ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಮರಣ ಕಾರಣವನ್ನು ಕಡ್ಡಾಯವಾಗಿ ವೈದ್ಯಕೀಯ ಪ್ರಮಾಣ ಪತ್ರದಲ್ಲಿ ಭರ್ತಿ ಮಾಡಿ, ಜನನ-ಮರಣ ಮುಖ್ಯ ನೋಂದಣಾ ಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತರು ಹಾಗೂ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿ ಜಂಟಿ ಯಾಗಿ ಸುತ್ತೋಲೆ ಹೊರಡಿಸಿದ್ದಾರೆ. ಜನನ, ಮರಣಗಳ ನೋಂದಣಿ ಅಧಿನಿಯಮ 1969ರ ಪ್ರಕಾರ ಎಲ್ಲಾ ವೈದ್ಯರು, ವೈದ್ಯ ವೃತ್ತಿಪರರು ತಾವು ಉಪಚರಿಸಿದ ವ್ಯಕ್ತಿ ಮೃತನಾದಲ್ಲಿ …
Read More »ಚಂದಾದಾರಿಕೆ ಹೆಸರಿನಲ್ಲಿ ವಂಚನೆ ಗಾಳ: ಇಂಡಿಯನ್ ಮನಿ ಕಂಪನಿ ವಿರುದ್ಧ 6 ಎಫ್ಐಆರ್
ಬೆಂಗಳೂರು: ಹಣಕಾಸು ವಿಷಯದಲ್ಲಿ ಸಲಹೆ ನೀಡುವ ಉದ್ದೇಶವಿಟ್ಟುಕೊಂಡಿದ್ದ ‘ಇಂಡಿಯನ್ ಮನಿ ಡಾಟ್ ಕಾಮ್’ಕಂಪನಿ, ಹಲವು ಸಾಧಕರ ಹೆಸರು ಹಾಗೂ ಅವರಿಂದ ತರಬೇತಿ ಕೊಡಿಸುವ ನೆಪದಲ್ಲಿ ಸಾವಿರಾರು ಜನರಿಂದ ‘ಚಂದಾದಾರಿಕೆ’ ಹಣ ಪಡೆದು ವಂಚಿಸಿರುವ ಸಂಗತಿ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ. ಅರೆಕಾಲಿಕ ಕೆಲಸದ ಹೆಸರಿನಲ್ಲಿ ಯುವಕ- ಯುವತಿಯರನ್ನು ವಂಚಿಸಿರುವ ಪ್ರಕರಣದ ತನಿಖೆ ಕೈಗೊಂಡಿರುವ ಬನಶಂಕರಿ ಠಾಣೆ ಪೊಲೀಸರು, ಕಂಪನಿಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸಿ.ಎಸ್. ಸುಧೀರ್ ಹಾಗೂ ಮಾನವ ಸಂಪನ್ಮೂಲ …
Read More »ಶಿವಮೂರ್ತಿ ಶರಣರ ಮೇಲೆ ದೋಷಾರೋಪ ನಿಗದಿ
ಚಿತ್ರದುರ್ಗ: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಹಾಗೂ ಪರಿಶಿಷ್ಟ ಜಾತಿ, ಪಂಗಡದ ಜನರ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಶರಣರ ಮೇಲಿನ ದೋಷಾರೋಪವನ್ನು ಜಿಲ್ಲಾ ನ್ಯಾಯಾಲಯ ಗುರುವಾರ ನಿಗದಿಪಡಿಸಿತು. ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ಪ್ರತ್ಯೇಕವಾಗಿ ಸಲ್ಲಿಸಿದ್ದ ಎರಡು ದೋಷಾರೋಪ ಪಟ್ಟಿಗಳ ಪೈಕಿ ಒಂದರಲ್ಲಿನ ದೋಷಾರೋಪವನ್ನು ನಿಗದಿಪಡಿಸಿ ವಿಚಾರಣೆಯನ್ನು ಇದೇ 21ಕ್ಕೆ ಮುಂದೂಡಲಾಯಿತು. ಕಲಾಪದ ಅವಧಿ ಮುಕ್ತಾಯಗೊಂಡಿದ್ದರಿಂದ ಮತ್ತೊಂದು ದೋಷಾರೋಪ …
Read More »ನಿಲ್ಲಿಸದ ಬಸ್; ಚಲಿಸುವಾಗಲೇ ಇಳಿಯಲು ಹೋಗಿ ವಿದ್ಯಾರ್ಥಿನಿ ಸಾವು
ಹೂವಿನಹಡಗಲಿ (ವಿಜಯನಗರ ಜಿಲ್ಲೆ): ಪಟ್ಟಣದ ಹೊರ ವಲಯದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಬಳಿ ಸಾರಿಗೆ ಸಂಸ್ಥೆ ಬಸ್ ನಿಲುಗಡೆ ಮಾಡಲಿಲ್ಲ. ಹೀಗಾಗಿ ಚಲಿಸುತ್ತಿದ್ದಾಗಲೇ ಅದರಿಂದ ಇಳಿಯಲು ಪ್ರಯತ್ನಿಸಿ ನಿಯಂತ್ರಣ ತಪ್ಪಿ ಬಿದ್ದು ಗಂಭೀರ ಗಾಯಗೊಂಡ ವಿದ್ಯಾರ್ಥಿನಿ ಬುಧವಾರ ಮೃತಪಟ್ಟಿದ್ದಾರೆ. ಹೊಳಲು ಗ್ರಾಮದ ಎಲ್.ಶ್ವೇತಾ ಶಾಂತಪ್ಪನವರ (19) ಮೃತ ವಿದ್ಯಾರ್ಥಿನಿ. ಇಲ್ಲಿನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ ಆಯಂಡ್ ಕಮ್ಯುನಿಕೇಶನ್ಸ್ ವಿಭಾಗದ ಮೊದಲ ಸೆಮಿಸ್ಟರ್ ನಲ್ಲಿ ಓದುತಿದ್ದ ಶ್ವೇತಾ, ಪ್ರತಿದಿನ ಪಟ್ಟಣದ …
Read More »ಹಾರೂಗೇರಿ ಚೆಕ್ ಪೊಸ್ಟ್ ನಲ್ಲಿ 2.49 ಲಕ್ಷ ರೂ.ಗಳನ್ನು ವಶ
ಬೆಳಗಾವಿ: ಜಿಲ್ಲೆಯ ವಿವಿಧೆಡೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮತ್ತು ಚುನಾವಣೆ ಕರ್ತವ್ಯ ನಿರತ ಅಧಿಕಾರಿಗಳು ಹಣ ಹಾಗೂ ಲಿಕ್ಕರ್ ವಶಪಡಿಸಿಕೊಂಡಿದ್ದಾರೆ. ಹಾರೂಗೇರಿ ಚೆಕ್ ಪೊಸ್ಟ್ ನಲ್ಲಿ 2.49 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಯಮಕನಮರಡಿಯ ಶೆಟ್ಟಿಹಳ್ಳಿ ಚೆಕ್ ಪೊಸ್ಟ್ ನಲ್ಲಿ 3.25 ಲಕ್ಷ ರೂ ವಶಪಡಿಸಿಕೊಳ್ಳಲಾಗಿದೆ. ಐಗಳಿಯಲ್ಲಿ 188 ಲೀಟರ್ ಲಿಕ್ಕರ್ ವಶಪಡಿಸಿಕೊಳ್ಳಲಾಗಿದೆ. ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಹಳ್ಳಿ ಗ್ರಾಮದಲ್ಲಿ ಹನುಮಂತ್ ಹುಲಿಗೆಪ್ಪ ಭಜಂತ್ರಿ ಈತನು ಅಕ್ರಮವಾಗಿ ಸಾರಾಯಿ ಮಾರಾಟ …
Read More »ಕಾಂಗ್ರೆಸ್ ಬಿಜೆಪಿ ಬಂಡಾಯ ನೋಡಿದ್ರೆ ಬೆಳಗಾವಿ ಉತ್ತರ ಕ್ಷೇತ್ರ ಮೂರನೇಯವರು ಲಾಭ ಕೊಡುತ್ತಾ..?
ಕರ್ನಾಟಕ ವಿಧಾನಸಭಾ ಚುನಾವಣೆಯ ಕದನ ಇದೀಗ ಆರಂಭವಾಗಿದೆ. ಎಲ್ಲಾ ಆಸಕ್ತ ಅಭ್ಯರ್ಥಿಗಳು ಹಾಗು ರಾಷ್ಟ್ರೀಯ ಪಕ್ಷಗಳಿಂದ ಟಿಕೆಟ್ ಪಡೆದುಕೋಂಡಿರುವ ಅಭ್ಯರ್ಥಿಗಳು ತಮ್ಮ ಮುಂದಿನ ಕಾರ್ಯತಂತ್ರವನ್ನು ರೂಪಿಸುತ್ತಿದ್ದು, ಟಿಕೆಟ್ ಸಿಗದೆ ನೊಂದಿರುವ ಆಕಾಂಕ್ಷಿಗಳು ಬಂಡಾಯ ಎದ್ದಿದ್ದಾರೆ. ಮತದಾನದ ನಂತರ ಅವರೆಲ್ಲರೂ ಅದ್ಭುತ ಫಲಿತಾಂಶಗಳನ್ನು ಎದುರು ನೋಡುತ್ತಿದ್ದಾರೆ. ಅಂದಿನಿಂದ, ಮರಾಠಿ ಮತ್ತು ಮರಾಠ ಮತದಾರರ ಪ್ರಾಬಲ್ಯವನ್ನು ಉಳಿಸಿಕೊಂಡು, ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಅಭ್ಯರ್ಥಿಗಳನ್ನು ಆಯ್ಕೆ ಆಗುತ್ತಿದ್ದರು, ಆದರೆ ಆಂತರಿಕ ರಾಜಕೀಯ, ಪ್ರಾಬಲ್ಯ …
Read More »ಮೊದಲ ದಿನವೇ ನಿಪ್ಪಾಣಿ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಉತ್ತಮ ಪಾಟೀಲ ನಾಮಪತ್ರ ಸಲ್ಲಿಕೆ
ಮೊದಲ ದಿನವೇ ನಿಪ್ಪಾಣಿ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಉತ್ತಮ ಪಾಟೀಲ ನಾಮಪತ್ರ ಸಲ್ಲಿಕೆಯಾಗಿದೆ ಹೌದು ಅತೀ ಕುತೂಹಲ ಕೆರಳಿಸಿರು ಮೊದಲ ದಿನವೇ ನಿಪ್ಪಾಣಿ ಮತಕ್ಷೇತ್ರದಲ್ಲಿ ಅರಿಹಂತ್ ಉದ್ಯೋಗ್ ಗ್ರೂಪ್ ಮೂಲಕ ನಿಪ್ಪಾಣಿ ಮತಕ್ಷೇತ್ರದಲ್ಲಿ ಉತ್ತಮ್ ರಾವ್ಸಾಹೇಬ ಪಾಟೀಲ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣಾ ಅಖಾಡಕ್ಕೆ ಇಳಿದ್ದಿದ್ದಾರೆಅವರು ಕಳೆದ ನಾಲ್ಕೈದು ವರ್ಷಗಳಿಂದ ತಮ್ಮ ಕ್ಷೇತ್ರದ ಕಾರ್ಯಕರ್ತರ ವಿಶ್ವಾಸ ಗಳಿಸಿರುವ ಕಳೆದ ವರ್ಷ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ 17 ರಿಂದ 18 ಗ್ರಾಮ …
Read More »ಕಾಂಗ್ರೆಸ್ 3ನೇ ಪಟ್ಟಿಗೆ ಕ್ಷಣಗಣನೆ; ಬಿಜೆಪಿಗೆ 7 ಕ್ಷೇತ್ರಗಳ ತಲೆನೋವು;
ಬೆಳಗಾವಿ: ಬಿಜೆಪಿಗಿಂತ ಮೊದಲು ಮೊದಲನೇ ಪಟ್ಟಿ ಬಿಡುಗಡೆ ಮಾಡಿ ಅಚ್ಛರಿ ಉಂಟು ಮಾಡಿದ್ದ ಕಾಂಗ್ರೆಸ್ ಇದೀಗ 3ನೇ ಪಟ್ಟಿ ಬಿಡುಗಡೆ ಮಾಡಲು ತಿಣುಕಾಡುತ್ತಿದೆ. ಬೆಳಗಾವಿ ಜಿಲ್ಲೆಯ ಮಟ್ಟಿಗೆ ಹೇಳುವುದಾದರೆ ಬಿಜೆಪಿ ಎಲ್ಲ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಇವುಗಳಲ್ಲಿ ಸುಮಾರು 7 ಕ್ಷೇತ್ರಗಳಲ್ಲಿ ಪ್ರಬಲ ಬಂಡಾಯ ಎದುರಿಸುತ್ತಿದೆ. ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಬೆಳಗಾವಿ ಜಿಲ್ಲೆಯ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿತ್ತು. 2ನೇ ಪಟ್ಟಿಯಲ್ಲಿ 4 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದೆ. ಇನ್ನೂ …
Read More »ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚಿ ಇತರ ಪಕ್ಷದ ಕಾರ್ಯಕರ್ತರು ಬಿಜೆಪಿ ಸೇರ್ಪಡೆ
ನಿಪ್ಪಾಣಿ: ’ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚಿ ಇತರ ಪಕ್ಷದ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆ. ಇತರ ಪಕ್ಷದವರು ನಮ್ಮ ಪಕ್ಷಕ್ಕೆ ಸೇರುವವರ ಸಂಖ್ಯೆ ನಿತ್ಯ ಹೆಚ್ಚಾಗುತ್ತಿದೆ. ಪಕ್ಷಕ್ಕೆ ಬಂದ ಕಾರ್ಯಕರ್ತರ ಗೌರವ ಕಾಪಾಡುವದೊಂದಿಗೆ ಸಮಾಜದ ಹಾಗೂ ಕ್ಷೇತ್ರದ ಅಭಿವೃದ್ಧಿ ಕುರಿತು ಚಿಂತನೆಯ ವಿಚಾರಗಳನ್ನು ಬಿಂಬಿಸಲಾಗುವುದು’ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಸ್ಥಳೀಯ ರೋಹಿದಾಸನಗರದಲ್ಲಿ ವಡ್ಡರ ಸಮಾಜದ ಸುಮಾರು ನೂರಕ್ಕೂ ಅಧಿಕ ಹಾಗೂ ಜತ್ರಾಟವೇಸ್ನಲ್ಲಿ ಢೋರ ಸಮಾಜದ …
Read More »ಕಡೂರು| ವೈ.ಎಸ್.ವಿ. ದತ್ತ ಮರಳಿ ಜೆಡಿಎಸ್ಗೆ
ಕಡೂರು: ಮಾಜಿ ಶಾಸಕ ವೈ.ಎಸ್.ವಿ.ದತ್ತ ಅವರ ಯಗಟಿಯ ಮನೆಗೆ ಗುರುವಾರ ಮಾಜಿ ಸಚಿವ ಎಚ್.ಡಿ.ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಭೇಟಿ ನೀಡಿದ್ದು, ಅವರ ಸನ್ಮುಖದಲ್ಲಿ ದತ್ತ ಅವರು ಮತ್ತೆ ಜೆಡಿಎಸ್ಗೆ ಮರಳಿದರು. ಯಗಟಿಯ ಅವರ ಮನೆಯಲ್ಲಿ ಸೇರಿದ್ದ ಸಾವಿರಾರು ಜನರ ಉಪಸ್ಥಿತಿಯಲ್ಲಿ ಸಂಸದ ಪ್ರಜ್ವಲ್ ಮಾತನಾಡಿ, ‘ಕಾಂಗ್ರೆಸ್ ಪಕ್ಷ ಕೇವಲ ದತ್ತಣ್ಣ ಅವರನ್ನು ನಂಬಿಸಿ ಮೋಸ ಮಾಡಿಲ್ಲ. ಅವರ ಅಭಿಮಾನಿಗಳಿಗೂ ಮೋಸ ಮಾಡಿದೆ. ಇದನ್ನು ಈ ಹಿಂದೆಯೇ ದತ್ತ ಅವರಿಗೆ …
Read More »