Breaking News

ಮಾಗಡಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಶನಿವಾರ ಜೆಡಿಎಸ್​ ಅಭ್ಯರ್ಥಿ ಮಂಜುನಾಥ್ ಪರ ಪ್ರಚಾರ ನಡೆಸಿದರು.

ರಾಮನಗರ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾದ ಹಿನ್ನೆಲೆಯಲ್ಲಿ ಪ್ರಚಾರ ಅಖಾಡಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ‌ ಪ್ರಧಾನಿ ಹೆಚ್.ಡಿ.ದೇವೇಗೌಡರು ಇಳಿದಿದ್ದಾರೆ. ಅಂತೆಯೇ ರೇಷ್ಮೆನಗರಿ ರಾಮನಗರ ಜಿಲ್ಲೆಗೆ ಶನಿವಾರ ದೊಡ್ಡಗೌಡ್ರು ಭೇಟಿ ನೀಡಿ, ಕೆಂಪೇಗೌಡ ಕೋಟೆ ಮಾಗಡಿಯಲ್ಲಿ ಜೆಡಿಎಸ್ ಸಮಾವೇಶದಲ್ಲಿ ಅಭ್ಯರ್ಥಿ ಎ.ಮಂಜುನಾಥ್ ಪರ ಪ್ರಚಾರ ನಡೆಸಿದರು. ಹೆಲಿಕಾಪ್ಟರ್ ಮೂಲಕ ಮಾಗಡಿಗೆ ಬಂದಿಳಿದ ಜೆಡಿಎಸ್ ವರಿಷ್ಠ ಹೆಚ್‌.ಡಿ.ದೇವೇಗೌಡ್ರು, ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿದ ಮಾತನಾಡಿದ …

Read More »

ಮನೆಯ ಅಂಗಳದ ಮುಂದೆ ಆಟವಾಡುತ್ತಿದ್ದ ಮಗು ಚರಂಡಿಯಲ್ಲಿ ಮುಳುಗಿ ದಾರುಣ ಸಾವು

ನೆಲಮಂಗಲ(ಬೆ.ಗ್ರಾಮಾಂತರ) : ನಗರದಲ್ಲಿ ಬೆಳಗ್ಗೆ ದುರಂತವೊಂದು ಸಂಭವಿಸಿದೆ. ಮನೆಯ ಮುಂದೆ ಆಟವಾಡುತ್ತಿದ್ದ 11 ತಿಂಗಳ ಮಗು ಮನೆಯ ಮುಂಭಾಗದಲ್ಲಿದ್ದ ಚರಂಡಿಯಲ್ಲಿ ಮುಳುಗಿ ಸಾವನ್ನಪ್ಪಿರುವ ರ್ದುಘಟನೆ ತಾಲೂಕಿನ ಸೋಂಪುರ ಹೋಬಳಿಯ ನಿಡವಂದ ಕಾಲೋನಿಯಲ್ಲಿ ನಡೆದಿದೆ.   ಘಟನೆ ವಿವರ: ಬೆಳಗ್ಗೆ ಸುಮಾರು 9 ಗಂಟೆ ಸಮಯದಲ್ಲಿ ಮನೆಯ ಅಂಗಳದಲ್ಲಿ ಮಗು ಆಟವಾಡಿ, ಮನೆಯ ಮುಂದೆ ನಿಂತಿದ್ದ ಕ್ಯಾಂಟರ್ ಕೆಳಗೆ ನುಸುಳಿ ಹೋಗಿದೆ. ಆದರೆ ಅಲ್ಲೇ ಸುಮಾರು 4 ಅಡಿಯ ಚರಂಡಿಯು ತೆರೆದಿತ್ತು, ಇದೇ ಚರಂಡಿಗೆ …

Read More »

ಮನ್ ಕಿ ಬಾತ್ ಗೆ ಶತಕದ ಸಂಭ್ರಮ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಭಾಷಣಕ್ಕೆ ಶತಕದ ಸಂಭ್ರಮ. ಕೋಟ್ಯಂತರ ಜನರ ಮನಗೆದ್ದಿರುವ ಪ್ರಧಾನಿ ಮೋದಿಯವರ ಮನದ ಮಾತು 100ನೇ ಕಂತಿನ ವಿಶೇಷ ರೆಡಿಯೋ ಕಾರ್ಯಕ್ರಮ ಪ್ರಸಾರವಾಗಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಚುನಾವಣ ಪ್ರಚಾರದ ನಿಟ್ಟಿನಲ್ಲಿ ಕರ್ನಾಟಕದ ಪ್ರವಾಸದಲ್ಲಿರುವುದು ವಿಶೇಷ. 2014ರ ಅಕ್ಟೋಬರ್ 4ರಂದು ಪ್ರಧಾನಿ ಮೋದಿಯವರ ಮನ್ ಕೀ ಬಾತ್ ರೆಡಿಯೋ ಕಾರ್ಯಕ್ರಮ ಆರಂಭವಾಯಿತು. ಮನ್ ಕೀ ಬಾತ್ ನನಗೆ ಒಂದು ಕಾರ್ಯಕ್ರಮವಲ್ಲ, ಅದು …

Read More »

ಬೆಳಗಾವಿ ಹಿರೇಬಾಗೇವಾಡಿ‌ಯಲ್ಲಿ ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ್ದಾರೆ.

ಬೆಳಗಾವಿ: ಹಿರೇಬಾಗೇವಾಡಿ‌ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಲವಾರು ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಬಿಜೆಪಿಗೆ ಗುಡ್ ಬೈ ಹೇಳಿ ಬೆಳಗಾವಿಯ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಸೇರಿದ್ದಾರೆ.ಮುಖಂಡರುಗಳಾದ ದಯಾನಂದ ಹಂಚಿನಮನಿ, ಬಸವರಾಜ ಹಂಚಿನಮನಿ, ಬಾಬು ಮುಸೆನ್ನವರ, ಅಜ್ಜಪ್ಪ ಮುಗಪ್ಪಗೋಳ, ನಾಗಪ್ಪ ಕಲಭಾಂವಿ, ನಿಜಲಿಂಗ ಅಂಗಡಿ, ಮಲ್ಲಪ್ಪ ಕಬ್ಬೂರ, ದೊಡ್ಡಯ್ಯ ಹಿರೇಮಠ, ಚಂದ್ರು ತಳವಾರ, ಮಾಂತಯ್ಯ ಹಿರೇಮಠ, ಉದಯ ಹುಲಮನಿ, ಬಾಳೇಶ ಕಕ್ಕಾಳಿ ಮತ್ತು ಅಪಾರ ಸಂಖ್ಯೆಯಲ್ಲಿ …

Read More »

ಕಾಂಗ್ರೆಸ್ 50 ಜನರ ಮನೆಗಳ ಮೇಲೆ ಐಟಿ ಅಧಿಕಾರಿಗಳು ರೇಡ್ ಮಾಡುವ ಸಾಧ್ಯತೆ ಇದೆ.ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಕಾಂಗ್ರೆಸ್ ಮುಖಂಡರ ಮೇಲೆ ಸುಳ್ಳು ಕೇಸು ಹಾಕುವ ಯತ್ನ ನಡೆದಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನನ್ನ ಕ್ಷೇತ್ರದಲ್ಲಿ ಮೂವರು ಮುಖಂಡರನ್ನು ಟಾರ್ಗೆಟ್ ಮಾಡಲಾಗಿದೆ.ಮುಖಂಡರ ಮನೆಗಳ ಮೇಲೆ ಲೋಕಾಯುಕ್ತ ಮತ್ತು ಐಟಿ ಅಧಿಕಾರಿಗಳು ದಾಳಿ ನಡೆಸುವ ಮಾಹಿತಿ ಇದೆ. ನಮ್ಮ ಪಕ್ಷದ ಮುಖಂಡರ ಶಕ್ತಿ ತಡೆಯುವ ಪ್ರಯತ್ನ ನಡೆದಿದೆ ಎಂದು ದೂರಿದ್ದಾರೆ. ಸುಮಾರು 50 …

Read More »

ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಹ ಮೈಸೂರು, ರಾಮನಗರ, ಚಿನ್ನದ‌ ನಾಡು ಕೋಲಾರಕ್ಕೆ ಭೇಟಿ ನೀಡಿ ಚುನಾವಣೆಯ ರಣಕಹಳೆಯನ್ನು ಮೊಳಗಲಿಸಲು ಮುಂದಾಗಿದ್ದಾರೆ.

ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕೋಲಾರ, ಚನ್ನಪಟ್ಟಣ ಬೃಹತ್​​ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಮೈಸೂರಿಗೆ ತೆರಳಿ ಮೆಗಾ ರೋಡ್​​ ಶೋ ನಡೆಸಲಿದ್ದಾರೆ. ಕೋಲಾರ/ಮೈಸೂರು: ರಾಜ್ಯದಲ್ಲಿ ಚುನಾವಣೆಯ ಕಾವು‌ ದಿನೇ ದಿನೇ ಹೆಚ್ಚಾಗುತ್ತಿದ್ದು, ಅಭ್ಯರ್ಥಿಗಳ ಪರ ಮತಯಾಚನೆ‌ ಮಾಡಲು ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಲಗ್ಗೆಯಿಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಹ ಮೈಸೂರು, ರಾಮನಗರ, ಚಿನ್ನದ‌ ನಾಡು ಕೋಲಾರಕ್ಕೆ ಭೇಟಿ ನೀಡಿ ಚುನಾವಣೆಯ ರಣಕಹಳೆಯನ್ನು ಮೊಳಗಲಿಸಲು ಮುಂದಾಗಿದ್ದಾರೆ. …

Read More »

ಅತೀ ಹೆಚ್ಚು ನೇಕಾರರನ್ನು ಹೊಂದಿರುವ, ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಗೆಲುವಿನ ಹಾರ ಯಾರ ಕೊರಳಿಗೆ

ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಚುನಾವಣಾ ಅಖಾಡ ಸಿದ್ಧಗೊಂಡಿದೆ. ಸದ್ಯ ಬಿಜೆಪಿ ಹಿಡಿತದಲ್ಲಿರುವ ಈ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್​, ಜೆಡಿಎಸ್ ಮತ್ತು ಎಂಇಎಸ್​​ ಸಹ ಪೈಪೋಟಿ ನಡೆಸಿದ್ದು, ಗೆಲುವಿನ ಹಾರ ಯಾರ ಕೊರಳಿಗೆ ಎಂಬುದು ಕುತೂಹಲ ಮೂಡಿಸಿದೆ. ಬೆಳಗಾವಿ: ಕೈಗಾರಿಕೋದ್ಯಮದ ಶಕ್ತಿ ಕೇಂದ್ರ, ಅತೀ ಹೆಚ್ಚು ನೇಕಾರರನ್ನು ಹೊಂದಿರುವ, ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ಕಪಿಲೇಶ್ವರ ಮಂದಿರ ಇರುವ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಚುನಾವಣಾ ಅಖಾಡ ಸಿದ್ಧಗೊಂಡಿದ್ದು, ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ …

Read More »

ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸೋಲುತ್ತೆ ಪರೋಕ್ಷವಾಗಿ ಒಪ್ಪಿಕೊಂಡ್ರಾ ಜಗ್ಗೇಶ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಮಯ ಹತ್ತಿರವಾದಂತೆ ರಾಜ್ಯ ಚುನಾವಣಾ ಕಣ ರಂಗೇರಿದೆ. ಸಿದ್ದರಾಮಯ್ಯರನ್ನು ವರುಣಾದಲ್ಲಿ ಸೋಲಿಸಲು ಬಿಜೆಪಿ ಎಲ್ಲಾ ಅಸ್ತ್ರಗಳನ್ನು ಪ್ರಯೋಗಿಸಲು ಮುಂದಾಗಿದೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಪರವಾಗಿ ನಟ, ಬಿಜೆಪಿ ನಾಯಕ ಜಗ್ಗೇಶ್ ಮತಯಾಚನೆ ಮಾಡಲಿದ್ದಾರೆ.ವರುಣಾದಲ್ಲಿ ಬಿಜೆಪಿ ಪರವಾಗಿ ಮತಯಾಚನೆಗೆ ತೆರಳುವ ಸಂದರ್ಭದಲ್ಲಿ ಮಾತನಾಡಿದ ಜಗ್ಗೇಶ್ ವಿ ಸೋಮಣ್ಣ ಕಾರ್ಯವೈಖರಿಯನ್ನು ಹಾಡಿ ಹೊಗಳಿದರು. ಸೋಮಣ್ಣ ತಮ್ಮ ಕ್ಷೇತ್ರದಲ್ಲಿ ಅತ್ಯುತ್ತಮವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ, …

Read More »

ಕಾಂಗ್ರೆಸ್​ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರವಾಗಿ ಪ್ರಿಯಾಂಕಾ ಗಾಂಧಿ ರೋಡ್​ ಶೋ

ಕಾಂಗ್ರೆಸ್​ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರವಾಗಿ ಪ್ರಿಯಾಂಕಾ ಗಾಂಧಿ ರೋಡ್​ ಶೋ ನಡೆಸಿ ಮತಯಾಚನೆ ಮಾಡಿದರು. ಹುಬ್ಬಳ್ಳಿ: ಕಾಂಗ್ರೆಸ್​ ಯುವ ನಾಯಕಿ ಪ್ರಿಯಾಂಕಾ ಗಾಂಧಿ ಕುಂದಗೋಳದಲ್ಲಿ ರೋಡ್​ ಶೋ ನಡೆಸಿ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರವಾಗಿ ಪ್ರಚಾರ ನಡೆಸಿದರು. ಹೆಲಿಕಾಪ್ಟರ್ ಮೂಲಕ ಕುಂದಗೋಳಕ್ಕೆ ಆಗಮಿಸಿದ ಪ್ರಿಯಾಂಕಾ ಗಾಂಧಿ ನೇರವಾಗಿ ಹೆಲಿಪ್ಯಾಡ್ ಸುತ್ತುವರಿದಿದ್ದ ಜನರತ್ತ ಹೋಗಿ ಕೈ ಕುಲುಕಿದರು. ನಂತರ ಪ್ರಚಾರದ ವಾಹನ ಏರಿದ ಅವರು ಹುಬ್ಬಳ್ಳಿ – ಲಕ್ಷ್ಮೇಶ್ವರ ರಾಜ್ಯ …

Read More »

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಂದು ಕಲಘಟಗಿ ಮತ್ತು ಅಳ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ರೋಡ್​ ಶೋ

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಂದು ಕಲಘಟಗಿ ಮತ್ತು ಅಳ್ನಾವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಗರಾಜ ಛಬ್ಬಿ ಪರ ಭರ್ಜರಿ ರೋಡ್​ ಶೋ ನಡೆಸಿ ಮತಯಾಚಿಸಿದರು. ಹುಬ್ಬಳ್ಳಿ: ರಾಜ್ಯ ಹಾಗೂ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರಗಳಿಂದ ಮಾತ್ರ ಕರ್ನಾಟಕದ ಅಭಿವೃದ್ಧಿ ಸಾಧ್ಯ. ಹೀಗಾಗಿ ಮತ್ತೊಮ್ಮೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಡಬಲ್ ಎಂಜಿನ್ ಸರ್ಕಾರವನ್ನು ಡಬಲ್ ವೇಗದಿಂದ ಅಧಿಕಾರಕ್ಕೆ ತರಲು ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ …

Read More »