Breaking News

ಜೈನ ಮುನಿ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ

ಚಿಕ್ಕೋಡಿ(ಬೆಳಗಾವಿ): ಹಿರೇಕೋಡಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡಿಸಿ ಚಿಕ್ಕೋಡಿ ಪಟ್ಟಣದಲ್ಲಿ ಜೈನ್ ಧರ್ಮದ ಶ್ರಾವಕ ಶ್ರಾವಕಿಯರು ಬೃಹತ್ ಪ್ರತಿಭಟನೆ ನಡೆಸಿದರು. ಚಿಕ್ಕೋಡಿ ಪಟ್ಟಣದ ಆರ್​ಡಿ ಮೈದಾನದಿಂದ 15 ಸಾವಿರಕ್ಕೂ ಹೆಚ್ಚು ಜನರು ಕೊಲ್ಲಾಪುರ ನಾಂದಣಿ ಮಠದ ಜೀನಸೇನ ಭಟ್ಟಾರಕ ಹಾಗೂ ವರೂರು ಮಠದ ಧರ್ಮಸೇನಾ ಭಟ್ಟಾರಕ, ಮತ್ತು ಕೊಲ್ಲಾಪುರದ ಕೀರ್ತಿಸೇನ ಭಟ್ಟಾರಕರ ನೇತೃತ್ವದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರು. ಆರ್‌ಡಿ ಹೈಸ್ಕೂಲ್ ಮೈದಾನದಿಂದ ಮಹಾವೀರ ಸರ್ಕಲ್, ಬಸವೇಶ್ವರ ಸರ್ಕಲ್ ಮೂಲಕ …

Read More »

ಮಳೆ ಕೊರತೆ.. ಅಕ್ಕಿ ಬೆಲೆಯೂ ಆಗಲಿದೆ ದುಬಾರಿ

ನವದೆಹಲಿ: ದೇಶದಲ್ಲಿ ಈಗಾಗಲೇ ಟೊಮೆಟೊ ಬೆಲೆ ಗಗನಕ್ಕೆ ಏರಿದೆ. ಇದಕ್ಕೆ ಕಾರಣ ಹೆಚ್ಚಿದ ಮಾರುಕಟ್ಟೆ ಮತ್ತು ಕಡಿಮೆ ಪೂರೈಕೆ ಆಗಿದೆ. ಸದ್ಯ ಇದರ ಬೆನ್ನಲ್ಲೇ ಜನರು ಮತ್ತೊಂದು ಅಗತ್ಯ ಆಹಾರ ಸಾಮಗ್ರಿಯ ಬರ ಎದುರಿಸುವಂತೆ ಆಗಲಿದೆ. ಅಚ್ಚರಿ ಆದರೂ ಹೌದು, ಮಳೆ ಕೊರತೆ ಮತ್ತು ಕಡಿಮೆ ಬಿತ್ತನೆಯಿಂದಾಗಿ ಅಕ್ಕಿ ಇಳುವರಿ ಕಡಿಮೆಯಾಗಿದೆ. ಇದರ ಕೊರತೆ ಎದುರಾಗುವ ದಿನ ಸನ್ನಿಹಿತವಾಗಿದೆ ಎಂದು ಮೋತಿಲಾಲ್​ ಒಸ್ವಾಲ್​ ಫೈನಾನ್ಸ್​ ಸರ್ವೀಸ್​ ವರದಿಯಲ್ಲಿ ತಿಳಿಸಿದೆ. ಜಾಗತಿಕವಾಗಿ ಅಕ್ಕಿ …

Read More »

ಟೊಮೆಟೊ ತುಂಬಿದ್ದ ಬೊಲೆರೊ ವಾಹನ ಹೈಜಾಕ್

ಬೆಂಗಳೂರು: ಕೆಲ ದಿನಗಳಿಂದ ಟೊಮೆಟೊ ಬೆಲೆ ಗಗನಕ್ಕೇರಿದೆ. ಇದೇ ಸಮಯವನ್ನು ಕಾದು ಕುಳಿತಿರುವ ಕೆಲ ಖದೀಮರು ಟೊಮೆಟೊ ಕದಿಯುತ್ತಿದ್ದಾರೆ. ಗಾಡಿ ಟಚ್ ಆಗಿದೆ ಎಂದು ಸುಳ್ಳು ಹೇಳಿದ ಮೂವರು ಆರೋಪಿಗಳು ಟೊಮೆಟೊ ತುಂಬಿದ್ದ ಬೊಲೆರೊ ವಾಹನವನ್ನು ಹೈಜಾಕ್ ಮಾಡಿದ್ದಾರೆ. ಕಳೆದ‌ ಎರಡು‌ ದಿನಗಳ ಹಿಂದೆ ಘಟನೆ ನಡೆದಿದ್ದು, ಈ ಸಂಬಂಧ ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

Read More »

ಧಾರವಾಡದ ಐವರು ತಮ್ಮದೇ ಸ್ವಂತ ಹಣದಲ್ಲಿಹೆಲಿಕ್ಯಾಪ್ಟರ್​ ಮೂಲಕ ಶ್ರೀನಗರ ತಲುಪಿದ ಧಾರವಾಡದ ಯಾತ್ರಿಗಳು!

ಧಾರವಾಡ : ನಿರಂತರ ಮಳೆಯಾಗುತ್ತಿರುವ ಪರಿಣಾಮ ಜಮ್ಮು ಕಾಶ್ಮೀರದ ಅಮರನಾಥ ಮಾರ್ಗ ಮಧ್ಯೆ ಗುಡ್ಡಕುಸಿತ ಉಂಟಾಗಿ ಅಮರನಾಥದಲ್ಲಿ ಧಾರವಾಡದ ಐವರು ತಮ್ಮದೇ ಸ್ವಂತ ಹಣದಲ್ಲಿ ಶ್ರೀನಗರ ತಲುಪಿದ್ದಾರೆ. ಪಂಚತಾರಣಿ ಬಳಿ ಸಿಲುಕಿದ್ದ ಐವರು ಧಾರವಾಡ ಯಾತ್ರಿಗಳು ಸುರಕ್ಷಿತವಾಗಿ ಶ್ರೀನಗರ ತಲುಪಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಟೆಂಟ್‌ನಲ್ಲಿ ವಾಸವಾಗಿದ್ದ ಯಾತ್ರಿಗಳು ಸರ್ಕಾರದಿಂದ ಯಾವುದೇ ಸಹಾಯ ಸಿಗದ ಹಿನ್ನೆಲೆ ಹೆಲಿಕ್ಯಾಪ್ಟರ್ ಮೂಲಕ ಶ್ರೀನಗರಕ್ಕೆ ಪ್ರಯಾಣಿಸಿದ್ದಾರೆ. ಪ್ರತಿಯೊಬ್ಬರಿಗೆ 4200ರೂ. ನೀಡಿ ಹೆಲಿಕ್ಯಾಪ್ಟರ್​ನಲ್ಲಿ ಪ್ರಯಾಣಿಸಿ ಸದ್ಯ ಐವರು …

Read More »

ಜೈನ ಮುನಿಗಳ ಹತ್ಯೆ ಸಿಬಿಐ ತನಿಖೆಗೆ ವಹಿಸುವಂತೆ ಬಿಜೆಪಿ ಪಟ್ಟು

ಬೆಂಗಳೂರು: ಜೈನ ಮುನಿಗಳ ಹತ್ಯೆ ಕೃತ್ಯವನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಉತ್ತಮ ಅಧಿಕಾರಿಗಳ ತಂಡವನ್ನು ತನಿಖೆಗೆ ಒದಗಿಸಲಿದ್ದೇವೆ. ಘಟನೆಯಲ್ಲಿ ಭಾಗಿಯಾದ ಯಾರೂ ನಮ್ಮ ಸರ್ಕಾರದಿಂದ ರಕ್ಷಣೆ ಪಡೆಯಲು ಸಾಧ್ಯವಿಲ್ಲ. ನಮ್ಮ ಮೇಲೆ ವಿಶ್ವಾಸ ಇಟ್ಟು ಸಹಕಾರ ನೀಡಿ, ನಿಮ್ಮ ಅವಧಿಯ ಪೊಲೀಸರೇ ಈಗಲೂ ಇದ್ದಾರೆ. ನಂಬಿಕೆ ಇಡಿ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಜೈನ ಮುನಿಗಳ ಹತ್ಯೆ ವಿಷಯದ ಚರ್ಚೆಗೆ …

Read More »

ಕಳಸಾ-ಬಂಡೂರಿ ಅಣೆಕಟ್ಟು ನಿರ್ಮಾಣ ಮಾಡಲು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಗೋವಾ ಮುಖ್ಯಮಂತ್ರಿ

ಪಣಜಿ(ಗೋವಾ): ಕಲ್ಯಾಣ ಮತ್ತು ಸಾಮರಸ್ಯಕ್ಕಾಗಿ ಪ್ರಗತಿಶೀಲ ನದಿ ಪ್ರಾಧಿಕಾರ (ಪ್ರವಾಹ್) ರಚನೆಯಾದ ನಂತರ ಕಳಸಾ-ಬಂಡೂರಿ ಅಣೆಕಟ್ಟು ನಿರ್ಮಾಣ ಮಾಡಲು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೋಮವಾರ ಹೇಳಿದ್ದಾರೆ. “ಮಹದಾಯಿ ವಿಷಯವಾಗಿ ಗೋವಾದ ಕಾನೂನು ತಂಡವು ದೆಹಲಿಯಲ್ಲಿದೆ. ನಾವು ನಮ್ಮ ವಾದವನ್ನು ಸಮರ್ಥವಾಗಿ ಮಂಡಿಸುತ್ತೇವೆ ಎಂಬುದು ನನಗೆ ಖಾತ್ರಿಯಿದೆ. ಸರ್ವೋಚ್ಛ ನ್ಯಾಯಾಲಯದ ಮೇಲೆ ಸಂಪೂರ್ಣ ನಂಬಿಕೆ ನನಗೆ ಇದೆ. ಕರ್ನಾಟಕ ಏನೇ …

Read More »

ಕೃಷಿ ಭೂಮಿಯಲ್ಲಿ ಅನಧಿಕೃತ ಹೋಂ ಸ್ಟೇ ನಡೆಸಲು ಅವಕಾಶವಿಲ್ಲ: ರೆಡ್ಡಿ ಪ್ರಶ್ನೆಗೆ ಸಚಿವ ಭೈರತಿ ಸುರೇಶ್ ಸ್ಪಷ್ಟನೆ

ಬೆಂಗಳೂರು : ಹಂಪಿ ಯೋಜನಾ ಪ್ರಾಧಿಕಾರ ವ್ಯಾಪ್ತಿಯ ಆನೆಗೊಂದಿ ಪ್ರದೇಶದಲ್ಲಿ ಕೃಷಿ ಭೂಮಿಯಲ್ಲಿ ಅನಧಿಕೃತ ಹೋಂ ಸ್ಟೇ ನಡೆಸಲು ಅವಕಾಶವಿಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿಧಾನಸಭೆಗೆ ಸ್ಪಷ್ಟಪಡಿಸಿದ್ದಾರೆ. ಇಂದು ಶೂನ್ಯವೇಳೆಯಲ್ಲಿ ಸದಸ್ಯ ಜಿ ಜನಾರ್ದನರೆಡ್ಡಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಹಂಪಿ ಯೋಜನಾ ಪ್ರಾಧಿಕಾರ ವ್ಯಾಪ್ತಿಯಲ್ಲಿ 15 ಗ್ರಾಮಗಳು ಬರುತ್ತವೆ. 2008ರಲ್ಲೇ ಅಧಿಸೂಚನೆ ಹೊರಡಿಸಲಾಗಿದೆ ಎಂದರು. ಹಂಪಿ ಪ್ರಾಧಿಕಾರದ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ 58 ಅನಧಿಕೃತ ಹೋಂ ಸ್ಟೇಗಳಿವೆ. …

Read More »

ಜೈನ ಮುನಿ ಹತ್ಯೆ ಕೇಸ್‌: ಪೊಲೀಸ್ ಇಲಾಖೆ ಸಮರ್ಥ, ಸಿಬಿಐ ತನಿಖೆ ಅಗತ್ಯವಿಲ್ಲ

ಹುಬ್ಬಳ್ಳಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಹತ್ಯೆ ತನಿಖೆಯ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಪೊಲೀಸರು ಏನು ಕಾನೂನು ಕ್ರಮ ಕೈಗೊಳ್ಳಬೇಕೋ ಅದನ್ನು ಅವರು ಮಾಡುತ್ತಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್​ ಹೇಳಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆ ನಡೆದಾಗ ಯಾರೂ ಕೂಡ ತಾರತಮ್ಯ ಮಾಡಲು ಹೋಗುವುದಿಲ್ಲ. ಪೊಲೀಸರು ಆರೋಪಿಗಳನ್ನು ಬಂಧಿಸುವ ಕೆಲಸವನ್ನು …

Read More »

ಹಂತಕರಿಗೆ ಕಠಿಣ ಶಿಕ್ಷೆ ಬೇಡ, ಅವರ ಮನ ಪರಿವರ್ತನೆಯಾಗಲಿ

ಹುಬ್ಬಳ್ಳಿ: “ಜೈನ ಮುನಿ ಹತ್ಯೆಯನ್ನು ಎಲ್ಲ ರಾಜಕೀಯ ಪಕ್ಷದವರು ಖಂಡಿಸಿದ್ದಾರೆ. ಇದಕ್ಕೆ ಧನ್ಯವಾದ. ಇಂತಹ ಕೃತ್ಯ ಆಗಲೇಬಾರದು. ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ​ ಭೇಟಿ ಬಳಿಕ ನಾನು ಉಪವಾಸ ಸತ್ಯಾಗ್ರಹ ಹಿಂಪಡೆಯುತ್ತೇನೆ” ಎಂದು ಗುಣಧರನಂದಿ ಮುನಿ ಮಹಾರಾಜರು ಹೇಳಿದರು. ಇದೇ ವೇಳೆ ಹಂತಕರಿಗೆ ಕಠಿಣ ಶಿಕ್ಷೆ ಬೇಡ, ಅವರ ಮನ ಪರಿವರ್ತನೆಯಾಗಲಿ ಎಂದರು. ವರೂರಿಗೆ ಇಂದು ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೈನ …

Read More »

ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಹಿಂದೆ ಐಸಿಸ್ ಚಿತಾವಣೆ ಇದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಗಂಭೀರ ಆರೋಪ

ಬೆಂಗಳೂರು : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಹಿಂದೆ ಐಸಿಸ್ ಚಿತಾವಣೆ ಇದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಚಿತ್ರಹಿಂಸೆ ಮಾಡಿ ಕರೆಂಟ್ ಶಾಕ್ ಕೊಟ್ಟು ಸ್ವಾಮೀಜಿ ಅವರನ್ನು ಕೊಂದಿದ್ದಾರೆ. ಇದರ ಹಿಂದೆ ಉಗ್ರಗಾಮಿಗಳ ಕೈವಾಡ ಇದೆ. ಇನ್ನು, ಭಯಾನಕ ಘಟನೆ ಭವಿಷ್ಯದಲ್ಲಿ ಕಾಣುವ ಆತಂಕ ಇದೆ. ಘಟನೆ ಹಿಂದೆ …

Read More »