Breaking News

ಸಿಂಗಾಪುರದಲ್ಲಿ ಮಾದಕವಸ್ತು ಕಳ್ಳಸಾಗಣೆ: ಭಾರತ ಮೂಲದ ತಂಗರಾಜುಗೆ ಇಂದು ಗಲ್ಲು

ಸಿಂಗಾಪುರ: ಸಿಂಗಾಪುರದಲ್ಲಿ ಮಾದಕವಸ್ತು ಕಳ್ಳಸಾಗಣೆ ಉತ್ತೇಜಿಸಿದ್ದಲ್ಲದೇ, 1 ಕೆಜಿ ಗಾಂಜಾವನ್ನು ಅಕ್ರಮವಾಗಿ ಸಾಗಿಸಿರುವ ಅಪರಾಧದ ಮೇರೆಗೆ ಭಾರತ ಮೂಲದ ವ್ಯಕ್ತಿ ತಂಗರಾಜು ಸುಪ್ಪಯ್ಯನನ್ನು ಬುಧವಾರ ಗಲ್ಲಿಗೇರಿಸಲು ಸರ್ಕಾರ ನಿರ್ಧರಿಸಿದೆ.   ನಾರ್ವೆ, ಸ್ವಿಜರ್ಲೆಂಡ್‌ ಸೇರಿದಂತೆ ಕೆಲ ರಾಷ್ಟ್ರಗಳು ಹಾಗೂ ಸ್ಥಳೀಯ ಮರಣದಂಡನೆ ವಿರೋಧಿ ಸಂಘಟನೆಗಳು ತಂಗರಾಜು ಗಲ್ಲು ಶಿಕ್ಷೆಯನ್ನು ಆಕ್ಷೇಪಿಸಿದ ಹೊರತಾಗಿಯೂ, ಸಿಂಗಾಪುರ ಸರ್ಕಾರ ಬುಧವಾರ ಗಲ್ಲಿಗೇರಿಸಲು ನಿರ್ಧರಿಸಿದೆ. ಅಲ್ಲದೇ, ದೇಶದ ಕಾನೂನು ವ್ಯವಸ್ಥೆ ಹಾಗೂ ನ್ಯಾಯಾಧೀಶರ ತೀರ್ಮಾನ ಗೌರವಿಸುವುದು ಅಗತ್ಯವಾಗಿದೆ …

Read More »

BJPಗೆ 140ಕ್ಕೂ ಹೆಚ್ಚು ಸ್ಥಾನ ಖಚಿತ: ಬಿಎಸ್‌ವೈ

ಜಗಳೂರು: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನ ಗಳಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಪಟ್ಟಣದ ಡಾ| ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಬಿಜೆಪಿ ಅಭ್ಯರ್ಥಿ ಎಸ್‌.ವಿ. ರಾಮಚಂದ್ರ ಪರ ರೋಡ್‌ ಶೋ ನಡೆಸಿ ಮಾತನಾಡಿದ ಅವರು, ಪ್ರಧಾನಿ ಮೋದಿ, ಅಮಿತ್‌ ಶಾ ಸೇರಿ ಸಾಮೂಹಿಕ ನಾಯಕತ್ವದ ಮುಂದೆ ಕಾಂಗ್ರೆಸ್‌ನ ರಾಹುಲ್‌ ಗಾಂಧಿ ಯ ಚುನಾವಣ ರಣತಂತ್ರ ಏನೂ ನಡೆಯದು. ದೇಶದಲ್ಲಿ ಹಾಗೂ ರಾಜ್ಯದಲ್ಲಿ …

Read More »

ಭ್ರಷ್ಟ BJP ಸರಕಾರ ಕಿತ್ತೂಗೆಯಿರಿ: ಪ್ರಿಯಾಂಕಾ

ಹೆಳವರಹುಂಡಿ/ಹನೂರು: ಮೈಸೂರು ಜಿಲ್ಲೆಯ ವರುಣಾ ಹಾಗೂ ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದ ವ್ಯಾಪ್ತಿಯಲ್ಲಿ ಮಂಗಳವಾರ ಚುನಾವಣ ಪ್ರಚಾರ ನಡೆಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರು, ಬಿಜೆಪಿ ಸರಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದರಲ್ಲದೆ, ರಾಜ್ಯ ಬಿಜೆಪಿ ಸರಕಾರದ ರಚನೆಯೇ ದುರಾಸೆ, ಆಮಿಷದಿಂದ ಕೂಡಿತ್ತು. ಇಂತಹ ಸರಕಾರವನ್ನು ಈ ಚುನಾವಣೆಯಲ್ಲಿ ಕಿತ್ತೂಗೆಯಬೇಕು ಎಂದು ಕರೆ ನೀಡಿದರು. ತಿ.ನರಸೀಪುರದ ಹೆಳವರಹುಂಡಿ ಗ್ರಾಮದಲ್ಲಿ ಮಾತನಾಡಿದ ಪ್ರಿಯಾಂಕಾ, ರಾಜ್ಯ ಬಿಜೆಪಿ ಸರಕಾರ 1.5 ಲಕ್ಷ …

Read More »

ಸರಕಾರಕ್ಕೆ ಕೇಳಿಸದಾಯಿತೇ ಸಂತ್ರಸ್ತ ಕುಸ್ತಿಪಟುಗಳ ಆರ್ತನಾದ?

ಕ್ರೀಡಾ ಕ್ಷೇತ್ರ ರಾಜಕೀಯದಿಂದ ಹೊರತಾಗಿರಬೇಕು ಎಂಬ ಮಾತು ಸಾರ್ವತ್ರಿಕವಾಗಿದ್ದರೂ ದೇಶದಲ್ಲಿ ಅದು ಅಕ್ಷರಶಃ ಕಾರ್ಯರೂಪಕ್ಕೆ ಬಂದಿಲ್ಲ. ಪ್ರತಿಯೊಂದೂ ಕ್ರೀಡೆಯಲ್ಲೂ ರಾಜಕೀಯದ್ದೇ ಕೈ ಮೇಲಾಗುತ್ತಿದ್ದು ಇದರ ನೇರ ಪರಿಣಾಮ ದೇಶದ ಕ್ರೀಡಾಪಟುಗಳು ಮತ್ತು ಕ್ರೀಡಾ ಕ್ಷೇತ್ರದ ಮೇಲಾಗುತ್ತಿದೆ. ದಶಕಗಳಿಂದಲೂ ದೇಶದ ಕ್ರೀಡಾರಂಗ ಇಂಥದ್ದೇ ಬೆಳವಣಿಗೆಗೆ ಸಾಕ್ಷಿಯಾಗುತ್ತಾ ಬಂದಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ದೇಶದ ಕ್ರೀಡಾರಂಗ ಸಂಪೂರ್ಣವಾಗಿ ಅಲ್ಲದಿದ್ದರೂ ಒಂದಿಷ್ಟು ರಾಜಕೀಯರಹಿತವಾಗಿ ಮುನ್ನಡೆಯುತ್ತ ಬಂದಿದ್ದರ ಪರಿಣಾಮ ದೇಶದ ಕ್ರೀಡಾಳುಗಳು ಹಲವಾರು ಕ್ರೀಡೆಗಳಲ್ಲಿ ತಮ್ಮ …

Read More »

ಎನ್ ಸಿಪಿ ನಾಯಕರ ವಿರುದ್ಧ ಹರಿಹಾಯ್ದಸಚಿವೆ ಸ್ಮೃತಿ ಇರಾನಿ:

ಚಿಕ್ಕೋಡಿ: ಕೊರೊನಾ ಸಂದರ್ಭದಲ್ಲಿ ಜನರ ಸಂಕಷ್ಟ ನೀಗಿಸಿದ್ದು  ಬಿಜೆಪಿ ಹೊರತು ಕಾಂಗ್ರೆಸ್. ಎನ್ ಸಿಪಿ ಅಲ್ಲ. ಯಾವ ನೈತಿಕತೆಯಿಂದ ಜನರ ಬಳಿ ಮತ ಕೇಳತೀರಾ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಕಾಂಗ್ರೆಸ್ ಮತ್ತು ಎನ್ ಸಿಪಿ ನಾಯಕರ ವಿರುದ್ಧ ಹರಿಹಾಯ್ದರು. ನಿಪ್ಪಾಣಿ ವಿಧಾನಸಭೆ ಬಿಜೆಪಿ ಅಭ್ಯರ್ಥಿ ಸಚಿವೆ ಶಶಿಕಲಾ ಜೊಲ್ಲೆ ಪರ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಿಪ್ಪಾಣಿ ಕ್ಷೇತ್ರದಲ್ಲಿ ಹೆಚ್ಚಿಗೆ …

Read More »

ಖಾನಾಪುರ ಕ್ಷೇತ್ರ ಕಳೆದುಕೊಂಡಿದ್ದೆವು. ಇದರಿಂದ ಕ್ಷೇತ್ರ ಸಂಪೂರ್ಣ ಹಿಂದುಳಿದಿದೆ.  ಈಗ ತಪ್ಪನ್ನು ತಿದ್ದುಕೊಂಡಿದ್ದೇವೆ.: ಬೊಮ್ಮಾಯಿ‌

ಬೆಳಗಾವಿ: ಕಳೆದ ಬಾರಿ ನಮ್ಮಲ್ಲಿನ ವ್ಯತ್ಯಾಸದಿಂದ ನಾವು ಖಾನಾಪುರ ಕ್ಷೇತ್ರ ಕಳೆದುಕೊಂಡಿದ್ದೆವು. ಇದರಿಂದ ಕ್ಷೇತ್ರ ಸಂಪೂರ್ಣ ಹಿಂದುಳಿದಿದೆ.  ಈಗ ತಪ್ಪನ್ನು ತಿದ್ದುಕೊಂಡಿದ್ದೇವೆ. ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿಗೆ ಮತ‌ ನೀಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಅವರು ಹೇಳಿದರು. ಅವರು ಇಂದು ಖಾನಾಪುರದಲ್ಲಿ ಬಿಜೆಪಿ ಅಭ್ಯರ್ಥಿ ವಿಠಲ ಹಲಗೇಕರ ಪರವಾಗಿ ರೋಡ್ ಶೋ ನಡೆಸಿ ಮಾತನಾಡಿದರು. ಖಾನಾಪುರ ದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಈ ಬಾರಿ 100% ಬಿಜೆಪಿ …

Read More »

ಪ್ರತಿ ಮತಗಟ್ಟೆಗಳಲ್ಲಿ ಕನಿಷ್ಠ ಶೇ 75-80 ರಷ್ಟು ಮತಗಳು ಬಿಜೆಪಿಗೆ ಮತ ಚಲಾಯಿಸುವಂತೆ ಮಾಡಿದರೆ ಮಾತ್ರ ನಮ್ಮ ಗೆಲುವಿನ ಗುರಿಯನ್ನು ತಲುಪಬಹುದು:ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಪ್ರತಿ ಮತಗಟ್ಟೆಗಳಲ್ಲಿ ಕನಿಷ್ಠ ಶೇ 75-80 ರಷ್ಟು ಮತಗಳು ಬಿಜೆಪಿಗೆ ಮತ ಚಲಾಯಿಸುವಂತೆ ಮಾಡಿದರೆ ಮಾತ್ರ ನಮ್ಮ ಗೆಲುವಿನ ಗುರಿಯನ್ನು ತಲುಪಬಹುದು. ಈ ನಿಟ್ಟಿನಲ್ಲಿ ಮತಗಟ್ಟೆಗಳ ಪ್ರಮುಖರು ಪ್ರತಿ ಮನೆ ಮನೆಗೆ ತೆರಳಿ ಬಿಜೆಪಿಗೆ ಮತ ಬೀಳಲು ಶಕ್ತಿ ಮೀರಿ ಶ್ರಮಿಸುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಮಂಗಳವಾರ ಸಂಜೆ ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ …

Read More »

ಸಾಧಕರ ಸೀಟ್​ನಲ್ಲಿ ಸಿಹಿಕಹಿ ಚಂದ್ರು, ಶಿಕ್ಷಣ ತಜ್ಞ ಗುರುರಾಜ ಕರಜಗಿ

ವೀಕೆಂಡ್​​ ವಿತ್​ ರಮೇಶ್’ ಪ್ರೋಮೋ ರಿಲೀಸ್​ ಆಗಿದೆ. ಈ ವಾರ ಸಿನಿಮಾ ಮತ್ತು ಶಿಕ್ಷಣ ಕ್ಷೇತ್ರದ ಸಾಧಕರು ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಕನ್ನಡ ಕಿರುತೆರೆ ಜನಪ್ರಿಯ ಶೋ ‘ವೀಕೆಂಡ್​​ ವಿತ್​ ರಮೇಶ್’ ಅಪಾರ ಸಂಖ್ಯೆಯ ಪ್ರೇಕ್ಷಕರನ್ನು ಸಂಪಾದಿಸಿದೆ. ಸೀಸನ್​ 5ರಲ್ಲಿ ಈಗಾಗಲೇ 7 ಸಾಧಕರು ಬಂದು ಹೋಗಿದ್ದು, ಈ ವಾರ ಕೂಡ ಇಬ್ಬರು ಸಾಧಕರು ಬರಲಿದ್ದಾರೆ.

Read More »

ಖರ್ಗೆ ತವರಿನಲ್ಲಿಯೇ ಕಾ0ಗ್ರೆಸ್​ ಪಕ್ಷವನ್ನು ಕಟ್ಟಿ ಹಾಕಿ ಕೇಸರಿ ಪತಾಕಿ ಹಾರಿಸಲು ಬಿಜೆಪಿ ರಣತಂತ್ರ

ಕಲಬುರಗಿ: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ತವರಿನಲ್ಲಿಯೇ ಕಾ0ಗ್ರೆಸ್​ ಪಕ್ಷವನ್ನು ಕಟ್ಟಿ ಹಾಕಿ ಕೇಸರಿ ಪತಾಕಿ ಹಾರಿಸಲು ಬಿಜೆಪಿ ರಣತಂತ್ರ ರೂಪಿಸಿದೆ. ಖುದ್ದು ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ಇಂದು ಕಲಬುರಗಿಗೆ ಎಂಟ್ರಿ ಕೊಡುವ ಮೂಲಕ ಗೆಲುವಿನ ರಣತಂತ್ರ ರೂಪಿಸಲು ಮುಂದಾಗಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವ ಗುರಿಯಲ್ಲಿ ಯಶಸ್ವಿಯಾದ ಕಮಲ ಪಕ್ಷದ ನಾಯಕರು ಈ ಬಾರಿ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ …

Read More »

ನಾಳೆ ಬಿಜೆಪಿ ಅಭ್ಯರ್ಥಿಗಳ ಪರ ಕಿಚ್ಚ ಸುದೀಪ್ ಪ್ರಚಾರ: ಐದು ಕ್ಷೇತ್ರಗಳಲ್ಲಿ ಹೆಬ್ಬುಲಿ ರೋಡ್ ಶೋ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗು ಅವರು ಸೂಚಿಸುವ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕಾರ್ಯ ನಡೆಸುವುದಾಗಿ ಪ್ರಕಟಿಸಿರುವ ನಟ ಕಿಚ್ಚ ಸುದೀಪ್ ನಾಳೆ ಅಧಿಕೃತವಾಗಿ ಸಿಎಂ ಸೂಚಿಸಿರುವ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ವೇಳೆ ಸಾಂಕೇತಿಕವಾಗಿ ಭಾಗಿಯಾಗಿ ಬೆಂಬಲ ಸೂಚಿಸಿ ಪ್ರಚಾರ ನಡೆಸಿದ್ದ ಸುದೀಪ್ ನಾಳೆಯಿಂದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ನಡೆಸಲಿದ್ದಾರೆ. ನಟ ಕಿಚ್ಚ ಸುದೀಪ್ ಪ್ರಚಾರ …

Read More »