ನುಡಿಗಳಿಂದಲೂ ಕೋಟ್ಯಂತರ ಜನರ ಪ್ರೀತಿ-ಅಭಿಮಾನಗಳಿಗೆ ಪಾತ್ರರಾಗಿರುವ ಶಿವರಾಜ್ ಕುಮಾರ್ ಅವರಿಗೆ ಆಯುಷ್ಯ ಮತ್ತು ಆರೋಗ್ಯದ ಭಾಗ್ಯ ಕೂಡಿಬರಲಿ ಎಂದು ಹಾರೈಸುತ್ತೇನೆ.
Read More »ಸಂಬಳ ಬೇಕು, ಪಾಠ ಮಾತ್ರ ಮಾಡಲ್ಲ’
ಶಿಕ್ಷಕರು ಮಕ್ಕಳಿಗೆ ದೇವರ ಸಮಾನ. ತಾಯಿ ನಂತರ ಮಕ್ಕಳಿಗೆ ಶಿಕ್ಷಕರೇ ಎಲ್ಲವೂ ಎಂದರೆ ತಪ್ಪಾಗಲಾರದು. ಇಂಥಾ ಗುರುಗಳು ಯಾವಾಗಲೂ ಮಕ್ಕಳಿಗೆ ಪಾಠ ಮಾಡುವ ಕೆಲಸ ಮಾಡಬೇಕು. ಅದರಲ್ಲೂ ಮಕ್ಕಳಿಗಾಗಿಯೇ ಶಾಲೆ ಇರುವುದು. ಮಕ್ಕಳಿಗೆ ಪಾಠ ಮಾಡಲು ಎಂದೇ ಶಿಕ್ಷಕರ ನೇಮಕ ಮಾಡಿ ಸಂಬಳ ನೀಡುವುದು. ಇಲ್ಲೋರ್ವ ಕಿಡಿಗೇಡಿ ಶಿಕ್ಷಕನೋರ್ವ ಸಂಬಳ ತೆಗೆದುಕೊಂಡು ಸರಿಯಾಗಿ ಪಾಠ ಮಾಡದ ಘಟನೆ ಸಂಭವಿಸಿದೆ. ಅಲ್ಲದೇ ಈ ವಿಷಯ ಯಾರಿಗೂ ಗೊತ್ತಾಗಬಾರದು ಎಂದು ತನ್ನ ಬದಲಿಗೆ …
Read More »ಳ್ಳರಿಂದ ತರಕಾರಿ ರಕ್ಷಿಸಲು ಪಾಳಿಯಲ್ಲಿ ಕಾವಲು ಕಾಯುತ್ತಿರುವ ರೈತ!
ದಾವಣಗೆರೆ: ಇದೀಗ ಟೊಮೆಟೊ ತರಕಾರಿಗಳಲ್ಲೇ ರಾಜ ಎನ್ನಿಸಿಕೊಳ್ಳುವ ಪರಿಸ್ಥಿತಿ ಇದೆ. ಏಕೆಂದರೆ ಬೆಲೆ ಗಗನಕ್ಕೇರಿದೆ. ಇನ್ನೊಂದೆಡೆ, ರೈತರು ಬೆಳೆ ಬೆಳೆಯುತ್ತಿರುವ ಜಮೀನುಗಳಲ್ಲೇ ಮೊಕ್ಕಾಂ ಹೂಡುವಂತಾಗಿದೆ. ಕಳ್ಳರ ಕಾಟದಿಂದ ಬೇಸತ್ತಿರುವ ಅವರಿಗೆ ಟೊಮೆಟೊ ರಕ್ಷಣೆ ಮಾಡುವುದು ತಲೆನೋವಾಗಿ ಪರಿಣಮಿಸಿದೆ. ದಾವಣಗೆರೆಯ ರೈತರು ಎರಡು ನಾಯಿಗಳೊಂದಿಗೆ ಜಮೀನಿನಲ್ಲಿ ಕಾವಲು ಕಾಯುತ್ತಿದ್ದಾರೆ. ಮಾಯಕೊಂಡ ಹೋಬಳಿಯಲ್ಲಿ ಟೊಮೆಟೊ ಹೆಚ್ಚಾಗಿ ಬೆಳೆಯುತ್ತಾರೆ. ಸುತ್ತಮುತ್ತಲ ಗ್ರಾಮದ ಜಮೀನುಗಳಲ್ಲಿ ಬೆಳೆಯುವ ತರಕಾರಿ ವಿದೇಶಗಳಿಗೂ ರಫ್ತಾಗುತ್ತದೆ. ಈಗಂತೂ ಟೊಮೆಟೊಗೆ ಬೆಲೆ ಕೇಳುವಂತಿಲ್ಲ. ಪ್ರತಿ …
Read More »ಜೈನಮುನಿಹತ್ಯೆ ಮಾಡಿದ ಆರೋಪಿಗಳಿಗೆ ವರ್ಷದೊಳಗೆ ಮರಣ ದಂಡನೆ ವಿಧಿಸಬೇಕು:ಅಬ್ದುಲ್ ಅಜೀಮ್
ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣದಲ್ಲಿ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆ ಆಗಬೇಕು. ಹತ್ಯೆ ಮಾಡಿದವರ ಜತೆಗೆ ಹತ್ಯೆಗೆ ಪ್ರಚೋದನೆ, ಸಾಧನ, ಸಲಕರಣೆ ಒದಗಿಸಿದವರನ್ನೂ ಶಿಕ್ಷೆಗೆ ಒಳಪಡಿಸಬೇಕು. ಅಪರಾಧಿಗಳಿಗೆ ಅತ್ಯಂತ ಕಠಿಣ ಮರಣದಂಡನೆ ಶಿಕ್ಷೆ ವಿಧಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸೇರಿದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ತಿಳಿಸಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ …
Read More »ಕುಡಿಯಲು ಹಣ ನೀಡುವಂತೆ ಮನೆಯವರಿಗೆ ಪೀಡಿಸುತ್ತಿದ್ದ ಯುವಕನ ಹೊಡೆದು ಕೊಂದ ತಂದೆ, ಸಹೋದರ!
ಚಿಕ್ಕೋಡಿ: ಕುಡಿತದ ಚಟಕ್ಕೆ ದಾಸನಾಗಿ ಕುಟುಂಬಸ್ಥರನ್ನು ಪೀಡಿಸುತ್ತಿದ್ದ ಯುವಕನನ್ನು ಸ್ವಂತ ತಂದೆ ಮತ್ತು ಅಣ್ಣನೇ ಹೊಡೆದು ಸಾಯಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದ ಸೋಮಯ್ಯ ಮಹಾಲಿಂಗಯ್ಯ ಹಿರೇಮಠ (24) ಮೃತ ದುರ್ದೈವಿ. ಆರೋಪಿಗಳಾದ ಮಹಾಲಿಂಗಯ್ಯ ಗುರುಸಿದ್ದಯ್ಯ ಹಿರೇಮಠ, ಬಸಯ್ಯ ಹಿರೇಮಠ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ : ಜುಲೈ 10ರಂದು ಸೋಮಯ್ಯ ಮದ್ಯಪಾನ ಮಾಡಲು ಹಣ …
Read More »ಬೆಂಗಳೂರಿನಲ್ಲಿ ಸಿಇಒ, ಎಂಡಿ ಜೋಡಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಬೆಂಗಳೂರು : ಖಾಸಗಿ ಕಂಪನಿಗೆ ನುಗ್ಗಿ ಎಂ.ಡಿ ಹಾಗೂ ಸಿಇಒ ಇಬ್ಬರನ್ನೂ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಡರಾತ್ರಿ ವಿಶೇಷ ಕಾರ್ಯಾಚರಣೆ ಕೈಗೊಂಡ ಪೊಲೀಸರ ತಂಡ ಆರೋಪಿಗಳಾದ ಫೆಲಿಕ್ಸ್, ವಿನಯ್ ರೆಡ್ಡಿ ಹಾಗೂ ಶಿವು ಎಂಬವರನ್ನು ಕುಣಿಗಲ್ ಸಮೀಪ ಬಂಧಿಸಿದೆ. ಪ್ರಕರಣದ ವಿವರ: ಒಟ್ಟಿಗೆ ಕೆಲಸ ಮಾಡುತ್ತಿದ್ದಾಗ ಫೆಲಿಕ್ಸ್ನನ್ನು ಸದಾ ನಿಂದಿಸುತ್ತಿದ್ದ ಫಣೀಂದ್ರ ಇತ್ತೀಚೆಗೆ ಆತನನ್ನು ಕೆಲಸದಿಂದಲೂ ತೆಗೆದು ಹಾಕಿದ್ದರು. ಅದೇ ದ್ವೇಷಕ್ಕೆ ಫೆಲಿಕ್ಸ್, …
Read More »ರಾಜ್ಯ ಸರ್ಕಾರದ ಹಣಕಾಸು ವ್ಯವಹಾರಗಳಲ್ಲಿ ಲೋಪದೋಷ? (ಸಿಎಜಿ) ವರದಿ
ಬೆಂಗಳೂರು: 2021-22ರ ಅಂತ್ಯಕ್ಕೆ 37.37 ಕೋಟಿ ರೂಪಾಯಿ ಮೊತ್ತದ ಹಣ ದುರುಪಯೋಗ, ನಷ್ಟ ಸಂಭವಿಸಿದ್ದು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ (ಸಿಎಜಿ) ವರದಿ ತಿಳಿಸಿದೆ. ಮಂಗಳವಾರ ವಿಧಾನಮಂಡಲದ ಉಭಯಸದನದಲ್ಲಿ ಮಾರ್ಚ್ 2022ಕ್ಕೆ ಕೊನೆಗೊಂಡ ರಾಜ್ಯ ಸರ್ಕಾರದ ಹಣಕಾಸಿನ ವ್ಯವಹಾರಗಳ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಲಾಯಿತು. ವರದಿಯಲ್ಲಿ ಹಣಕಾಸುಗಳ ವ್ಯವಹಾರದ ವಿಶ್ಲೇಷಣಾತ್ಮಕ ವಿಮರ್ಶೆ ಮಾಡಲಾಗಿದ್ದು, ಐದು ಆಧ್ಯಾಯಗಳಲ್ಲಿ ರಚಿಸಲಾಗಿದೆ. ಅವಲೋಕನ, ರಾಜ್ಯದ ಹಣಕಾಸು ವ್ಯವಹಾರಗಳು, ಆಯವ್ಯಯ ನಿರ್ವಹಣೆ, ಲೆಕ್ಕಗಳ ಗುಣಮಟ್ಟ …
Read More »ದೇಗುಲದ ಗರ್ಭಗುಡಿ ಮೇಲೆ ಕೋಳಿ ಮರಿಗಳನ್ನು ಹಾರಿಸಿ ಹರಕೆ ತೀರಿಸುವ ವಿಶಿಷ್ಟ ಪದ್ಧತಿ
ಬೆಳಗಾವಿ : ಜಾತ್ರೆಗಳಲ್ಲಿ ನಡೆಯುವ ರಥೋತ್ಸವಗಳಲ್ಲಿ ಸಾಮಾನ್ಯವಾಗಿ ಬಾಳೆಹಣ್ಣು, ಉತ್ತತ್ತಿ ಮುಂತಾದವುಗಳನ್ನು ದೇವರಿಗೆ ಎಸೆಯುವುದನ್ನು ನಾವು ನೋಡಿದ್ದೇವೆ. ಆದರೆ, ಬೆಳಗಾವಿಯಲ್ಲಿ ನಡೆಯುವ ಜಾತ್ರೆಯೊಂದರಲ್ಲಿ ಗರ್ಭಗುಡಿ ಮೇಲೆ ಕೋಳಿ ಮರಿಗಳನ್ನು ಎಸೆಯುವ ವಿಶಿಷ್ಟ ಪದ್ಧತಿಯಿದೆ. ವಡಗಾವಿ ಆರಾಧ್ಯ ದೇವಿ ಮಂಗಾಯಿದೇವಿ ಜಾತ್ರೆಯಲ್ಲಿ ಕೋಳಿ ಮರಿಗಳನ್ನು ಗರ್ಭಗುಡಿ ಮೇಲೆ ಎಸೆಯುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಪ್ರತಿ ವರ್ಷ ಆಷಾಢ ಮಾಸದ ಹುಣ್ಣಿಮೆಯ ಬಳಿಕ ಬರುವ ಮಂಗಳವಾರದಿಂದ ಮಂಗಾಯಿ ದೇವಿ ಜಾತ್ರೆ ಪ್ರಾರಂಭವಾಗುತ್ತದೆ. ಅದ್ಧೂರಿ …
Read More »
Laxmi News 24×7