ವಿಜಯನಗರ : ಶೆರ್ಪಾ ಸಭೆಯ ನಂತರ ಶುಕ್ರವಾರ ಸಂಜೆ ಜಿ-20 ಪ್ರತಿನಿಧಿಗಳು ವಿಶ್ವವಿಖ್ಯಾತ ಹಂಪಿಯ ಸ್ಮಾರಕಗಳನ್ನು ವೀಕ್ಷಣೆ ಮಾಡಿದರು. ಪ್ರವಾಸೋದ್ಯಮ ಇಲಾಖೆ, ಕೇಂದ್ರ ಮತ್ತು ರಾಜ್ಯ ಪುರಾತತ್ವ ಇಲಾಖೆಯಿಂದ ಸ್ಮಾರಕ ವೀಕ್ಷಣೆ ವ್ಯವಸ್ಥೆಯನ್ನು ಕಲ್ಪಿಸಲಾಯಿತು. ಹಂಪಿಯ ಮಹಾನವಮಿ ದಿಬ್ಬ, ಹಜಾರರಾಮ, ಕಮಲ ಮಹಲ್ ಹಾಗೂ ಗಜಶಾಲೆ, ರಾಣಿ ಅರಮನೆ ಅಧಿಷ್ಠಾನ ಹಾಗೂ ವಿವಿಧ ಸ್ಮಾರಕಗಳ ಕುರಿತು ಪ್ರವಾಸಿ ಮಾರ್ಗದರ್ಶಿಗಳು ಗೌರವಪೂರಕವಾಗಿ ಸ್ವಾಗತಿಸುತ್ತಾ ಮಾಹಿತಿ ನೀಡಿದರು. ಮಹಾನವಮಿ ದಿಬ್ಬದ ಮೇಲೆ ಹತ್ತಿ ಸುತ್ತಲಿನ …
Read More »ಮೈಸೂರು – ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲು ಎಸೆತ..
ಚೆನ್ನೈ: ಮೈಸೂರು- ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಅಪರಿಚಿತ ವ್ಯಕ್ತಿಯೊಬ್ಬರು ಕಲ್ಲು ಎಸೆದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಶುಕ್ರವಾರ ಮುಂಜಾನೆ 4.30ಕ್ಕೆ ಮೈಸೂರಿನಿಂದ ಚೆನ್ನೈಗೆ ಆಗಮಿಸಿದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಪುರಚಿ ತಲೈವರ್ ಡಾ.ಎಂ.ಜಿ. ರಾಮಚಂದ್ರನ್ ಸೆಂಟ್ರಲ್ ರೈಲು ನಿಲ್ದಾಣ ತಲುಪಿದೆ. ಬೇಸಿನ್ ಬ್ರಿಡ್ಜ್ ರೈಲ್ವೇ ಯಾರ್ಡ್ ಅನ್ನು ದಾಟಿ ಸೆಂಟ್ರಲ್ ರೈಲು ನಿಲ್ದಾಣ ತಲುಪುವ ಮಾರ್ಗದಲ್ಲಿ ಅಪರಿಚಿತ ವ್ಯಕ್ತಿ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಕಲ್ಲು …
Read More »ಕಲ್ಲು ಗಣಿಗಾರಿಕೆಯಲ್ಲಿ ಅಕ್ರಮ ತಡೆಗೆ ಶಾಸಕರ ಒತ್ತಾಯ
ಬೆಂಗಳೂರು : ಯಶವಂತಪುರ ವಿಧಾನಸಭಾ ಕ್ಷೇತ್ರದ ದೊಡ್ಡೇರಿ ಸಮೀಪ ಇರುವ ಕಲ್ಲು ಗಣಿಗಾರಿಕೆಯಲ್ಲಿ ಅಕ್ರಮಗಳು ನಡೆಯುತ್ತಿದ್ದು, ಅದನ್ನು ತಡೆಗಟ್ಟಬೇಕು ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಆಡಳಿತ ಪಕ್ಷದ ಶಾಸಕ ಶ್ರೀನಿವಾಸಯ್ಯ ಅವರು ಗಣಿ ಮಾಲೀಕರು ತಮಗೆ ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ ಎಂದು ವಿಧಾನಸಭೆಯಲ್ಲಿ ಆರೋಪಿಸಿದರು. ಇಂದು ಪ್ರಶ್ನೋತ್ತರ ವೇಳೆ ವಿಷಯ ಪ್ರಸ್ತಾಪಿಸಿದ ಎಸ್.ಟಿ. ಸೋಮಶೇಖರ್, ಕಲ್ಲು ಗಣಿಗಾರಿಕೆಗಾಗಿ ಪರವಾನಗಿ ಪಡೆದ ಗುತ್ತಿಗೆದಾರರು ಸಂಜೆ 6 ಗಂಟೆ ಮೇಲೆ …
Read More »ಏಕರೂಪ ನಾಗರಿಕ ಸಂಹಿತೆ ಜಾರಿ ಶ್ರೀರಾಮಸೇನೆ ಸಂಪೂರ್ಣ ಬೆಂಬಲ;:ಮುತಾಲಿಕ್
ಧಾರವಾಡ : ಏಕರೂಪ ನಾಗರಿಕ ಸಂಹಿತೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಜಾರಿಗೆ ನಮ್ಮ ಸಂಘಟನೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಹೇಳಿದರು. ಧಾರವಾಡ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮಾನ ನಾಗರಿಕ ಸಂಹಿತೆಗೆ ನಾವು ಬೆಂಬಲ ಸೂಚಿಸುತ್ತೇವೆ. ಇದು ಜಾರಿಗೆ ಬರಬೇಕು. ಇದಕ್ಕಾಗಿ ಜುಲೈ 18 ರಿಂದ ಸಹಿ ಅಭಿಯಾನ ಆರಂಭಿಸುತ್ತೇವೆ. ಅವತ್ತು ಇಡೀ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಅಭಿಯಾನ ಆರಂಭ …
Read More »ನಟ ಮಾಸ್ಟರ್ ಆನಂದ್ ಪುತ್ರಿ ಹೆಸರು ಬಳಸಿ ಮೋಸದ ಆರೋಪ
ಬೆಂಗಳೂರು : ನಟ ಹಾಗೂ ನಿರೂಪಕ ಮಾಸ್ಟರ್ ಆನಂದ್ ಪುತ್ರಿ ಹೆಸರು ಬಳಸಿ ಹಣ ವಂಚನೆ ಎಸಗಿದ ಆರೋಪದಡಿ ನಿಶಾ ನರಸಿಂಹಪ್ಪ ಎಂಬುವರನ್ನ ಸದಾಶಿವನಗರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ವಿದ್ಯಾರಣ್ಯಪುರ ನಿವಾಸಿಯಾಗಿರುವ ನಿಶಾ ವಿರುದ್ಧ ನಟ ಆನಂದ್ ಪತ್ನಿ ಯಶಸ್ವಿನಿ ದೂರು ನೀಡಿದ ಮೇರೆಗೆ ಆರೋಪಿ ಮಹಿಳೆಯನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು. ವಿಚಾರಣೆ ವೇಳೆ ವಂಚನೆ ಎಸಗಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿ ನ್ಯಾಯಾಲಯದ ಆದೇಶದ ಮೇರೆಗೆ ಆರೋಪಿಯನ್ನ …
Read More »ಮುಂದಿನ ಬಾರಿಯೂ ಮೋದಿಯೇ ಪ್ರಧಾನಿಯಾಗಲಿ ಎಂದ ಶೋಭಾ ಕರಂದ್ಲಾಜೆ
ಮೈಸೂರು : ಮುಂದಿನ ವರ್ಷ ಆಷಾಢ ಮಾಸಕ್ಕೆ ಚಾಮುಂಡಿ ಬೆಟ್ಟಕ್ಕೆ ಬರುವ ಹೊತ್ತಿಗೆ ನರೇಂದ್ರ ಮೋದಿಯವರೇ 3ನೇ ಬಾರಿ ಪ್ರಧಾನ ಮಂತ್ರಿಯಾಗಲಿ ಎಂದು ತಾಯಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸಿಕೊಂಡಿದ್ದೇನೆ ಎಂದು ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆಯಾದ ಶೋಭಾ ಕರಂದ್ಲಾಜೆ ಹೇಳಿದರು. ಚಾಮುಂಡೇಶ್ವರಿಯ ಪರಮ ಭಕ್ತೆಯಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದರು. ಕಡೆಯ ಆಷಾಢ ಶುಕ್ರವಾರದಂದು ನಾಡದೇವತೆಯ ದರ್ಶನ ಪಡೆಯಲು ಆಗಮಿಸಿದ ಅವರು, …
Read More »ಮದ್ಯದ ಅಮಲಿನಲ್ಲಿ ಪತ್ನಿಯ ತಲೆಗೆ ಸುತ್ತಿಗೆಯಿಂದ ಹೊಡೆದು, ಕೊಲೆ ಮಾಡಿದಪತಿ
ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆ ಮದ್ಯದ ಅಮಲಿನಲ್ಲಿ ಪತ್ನಿಯ ತಲೆಗೆ ಸುತ್ತಿಗೆಯಿಂದ ಹೊಡೆದು, ಕೊಲೆ ಮಾಡಿದ ಆರೋಪದಡಿ ಪತಿಯನ್ನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಪತ್ನಿ ಚಿಕ್ಕತಾಯಮ್ಮನನ್ನ ಹತ್ಯೆ ಮಾಡಿದ್ದ ಆರೋಪದಡಿ ಪೊಲೀಸರು ಪತಿ ನಾಗರತ್ನಂ ನನ್ನ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ತಮಿಳುನಾಡು ಮೂಲದ ನಾಗರತ್ನಂ ಮತ್ತು ಚಿಕ್ಕತಾಯಮ್ಮ ದಂಪತಿ ಕಾಮಾಕ್ಷಿಪಾಳ್ಯ ಕರೆ ಕಲ್ಲು ಏರಿಯಾದಲ್ಲಿ ವಾಸ ಮಾಡುತ್ತಿದ್ದರು. ಇವರಿಗೆ ಮದುವೆಯಾಗಿ 29 ವರ್ಷಗಳಾಗಿವೆ. ದಂಪತಿಗೆ ಮೂವರು ಮಕ್ಕಳಿದ್ದು ಎಲ್ಲರಿಗೂ ವಿವಾಹವಾಗಿದೆ. ಆರೋಪಿ ನಾಗರತ್ನಂಗೆ …
Read More »ಉಗ್ರ ಬಸಿತ್ ಅಹ್ಮದ್ ದಾರ್ ಬಗ್ಗೆ ಸುಳಿವು ನೀಡಿದವರೆಗೆ 10 ಲಕ್ಷ ರೂಪಾಯಿ ಬಹುಮಾನ:N.I.A
ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ನಿವಾಸಿ, ಉಗ್ರ ಬಸಿತ್ ಅಹ್ಮದ್ ದಾರ್ ಎಂಬಾತನ ಬಂಧನಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ಬಸಿತ್ ದಾರ್ ಉಗ್ರ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (The Resistance Front – TRF)ನೊಂದಿಗೆ ನಂಟು ಹೊಂದಿದ್ದಾನೆ. ಈತನ ಬಂಧನಕ್ಕಾಗಿ ತನಿಖಾ ಸಂಸ್ಥೆ ಶೋಧ ಕಾರ್ಯ ನಡೆಸುತ್ತಿದೆ. ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ …
Read More »ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಬಂಡಾಯ ಸುಪ್ರೀಂಕೋರ್ಟ್ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ಗೆ ನೋಟಿಸ್ ಜಾರಿ ಮಾಡಿದೆ.
ನವದೆಹಲಿ: ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಿವಸೇನೆ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳ ತ್ವರಿತ ನಿರ್ಧಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಶಿವಸೇನೆ (ಯುಬಿಟಿ) ಶಾಸಕ ಸುನೀಲ್ ಪ್ರಭು ಅವರು ಸಲ್ಲಿಸಿದ ಮನವಿಯ ಮೇರೆಗೆ ಸುಪ್ರೀಂಕೋರ್ಟ್ ಶುಕ್ರವಾರ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ಗೆ ನೋಟಿಸ್ ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠವು ಪ್ರಭು ಅವರ ಮನವಿ ಮೇರೆ ನೋಟಿಸ್ ಜಾರಿ ಮಾಡಿದೆ. ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಎನ್ಸಿಪಿ …
Read More »ಕೋಲಾರದ ಟೊಮೆಟೊ ಮಾರುಕಟ್ಟೆ ವಿಸ್ತರಣೆ ಮಾಡಲು ಜಾಗ ಪಡೆದುಕೊಳ್ಳಲು ಕ್ರಮ : ಶಿವಾನಂದ ಪಾಟೀಲ್
ಬೆಂಗಳೂರು: ರಾಜ್ಯದಲ್ಲಿ ನಿರ್ಮಾಣಗೊಳ್ಳುವ ಜವಳಿ ಪಾರ್ಕ್ಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸುವುದು ಅನಿವಾರ್ಯ ಎಂದು ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಇಂದು ಪ್ರಶ್ನೋತ್ತರದ ವೇಳೆ ಕಾರ್ಕಳದ ಶಾಸಕ ಸುನೀಲ್ ಕುಮಾರ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಹಿಂದೆ ಶಿಗ್ಗಾಂವಿ ಮತ್ತು ಕಾರ್ಕಳಕ್ಕೆ 2020-21ನೇ ಸಾಲಿನಲ್ಲಿ ಜವಳಿ ಪಾರ್ಕ್ ಗಳನ್ನು ಮಂಜೂರು ಮಾಡಲಾಗಿತ್ತು. ಶಿಗ್ಗಾಂವಿ ಕ್ಷೇತ್ರದ ಜವಳಿ ಪಾರ್ಕ್ ಅನ್ನು 50 ಕೋಟಿ ರೂ. …
Read More »
Laxmi News 24×7