ಹುಬ್ಬಳ್ಳಿ: ‘ಕೃಷಿ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿ, ಆಕರ್ಷಕ ಬ್ರ್ಯಾಂಡ್ ಮೂಲಕ ಮಾರಾಟ ಮಾಡಿದರೆ ರೈತರ ಆದಾಯ ಹತ್ತಾರುಪಟ್ಟು ಹೆಚ್ಚುತ್ತದೆ’ ಎಂದು ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್. ಪಾಟೀಲ ಹೇಳಿದರು. ‘ರೈತರು ಮತ್ತು ನೀರಾವರಿ ಅಭಿವೃದ್ಧಿ’ ಕುರಿತು ಮಾತನಾಡಿದ ಅವರು, ‘ಹಸಿರು ಕ್ರಾಂತಿ ಆದ ನಂತರ ಕೃಷಿ ಉತ್ಪಾದನೆ ಹತ್ತು ಪಟ್ಟು ಹೆಚ್ಚಾಗಿದೆ. ಆದರೆ, ರೈತರ ಆದಾಯ ಮಾತ್ರ ಏರಿಕೆ ಆಗಿಲ್ಲ. ರೈತರ ಆದಾಯ ದ್ವಿಗುಣಗೊಳಿಸಬೇಕು ಎಂಬುದು ಪ್ರಧಾನಿ ನರೇಂದ್ರ …
Read More »ಅಪಘಾತ- ವಾಹನಕ್ಕೆ ವಿಮೆ ಇರದಿದ್ದರೆ ಪರಿಹಾರ ಮಾಲೀಕರ ಹೆಗಲಿಗೆ: ಹೈಕೋರ್ಟ್
ಬೆಂಗಳೂರು: ‘ಅಪಘಾತ ನಡೆದ ಸಂದರ್ಭದಲ್ಲಿ ಘಟನೆಗೆ ಕಾರಣವಾದ ವಾಹನಕ್ಕೆ ವಿಮೆ ನವೀಕರಣವಾಗಿಲ್ಲ ಎಂದಾದರೆ ನಷ್ಟಕ್ಕೆ ಒಳಗಾದವರಿಗೆ ಮಾಲೀಕರೇ ಪರಿಹಾರ ನೀಡಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ. ‘ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ವಾಹನದ ಮಾಲೀಕರೇ ಪರಿಹಾರ ನೀಡಬೇಕು’ ಎಂಬ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕೆ. ಸೋಮಶೇಖರ್ ಮತ್ತು ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಅವರಿದ್ದ ವಿಭಾಗೀಯ ಈ ಆದೇಶ ನೀಡಿದೆ. ‘ಅಪಘಾತ ನಡೆಯುವ ಮುನ್ನವೇ ವಿಮೆ ನವೀಕರಣವಾಗಿದ್ದರೂ, ಅದು …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ (60) ಹೃದಯಾಘಾತದಿಂದನಿಧನ
ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ (60) ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ. ನಗದಲ್ಲಿನ ಅವರ ಮನೆಯಲ್ಲಿ ಶುಕ್ರವಾರ ತಡರಾತ್ರಿಯಲ್ಲಿ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ಮೂಲಗಳು ತಿಳಿಸಿವೆ. 1983 ರಲ್ಲಿ ಕಾಂಗ್ರೆಸ್ ಸೇರುವ ಮೂಲಕ ರಾಜಕೀಯ ರಂಗಕ್ಕೆ ಪ್ರವೇಶಿಸಿದ್ದ ಅವರು, ಸಂತೇಮರಹಳ್ಳಿ ಕ್ಷೇತ್ರದಿಂದ ಒಂದು ಶಾಸಕರಾಗಿ ಆಯ್ಕೆಯಾಗಿದ್ದರು. 2004 ರಲ್ಲಿ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು 1 ಮತದ ಅಂತರದಿಂದ ಗೆದ್ದಿದ್ದರು. 2008 ರಲ್ಲಿ ಎರಡನೇ ಬಾರಿ ಕೊಳ್ಳೇಗಾಲ …
Read More »ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಹಿರೇಬೂದನೂರ ಗ್ರಾಮದಲ್ಲಿ ಶ್ರೀ ಡೆಂಗಿ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ …
Read More »3 ಪಟ್ಟು ಅಧಿಕ ದರಕ್ಕೆ ಕಸ ಗುಡಿಸುವ ಯಂತ್ರ ಖರೀದಿ!
ಬೆಂಗಳೂರು: ಶುಭ್ರ ಬೆಂಗಳೂರು ಯೋಜನೆ ಅಡಿಯಲ್ಲಿ ಬಿಬಿಎಂಪಿ ತಲಾ 2 ಕೋಟಿ ರೂ. ಮೊತ್ತದ 30 ಮೆಕ್ಯಾನಿಕಲ್ ಸ್ವೀಪಿಂಗ್ ವಾಹನ ಖರೀದಿಗೆ ಮುಂದಾಗಿದೆ. ಆದರೆ, ಯಂತ್ರಗಳಿಗೆ ನಿಗದಿ ಮಾಡಿರುವ ಮೊತ್ತದ ಬಗ್ಗೆ ಇದೀಗ ಅಪಸ್ವರ ಎದ್ದಿದೆ. ನಗರದಲ್ಲಿ 587.58 ಕಿ.ಮೀ. ಉದ್ದದ 156 ಮುಖ್ಯ ರಸ್ತೆಗಳು ಹಾಗೂ 735.50 ಕಿ.ಮೀ. ಉದ್ದದ 316 ಉಪಮುಖ್ಯ ರಸ್ತೆಗಳಿವೆ. ಅವುಗಳಲ್ಲಿ ಶೇಖರಣೆಯಾಗುವ ದೂಳನ್ನು ಗುಡಿಸಿ ಸ್ವತ್ಛಗೊಳಿಸುವ ಸಲುವಾಗಿ ಮೆಕ್ಯಾನಿಕಲ್ ಸ್ವೀಪಿಂಗ್ ಯಂತ್ರಗಳನ್ನು ಖರೀದಿಸಲಾಗುತ್ತಿದೆ. ಕಳೆದ …
Read More »ಯುವತಿ ಜತೆಗಿನ ನಗ್ನ ವಿಡಿಯೋ ತೋರಿಸಿ ವಂಚನೆ: ಇಬ್ಬರು ಯುವತಿಯರು ಸೇರಿ 6 ಮಂದಿ ಬಂಧನ
ಬೆಂಗಳೂರು: ವೆಬ್ಸೈಟ್ ಮೂಲಕ ಪರಿಚಯವಾದ ವ್ಯಕ್ತಿಗಳನ್ನು ಮನೆಗೆ ಕರೆಸಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಇಬ್ಬರು ಯುವತಿಯರು ಸೇರಿ 6 ಮಂದಿಯ ತಂಡವನ್ನು ಬೇಗೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಅನಿಲ್ ಕುಮಾರ್ (37), ತುಮಕೂರಿನ ಗಿರೀಶ್ (36), ಬ್ಯಾಟರಾಯನಪುರ ನಿವಾಸಿ ಶಿವಶಂಕರ್(50) ಮತ್ತು ರಾಜಾಜಿನಗರ ನಿವಾಸಿ ರಾಮಮೂರ್ತಿ(37) ಹಾಗೂ ಇಬ್ಬರು ಯುವತಿ ಯರನ್ನು ಬಂಧಿಸಲಾಗಿದೆ. ಆರೋಪಿಗಳು 39 ವರ್ಷದ ರಾಜಶ್ರೀಲೇಔಟ್ ನಿವಾಸಿ ಶ್ರೀನಿವಾಸ್ ಎಂಬುವರಿಗೆ 10 ಲಕ್ಷ ರೂ.ಗೆ ಬೇಡಿಕೆ ಇಟ್ಟು, …
Read More »ಯಲ್ಲಮ್ಮನ ಕೊಳ್ಳದಿಂದ ಬನಶಂಕರಿಯವರೆಗೂ ಮಹದಾಯಿ ನೀರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಗದಗ, ನರಗುಂದ: ಕಳಸಾ ಬಂಡೂರಿ, ಮಹಾದಾಯಿ ಯೋಜನೆಗೆ ನಮ್ಮ ಪ್ರಧಾನಮಂತ್ರಿಗಳು ಈಗಾಗಲೇ ಡಿಪಿಆರ್ ಗೆ ಒಪ್ಪಿಗೆ ಕೊಟ್ಟಿದ್ದಾರೆ. ಶೀಘ್ರವೇ ಪರಿಸರ ಅನುಮತಿ ದೊರೆಯಲಿದ್ದು, ಯಲ್ಲಮ್ಮನ ಕೊಳ್ಳದಿಂದ ಬನಶಂಕರಿಯವರೆಗೂ ಮಹದಾಯಿ ನೀರು ಮಲಪ್ರಭಾ ನದಿಗೆ ಹರಿಸದೇ ನಾವು ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಇಂದು ನರಗುಂದದಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಳಸಾ- ಬಂಡೂರಿ, ಮಹದಾಯಿ ಯೋಜನೆಗಾಗಿ ಕಲ್ಲು-ಮುಳ್ಳು, ಹಳ್ಳ ನೋಡದೇ ನಾನು ನರಗುಂದದಲ್ಲಿ …
Read More »ಲೋಕಾರ್ಪಣೆಗೆ ಸಿದ್ಧಗೊಂಡ ಎಂ.ಬಿ.ಪಾಟೀಲ್ ಕಂಚಿನ ಪ್ರತಿಮೆ
ವಿಜಯಪುರ : ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಶಾಸಕರೂ ಆಗಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರ ಕಂಚಿನ ಪುತ್ಥಳಿ ಲೋರ್ಕಾಪಣೆಗೆ ಸಿದ್ಧಗೊಂಡಿದೆ. ಜಲಸಂಪನ್ಮೂಲ ಸಚಿವರಾಗಿ ತಾವು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರದಲ್ಲಿ ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸಿರುವ ಕೃತಜ್ಞತೆಗಾಗಿ ಬಬಲೇಶ್ವರ ತಾಲೂಕಿನ ಸಂಗಾಗಪುರ ಎಸ್.ಎಚ್.ಗ್ರಾಮದ ಜನರು ಎಂ.ಬಿ.ಪಾಟೀಲ ಅವರ ಪುತ್ಥಳಿ ನಿರ್ಮಿಸಲು ಮುಂದಾಗಿದ್ದಾರೆ. ಈಗಾಗಲೇ ಎಂ.ಬಿ.ಪಾಟೀಲ ಅವರ ಕಂಚಿನ ಪ್ರತಿಮೆ ಪೂರ್ಣಗೊಂಡಿದ್ದು, ಮಾ.17 ರಂದು ಲೋಕಾರ್ಪಣೆಗೆ ಸಿದ್ಧಗೊಂಡಿದೆ. ಪುತ್ಥಳಿ ಅನಾವರಣ …
Read More »ರಬಕವಿ-ಬನಹಟ್ಟಿ: ನಗರಸಭೆಯ ಕಡತಗಳು ರಸ್ತೆಯಲ್ಲಿ ತಿರುಗಾಡುತ್ತಿವೆ
ರಬಕವಿ-ಬನಹಟ್ಟಿ: ನಗರಸಭೆಯ ಸಿಬ್ಬಂದಿ ವರ್ಗದ ಬೇಜವಾಬ್ದಾರಿಯಿಂದ ಮತ್ತು ಅಸಹಾಯಕತೆಯಿಂದಾಗಿ ನಗರಸಭೆಯ ಪ್ರಮುಖ ಕಡತಗಳು ಇಂದು ರಸ್ತೆಯಲ್ಲಿ ತಿರುಗಾಡುತ್ತಿವೆ. ಮುಂದಿನ ದಿನಗಳಲ್ಲಿ ಈ ಕುರಿತು ಸಿಬ್ಬಂದಿ ವರ್ಗದವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುವುದರ ಜೊತೆಗೆ ನಗರಸಭೆಯ ಕಡತಗಳು ಸೋರಿಕೆಯಾಗದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ರಬಕವಿ ಬನಹಟ್ಟಿ ನಗರಸಭೆಯ ಆಡಳಿತ ಪಕ್ಷದ ಸದಸ್ಯರಾದ ಯಲ್ಲಪ್ಪ ಕಟಗಿ, ಅರುಣ ಬುದ್ನಿ, ಪ್ರಭಾಕರ ಮುಳೇದ ಮತ್ತು ಶಿವಾನಂದ ಬುದ್ನಿ ಅಧಿಕಾರಿಗಳಿಗೆ ತಿಳಿಸಿದರು. ಶುಕ್ರವಾರ ನಡೆದ …
Read More »ದೇವಲತ್ತಿ ಲೋಕೋಳಿ- ಲಕ್ಕೇಬೈಲ್ ಮಾರ್ಗದಿಂದ ವಿದ್ಯುತ್ ಸರಬರಾಜು:ಡಾ. ಸೋನಾಲಿ
ಬೆಳಗಾವಿ: ಖಾನಾಪುರ ತಾಲ್ಲೂಕಿನ ದೇವಲತ್ತಿ ಗ್ರಾಮದ ಜನರ ಬಹುದಿನಗಳ ಬೇಡಿಕೆಯನ್ನು ಕೊನೆಗೂ ಈಡೇರಿಸಿ ಕೊಡುವಲ್ಲಿ ಬಿಜೆಪಿ ಗ್ರಾಮೀಣ ಉಪಾಧ್ಯಕ್ಷೆ ಡಾ. ಸೋನಾಲಿ ಸರ್ನೋಬತ್ ಯಶಸ್ವಿಯಾಗಿದ್ದಾರೆ. ಖಾನಾಪುರ ತಾಲ್ಲೂಕಿನ ದೇವಲತ್ತಿ ಗ್ರಾಮಕ್ಕೆ ವಿದ್ಯುತ್ ಸರಬರಾಜು ಆಗುತ್ತಿದ್ದರೂ ಈ ಮಾರ್ಗ ಪದೇ ಪದೇ ದುರಸ್ತಿಗೆ ಈಡಾಗುತ್ತಿರುವುದರಿಂದ ದೇವಲತ್ತಿ ಗ್ರಾಮದವರು ತೀವ್ರ ಸಮಸ್ಯೆ ಅನುಭವಿಸುವಂತಾಗಿತ್ತು. ಈ ಭಾಗದ ವಿದ್ಯಾರ್ಥಿಗಳು ವ್ಯಾಸಂಗಕ್ಕೆ ಪಡಿಪಾಟಲು ಪಡುವಂತಾಗಿತ್ತು. ಹಾಗಾಗಿ ಈ ಜನರ ಸಮಸ್ಯೆ ಬಗ್ಗೆ ತಿಳಿದು ಜನರ ನೋವಿಗೆ ಸ್ಪಂದಿಸಿದ …
Read More »