Breaking News

ಭಾರಿ ಗಾತ್ರದ ಮೂಲಂಗಿ ಬೆಳೆದ ರೈತ; ಒಂದೊಂದು ಮೂಲಂಗಿಗಳು ತಲಾ 5 ಕೆ.ಜಿ!

ಮಹಾರಾಷ್ಟ್ರ: ರೈತರೊಬ್ಬರು ತಮ್ಮ ಹೊಲದಲ್ಲಿ ಮೂಲಂಗಿಯನ್ನು ಬೆಳೆದಿದ್ದಾರೆ. ಈ ರೈತ ಬೆಳೆದಿರುವ ಒಂದೊಂದು ಮೂಲಂಗಿಯೂ ಬರೋಬ್ಬರಿ 5 ಕೆಜಿ ತೂಗುತ್ತಿವೆ. ಇದು ಈಗ ಆ ಪ್ರಾಂತ್ಯದ ಸಾರ್ವಜನಿಕರನ್ನು ಅಚ್ಚರಿಗೀಡು ಮಾಡಿದೆ. ನೀರಿನ ಕೊರತೆಯಿಂದ ನಿತ್ಯ ಬರಗಾಲ ಎದುರಿಸುತ್ತಿದ್ದರೂ ಮಹಾರಾಷ್ಟ್ರದ ಬೀಡು ಜಿಲ್ಲೆಯ ರೈತರು ಆಧುನಿಕ ಪದ್ಧತಿಯನ್ನು ಬಳಸಿಕೊಂಡು ಕೃಷಿಯಲ್ಲಿ ಕ್ರಾಂತಿ ಮಾಡುತ್ತಿದ್ದಾರೆ.   ಬೀಡ್ ಜಿಲ್ಲೆಯ ಕೂಲೆವಾಡಿ ಗ್ರಾಮದ ನಿವಾಸಿ ಜ್ಞಾನದೇವ ಶೇಷರಾವ್ ನೆಟ್ಗೆ ಈ ದಾಖಲೆ ತೂಕದ ಮೂಲಂಗಿ ಬೆಳೆದ …

Read More »

ಕಿಸಾನ್ ಸಮ್ಮಾನದಲ್ಲಿ ಬೆಳಗಾವಿ ಮುಂಚೂಣಿ

ಬೆಳಗಾವಿ :ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಲಾಭವನ್ನು ರೈತರಿಗೆ ತಲುಪಿಸುವಲ್ಲಿ ಬೆಳಗಾವಿ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿಯಲ್ಲಿದೆ. 5 ಲಕ್ಷಕ್ಕೂ ಅಧಿಕ ರೈತರ ಖಾತೆಗೆ 13ನೇ ಕಂತಿನ ಹಣ ಜಮೆ ಮಾಡಲಾಗಿದ್ದು, ರಾಜ್ಯದಲ್ಲಿಯೇ ಅತಿ ಹೆಚ್ಚು ರೈತರಿಗೆ ಕಿಸಾನ್ ಸಮ್ಮಾನ್ ದೊರಕಿಸಿಕೊಟ್ಟ ಜಿಲ್ಲೆಗಳಲ್ಲಿ ಬೆಳಗಾವಿ ಅಗ್ರಸ್ಥಾನ ಪಡೆದಿದೆ.   ಗಡಿ ಜಿಲ್ಲೆಯ ಬೆಳಗಾವಿಗೆ ಇತ್ತೀಚೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ ಒಟ್ಟು 8 …

Read More »

ಎದೆಹಾಲು ಕುಡಿಸುವಾಗ ಉಸಿರುಗಟ್ಟಿ ಮಗು ಸಾವು: ಮನನೊಂದು ಹಿರಿ ಮಗನ ಜತೆ ಬಾವಿಗೆ ಹಾರಿದ ತಾಯಿ

ಇಡುಕ್ಕಿ: ಎದೆಹಾಲು ಕುಡಿಯುವಾಗ ಉಸಿರುಗಟ್ಟಿ ನವಜಾತ ಶಿಶು ಮರಣ ಹೊಂದಿದರಿಂದ ಮನನೊಂದು ತಾಯಿ ಮತ್ತು ಹಿರಿಯ ಮಗ ಬಾವಿಗೆ ಹಾರಿ ಪ್ರಾಣ ಬಿಟ್ಟಿರುವ ಹೃದಯವಿದ್ರಾವಕ ಘಟನೆ ಇಡುಕ್ಕಿ ಜಿಲ್ಲೆಯ ಉಪ್ಪುಥರಾ ಪಂಚಾಯಿತಿಯ ಕೈಥಪಥಲ ಎಂಬಲ್ಲಿ ನಡೆದಿದೆ.   ಮಗು ಮೃತಪಟ್ಟ ಘಟನೆಯಿಂದ ತಾಯಿ ತುಂಬಾ ಮನನೊಂದಿದ್ದಳು ಎಂದು ಆಕೆಯ ಸಂಬಂಧಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮದ್ವೆ ಮೆರವಣಿಗೆಯಲ್ಲಿ ಪೊಲೀಸ್​ ಅಧಿಕಾರಿಯನ್ನು ಎಳ್ಕೊಂಡು ಮುತ್ತಿಟ್ಟ ಯುವಕ! ಮುಂದೇನಾಯ್ತು ನೀವೇ ನೋಡಿ. ಮೃತಳನ್ನು ಲಿಜಿ …

Read More »

ತಾಯಿಯನ್ನು ಕೊಂದ ಮಗಳು; ಮೃತದೇಹವನ್ನು 3 ತಿಂಗಳು ಮನೆಯಲ್ಲೇ ಬಚ್ಚಿಟ್ಟಳು!

ಮಹಾರಾಷ್ಟ್ರ: ಕಳೆದ ಡಿಸೆಂಬರ್​ನಲ್ಲಿ ಮಹಿಳೆಯೊಬ್ಬಳ ಕೊಲೆಗೆ ಸಂಬಂಧಿಸಿದಂತೆ ಕಲಾಚೌಕಿ ಪೊಲೀಸರು ಆಕೆಯ ಮಗಳನ್ನು ಬಂಧಿಸಿದ್ದಾರೆ. ವೀಣಾ(55) ಮಗಳಿಂದ ಹತ್ಯೆಗೀಡಾದ ಮಹಿಳೆ. ರಿಂಪಲ್ ಜೈನ್(24) ಕೊಲೆ ಆರೋಪಿಯಾಗಿದ್ದು, ತಾಯಿಯನ್ನೇ ಹತ್ಯೆ ಮಾಡಿದ್ದಾಳೆ.   ತಾಯಿಯನ್ನು ಹತ್ಯೆ ಮಾಡಿದ ಬಳಿಕ ರಿಂಪಲ್ ಜೈನ್, ಮೃತದೇಹವನ್ನು ಹಲವು ತುಂಡುಗಳನ್ನಾಗಿ ಕತ್ತರಿಸಿ, ತನ್ನ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದಾಳೆ. ಶವ ಕೊಳೆತು ವಾಸನೆ ಬರಬಾರದೆಂದು 200ಕ್ಕೂ ಅಧಿಕ ಸುಗಂಧದ್ರವ್ಯ ಹಾಗೂ ರೂಂ ಪ್ರಶ್ನರ್​ಗಳನ್ನು ಬಳಸಿದ್ದಾಳೆ. ತನ್ನ ಕೃತ್ಯದ ಬಗ್ಗೆ ಯಾರಿಗೂ …

Read More »

ಚುನಾವಣಾ ವೆಚ್ಚಕ್ಕೆ 210 ಕ್ವಿಂಟಲ್‌ ಕಡಲೆ ಉಡುಗೊರೆ

ಗಜೇಂದ್ರಗಡ (ಗದಗ ಜಿಲ್ಲೆ): ರೋಣ ಮತಕ್ಷೇತ್ರದ ಶಾಸಕ ಕಳಕಪ್ಪ ಜಿ.ಬಂಡಿ ಅವರ ಚುನಾವಣಾ ವೆಚ್ಚಕ್ಕಾಗಿ ತಾಲ್ಲೂಕಿನ ಹಾಲಕೇರಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು 210 ಕ್ವಿಂಟಲ್‌ ಕಡಲೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಹಾಲಕೇರಿ ಗ್ರಾಮದಿಂದ ಐದು ಟ್ರ್ಯಾಕ್ಟರ್‌ಗಳಲ್ಲಿ ತಂದ ಕಡಲೆಯನ್ನು ಪಟ್ಟಣದ ಬಸ್ ನಿಲ್ದಾಣದಿಂದ ಮೆರವಣಿಗೆ ಮೂಲಕ ನೂರಾರು ಕಾರ್ಯಕರ್ತರು ಬುಧವಾರ ಪಟ್ಟಣದಲ್ಲಿ ನಡೆದ ಬಿಜೆಪಿಯ ‘ವಿಜಯ ಸಂಕಲ್ಪ ಯಾತ್ರೆ’ ವೇದಿಕೆ ಕಡೆಗೆ ತಂದರು. ಮೆರವಣಿಗೆಗೆ ಡೊಳ್ಳು ಕುಣಿತ, ಸಂಗೀತ ವಾದ್ಯಗಳು …

Read More »

ಸಾರಿಗೆ ನೌಕರರಿಗೆ ಶೇ 15ರಷ್ಟು ವೇತನ ಹೆಚ್ಚಳ: ಸಚಿವ ಶ್ರೀರಾಮುಲು ಹೇಳಿಕೆ

ಬೆಂಗಳೂರು: ಸಾರಿಗೆ ಇಲಾಖೆ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಗುರುವಾರ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಶೇ.15 ರಷ್ಟು ವೇತನ ಹೆಚ್ಚಳ ಮಾಡೋಕೆ ನಿರ್ಧಾರ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.   ಈ ಕುರಿತು ಟ್ವೀಟ್ ಮಾಡಿರುವ ಅವರು, ಕಳೆದ 27 ವರ್ಷಗಳಲ್ಲಿ ಅತ್ಯಧಿಕ ವೇತನ ಪರಿಷ್ಕರಣೆಯನ್ನು ನಮ್ಮ ಸರ್ಕಾರ ಈಗ ಮಾಡಿದೆ ಎಂದು ಹೇಳಿದ್ದಾರೆ. ಈ ನಿರ್ಧಾರದಿಂದ ರಾಜ್ಯದ ಎಲ್ಲ ನಾಲ್ಕು ರಸ್ತೆ …

Read More »

7.50 ಟನ್ ತೂಕದ ವಾಹನಗಳ ಸಂಚಾರಕ್ಕೆ ಅವಕಾಶ: ಮುಷ್ಕರ ಕೈಬಿಟ್ಟ ಲಾರಿ ಮಾಲೀಕರು

ಬೆಂಗಳೂರು: ನಗರದಲ್ಲಿ 7.50 ಟನ್ ತೂಕದವರೆಗಿನ ವಾಹನಗಳ ಸಂಚಾರಕ್ಕೆ ಅವಕಾಶ ಸಿಕ್ಕಿದ್ದು, ಲಾರಿ ಮಾಲೀಕರು ಹಾಗೂ ಏಜೆಂಟರು ತಾವು ಕರೆ ನೀಡಿದ್ದ ಮುಷ್ಕರವನ್ನು ಕೈ ಬಿಟ್ಟಿದ್ದಾರೆ. ನಗರದಲ್ಲಿ ನಿತ್ಯವೂ ಬೆಳಿಗ್ಗೆ 8ರಿಂದ 11 ಗಂಟೆವರೆಗೆ ಹಾಗೂ ಸಂಜೆ 4ರಿಂದ 8 ಗಂಟೆವರೆಗೆ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು. ಇದನ್ನು ಖಂಡಿಸಿದ್ದ ರಾಜ್ಯ ಲಾರಿ ಮಾಲೀಕರು ಹಾಗೂ ಏಜೆಂಟರ ಸಂಘ, ಮಾರ್ಚ್ 16ರಂದು ತಡರಾತ್ರಿಯಿಂದ ಮುಷ್ಕರಕ್ಕೆ ಕರೆ ನೀಡಿತ್ತು. ರಾಜ್ಯ ಸರ್ಕಾರದ ಸೂಚನೆಯಂತೆ …

Read More »

ಕುಷ್ಟಗಿಯಲ್ಲಿ ಪ್ರತ್ಯೇಕ ಅಪಘಾತ: ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವ್ಯಕ್ತಿ ಮೃತ್ಯು

ಕುಷ್ಟಗಿ: ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರತ್ಯೇಕ ಬೈಕ್ ಅಪಘಾತದಲ್ಲಿ ಓರ್ವ ಯುವಕ ದುರ್ಮರಣಕ್ಕೀಡಾಗಿದ್ದು ಇಬ್ಬರು ಬೈಕ್ ಸವಾರರು ಗಾಯಗೊಂಡಿರುವ ಘಟನೆ ನಡೆದಿದೆ.   ಕುಷ್ಟಗಿ – ಗಜೇಂದ್ರಗಡ ರಾಜ್ಯ ಹೆದ್ದಾರಿಯಲ್ಲಿ ಹಿರೇಬನ್ನಿಗೋಳ ಸಮೀಪ ಎತ್ತಿನ ಬಂಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಮೃತನಾಗಿದ್ದಾನೆ. ಕುಷ್ಟಗಿಯ ವಿಜಯಕುಮಾರ ಮನ್ನೇರಾಳ (22) ಮೃತ ದುರ್ದೈವಿ. ಮೃತ ಯುವಕ ವಿಜಯಕುಮಾರ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಶವಗಾರದಲ್ಲಿರಿಸಲಾಗಿದೆ. ಕಳೆದ ಫೆ.18 …

Read More »

ಗಡಿ ಜನರಿಗೆ ಮಹಾರಾಷ್ಟ್ರ “ಆರೋಗ್ಯ ಭಾಗ್ಯ’ ವಿವಾದ

ಬೆಳಗಾವಿ/ಬೆಂಗಳೂರು: ಮಹಾರಾಷ್ಟ್ರ ವಿಚಾರದಲ್ಲಿ ತನ್ನ ಮೊಂಡುತನ ಪ್ರದರ್ಶಿಸುತ್ತ ಬಂದಿರುವ ಮಹಾರಾಷ್ಟ್ರ ಈಗ ಕರ್ನಾಟಕದ 865 ಹಳ್ಳಿ ಮತ್ತು ಪಟ್ಟಣಗಳಲ್ಲಿ ಮಹಾತ್ಮಾ ಜ್ಯೋತಿ ಬಾ ಫ‌ುಲೆ ಜನ ಆರೋಗ್ಯ ಯೋಜನೆ ಜಾರಿಗೆ ತರುವುದಾಗಿ ಹೇಳುವ ಮೂಲಕ ಗಡಿ ಕಿಚ್ಚು ಹಚ್ಚಿದೆ. ಮಹಾ ಸರಕಾರದ ಈ ಕ್ರಮದ ವಿರುದ್ಧ ರಾಜ್ಯದಲ್ಲಿ ಕನ್ನಡಪರ ಸಂಘಟನೆಗಳು, ರಾಜಕೀಯ ಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗಮನಾರ್ಹವೆಂದರೆ, ಸುಪ್ರೀಂ ಕೋರ್ಟ್‌ನಲ್ಲಿ ಗಡಿ ವಿವಾದ ಕುರಿತಂತೆ ವಿಚಾರಣೆ ಹಂತದಲ್ಲಿರುವಂತೆಯೇ ರಾಜ್ಯದ ಐದು …

Read More »

ಈ ಬಾರಿ ಬಳ್ಳಾರಿ ಗ್ರಾಮೀಣದಿಂದ ಸ್ಪರ್ಧೆ: ಸಚಿವ ಶ್ರೀರಾಮುಲು

ಬಳ್ಳಾರಿ: ಈ ಬಾರಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪ ರ್ಧಿಸುತ್ತೇನೆಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಿದ್ದೇನೆ. ಇದೀಗ ಮತ್ತೊಮ್ಮೆ ಇದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಈ ಕುರಿತು ಪಕ್ಷದ ಹೈಕಮಾಂಡ್‌ ಗಮನಕ್ಕೂ ತಂದಿದ್ದೇನೆ. ಸಂಡೂರು ಅಥವಾ ಬಳ್ಳಾರಿ ಗ್ರಾಮೀಣ ಕ್ಷೇತ್ರ ಎಂಬ ಆಯ್ಕೆಯಿತ್ತು. ಆದರೆ, ಬಹುತೇಕ ಎಲ್ಲರ ಅಪೇಕ್ಷೆಯ ಮೇರೆಗೆ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು. ಮಾಜಿ …

Read More »