Breaking News

ಬಾಲಕಿಯನ್ನು 21 ಬಾರಿ ಚಾಕುವಿನಿಂದ ಇರಿದು ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ದಿನ ದಿನಕ್ಕೂ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ದೇಶದ ಕ್ಯಾಪಿಟಲ್​ ಸಿಟಿಯಲ್ಲಿ ಶದ್ಧಾ ವಾಕರ್​​ ಪ್ರಕರಣ ಮಾಸುವ ಮುನ್ನ ಮತ್ತೊಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ಯುವತಿಯೊಬ್ಬಳನ್ನು ಪ್ರಿಯಕರ 21 ಬಾರಿ ಚುಚ್ಚಿದ್ದಲ್ಲದೇ 5 ಬಾರಿ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದಾನೆ. ಮೃತಳನ್ನು ಸಾಕ್ಷಿ ಎಂದೂ, ಹತ್ಯೆ ಮಾಡಿದವನನ್ನು ಸಾಹಿಲ್​ ಎಂದು ಗುರುತಿಸಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯ ಆಧರಿಸಿ ದೂರು ದಾಖಲಿಸಿಕೊಂಡ ಪೊಲೀಸರು. ಹಂತಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. …

Read More »

ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ- ಡಿಕೆಶಿ

ಬೆಂಗಳೂರು: ”ನಾವು ನಮ್ಮ ಪ್ರಣಾಳಿಕೆಯಲ್ಲಿ ಪ್ರತಿ ಪಂಚಾಯ್ತಿ ಮಟ್ಟದಲ್ಲಿ ನವೋದಯ ಮಾದರಿ ಉನ್ನತ ಗುಣಮಟ್ಟದ ಶಾಲೆ ಆರಂಭಿಸುವ ಬಗ್ಗೆ ಪ್ರಸ್ತಾಪ ಮಾಡಿದ್ದೇವೆ. ಯಾವ ರೀತಿ ಮಾಡಬೇಕು ಎಂಬುದರ ಕುರಿತು ಮಾರ್ಗದರ್ಶನ ನೀಡಬೇಕು ಎಂದು ಶಿಕ್ಷಕರಾದ ಗೋಪಾಲಕೃಷ್ಣ ಅವರ ಬಳಿ ಮನವಿ ಮಾಡಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ತಾವು ವ್ಯಾಸಂಗ ಮಾಡಿರುವ ಎನ್‌ಪಿಸಿ ಶಾಲೆಗೆ ಸೋಮವಾರ ಭೇಟಿ ನೀಡಿದರು. ತಮ್ಮ ಗುರುಗಳಾದ ಗೋಪಾಲಕೃಷ್ಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. …

Read More »

ವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಅಕಾಲಿಕ ಮುಂಗಾರಿನ ಪರಿಣಾಮ ಗುಜರಾತ್​ನಲ್ಲಿ ಇನ್ನೆರಡು ದಿನ ಗಾಳಿ ಮಳೆಯಾಗಲಿದೆ.

ಅಹಮದಾಬಾದ್​ (ಗುಜರಾತ್): ಶುಭಮನ್​ ಗಿಲ್​, ರಶೀದ್​ ಖಾನ್​, ಹಾರ್ದಿಕ್​ ಪಾಂಡ್ಯರ ಚುರುಕಿನ ಆಟ, ಕ್ರಿಕೆಟ್​ನ ಮಾಸ್ಟರ್​ ಮೈಂಡ್​ ಎಮ್​ಎಸ್​ ಧೋನಿ ಅವರ ಚಾಣಾಕ್ಷ ನಡೆಯ ಪಂದ್ಯವನ್ನು ನೋಡಲು ನಿನ್ನೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂಗೆ ಬಂದಿದ್ದ ಅಭಿಮಾನಿಗಳಿಗೆ ವರುಣ ಬೇಸರ ಉಂಟುಮಾಡಿದ್ದ. ಆದರೆ, ಪಂದ್ಯವನ್ನು ಸೋಮವಾರ (ಇಂದು)ದ ಮೀಸಲು ದಿನಕ್ಕೆ ಮುಂದೂಡಲಾಯಿತು. ಹಾಗಾದರೆ ಇಂದಿನ ಹವಾಮಾನ ವರದಿ ಏನಿದೆ..?   ಗುಜರಾತ್​ನಲ್ಲಿ ಅಕಾಲಿಕ ಮಳೆ ಅನಾಹುತ ಸೃಷ್ಟಿಸುತ್ತಿದೆ. ಚಂಡಮಾರುತದ ಚಲನೆಯಿಂದಾಗಿ, ಕಳೆದ …

Read More »

ಶಶಿಕಲಾ ಜೊಲ್ಲೆಯವರಿಗೆ ಸೀರೆಯನ್ನು ಉಡುಗೊರೆಯಾಗಿ ನೀಡಿದ ಗಡ್ಕರಿ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಚಿಕ್ಕೋಡಿ ಲೋಕಸಭಾ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕರಾದ ಶಶಿಕಲಾ ಜೊಲ್ಲೆ ಸೋಮವಾರ ನವದೆಹಲಿಯಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿದರು. ಚುನಾವಣಾ ಪ್ರಚಾರ ಸಭೆಗೆ ನಿಪ್ಪಾಣಿ ಮತಕ್ಷೇತ್ರಕ್ಕೆ ಆಗಮಿಸಿ ತಮ್ಮ ಗೆಲುವಿಗೆ ಸಹಕರಿಸಿದ್ದಕ್ಕೆ ಶಶಿಕಲಾ ಜೊಲ್ಲೆ ಅವರು ಗಡ್ಕರಿ ಅವರಿಗೆ ಮನಃಪೂರ್ವಕ ಧನ್ಯವಾದವನ್ನು  ಸಲ್ಲಿಸಿದರು. ಇದೇ ವೇಳೆ ಮನೆ ಮಗಳು ಚುನಾವಣೆಯಲ್ಲಿ ಗೆಲುವು …

Read More »

ಮೃತಪಟ್ಟ ಪತಿಯ ದೇಹವನ್ನು ಪತ್ನಿ ಮನೆಯಲ್ಲೇ ಸುಟ್ಟು ಹಾಕಿದ್ದಾರೆ.

ಆಂಧ್ರಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ಅಚ್ಚರಿಯ ಘಟನೆಯೊಂದು ವರದಿಯಾಗಿದೆ. ಮೃತಪಟ್ಟ ಪತಿಯ ದೇಹವನ್ನು ಪತ್ನಿ ಮನೆಯಲ್ಲೇ ಸುಟ್ಟು ಹಾಕಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ. ಮೃತಪಟ್ಟ ಪತಿಯ ಶವವನ್ನು ಮನೆಯಲ್ಲೇ ಸುಟ್ಟು ಹಾಕಿದ ಪತ್ನಿಕರ್ನೂಲ್​, ಆಂಧ್ರಪ್ರದೇಶ: ಯಾರಾದರೂ ಮೃತಪಟ್ಟರೆ ಅವರನ್ನು ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ಮಾಹಿತಿ ನೀಡಿ ಸ್ಮಶಾನಕ್ಕೆ ತೆಗೆದುಕೊಂಡು ಹೋಗಿ ಅಂತ್ಯಸಂಸ್ಕಾರ ಮಾಡುತ್ತಾರೆ. ಆದರೆ, ಪತಿಯ ಸಾವಿನ ವಿಚಾರ ತಿಳಿದ ಪತ್ನಿ ಮೃತದೇಹವನ್ನು ಮನೆಯಯೊಳಗೇ ಬೆಂಕಿ ಹಚ್ಚಿ ದಹಿಸಿದ್ದಾಳೆ. ಈ ಘಟನೆ …

Read More »

‘ನಿಮ್ಮ ಪ್ರಾಮಾಣಿಕತೆಯನ್ನು ಒರೆಗೆ ಹಚ್ಚಿ ನೋಡಲಾಗುತ್ತದೆ. ನೀವು ಪಟ್ಟಿ ಕೊಡದಿದ್ದರೆ ನಾನೇ ನಿಮಗೆ ಪಟ್ಟಿ ಕೊಡುತ್ತೇನೆ. D.C.M.

ಬೆಂಗಳೂರು: ”ಕಳೆದ ಮೂರು ವರ್ಷಗಳಿಂದ ಬೆಂಗಳೂರಲ್ಲಿ ವಿಧಾನಸಭೆ ಕ್ಷೇತ್ರವಾರು ಆಗಿರುವ ಕೆಲಸ, ಯಾವ ಯೋಜನೆಯಡಿ ಕೆಲಸ ಆಗಿದೆ. ಅದಕ್ಕೆ ಆಗಿರುವ ಖರ್ಚಿನ ವಿವರ ಮತ್ತು ಕೆಲಸ ಆಗಿರುವ ಬಗ್ಗೆ ಫೋಟೋ, ವಿಡಿಯೋ ಮತ್ತಿತರ ದಾಖಲೆಗಳನ್ನು ಸರಕಾರಕ್ಕೆ ಒದಗಿಸಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದರು. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ”ಬಿಬಿಎಂಪಿ ಅನುದಾನ ಪಡೆದು ಶುರು ಮಾಡದ ಕೆಲಸ, ಕಾಮಗಾರಿಗಳನ್ನು …

Read More »

ಕೆರೆಯಲ್ಲಿ ಶವ ಪತ್ತೆ ಹಿನ್ನೆಲೆ: ನೀರಿಗಾಗಿ ಪರದಾಡುವ ಸಂದರ್ಭದಲ್ಲೂ ಕೆರೆ ಖಾಲಿ ಮಾಡಿಸಿದ ಗ್ರಾಮಸ್ಥರು

ಹುಬ್ಬಳ್ಳಿ: ಕೆರೆಯಲ್ಲಿಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಕಾರಣ ಹುಬ್ಬಳ್ಳಿ ತಾಲೂಕಿನ ಉಮಚಗಿ ಗ್ರಾಮಸ್ಥರು ಕೆರೆ ನೀರು ಕುಡಿಯಲು ಜನರು ಹಿಂದೇಟು ಹಾಕಿದ್ದರು. ಹೀಗಾಗಿ ಗ್ರಾಮಸ್ಥರ ಪಟ್ಟಿಗೆ ಮಣಿದ ಜಿಲ್ಲಾಡಳಿತ ಕೆರೆಯ ನೀರನ್ನು ಪಂಪಸೆಟ್​ಗಳ ಮುಖಾಂತರ ಕೆರೆ ನೀರನ್ನು ಹೊರ ಹಾಕಲಾಗುತ್ತಿದೆ. ಆದರೆ, ಈಗ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ಎರಡು ಕೊಡ ನೀರಿಗಾಗಿ ಇಡೀ ದಿನ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆರೆಯಲ್ಲಿ ಪತ್ತೆಯಾದ ಮೃತದೇಹ ಮೂರ್‍ನಾಲ್ಕು ದಿನಗಳ ಕಾಲ ಕೆರೆಯಲಿದ್ದು, …

Read More »

ಸಾಲು ಮರದ ತಿಮ್ಮಕ್ಕ ಅವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರೆಸಿ ಮುಖ್ಯಮಂತ್ರಿ ಆದೇಶ

ಬೆಂಗಳೂರು : ನಾಡೋಜ ಸಾಲು ಮರದ ತಿಮ್ಮಕ್ಕ ಅವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಪರಿಸರ ರಾಯಭಾರಿಯಾಗಿಯೂ ಸಾಲು ಮರದ ತಿಮ್ಮಕ್ಕ ಅವರು ಮುಂದುವರೆಯಲಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Read More »

ಕುಡುಕ ಗಂಡನಿಂದ ಕಾಟ: ಮಗನ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ..!

ಬೆಳಗಾವಿ: ಕುಡುಕ ಗಂಡನ ಕಾಟಕ್ಕೆ ಬೇಸತ್ತ ಪತ್ನಿ ತನ್ನ ಮಗನೊಂದಿಗೆ ಸೇರಿ ಪತಿಯನ್ನೇ ಹತ್ಯೆ ಮಾಡಿರುವ ಘಟನೆ ಮೂಡಲಗಿ ತಾಲೂಕಿನ ಹಳ್ಳೂರು ಗ್ರಾಮದಲ್ಲಿ ನಡೆದಿದೆ. ಚಂದ್ರಕಾಂತ ಮಾವರಕರ್(42) ಕೊಲೆಯಾದ ವ್ಯಕ್ತಿ. ಸಾವಿತ್ರಿ ಮಾವರಕರ್, ಸುನೀಲ್ ಮಾವರಕರ್ ಕೊಲೆ ಮಾಡಿದ ತಾಯಿ ಹಾಗೂ ಮಗ ಎಂದು ಗುರುತಿಸಲಾಗಿದೆ. ನಿನ್ನೆ ಬೆಳಗಿನ ಜಾವ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಳ್ಳೂರು ಗ್ರಾಮದಲ್ಲಿ ಪ್ರತಿ 12 ವರ್ಷಕ್ಕೊಮ್ಮೆ ದ್ಯಾಮವ್ವ ಹಾಗೂ ಮಹಾಲಕ್ಷ್ಮೀ ದೇವಿ …

Read More »

ಖಾಸಗಿ ಬಸ್ ಮತ್ತು ಇನ್ನೋವಾ ಕಾರ್ ನಡುವೆ ಭೀಕರ ಅಪಘಾತ: 6 ಮಂದಿ ಸಾವು..

ಮೈಸೂರು: ಖಾಸಗಿ ಬಸ್ ಮತ್ತು ಇನ್ನೋವಾ ಕಾರ್ ನಡುವೆ ಡಿಕ್ಕಿ ಸಂಭವಿಸಿ ಕಾರ್​ನಲ್ಲಿ ಪ್ರಯಾಣಿಸುತ್ತಿದ್ದ 6 ಮಂದಿ ಸಾವನ್ನಪ್ಪಿರುವ ದುರ್ಘಟನೆ ಮೈಸೂರಿನ ಕೊಳ್ಳೇಗಾಲ ಮುಖ್ಯರಸ್ತೆಯ ಕುರುಬೂರು ಗ್ರಾಮದ ಬಳಿ ನಡೆದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ನಡೆದ ಸ್ಥಳಕ್ಕೆ ನರಸೀಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಕಾರ್​​ನಲ್ಲಿ ಪ್ರಯಾಣಿಸುತ್ತಿದ್ದವರನ್ನು ಬಳ್ಳಾರಿ ಮೂಲದವರು ಎಂದು ಹೇಳಲಾಗುತ್ತಿದ್ದು, ಮಲೆ ಮಾದೇಶ್ವರನ ದರ್ಶನಕ್ಕೆ ಹೋಗಿ ಮೈಸೂರು ನಗರದತ್ತ ಆಗಮಿಸುತ್ತಿದ್ದರು. ಈ …

Read More »