Breaking News

ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ಗ್ಯಾರಂಟಿ ; ಯೋಜನೆಯಿಂದ ವಂಚಿತರಾಗಲಿರುವ ಕರಾವಳಿ ಮಹಿಳೆಯರು

ಮಂಗಳೂರು : ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಐದು ಗ್ಯಾರಂಟಿಗಳನ್ನು ಮಂಜೂರು ಮಾಡಿದೆ. ಈ ಐದು ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯಾಗಿದ್ದು, ಈ ಯೋಜನೆಯಿಂದ ಕರ್ನಾಟಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಹುತೇಕ ಮಹಿಳೆಯರು ವಂಚಿತರಾಗಲಿದ್ದಾರೆ. ರಾಜ್ಯದ ಮಹಿಳೆಯರಿಗೆ ದೊರೆತ ಉಚಿತ ಬಸ್ ಭಾಗ್ಯ ಕರಾವಳಿಯ ಮಹಿಳೆಯರಿಗೆ ಮರೀಚಿಕೆಯಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ …

Read More »

ಗೃಹ ಜ್ಯೋತಿ’ ಯೋಜನೆಯಡಿ ಪ್ರತಿ ಮನೆಗೆ ಉಚಿತ ವಿದ್ಯುತ್ : ಮಾರ್ಗಸೂಚಿ ಹೀಗಿದೆ

ಬೆಂಗಳೂರು : ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಈಗಾಗಲೇ ಅನುಮೋದನೆ ನೀಡಿರುವ ರಾಜ್ಯ ಸರ್ಕಾರ, ಇದೀಗ ಯೋಜನೆಗೆ ಸಂಬಂಧಿಸಿದ ಷರತ್ತು ಹಾಗೂ ನಿಬಂಧನೆಗಳ ಕುರಿತ ಮಾರ್ಗಸೂಚಿಯನ್ನು ಹೊರಡಿಸಿದೆ.   ಗೃಹ ಜ್ಯೋತಿ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ …

Read More »

ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ ಸಿದ್ದರಾಮಯ್ಯ

ದಾವಣಗೆರೆ : ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮ ಯಶಸ್ಸು ಕಂಡ ಬೆನ್ನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ನಂತರ ಸಿದ್ದರಾಮಯ್ಯ ಪ್ರಪ್ರಥಮ ಬಾರಿಗೆ ದಾವಣಗೆರೆ ಜಿಲ್ಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಭೆ‌ ನಡೆಸಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಅಂದು ಸಿದ್ದರಾಮಯ್ಯನವರ ಹುಟ್ಟುಹಬ್ಬಕ್ಕೆ ನಿರೀಕ್ಷೆಗೂ ಮೀರಿ ಜನ ಸೇರಿದ್ದರು. ಇಂದು ಕೈ ನಾಯಕರಿಗೆ ಅದೃಷ್ಟದ ಜಿಲ್ಲೆಯಾಗಿ ಪರಿಣಮಿಸಿದೆ. ಚುನಾವಣೆ ವೇಳೆ ದಾವಣಗೆರೆಯಲ್ಲಿ ಸಮಾವೇಶ ಮಾಡಿದರೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಗ್ಯಾರಂಟಿ ಎಂಬ …

Read More »

ಅಕ್ರಮ ಹಣ ವರ್ಗಾವಣೆ ಆರೋಪ: ಐಎಎಸ್ ಅಧಿಕಾರಿ ಪತ್ನಿ ವಿರುದ್ಧದ ಇಡಿ ಸಮನ್ಸ್ ರದ್ದು ಪಡಿಸಿದ ಹೈಕೋರ್ಟ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿ ಹಿರಿಯ ಐಎಎಸ್ ಅಧಿಕಾರಿ ಕಪಿಲ್ ಮೋಹನ್ ಅವರ ಪತ್ನಿ ರಿಚಾ ಸಕ್ಸೇನಾ ಅವರಿಗೆ ಜಾರಿ ನಿರ್ದೇಶನಾಲ(ಇಡಿ) ಜಾರಿ ಮಾಡಿದ್ದ ಸಮನ್ಸ್​ ಅನ್ನು ಹೈಕೋರ್ಟ್ ರದ್ದು ಪಡಿಸಿದೆ.   ಜಾರಿ ನಿರ್ದೇಶನಾಲಯ ಜಾರಿ ಮಾಡಿದ್ದ ಸಮನ್ಸ್​ನ್ನು ಪ್ರಶ್ನಿಸಿ ರೀಚಾ ಸಕ್ಸೇನಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೇ ಆರೋಪಿಯನ್ನು …

Read More »

ಹಾಡಹಗಲೇ ರಿಲಯನ್ಸ್​ ಚಿನ್ನದಂಗಡಿ ನುಗ್ಗಿ ಸಿನಿಮೀಯ ರೀತಿ 14 ಕೋಟಿ ರೂ. ಮೌಲ್ಯದ ಚಿನ್ನ ಕಳವು!

ಸಾಂಗ್ಲಿ(ಮಹಾರಾಷ್ಟ್ರ): ನೀವು ಸಿನಿಮಾಗಳಲ್ಲಿ ನೋಡಿರಬಹುದು. ಮುಸುಕುಧಾರಿ ಪೊಲೀಸ್​ ಅಧಿಕಾರಿಗಳ ರೂಪದಲ್ಲಿ ಚಿನ್ನದಂಗಡಿಗೆ ನುಗ್ಗುವ ಗುಂಪು ಜನರನ್ನು ಆಯುಧ, ಬಂದೂಕಿನಿಂದ ಬೆದರಿಸಿ ಚಿನ್ನಾಭರಣ ಕಳ್ಳತನ ಮಾಡುತ್ತಾರೆ. ಅಂಥದ್ದೇ ಪಕ್ಕಾ ಸಿನಿಮ್ಯಾಟಿಕ್​ ರೀತಿಯ ದರೋಡೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಜೂನ್​ 4 ರಂದು ನಡೆದಿದೆ. 14 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಎಗರಿಸಿದ್ದು, ಪ್ರಕರಣ ದಾಖಲಾಗಿದೆ. ಖತರ್ನಾಕ್​ ಕಳ್ಳರ ಕೈಚಳಕ: ಮಹಾರಾಷ್ಟ್ರದ ಸಾಂಗ್ಲಿ ನಗರದಲ್ಲಿ(ಜೂನ್ 4) ಭಾನುವಾರ ಹಾಡಹಗಲೇ 7 ಜನರಿದ್ದ ದರೋಡೆಕೋರರ ತಂಡವೊಂದು ಮೀರಜ್ ರಸ್ತೆಯಲ್ಲಿರುವ …

Read More »

ಕೆಎಲ್‌ಇ 13ನೇ ಘಟಿಕೋತ್ಸವ: ಗುಣಮಟ್ಟದ ಶಿಕ್ಷಣ, ನೈತಿಕ ಮೌಲ್ಯಗಳಿಂದ ರಾಷ್ಟ್ರ ನಿರ್ಮಾಣ- ಗೆಹ್ಲೋಟ್

ಬೆಳಗಾವಿ: ”1916ರಲ್ಲಿ ಸಪ್ತಋಷಿಗಳಿಂದ ಸ್ಥಾಪಿತವಾದ ಕೆಎಲ್‌ಇ ಸಂಸ್ಥೆಯನ್ನು ಕಳೆದ 40 ವರ್ಷಗಳಲ್ಲಿ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ಕಾಹೆರ ಕುಲಪತಿ ಡಾ.ಪ್ರಭಾಕರ ಕೋರೆ ಕ್ರಿಯಾಶೀಲ ನಾಯಕತ್ವದಲ್ಲಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ವಿಶಿಷ್ಟ ಗುರುತು ಕೆತ್ತಿದೆ. ಇದು ಸಾಮೂಹಿಕ ಪ್ರಯತ್ನದ ಫಲ” ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಶ್ಲಾಘಿಸಿದರು. ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಕಾಹೆರ), ಡೀಮ್ಡ್ ಟು ಬಿ ಯೂನಿವರ್ಸಿಟಿಯ 13ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ‌ಂದು ಮುಖ್ಯ …

Read More »

ಕಾಂಗ್ರೆಸ್ ಪಕ್ಷದವರು ಕೋಳಕು ಬುದ್ದಿಯವರು ಇದ್ದಾರೆ ಎಂದ ಹುಕ್ಕೇರಿ ಶಾಸಕ ನಿಖಿಲ್ ಕತ್ತಿ

ಕಾಂಗ್ರೆಸ್ ಪಕ್ಷದವರು ಕೋಳಕು ಬುದ್ದಿಯವರು ಇದ್ದಾರೆ ಎಂದು ಹುಕ್ಕೇರಿ ಶಾಸಕ ನಿಖಿಲ್ ಕತ್ತಿ ಹೇಳಿದರು.ಅವರು ಇಂದು ಹುಕ್ಕೇರಿ ನಗರದಲ್ಲಿ ಕೃಷಿ ಇಲಾಖೆಯಿಂದ ಹಮ್ಮಿಕೊಂಡ ಬೀಜ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್ ಪಕ್ಷದವರು ಗೋಹತ್ಯೆ ಕಾಯ್ದೆಯನ್ನು ಹಿಂಪಡೆಯುವ ಬಗ್ಗೆ ವಿಚಾರ ಮಾಡುತ್ತಿರುವದು ಹಾಸ್ಯಾಸ್ಪದವಾಗಿದೆ, ಇತ್ತೀಚೆಗೆ ವಿಧಾನಸೌಧದ ಸುತ್ತಲು ಗೋಮೂತ್ರ ಸಿಂಪಡಿಸುವ ಮೂಲಕ ಶುಧ್ಧಿಕರಣ ಮಾಡಿದ್ದಾರೆ ಈಗ ಅದೆ ಗೋವನ್ನು ಹತ್ಯೆ ಮಾಡಲು ಹೋರಟಿರುವ ಕಾಂಗ್ರೆಸ್ …

Read More »

ರಾತೋರಾತ್ರಿ ಮಚ್ಚೆ ಪಟ್ಟಣ ಪಂಚಾಯತ್ ಮುಂದೆ ಸಂಗೊಳ್ಳಿ ರಾಯಣ್ಣ ಪ್ರತಿಮೆ

ಮಚ್ಚೆ ಪಟ್ಟಣ ಪಂಚಾಯತ್ ಮುಂದೆ ರಾತೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಪ್ರತಿಷ್ಠಾಪನೆ ಮಾಡಲಾಗಿದೆ.ಬೆಳಗಾವಿ ಜಿಲ್ಲೆ ಮಚ್ಚೆ ಪಟ್ಟಣ ಪಂಚಾಯತ್ ಎದುರು ಸಂಗೋಳ್ಳಿ ರಾಯಣ್ಣ ಪ್ರತಿಷ್ಠಾಪನೆ ಮಾಡಿದ ಹಿನ್ನಲೆಯಲ್ಲಿ ಪರಸ್ಥಿತಿ ಉದ್ವಿಗ್ನ ಸ್ಥಿತಿಯಲ್ಲಿದ್ದು ಬೂದಿ ಮುಚ್ಚಿದ ಕೆಂಡದಂತೆ ಪರಸ್ಥಿತಿ ನಿರ್ಮಾಣ ವಾಗಿದೆ. ಕಳೆದ ಹಲವು ವರ್ಷಗಳಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ಕನ್ನಡಪರ ಸಂಘಟನೆಗಳ ಮನವಿ ಮಾಡಿದ್ದವು ಅದೇ ರೀತಿಯಾಗಿ ನಿನ್ನೆ ರಾತ್ರಿ ಪ್ರತಿಷ್ಠಾಪನೆ ಮಾಡಲಾಗಿದ್ದು ಜೀಜಾಮಾತಾ ಅಥವಾ ಶಿವಾಜಿ …

Read More »

6.2 ಕೋಟಿ ರೂಪಾಯಿ ಮೌಲ್ಯದ 10 ಕೆ.ಜಿ ಚಿನ್ನವನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಭಾನುವಾರ ವಶಪಡಿಸಿಕೊಂಡಿದೆ.

ಮುಂಬೈ(ಮಹಾರಾಷ್ಟ್ರ): ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 6.2 ಕೋಟಿ ರೂಪಾಯಿ ಮೌಲ್ಯದ 10 ಕೆ.ಜಿ ಚಿನ್ನವನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಭಾನುವಾರ ವಶಪಡಿಸಿಕೊಂಡಿದೆ. ಈ ಎರಡೂ ಪ್ರಕರಣಗಳಲ್ಲಿ ಒಟ್ಟು 4 ಮಂದಿಯನ್ನು ಬಂಧಿಸಲಾಗಿದೆ. ಮೊದಲ ಪ್ರಕರಣದಲ್ಲಿ ದುಬೈನಿಂದ ಬಂದ ಭಾರತೀಯ ಪ್ರಜೆಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪರಿಶೀಲಿಸಲಾಯಿತು. ಈ ವೇಳೆ, ಪ್ರಯಾಣಿಕರ ಸಾಮಾನು ಸರಂಜಾಮುಗಳನ್ನು ಪರಿಶೀಲಿಸಲಾಗಿದ್ದು, 56 ಮಹಿಳೆಯರ ಪರ್ಸ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪರ್ಸ್​ಗಳಲ್ಲಿ 24 ಕ್ಯಾರೆಟ್ …

Read More »

 ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಹೊಸ ತಿರುವು

ಹುಬ್ಬಳ್ಳಿ: ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ವಿವಾಹಿತ ಮಹಿಳೆ ಜೊತೆ ಯುವಕ ಹೊಂದಿದ್ದ ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ ಎಂಬುದು ತನಿಖೆಯಿಂದ‌ ತಿಳಿದು ಬಂದಿದೆ. ಕಳೆದ ಎರಡು ದಿನಗಳ ಹಿಂದೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ತೋಟದ ಮನೆಯಲ್ಲಿ ಮಲಗಿದ್ದ ನಿಂಗಪ್ಪ ನವಲೂರ (33) ಎಂಬ ಯುವಕನ ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆಗೈಯ್ಯಲಾಗಿತ್ತು. ಈ ಪ್ರಕರಣ ಜಿಲ್ಲೆಯಲ್ಲಿ ಆತಂಕಕ್ಕೆ …

Read More »