ಚಿಕ್ಕಮಗಳೂರು: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ವೈ.ಎಸ್.ವಿ ದತ್ತಾ ಪಕ್ಷದ ವಿರುದ್ಧ ಬಂಡಾಯ ಸಾರಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದರು. ಚಿಕ್ಕಮಗಳೂರಿನ ಕಡೂರಿನಲ್ಲಿ ಸ್ವಾಭಿಮಾನಿ ಸಮಾವೇಶ ನಡೆಸಿ ಅಭಿಮಾನಿಗಳು, ಬೆಂಬಲಿಗರ ಜೊತೆ ಚರ್ಚಿಸಿದ ವೈ.ಎಸ್.ವಿದತ್ತಾ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕರು ಟಿಕೆಟ್ ನೀಡುವ ಭರವಸೆ ನಿಡಿದ್ದರು. ಆದರೆ ಟಿಕೆಟ್ ಕೈತಪ್ಪಿದೆ. ಕಾಂಗ್ರೆಸ್ ಗೆ ರಾಜೀನಾಮೆ ನೀಡುವುದಷ್ಟೇ ಬಾಕಿಯಿದೆ. ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಅಭಿಮಾನಿಗಳು ಹೇಳುತ್ತಿದ್ದಾರೆ. ಹಾಗಾಗಿ …
Read More »ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಏ.11 ರವರೆಗೆ ಅವಕಾಶ
ಬೆಳಗಾವಿ: ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಏ.11 ರವರೆಗೆ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಏ.20 ಕಡೆಯ ದಿನವಾಗಿರುತ್ತದೆ. ಸಾರ್ವಜನಿಕರು ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್(ಎನ್.ವಿ.ಎಸ್.ಪಿ) ಲಾಗಿನ್ ಆಗುವ ಮೂಲಕ ತಮ್ಮ ಹೆಸರು ನೋಂದಾಯಿಸಲು ಅಥವಾ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬಹುದು. ಇದಲ್ಲದೇ ಅರ್ಹ ಮತದಾರರು ವೋಟರ್ ಹೆಲ್ಪ್ ಲೈನ್ ಆ್ಯಪ್ ಮೂಲಕವೂ ನಮೂನೆ-6 …
Read More »ಯಾಕೆ ಹತಾಶರಾಗಿದ್ದಾರೋ ತಿಳಿಯುತ್ತಿಲ್ಲ ಲಕ್ಷ್ಮಣಣ್ಣ ನೀನು ಶಾಂತವಾಗಿರು: ರಮೇಶ ಜಾರಕಿಹೊಳಿ
ಬೆಳಗಾವಿ: ಲಕ್ಷ್ಮಣ ಸವದಿ ಯಾಕೆ ಹತಾಶರಾಗಿದ್ದಾರೋ ತಿಳಿಯುತ್ತಿಲ್ಲ. ಹೈಕಮಾಂಡ್ ಎಲ್ಲವನ್ನೂ ನಿರ್ಧರಿಸುತ್ತದೆ, ಲಕ್ಷ್ಮಣಣ್ಣ ನೀನು ಶಾಂತವಾಗಿರು ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಟಾಂಗ್ ನೀಡಿದ್ದಾರೆ. ಮಹಾರಾಷ್ಟ್ರದ ಗಡಿ ಶಿನ್ನೋಳಿಯಲ್ಲಿ ರಮೇಶ ಜಾರಕಿಹೊಳಿ ಸಭೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದರು. ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ಗೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಮಹೇಶ ಕುಮಟಳ್ಳಿ ಮಧ್ಯೆ ಫೈಟ್ ವಿಚಾರದ ಕುರಿತು ಪ್ರಶ್ನಿಸಿದಾಗ, ಕೆಲವೊಂದು …
Read More »ಇಂದು ರಾತ್ರಿಯೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್
ಬೆಂಗಳೂರು: ದಿಲ್ಲಿಯಲ್ಲಿಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ, ಇಂದು ರಾತ್ರಿ ಅಥವಾ ನಾಳೆ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಪ್ರಧಾನಿ ನೇತೃತ್ವದ ಈ ಸಭೆಯಲ್ಲಿ 140ಕ್ಕೂ ಹೆಚ್ಚು ಹೆಸರುಗಳನ್ನು ಒಳಗೊಂಡಿರುವ ಮೊದಲ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆಗಳಿದ್ದು, ಪಟ್ಟಿ ಭಾನುವಾರ ರಾತ್ರಿ ಅಥವಾ ಸೋಮವಾರ ಬೆಳಗ್ಗೆ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. …
Read More »ಚೆನ್ನೈ-ದೆಹಲಿ ಎಕ್ಸ್ಪ್ರೆಸ್ ರೈಲಿನಲ್ಲಿ ಹೊಗೆ: ಪ್ರಯಾಣಿಕರು ಗಾಬರಿ
ಅಮರಾವತಿ (ಆಂಧ್ರಪ್ರದೇಶ): ಚೆನ್ನೈ-ದೆಹಲಿ ಎಕ್ಸ್ಪ್ರೆಸ್ ರೈಲಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಗಾಬರಿ ಮೂಡಿಸಿದ ಪ್ರಸಂಗ ನೆಲ್ಲೂರಿನಲ್ಲಿ ಭಾನುವಾರ ನಡೆದಿದೆ. ಜನರ ಈ ಗಾಬರಿಗೆ ಇತ್ತೀಚೆಗೆ ಕೇರಳದ ರೈಲು ಬೋಗಿಗೆ ಬೆಂಕಿಯಿಟ್ಟ ದುರ್ಘಟನೆಯೇ ಕಾರಣ ಎಂದು ನಂಬಲಾಗಿದೆ. ಪ್ರಯಾಣದ ವೇಳೆ ಚೆನ್ನೈ-ದೆಹಲಿ ಎಕ್ಸ್ಪ್ರೆಸ್ನ B-5ನೇ ಬೋಗಿಯಲ್ಲಿ ಹೊಗೆ ಎದ್ದಿರುವುದು ಕಂಡುಬಂತು. ಈ ಸಂದರ್ಭ ಆಗಬಹುದಾದ ದುರಂತ ತಪ್ಪಿಸುವ ಎಚ್ಚರಿಕೆಯಿಂದ ಚಾಲಕರು ರೈಲನ್ನು 20 ನಿಮಿಷಗಳ ಕಾಲ ಕಾವಾಲಿ ನಿಲ್ದಾಣದ ಸಮೀಪ …
Read More »ವಿಜಯಪುರ: ಬಿಜೆಪಿ ಅಭ್ಯರ್ಥಿಗಳ ಪಟ್ಟಿಯತ್ತ ಎಲ್ಲರ ಚಿತ್ತ
ವಿಜಯಪುರ : ಅಳೆದು, ತೂಗಿ ಕೊನೆಗೂ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಏಪ್ರಿಲ್ 9 ಅಥವಾ 10ರಂದು ಘೋಷಣೆಯಾಗುವ ನಿರೀಕ್ಷೆ ಇದೆ. ಹೇಗಾದರೂ ಮಾಡಿ ಪಕ್ಷವನ್ನು ಕರ್ನಾಟಕದಲ್ಲಿ ಅಧಿಕಾರ ಉಳಿಸಿಕೊಳ್ಳಬೇಕು ಎಂಬ ಹರಸಾಹಸಕ್ಕೆ ಬಿದ್ದಿರುವ ಬಿಜೆಪಿಯ ಕೇಂದ್ರ ವರಿಷ್ಠರು ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಳೆದ ಆರು ತಿಂಗಳಲ್ಲಿ ಎರಡು ಬಾರಿ ಸಮೀಕ್ಷೆ ನಡೆಸಿದ್ದಾರೆ. ಅಲ್ಲದೇ, ಬಿಜೆಪಿ ಘಟಕ, ಸಂಘ ಪರಿವಾರ ಕೂಡ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸರ್ವೆ …
Read More »ಕರಡಿಗುದ್ದಿ, ಡಾ.ದೀಕ್ಷಿತ್ಗೆ ‘ಸಿರಿಗನ್ನಡ ಗೌರವ’
ಬೆಳಗಾವಿ: ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನವು 2022ನೇ ಸಾಲಿನ ‘ಸಿರಿಗನ್ನಡ ಗೌರವ’ ಮತ್ತು 2021ನೇ ಸಾಲಿನ ‘ಸಿರಿಗನ್ನಡ ಪುಸ್ತಕ ಪ್ರಶಸ್ತಿ’ ಪ್ರಕಟಿಸಿದೆ. ಸಿರಿಗನ್ನಡ ಗೌರವ ಪ್ರಶಸ್ತಿಗೆ ಪ್ರೊ.ರಾಜಶೇಖರ ಎಂ. ಕರಡಿಗುದ್ದಿ ಮತ್ತು ಡಾ.ಮಾಧವ ದೀಕ್ಷಿತ ಭಾಜನರಾಗಿದ್ದಾರೆ. ಸಿರಿಗನ್ನಡ ಪುಸ್ತಕ ಪ್ರಶಸ್ತಿಗೆ ಈರಯ್ಯ ಕಿಲ್ಲೇದಾರ ಅವರ ವೈಚಾರಿಕ ಲೇಖನ ಸಂಗ್ರಹ ‘ಉರಿಯ ಪೇಟೆಯಲ್ಲಿ’ ಕೃತಿ ಮತ್ತು ಚಂದ್ರಶೇಖರ ಪೂಜಾರ ಅವರ ಗಜಲ್ ಸಂಕಲನ ‘ಬೆಳಕ ನಿಚ್ಚಣಿಕೆ’ ಕೃತಿ ಆಯ್ಕೆಯಾಗಿವೆ. ಜೀವನಮಾನ ಸಾಧನೆ ಪ್ರಶಸ್ತಿಗಳು: …
Read More »ಬೆಳಗಾವಿ ಗ್ರಾಮೀಣ: ಹೈ ವೋಲ್ಟೇಜ್ ಕ್ಷೇತ್ರದಲ್ಲಿ ತಂತ್ರ- ಪ್ರತಿತಂತ್ರ
ಬೆಳಗಾವಿ: ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳಕರ ಕದನದಿಂದಾಗಿ ರಾಜ್ಯದ ಹೈವೋಲ್ಟೇಜ್ ಕ್ಷೇತ್ರವಾಗಿ ಗುರುತಿಸಿಕೊಂಡ ‘ಬೆಳಗಾವಿ ಗ್ರಾಮೀಣ’ದಲ್ಲಿ ಈ ಬಾರಿ ಗೆಲ್ಲಲು ಬಿಜೆಪಿ ಹಾಗೂ ಕಾಂಗ್ರೆಸ್ ತಂತ್ರ- ಪ್ರತಿತಂತ್ರ ಹೆಣೆಯುತ್ತಿವೆ. ಇಬ್ಬರ ತಿಕ್ಕಾಟದಲ್ಲಿ ಗೆಲುವಿನ ದಡ ಸೇರಲು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಪ್ರಯತ್ನಿಸುತ್ತಿದೆ. ‘ಭಾಷಾ ರಾಜಕಾರಣ’ಕ್ಕೆ ಹೆಸರಾದ ಈ ಕ್ಷೇತ್ರ 2008ರಲ್ಲಿ ಪುನರ್ ವಿಂಗಡಣೆಯಾಗಿದೆ. ಹಿರೇಬಾಗೇವಾಡಿ ಕ್ಷೇತ್ರದ ಕೆಲವು ಹಳ್ಳಿಗಳನ್ನು ಸೇರಿಸಿ, ‘ಬೆಳಗಾವಿ ಗ್ರಾಮೀಣ’ ಕ್ಷೇತ್ರ ರಚಿಸಲಾಗಿದೆ. ಕಳೆದ ಮೂರು …
Read More »ಯರಗಟ್ಟಿ ಚೆಕ್ ಪೋಸ್ಟ್ಪೋಸ್ಟ್ ನಲ್ಲಿ1,37,000=00 ರೂ ವಶ
ದಿವಸ ದಿನಾಂಕ 8 4 2023 ರಂದು 17 -20 ಗಂಟೆಗೆ ಯರಗಟ್ಟಿ ಚೆಕ್ ಪೋಸ್ಟ್ ನಲ್ಲಿ ಮಿನಿ ಲಾರಿ ನಂಬರ್ KA- 05 D-9343 ರಲ್ಲಿ ತಪಾಸಣೆ ಮಾಡುವ ಕಾಲಕ್ಕೆ ಆನಂದ್ ತಟ್ಟಿ ಇವರ ಕಡೆಗೆ ಯಾವುದೇ ದಾಖಲಾತಿ ಇಲ್ಲದೆ ಇರುವ 1,37,000=00 ರೂಗಳನ್ನು ಜಪ್ ಮಾಡಿದ್ದು ಮುಂದಿನ ಕ್ರಮಕ್ಕಾಗಿ ಎಫ್ ಎಸ್ ಟಿ ರವರು ತಮ್ಮ ತಾಬಾಕ್ಕೆ ತೆಗೆದುಕೊಂಡಿರುತ್ತಾರೆ
Read More »ಕೆಲಸದ ಒತ್ತಡದ ನಡುವೆಯೂ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಸೇರಿದಂತೆ ಜಿಲ್ಲೆಯ ಜನರು ಕರೆ ಮಾಡಿ ತಮ್ಮ ಸಮಸ್ಯೆ ಹೇಳಿಕೊಂಡ:S.P
ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿದೆ. ನೀತಿ ಸಂಹಿತೆ ಜಾರಿಯಲ್ಲಿದೆ. ಕೆಲಸದ ಒತ್ತಡದ ನಡುವೆಯೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಅವರ ತಂಡ ಶನಿವಾರ ನಡೆಸಿದ 11ನೇ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಸೇರಿದಂತೆ ಜಿಲ್ಲೆಯ ಜನರು ಕರೆ ಮಾಡಿ ತಮ್ಮ ಸಮಸ್ಯೆ ಹೇಳಿಕೊಂಡರು. ಎಂದಿನಂತೆ ಸಾರ್ವಜನಿಕರು ಕರೆ ಸ್ವೀಕರಿಸಿದ ಎಸ್ಪಿ ನಮಸ್ಕಾರ್ ರೀ.. ನಾನ ಎಸ್ಪಿ ಮಾತನಾಡುತ್ತಿದ್ದೇನೆ ಹೇಳ್ರಿ ಎನ್ನುತ್ತಲೇ ಸಾರ್ವಜನಿಕರ ಸಮಸ್ಯೆ ಆಲಿಸಿದರು. ನಗರದ ಶಹಾಪುರದ ವ್ಯಕ್ತಿಯೊರ್ವ …
Read More »