ಬೆಳಗಾವಿ: ಜಿಲ್ಲಾ ವೆಚ್ಚ ವೀಕ್ಷಣಾ ನೋಡಲ್ ಅಧಿಕಾರಿ ಪರಶುರಾಮ ದುಡಗುಂಟಿ ಇಂದು ಬೆಳಗಾವಿ ಉತ್ತರ ಕ್ಷೇತ್ರ ಹಾಗೂ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ, ಅರಳಿಕಟ್ಟಿ, ಹತ್ತರಗಿ ಹಾಗೂ ಬಾಚಿ ಅಂತರರಾಜ್ಯ ಚೆಕ್ ಪೋಸ್ಟಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಮತದಾನಕ್ಕೆ ಇನ್ನೇನು ನಾಲ್ಕು ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆ ತೀವ್ರಗೊಳಿಸುವಂತೆ ಚೆಕ್ ಪೋಸ್ಟ ಸಿಬ್ಬಂದಿಗಳಿಗೆ ನಿರ್ದೇಶಿಸಿದರು. ತಪಾಸಣೆ ಪರಿಣಾಮಕಾರಿ ಆಗಲು ಹೆಚ್ಚುವರಿ ತಪಾಸಣಾ ಅಧಿಕಾರಿಗಳು ಮತ್ತು ಪೊಲೀಸರ ಸಂಖ್ಯೆಯನ್ನು ಹೆಚ್ಚಿಸಲು ಜಿಲ್ಲಾಧಿಕಾರಿಗಳಿಗೆ …
Read More »ಹಾಡಹಗಲೇ ಕಾರ್ಪೊರೇಟರ್ ಪತಿಯನ್ನು ಗುಂಡಿಟ್ಟು ಹತ್ಯೆ
ವಿಜಯಪುರ: ವಿಧಾನಸಭಾ ಚುನಾವಣೆಗೆ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿಯಿರುವಾಗಲೇ ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು, ಮಹಿಳಾ ಕಾರ್ಪೊರೇಟರ್ ಪತಿಯನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿದೆ. ಹೈದರ್ ಅಲಿ ನದಾಫ್ ಗುಂಡಿನ ದಾಳಿಗೆ ಬಲಿಯಾದವರು. ಹೈದರ್ ವಾರ್ಡ್ ನಂಬರ್ 19ರ ಪಕ್ಷೇತರ ಪಾಲಿಕೆ ಸದಸ್ಯೆ ನತಾಶ್ ಅವರ ಪತಿ ಎಂದು ತಿಳಿದುಬಂದಿದೆ. ಹೈದರ್ ಅಲಿ ನದಾಫ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ರಕ್ತದ ಮಡುವಲ್ಲಿ ಬಿದ್ದಿದ್ದ …
Read More »ರಾಹುಲ್ ಗಾಂಧಿ ನಾಳೆ ಬೆಳಗಾವಿಗೆ:ಸತೀಶ್ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಾಳೆ ಬೆಳಗಾವಿಗೆ ಆಗಮಿಸುತ್ತಿದ್ದು, ಯಮಕನಮರಡಿ ಮತಕ್ಷೇತ್ರದ ಭೂತರಾಮನಹಟ್ಟಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಹಮ್ಮಿಕೊಂಡಿರುವ ಬೃಹತ್ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಯಮಕನಮರಡಿ ಮತಕ್ಷೇತ್ರದ ಭೂತರಾಮನಹಟ್ಟಿಯಲ್ಲಿ ನಡೆಯುವ ಕಾರ್ಯಕ್ರಮದ ಸ್ಥಳವನ್ನು ಪರಿಶೀಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ನಡೆಯುವ ಬೃಹತ್ ಸಾರ್ವಜನಿಕ ಪ್ರಚಾರ ಸಭೆಯಲ್ಲಿ25 ಸಾವಿರ ಜನ ಸೇರುವ ನಿರೀಕ್ಷೆಇದೆ ಎಂದರು. ರಾಜ್ಯದಲ್ಲಿ …
Read More »ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕ್ಷಮೆಯಾಚಿಸುತ್ತೇನೆ ಎಂದಸುಮಲತಾ
ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ 5 ದಿನಗಳು ಬಾಕಿಯಿದ್ದು, ರಾಜಕೀಯ ಪಕ್ಷಗಳ ನಾಯಕರು ಅಭ್ಯರ್ಥಿಗಳ ಪರ ಭರ್ಜರಿ ಮತಬೇಟೆಯಲ್ಲಿ ತೊಡಗಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಸಂಸದೆ ಸುಮಲತಾ ಇದ್ದಕ್ಕಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕ್ಷಮೆಯಾಚಿರುವ ಘಟನೆ ನಡೆದಿದೆ. ನೆಲಮಂಗಲದಲ್ಲಿ ಬಿಜೆಪಿ ಅಭ್ಯರ್ಥಿ ಸುಧಾ ಪರ ಚುನಾವಣ ಅಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ನನ್ನ ನಡೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಇರಲಿ ಎಂದು ಹೇಳಿದರು. ಅಂಬರೀಶ್ ಅವರು 27 ವರ್ಷಗಳ ಕಾಲ …
Read More »ಎಂಇಎಸ್ ಕಿಡಿಗೇಡಿಗಳ ಸಂಘಟನೆಎಂದ ಮುಖ್ಯಮಂತ್ರಿ ಬೊಮ್ಮಾಯಿ
ಹುಬ್ಬಳ್ಳಿ: ಎಂಇಎಸ್ ಕಿಡಿಗೇಡಿಗಳ ಸಂಘಟನೆ. ನಾವು ಅವರನ್ನು ನಿಭಾಯಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಚುನಾವಣೆ ವೇಳೆ ಎಮ್ಇಎಸ್ನವರು ಜನರ ಮನಸ್ಸನ್ನು ಕೆಡಿಸುವ ಗಿಮಿಕ್ ಮಾಡುತ್ತಾರೆ. ಬೆಳಗಾವಿ ಜನರಿಗೆ ಇದೆಲ್ಲಾ ಗೊತ್ತಿದೆ. ಇದಕ್ಕೆ ಜನರೇ ಉತ್ತರ ಕೊಡುತ್ತಾರೆ ಎಂದರು. ಜನ ತೀರ್ಮಾನ ತೆಗೆದುಕೊಂಡು ಎಮ್ಇಎಸ್ಅನ್ನು ಐದು ವರ್ಷ ಮನೆಗೆ ಕಳುಹಿಸುತ್ತಾರೆ ಎಂದರು. ನಮ್ಮ ಪ್ರಧಾನಿ ಕಾಂಗ್ರೆಸ್ನ ಪ್ರಧಾನಿಗಳಂತೆ ಇರಬೇಕಿಲ್ಲ ನಮ್ಮ ಪ್ರಧಾನಿ ಕಾಂಗ್ರೆಸ್ನ …
Read More »ಚುನಾವಣೆ ಪ್ರಚಾರ ವೇಳೆ ಬಾಲಚಂದ್ರ ಜಾರಕಿಹೊಳಿ ಅವರಿಗೆ ಅಪಾರ ಬೆಂಬಲ ಸೂಚಿಸಿದ ಮತದಾರರು…
ಮೂಡಲಗಿ- ಈ ಭಾಗದ ರೈತ ಸಮುದಾಯದ ಕೃಷಿ ಚಟುವಟಿಕೆಗಳನ್ನು ಪೂರಕವಾಗಲು ಘಟಪ್ರಭಾ ಬಲದಂಡೆ ಕಾಲುವೆ ಮೂಲಕ ನೀರು ಹರಿಸಿ ಅನುಕೂಲ ಮಾಡಿ ಕೊಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲ್ಲೂಕಿನ ದಂಡಾಪೂರ ಗ್ರಾಮದಲ್ಲಿ ತೆರಳಿ ಮತ ಯಾಚಿಸುತ್ತಿದ್ದ ಅವರು, ರೈತ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸುತ್ತಿರುವುದು ನನಗೆ ಖುಷಿಯಾಗುತ್ತಿದೆ ಎಂದು ಹೇಳಿದರು. ನಾನು ಶಾಸಕನಾಗಿ ಆಯ್ಕೆಯಾದಾಗಿನಿಂದ ಘಟಪ್ರಭಾ ಎಡದಂಡೆ ಮತ್ತು ಘಟಪ್ರಭಾ ಬಲದಂಡೆಯ …
Read More »ಬೆಳಗಾವಿ ದಕ್ಷಿಣ ಅಭಯ್ ಪಾಟೀಲ ರಿಗೆ ತೀವ್ರ ಪೈಪೋಟಿ ಕೊಡಲು ಮುಂದಾದ ರಮಾಕಾಂತ ಕೊಂಡಸ್ಕರ
ಬೆಳಗಾವಿ: ಇಲ್ಲಿನ ದಕ್ಷಿಣ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆ ಕಣ ರಂಗೇರುತ್ತಿದ್ದು, ಅಭಿವೃದ್ಧಿ ಮತ್ತು ಭಾಷೆ ಹೆಸರಿನಲ್ಲಿ ಮತದಾರರನ್ನು ಸೆಳೆಯುವ ಪ್ರಯತ್ನ ಮುಂದುವರಿದಿವೆ. ಬಿಜೆಪಿ ಅಭ್ಯರ್ಥಿ ಅಭಯ ಪಾಟೀಲ ಸತತ ಎರಡನೇ ಬಾರಿ ಗೆಲುವಿನ ಬಾವುಟ ಹಾರಿಸುವ ತವಕದಲ್ಲಿದ್ದಾರೆ. ಮತ್ತೊಂದೆಡೆ, ‘ಕಮಲ’ ಪಾಳಯದ ಗೆಲುವಿನ ಓಟಕ್ಕೆ ಬ್ರೇಕ್ ಹಾಕಲು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಅಭ್ಯರ್ಥಿ ರಮಾಕಾಂತ ಕೊಂಡೂಸ್ಕರ್ ಕಸರತ್ತು ನಡೆಸಿದ್ದಾರೆ. ಇಬ್ಬರು ಅಭ್ಯರ್ಥಿಗಳು ‘ಪ್ರಜಾವಾಣಿ’ಗೆ ನೀಡಿದ ಸಂದರ್ಶನ ಇಲ್ಲಿದೆ. ಕ್ಷೇತ್ರದ ಜನ ಅಭಿವೃದ್ಧಿ …
Read More »ಶಿವಸೇನಾ ಜತೆಗಿನ ಮೈತ್ರಿ ಮಹಾರಾಷ್ಟ್ರಕ್ಕೆ ಸೀಮಿತ: ಅಶೋಕ ಚವ್ಹಾಣ
ಬೆಳಗಾವಿ: ‘ಶಿವಸೇನಾ(ಉದ್ಧವ್ ಠಾಕ್ರೆ ಬಣ) ಜತೆಗಿನ ಮೈತ್ರಿ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತ. ರಾಜ್ಯದ ಹೊರಗೆ ನಾವು ಯಾವುದೇ ಮೈತ್ರಿ ಮಾಡಿಕೊಂಡಿಲ್ಲ’ ಎಂದು ಕಾಂಗ್ರೆಸ್ನ ಸ್ಟಾರ್ ಪ್ರಚಾರಕರೂ ಆಗಿರುವ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ ಚವ್ಹಾಣ ಹೇಳಿದರು. ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾವು ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸುತ್ತಿದ್ದೇವೆ. ಮತಗಳ ವಿಭಜನೆಯಾಗಿ ಬಿಜೆಪಿಗೆ ಲಾಭವಾಗದಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಸೇರಿದಂತೆ ಜಾತ್ಯತೀತ ಶಕ್ತಿಗಳು ನೋಡಿಕೊಳ್ಳಬೇಕು’ ಎಂದು ಹೇಳಿದರು. …
Read More »ಬುದ್ಧ ಪೂರ್ಣಿಮೆ: ಇತರರ ಕಲ್ಯಾಣಕ್ಕಾಗಿ ಅರ್ಥಪೂರ್ಣ ಜೀವನ ನಡೆಸಿ- ದಲೈ ಲಾಮಾ
ಬೌದ್ಧ ಧರ್ಮದ ಶ್ರೇಷ್ಠ ಧರ್ಮಗುರು ದಲೈ ಲಾಮಾ ಅವರು ಜಗತ್ತಿನಾದ್ಯಂತ ಇರುವ ಬೌದ್ಧ ಅನುಯಾಯಿಗಳಿಗೆ ಬುದ್ಧ ಪೂರ್ಣಿಮೆಯ ಶುಭಾಶಯ ತಿಳಿಸಿದ್ದಾರೆ. ಭಗವಾನ್ ಗೌತಮ ಬುದ್ಧ ಹುಟ್ಟಿದ, ಜ್ಞಾನೋದಯವಾದ ಹಾಗೂ ನಿರ್ವಾಣ ಹೊಂದಿದ ದಿನವನ್ನು ಭಾರತಾದ್ಯಂತ ಬುದ್ಧ ಪೂರ್ಣಿಮೆ ಎಂದು ಆಚರಿಸಲಾಗುತ್ತದೆ. ಈ ಶುಭ ಸಂದರ್ಭದಲ್ಲಿ ಬೌದ್ಧ ಧರ್ಮದ ಧರ್ಮಗುರು ದಲೈ ಲಾಮಾ ಅವರು ವಿಶ್ವಾದ್ಯಂತ ಇರುವ ತಮ್ಮ ಅನುಯಾಯಿಗಳಿಗೆ “ಇತರರ ಕಲ್ಯಾಣಕ್ಕಾಗಿ ಅರ್ಥಪೂರ್ಣವಾದ ಜೀವನವನ್ನು ನಡೆಸುವಂತೆ” ಸಂದೇಶ ನೀಡಿದ್ದಾರೆ. “ಭಗವಾನ್ …
Read More »ಮೈಸೂರಿನಲ್ಲಿ ಐಟಿ ದಾಳಿ: ಅಲಂಕಾರಿಕ ಗಿಡದಲ್ಲಿ ಸಿಕ್ತು 1 ಕೋಟಿ ಹಣ!
ಮೈಸೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯೊಬ್ಬರ ಸೋದರ ಎನ್ನಲಾಗಿರುವ ಕೆ.ಸುಬ್ರಮಣ್ಯ ರೈ ಎಂಬುವವರ ಮೈಸೂರಿನ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಈ ವೇಳೆ ಮನೆ ಮುಂಭಾಗದ ಅಲಂಕಾರಿಕ ಗಿಡದೊಳಗೆ ಹಣ್ಣಿನ ಬಾಕ್ಸ್ಗಳಲ್ಲಿ ಇಟ್ಟಿದ್ದ ಹಣವನ್ನು ಐಟಿ ಅಧಿಕಾರಿಗಳು ವಶಪಡಿಸಿಕೊಂಡಿರುವುದನ್ನು ಮೂಲಗಳು ಖಚಿತಪಡಿಸಿವೆ. ಕೆ.ಸುಬ್ರಹ್ಮಣ್ಯ ರೈ ಎಂಬುವವರು ಮೈಸೂರು ನಗರದ ನಿವಾಸಿಯಾಗಿದ್ದು, ಇವರ ಮನೆಯ ಮೇಲೆ ಸೋಮವಾರ ಸಂಜೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿ …
Read More »
Laxmi News 24×7