ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಹಲವು ನದಿಗಳಲ್ಲಿ ಒಳಹರಿವು ಹೆಚ್ಚಾಗಿದ್ದು, ನದಿ ಪಾತ್ರದ ಪ್ರಮುಖ ದೇವಾಲಯಗಳು ಜಲಾವೃತವಾಗಿವೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಗಣೇಶ್ ಮಂದಿರ ಜಲದಿಗ್ಬಂದನ ಗೊಂಡಿದ್ದು, ಮಹಾರಾಷ್ಟ್ರ – ಕರ್ನಾಟಕ ಗಡಿಯಲ್ಲಿರುವ ನರಸಿಂಹ ಹಾಡಿ ದೇವಸ್ಥಾನ ಭಾಗಶಃ ಜಲಾವೃತವಾಗಿದೆ. ಇನ್ನು ಭಕ್ತರು ರಭಸವಾಗಿ ಹರಿಯುತ್ತಿರುವ ನೀರನ್ನು ಲೆಕ್ಕಿಸದೇ, ದತ್ತ ದೇವರ ದರ್ಶನವನ್ನು ಪಡೆದುಕೊಳ್ಳುತ್ತಿದ್ದಾರೆ. ಕೃಷ್ಣಾ ನದಿ ಮತ್ತು ಪಂಚಗಂಗಾ ನದಿಗಳ …
Read More »ಧಾರವಾಡದ ಸರ್ಕಾರಿ ಕಾಲೇಜೊಂದು ಮಳೆ ಬಂದರೆ ಸಾಕು ಎಲ್ಲೆಡೆ ಸೋರುತ್ತ
ಧಾರವಾಡ: ವಿದ್ಯಾಕಾಶಿ ಎಂದೇ ಹೆಸರು ಗಳಿಸಿರುವ ಧಾರವಾಡದ ಸರ್ಕಾರಿ ಕಾಲೇಜೊಂದು ಮಳೆ ಬಂದರೆ ಸಾಕು ಎಲ್ಲೆಡೆ ಸೋರುತ್ತಿದ್ದು, ವಿದ್ಯಾರ್ಥಿನಿಯರಿಗೆ ನಿತ್ಯವೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ನಗರದ ಆರ್ ಎನ್ ಶೆಟ್ಟಿ ಮೈದಾನದ ಮುಂಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಪದವಿ ಕಾಲೇಜ್ನ ಸ್ಥಿತಿಯಾಗಿದೆ. ಈ ಕಾಲೇಜಿನ ಕಟ್ಟಡಗಳು ಸಂಪೂರ್ಣವಾಗಿ ಹಳೆಯದಾಗಿದ್ದು, ಮೇಲ್ಛಾವಣಿ ಸಹ ಬಿರುಕು ಬಿಟ್ಟಿದ್ದು, ಮಳೆ ಬಂದರೇ ಸೋರಲಾರಂಭಿಸುತ್ತದೆ. ಧಾರವಾಡದಲ್ಲಿ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇದರಿಂದ ಕಾಲೇಜಿನ …
Read More »ಮಧ್ಯಸ್ಥಿಕೆ ವಹಿಸಿ ಸಾಲ ಕೊಡಿಸಿದ್ದ ಮಾಜಿ ಗ್ರಾಮ ಪಂಚಾಯಿತಿ ಸದಸ್ಯನ ಕೊಲೆ
ಕಲಬುರಗಿ: ಹಣಕಾಸಿನ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿದ್ದ ಮಾಜಿ ಗ್ರಾಮ ಪಂಚಾಯತ್ ಸದಸ್ಯನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜೇವರ್ಗಿ ತಾಲೂಕಿನ ಮದರಿ ಗ್ರಾಮದಲ್ಲಿ ನಡೆದಿದೆ. ಅಶೋಕ ಪ್ಯಾಟಿ (45) ಕೊಲೆಯಾದವರು. ಅಶೋಕ್ ಪ್ಯಾಟಿ ಪಕ್ಕದ ಮನೆಯ ಹಾಲಗಡ್ಲಾ ಕುಟುಂಬದ ಜಾನಪ್ಪ, ಸಿದ್ದಪ್ಪ, ಗುಂಡಪ್ಪ ಮತ್ತು ಅವರ ಸಂಬಂಧಿಗಳು ಈ ಕೊಲೆ ಮಾಡಿದ್ದಾರೆ ಎಂದು ಮೃತನ ಪತ್ನಿ ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಏನಿದು ಪ್ರಕರಣ ?: ಕೊಲೆಯಾದ ಅಶೋಕ್ ಪ್ಯಾಟಿ …
Read More »2022-23 ಹಣಕಾಸು ವರ್ಷಕ್ಕೆ EPF ನ ಬಡ್ಡಿ ದರವನ್ನು 8.15 ಪ್ರತಿಶತಕ್ಕೆ ನಿಗದಿಪಡಿಸಲಾಗಿದೆ. ಇದು ಕಳೆದ ವರ್ಷಕ್ಕಿಂತ ಶೇ.0.05ರಷ್ಟು ಹೆಚ್ಚಾಗಿದೆ.
ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಖಾತೆಗಳಲ್ಲಿನ ಹಣದ ಮೇಲಿನ ಬಡ್ಡಿ ದರವನ್ನು (EPFO Interest rate) ಅಂತಿಮಗೊಳಿಸಲಾಗಿದೆ. 2022-23ನೇ ಹಣಕಾಸು ವರ್ಷಕ್ಕೆ ಶೇ 8.15 ಬಡ್ಡಿ ನೀಡಲು ಕೇಂದ್ರೀಯ ಟ್ರಸ್ಟಿಗಳ ಮಂಡಳಿ (ಸಿಬಿಟಿ) ತೆಗೆದುಕೊಂಡ ನಿರ್ಧಾರವನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಈ ಸಂಬಂಧ ಇಪಿಎಫ್ಒ ಸೋಮವಾರ ಅಧಿಕೃತ ಆದೇಶ ಹೊರಡಿಸಿದೆ. ಈ ವರ್ಷದ ಮಾರ್ಚ್ನಲ್ಲಿ ಇಪಿಎಫ್ ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟಿಗಳು (ಸಿಬಿಟಿ) 2022-23ರ ಹಣಕಾಸು ವರ್ಷಕ್ಕೆ ಶೇ 8.15 …
Read More »ವರುಣನ ಆರ್ಭಟಕ್ಕೆ ಕೆಲ ಮನೆಗಳಿಗೆ ನೀರು ನುಗ್ಗಿದರೆ, ಮತ್ತೊಂದಿಷ್ಟು ಮನೆಗಳು ಧರೆಗುರುಳಿವೆ.
ಬೆಳಗಾವಿ: ಜಿಲ್ಲೆಯಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ವರುಣನ ಆರ್ಭಟಕ್ಕೆ ಕೆಲ ಮನೆಗಳಿಗೆ ನೀರು ನುಗ್ಗಿದರೆ, ಮತ್ತೊಂದಿಷ್ಟು ಮನೆಗಳು ಧರೆಗುರುಳಿವೆ. ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತವಾಗಿದೆ. ಕಳೆದ ಹತ್ತು ದಿನಗಳಿಂದ ಬೆಳಗಾವಿ ನಗರ ಮತ್ತು ಜಿಲ್ಲಾದ್ಯಂತ ಬಿಟ್ಟು ಬಿಡದೇ ಮಳೆಯಾಗುತ್ತಿದೆ. ಅಲ್ಲದೇ ಪಶ್ಚಿಮ ಘಟ್ಟ ಪ್ರದೇಶದಲ್ಲೂ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆ ಜಿಲ್ಲೆಯ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ, ಮಹದಾಯಿ ನದಿಗಳು, ಹಳ್ಳಗಳು ತುಂಬಿ ಹರಿಯುತ್ತಿವೆ. ಪರಿಣಾಮ …
Read More »ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ
ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಒಟ್ಟು ಖಾಲಿ ಇರುವ 13 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿ ನಡೆಸುವ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಭಾಷೆಯ ಶೀಘ್ರಲಿಪಿ ಮತ್ತು ಶಾರ್ಟ್ಎಂಡ್ …
Read More »ವಿಶ್ವ ಕುಬ್ಜರ ಕ್ರೀಡಾಕೂಟಕ್ಕೆ ಬೆಳಗಾವಿ ಯುವತಿ ಆಯ್ಕೆ
ಬೆಳಗಾವಿ : ಸಾಧಿಸುವ ಛಲವಿರುವ ಜನರಿಗೆ ಯಾವುದೂ ಅಡ್ಡಿಯಾಗದು ಅಂತಾರೆ. ಈ ಮಾತನ್ನು ಜಿಲ್ಲೆಯ ಯುವತಿ ತೋರಿಸಿಕೊಟ್ಟಿದ್ದಾರೆ. ತನ್ನ ಅಂಗವೈಕಲ್ಯ ಮೆಟ್ಟಿ ನಿಂತು ವಿಶ್ವ ಕುಬ್ಜರ ಕ್ರೀಡಾಕೂಟಕ್ಕೆ ಆಯ್ಕೆಯಾಗುವ ಮೂಲಕ ಬೆಳಗಾವಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇವರ ಹೆಸರು ಮಂಜುಳಾ ಶಿವಾನಂದ ಗೊರಗುದ್ದಿ. ಕರದಂಟು ನಾಡು ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ನಿವಾಸಿ. ಜುಲೈ 28ರಿಂದ ಜರ್ಮನಿಯಲ್ಲಿ ಆರಂಭವಾಗುತ್ತಿರುವ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ಮಂಜುಳಾ, ಚಕ್ರ ಮತ್ತು ಗುಂಡು ಎಸೆತ ಸ್ಪರ್ಧೆಯಲ್ಲಿ …
Read More »ಹಾಲ್ನೊರೆಯಂತೆ ಚಿಮ್ಮುತ್ತಿದೆ ಗೋಕಾಕ್ ಜಲಪಾತ
ಬೆಳಗಾವಿ: ಅಮೆರಿಕ ದೇಶದ ಪ್ರಸಿದ್ಧ ನಯಾಗರ ಜಲಪಾತವನ್ನು ಹೋಲುವುದರಿಂದ ಭಾರತದ ನಯಾಗಾರವೆಂದೇ ಕರೆಯಲ್ಪಡುವ ನಯನ ಮನೋಹರ ಗೋಕಾಕ್ ಫಾಲ್ಸ್ ಕಣ್ತುಂಬಿಕೊಳ್ಳಲು ಬರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆಕರ್ಷಕ ದೃಶ್ಯ ಕಂಡು ಜನ ಪುಳಕಗೊಳ್ಳುತ್ತಿದ್ದಾರೆ. ಹಾಸುಗಲ್ಲುಗಳ ಮೇಲೆ ಹರಿದು ಬರುವ ಜಲಧಾರೆಯ ಸೊಬಗು ನೋಡುವುದೇ ಒಂದು ಸಡಗರ. ಪಶ್ಚಿಮ ಘಟ್ಟದಲ್ಲಿ ಅಕ್ಷರಶಃ ವರುಣರಾಯ ಅಬ್ಬರಿಸುತ್ತಿದ್ದಾನೆ. ಜಿಲ್ಲೆಯ ಘಟಪ್ರಭಾ, ಹಿರಣ್ಯಕೇಶಿ ನದಿಗಳಿಗೆ ನೀರಿನ ಒಳಹರಿವು ಹೆಚ್ಚಾಗುತ್ತಿದೆ. ಅಪಾರ ಪ್ರಮಾಣದ ನೀರು ಗೋಕಾಕ್ …
Read More »K.I.A.D.B. ಕಚೇರಿಗಳಲ್ಲಿ ದಲ್ಲಾಳಿಗಳಿಗೆ ಲಗಾಮು: ಸರ್ಕಾರದಿಂದ ಸುತ್ತೋಲೆ ಪ್ರಕಟ
ಬೆಂಗಳೂರು: ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡ ರೈತರ ಪರವಾಗಿ ಕೆಐಎಡಿಬಿ ಕೇಂದ್ರ ಕಚೇರಿ ಮತ್ತು ವಲಯ ಕಚೇರಿಗಳಲ್ಲಿ ಕಾಣಿಸಿಕೊಳ್ಳುವ ದಲ್ಲಾಳಿಗಳು, ಮಧ್ಯವರ್ತಿಗಳು ಹಾಗೂ ಅವರ ಜೊತೆ ಕೈಜೋಡಿಸುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ್ ಎಚ್ಚರಿಸಿದ್ದು, ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಸಚಿವರು, “ಕೆಐಎಡಿಬಿ ಕಚೇರಿಗಳಲ್ಲಿ ಸಂತ್ರಸ್ತ ರೈತರ ಪರವಾಗಿ …
Read More »ಬಾಲಗಂಗಾಧರ ತಿಲಕ್ ಸಾರ್ವಜನಿಕ ಗಣೇಶೋತ್ಸವ ಆಚರಣೆ ಮಾಡುವ ಮೂಲಕ ಜನರನ್ನು ಒಗ್ಗೂಡಿಸಿ ಸ್ವಾತಂತ್ರ್ಯವನ್ನು ತಂದು ಕೊಟ್ಟಿದ್ದಾರೆ ಎಂದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ಮೈಸೂರು: ಸ್ವಾತಂತ್ರ್ಯ ಪೂರ್ವದಲ್ಲಿ ಗಣೇಶೋತ್ಸವ ಆಚರಣೆ ಮಾಡುವ ಮೂಲಕ ಜನರನ್ನು ಒಟ್ಟು ಸೇರಿಸಿ, ಶ್ರಮಪಟ್ಟು ನಮಗೆ ಸ್ವಾತಂತ್ರ್ಯ ತಂದು ಕೊಟ್ಟವರು ಬಾಲಗಂಗಾಧರ ತಿಲಕ್ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ವೀರ ಸಾವರ್ಕರ್ ಯುವಬಳಗದ ವತಿಯಿಂದ ಭಾನುವಾರ ಸಂಜೆ ನಗರದ ತಿಲಕ್ ನಗರದಲ್ಲಿ ಆಯೋಜಿಸಿದ್ದ ಬಾಲಗಂಗಾಧರ ತಿಲಕರ 167ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಲೋಕ ಮಾನ್ಯ ಬಾಲಗಂಗಾಧರ ತಿಲಕರ 167ನೇ ಜಯಂತ್ಯುತ್ಸವವನ್ನು ತಿಲಕ್ ನಗರದಲ್ಲಿ ಆಚರಿಸುತ್ತಿರುವುದು …
Read More »
Laxmi News 24×7