Breaking News

ಹಾನಗಲ್‌ ಅತ್ಯಾಚಾರ ಕೇಸ್‌ ಮುಚ್ಚಿ ಹಾಕಲು ಲೈಸೆನ್ಸ್‌ ಕೊಟ್ಟ ಸಿದ್ದರಾಮಯ್ಯ; ಬೊಮ್ಮಾಯಿ ಕಿಡಿ

ಬೆಂಗಳೂರು: ಹಾನಗಲ್‌ನ (Hanagal Case) ಮಹಿಳೆಯ ಮೇಲೆ ನಡೆಸಲಾಗಿರುವ ಸಾಮೂಹಿಕ ಅತ್ಯಾಚಾರ (Gang Rape) ಪ್ರಕರಣವನ್ನು ಎಸ್‌ಐಟಿಗೆ ವಹಿಸಲು ಸಿಎಂ ಸಿದ್ದರಾಮಯ್ಯ (CM Siddaramaiah) ನಿರಾಕರಣೆ ಮಾಡುವ ಮೂಲಕ ಈ ಕೇಸ್‌ ಅನ್ನು ಮುಚ್ಚಿಹಾಕುವ ಸ್ಥಳೀಯ ಪೊಲೀಸರ ಪ್ರಯತ್ನಕ್ಕೆ ಲೈಸೆನ್ಸ್ ಕೊಟ್ಟಂತಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದ್ದಾರೆ.   ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಆಕ್ರೋಶವನ್ನು ಹೊರಹಾಕಿರುವ ಬಸವರಾಜ ಬೊಮ್ಮಾಯಿ, ಸಂತ್ರಸ್ತ ಮಹಿಳೆಗೆ ನ್ಯಾಯಕೊಡಿಸುವ …

Read More »

ಮಹಾರಾಷ್ಟ್ರ: ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ ಎನ್​​ಡಿಎ; ಸೀಟು ಹಂಚಿಕೆ ಕುರಿತು ಚರ್ಚೆ

ಮುಂಬೈ ಜನವರಿ 16: ಲೋಕಸಭಾ ಚುನಾವಣೆಗೆ (Lok sabaha Election) ದೇಶ ಸಜ್ಜಾಗಿದೆ. ಕಾಂಗ್ರೆಸ್ ನಾಯಕರಾಹುಲ್ ಗಾಂಧಿ(Rahul Gandhi) ಭಾರತ್ ಜೋಡೋ ನ್ಯಾಯ್ ಯಾತ್ರೆ ಕೈಗೊಂಡಿದ್ದಾರೆ. ಇಂಡಿಯಾ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಕುರಿತು ಚರ್ಚೆ ಆರಂಭವಾಗಿದೆ. ಇದೇ ವೇಳೆ ಬಿಜೆಪಿ (BJP) ನೇತೃತ್ವದ ಎನ್‌ಡಿಎಯಿಂದ ಲೋಕಸಭೆ ಸ್ಥಾನಗಳ ಹಂಚಿಕೆ ಕುರಿತು ಮಾತುಕತೆ ನಡೆಯುತ್ತಿದೆ. ಎನ್‌ಡಿಎಯಲ್ಲಿರುವ ಬಿಜೆಪಿ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ …

Read More »

ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ‘ ಮೋದಿ ರಾಜಕೀಯ’ ಒಗ್ಗಟ್ಟಾಗಿ ಬಿಜೆಪಿಯನ್ನು ಮಣಿಸುತ್ತೇವೆ ಎಂದು – ರಾಹುಲ್ ಗಾಂಧಿ

ನಾಗಾಲ್ಯಾಂಡ್‌ : ರಾಮಲಲ್ಲಾ(Ramlalla) ಪ್ರಾಣ ಪ್ರತಿಷ್ಟಾಪನಾ ಕಾರ್ಯಕ್ರಮ ಮೋದಿ(Modi centered event) ಕೇಂದ್ರೀಕೃತ ‘ರಾಜಕೀಯ ಕಾರ್ಯಕ್ರಮ’ವಾಗಿ ಹೀಗಾಗಿ ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್‌ ಪಕ್ಷಕ್ಕೆ ಕಷ್ಟವಾಗುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.   ಭಾರತದ ಜೋಡೊ ನ್ಯಾಯ ಯಾತ್ರೆ ನಾಗಾಲ್ಯಾಂಡ್‌ ತಲುಪಿದ್ದು, ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಸಂಸದ ರಾಹುಲ್ ಗಾಂಧಿ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಚುನಾವಣೆಯ ಬಣ್ಣ ನೀಡಿದ್ದಾರೆ . …

Read More »

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಕಾಗೇರಿಗೆ ಫಿಕ್ಸ್ ಆಗಿದ್ಯಾ?

ಕಾರವಾರ, (ಜನವರಿ 15): ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri ) ಅವರು ಈ ಬಾರಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ (uttara kannada lok sabha) ಬಿಜೆಪಿ ಟಿಕೆಟ್ ತಮಗೆ ಸಿಗಲಿದೆ ಎನ್ನುವ ವಿಶ್ವಾಸದಲ್ಲಿದ್ದಾರೆ. ಈ ಬಗ್ಗೆ ​ಇಂದು (ಜನವರಿ 15) ಶಿರಸಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ, ಉತ್ತರ ಕನ್ನಡ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ನಮ್ಮ ಪಕ್ಷದ ನಾಯಕರು ಈಗಾಗಲೇ ತಿರ್ಮಾನಿಸಿದಾರೆ. ಆದಷ್ಟು ಬೇಗ …

Read More »

ಆನ್​ಲೈನ್ ಡೇಟಿಂಗ್ ಆಯಪ್​ ಮೂಲಕ ಯುವಕನಿಗೆ ಕಿರುಕುಳ: ಕ್ರಮಕೈಗೊಳ್ಳುವಂತೆ ಬಾಲಿವುಡ್ ನಿರ್ದೇಶಕಿ ಬೆಂಗಳೂರು ಪೊಲೀಸರಿಗೆ ಮನವಿ ​

ಬೆಂಗಳೂರು, ಜನವರಿ : ಆನ್​ಲೈನ್ ಡೇಟಿಂಗ್ಆಯಪ್‌​ಮೂಲಕ ಯುವಕನಿಗೆ ( Boy ) ಲೈಂಗಿಕ ಕಿರುಕುಳ ನಿಡುತ್ತಿರುವ ಮಹಿಳೆ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಬಾಲಿವುಡ್ ನಿರ್ದೇಶಕಿ ( Bollywood director ) ದೀಪಿಕಾ ನಾರಾಯಣ ಭಾರದ್ವಾಜ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ. ಪ್ರಕರಣ ಸಂಬಂಧ ದೀಪಿಕಾ ನಾರಾಯಣ ಭಾರದ್ವಾಜ್​ ಅವರು ಸರಣಿ ಟ್ವೀಟ್​ ಮಾಡಿ ಘಟನೆಯ ವಿವರವನ್ನು ಬಿಚ್ಚಿಟ್ಟಿದ್ದಾರೆ. ಓರ್ವ ಯುವಕ ಡೇಟಿಂಗ್ ಆಯಪ್‌ನಲ್ಲಿ ಮಹಿಳೆಯನ್ನು ಭೇಟಿಯಾಗಿದ್ದಾನೆ. ನಂತರ ಮಹಿಳೆ ಯುವಕನೊಂದಿಗೆ ಆತ್ಮೀಯವಾಗಿರಲು ಮುಂದಾಗಿದ್ದಾಳೆ. …

Read More »

ಮದುವೆಯಾಗಲು ಯುವತಿ ಸಿಗದಿದ್ದಕ್ಕೆ ಯುವಕ ವಿಷ ಸೇವಿಸಿ ಆತ್ಮಹತ್ಯೆ

ವಿಜಯನಗರ, ಜನವರಿ 16: ಮದುವೆಯಾಗಲು ಯುವತಿ (Girl) ಸಿಗದಿದ್ದಕ್ಕೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೂಡ್ಲಿಗಿ (Kudligi) ತಾಲೂಕಿನ‌ ಗುಡೇಕೋಟೆ ಗ್ರಾಮದಲ್ಲಿ ನಡೆದಿದೆ. ಗುಡೇಕೋಟೆ ಗ್ರಾಮದ ಬಿ.‌ಮಧುಸೂದನ್ (26) ಮೃತ ದುರ್ದೈವಿ. ಯುವಕನ ತಂದೆ ಅರೆ ಹುಚ್ಚನ ಹಾಗೆ ವರ್ತನೆ ಮಾಡುತ್ತಾನೆಂದು ಕನ್ಯೆ ಕೊಡಲು ನಿರಾಕರಿಸುತ್ತಿದ್ದರಂತೆ. ಇದರಿಂದ ಮನನೊಂದಿದ್ದ ಯುವಕ ಕುಡಿಯಲು ಆರಂಭಿಸಿದ್ದಾನೆ. ನನಗೆ ಮದುವೆ ಅಗಲ್ಲ ಎಂದು ಮಧುಸೂದನ್ ಜನವರಿ 5ರಂದು ವಿಷಸೇವಿಸಿದ್ದಾನೆ. ಕೂಡಲೆ ಮಧುಸೂಧನ್​​ನನ್ನು ಬಳ್ಳಾರಿಯ …

Read More »

ತುತ್ತು ನೀಡುತ್ತಿದ್ದ ದೊಡ್ಡಮ್ಮನನ್ನೇ ಕೊಂದ ಮಗ

ಸಂಜಯ ಸಂಜೆಯಾದ್ರೇ ಕುಡಿದು ಬಂದು ಗಲಾಟೆ ಮಾಡ್ತಿದ್ದ, ಇದರಿಂದ ಆಕ್ರೋಶಗೊಂಡು ಈ ರೀತಿ ಕುಡಿಯುವುದು ಸರಿಯಲ್ಲ, ನೀನು ಮದುವೆ ಮಾಡಿಕೊಂಡು ನಿನ್ನ ಜೀವನ ನಡೆಸು ಅಂತಾ ದೊಡ್ಡಮ್ಮ ಮಂಗಲಾ ಬುದ್ದಿವಾದ ಹೇಳಿದ್ದರು. ಇದಾದ ಬಳಿಕ ಜನವರಿ 8ರಂದು ರಾತ್ರಿ…ಆತನಿಗೆ ಇನ್ನೂ ಮದುವೆ ಆಗಿರಲಿಲ್ಲ. ಡ್ರೈವರ್ ಕೆಲಸ ಮಾಡಿಕೊಂಡಿದ್ದವನ ತಾಯಿ ತೀರಿ ಹೋಗಿ ದೊಡ್ಡಮ್ಮನ ಮನೆಯಲ್ಲೇ ಜೀವನ ನಡೆಸುತ್ತಿದ್ದ. ಕುಡಿತದ ಚಟಕ್ಕೆ ದಾಸನಾಗಿದ್ದ ಆತನಿಗೆ ಆಗಾಗ ದೊಡ್ಡಮ್ಮ ಬೈದು ಬುದ್ದಿವಾದ ಹೇಳುತ್ತಿದ್ದಳು. …

Read More »

ನವಿಲುಗಳನ್ನು ಕೊಂದು ಮಾರಾಟ ಮಾಡ್ತಿದ್ದ ಆರೋಪಿ ಅರೆಸ್ಟ್

ನವಿಲುಗಳನ್ನು ಕೊಂದು ಮಾರಾಟ ಮಾಡ್ತಿದ್ದ ಆರೋಪಿ ಅರೆಸ್ಟ್   ಸದ್ದಿಲ್ಲದೇ ರಾಷ್ಟ್ರ ಪಕ್ಷಿ ನವಿಲುಗಳನ್ನ (Peacock) ಬೇಟೆಯಾಡುವ ಗ್ಯಾಂಗ್ ಹುಟ್ಟುಕೊಂಡಿದೆ. ನವಿಲಿನ ಮಾಂಸಕ್ಕಾಗಿ ರಾಷ್ಟ್ರ ಪಕ್ಷಿಗೆ ವಿಷ ಉಣಿಸುವ ಕೆಲಸಕ್ಕೆ ಪಾಪಿಗಳು ಮುಂದಾಗಿದ್ದ ಗ್ಯಾಂಗ್​​ನ್ನು ಬಂಧಿಸುವಲ್ಲಿ ಪೊಲೀಸರು (Police) ಯಶಸ್ವಿಯಾಗಿದ್ದಾರೆ. ರೈತರ ಜಮೀನಿಗೆ ಕಾಳು ತಿನ್ನಲು ಬರುತ್ತಿದ್ದ ನವಿಲುಗಳು ಮೃತಪಟ್ಟಿದ್ದನ್ನು ಕಂಡು ಗ್ರಾಮಸ್ಥರು, ಅರಣ್ಯ ಇಲಾಖೆ ಬೆಚ್ಚಿ ಬಿದ್ದಿತ್ತು. ಅಷ್ಟಕ್ಕೂ ಯಾವುದದೂ ಗ್ಯಾಂಗ್, ಅದ್ಯಾವ ರೀತಿ ನವಿಲುಗಳ ಬೇಟೆ ಆಡುತ್ತಿದ್ದರು …

Read More »

ಲೋಕಸಭೆ ಚುನಾವಣೆ: ಮತ್ತೆ ಬೆಳಗಾವಿಯಿಂದಲೇ ಶುರುವಾದ ಗಿಫ್ಟ್​​ ಪಾಲಿಟಿಕ್ಸ್

ಬೆಳಗಾವಿ, ಜನವರಿ : ಕಳೆದ ವರ್ಷ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಗಿಪ್ಟ್ ಪಾಲಿಟಿಕ್ಸ್(Gift Politics) ಜೋರಾಗಿಯೇ ಸದ್ದು ಮಾಡಿತ್ತು. 2023 ವರ್ಷದ ಆರಂಭದಲ್ಲೇ ಬೆಳಗಾವಿ (Belagavi) ಜಿಲ್ಲೆಯಲ್ಲಿ ಜನಪ್ರತಿನಿಧಿಗಳು ಮತದಾರರಿಗೆ ಗಿಫ್ಟ್​​ಗಳನ್ನು ನೀಡಿ ಮತಗಳನ್ನು ಗಟ್ಟಿ ಮಾಡಿಕೊಳ್ಳಲು ಆರಂಭಿಸಿದ್ದರು. ಇದೀಗ ಲೋಕಸಭೆ ಚುನಾವಣೆ ಹತ್ತಿರದಲ್ಲಿದ್ದು, ಈ ಬಾರಿಯೂ ಗಿಪ್ಟ್ ಪಾಲಿಟಿಕ್ಸ್ ಬೆಳಗಾವಿಯಿಂದಲೇ ಆರಂಭವಾಗಿದೆ. ಹೌದು ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಾಜಿ‌ ಶಾಸಕ ಸಂಜಯ …

Read More »

ಅನಂತಕುಮಾರ ಹೆಗಡೆ ಎಲ್ಲಿ ಸಿಗ್ತಾನೋ ಅಲ್ಲೇ ಹಿಡಿದು ಹೊಡೆಯುತ್ತೇವೆ: ಮಾಜಿ ಶಾಸಕ ಎಸ್.ರಾಮಪ್ಪ

ದಾವಣಗೆರೆ,: ಸಿಎಂ ಸಿದ್ದರಾಮಯ್ಯ ಬಗ್ಗೆ ಇನ್ನೊಮ್ಮೆ ಈ ರೀತಿ ಏಕವಚನದಲ್ಲಿ ಮಾತಾಡಿದರೆ ಸಂಸದ ಅನಂತಕುಮಾರ ಹೆಗಡೆ ಎಲ್ಲಿ ಸಿಗುತ್ತಾರೆ ಅಲ್ಲಿ ಹಿಡಿದು ಹೊಡೆಯಲಾಗುವುದು ಎಂದು ಕಾಂಗ್ರೆಸ್‌ ಮಾಜಿ ಶಾಸಕ ಎಸ್.ರಾಮಪ್ಪವಾರ್ನಿಂಗ್‌ ‌ಮಾಡಿದ್ದಾರೆ. ಜಿಲ್ಲೆಯ ಹರಿಹರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ಆರೋಗ್ಯ ಸರಿಯಿಲ್ಲ ಅಂತಾ ಹೆಗಡೆ ಮನೆಯಲ್ಲಿ‌ ಮಲಗಿದ್ದರು. ಚುನಾವಣೆ ಹಿನ್ನೆಲೆ ಕೋಮು‌ಭಾವನೆ ಕೆರಳಿಸುವ ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಬಿಜೆಪಿಯ ಹಲವರು ಜೈಲಿಗೆ ಹೋಗಿದ್ದಾರೆ, ಅವರ ಬಗ್ಗೆ …

Read More »