ಬೆಂಗಳೂರು: ರಾಜ್ಯದಲ್ಲಿನ ಕನಿಷ್ಠ 40 ವಿಧಾನಸಭಾ ಕ್ಷೇತ್ರಗಳಲ್ಲಿ ಕುರುಬ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ರಾಜಕೀಯ ಪಕ್ಷಗಳಿಗೆ ಒತ್ತಾಯಿಸಿದೆ. ‘ರಾಜ್ಯದಲ್ಲಿ ಅತಿ ದೊಡ್ಡ ಸಮುದಾಯವಾಗಿದ್ದರೂ ಕುರುಬರಿಗೆ ರಾಜಕೀಯ ಪ್ರಾತಿನಿಧ್ಯ ದೊರೆತಿಲ್ಲ. 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸಮುದಾಯದ ಮತದಾರರು ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ನಿರ್ಣಾಯಕರಾಗಿದ್ದಾರೆ. 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕುರುಬ ಸಮುದಾಯದ ಅಭ್ಯರ್ಥಿಗಳು ಗೆಲ್ಲುವ ಸಾಮರ್ಥ್ಯ ಇದ್ದರೂ ಹಲವು ದಶಕಗಳಿಂದ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಪ್ರಾತಿನಿಧ್ಯ …
Read More »ವಿಧಾನಸಭೆ ಚುನಾವಣೆ: ಕಾಂಗ್ರೆಸ್ನ 120 ಕ್ಷೇತ್ರಗಳ ಪಟ್ಟಿ 20ರೊಳಗೆ ಪ್ರಕಟ?
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ 120 ಕ್ಷೇತ್ರಗಳಿಗೆ ಇದೇ 20ರ ಒಳಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಎರಡು ದಿನಗಳಿಂದ ನಡೆಯುತ್ತಿರುವ ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ಈ ಕ್ಷೇತ್ರಗಳಿಗೆ ಸಂಭವನೀಯ ಒಬ್ಬ ಅಭ್ಯರ್ಥಿಯ ಹೆಸರು ಅಂತಿಮಗೊಳಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 70 ಕ್ಷೇತ್ರಗಳಿಗೆ ಎರಡು-ಮೂರು ಅಭ್ಯರ್ಥಿಗಳಿದ್ದಾರೆ. ಆ ಕ್ಷೇತ್ರಗಳಿಗೂ ಸಂಭವನೀಯ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಸಮಿತಿಯು ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಪಕ್ಷದ ವರಿಷ್ಠರಿಗೆ …
Read More »ಯಶಸ್ವಿನಿ ಯೋಜನೆ ನೋಂದಣಿ: ಮಾರ್ಚ್ 31ರವರೆಗೆ ಅವಧಿ ವಿಸ್ತರಣೆ
ಬೆಂಗಳೂರು: ಯಶಸ್ವಿನಿ ಯೋಜನೆಯ ನೋಂದಣಿಗೆ ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ. 2022-23ನೇ ಸಾಲಿನಿಂದ ಈ ಯೋಜನೆಯನ್ನು ಮರು ಜಾರಿಗೊಳಿಸಲಾಗಿದ್ದು, ಮೂರನೇ ಬಾರಿ ನೋಂದಣಿಯ ಅವಧಿಯನ್ನು ವಿಸ್ತರಿಸಲಾಗಿದೆ. ಹೊಸ ಸದಸ್ಯರ ನೋಂದಣಿಗೆ 2023ರ ಫೆ.28 ಕೊನೆಯ ದಿನವಾಗಿತ್ತು. ಈ ಯೋಜನೆ ಅಡಿಯಲ್ಲಿ 30 ಲಕ್ಷ ಸದಸ್ಯರನ್ನು ನೋಂದಾಯಿಸಲು ಗುರಿ ನಿಗದಿಪಡಿಸಲಾಗಿತ್ತು. ಇಲ್ಲಿಯವರೆಗೆ 34.52 ಲಕ್ಷ ಸದಸ್ಯರನ್ನು ನೋಂದಾಯಿಸಿಕೊಳ್ಳಲಾಗಿದೆ. 2023ರ ಜನವರಿ 1ರಿಂದ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಫಲಾನುಭವಿಗಳಿಗೆ ಚಿಕಿತ್ಸೆ ಆರಂಭಿಸಲಾಗಿದ್ದು, …
Read More »ಹೊಲದಲ್ಲಿ ಹಾರಿ ಬಂತು ಸಂದೇಹಾಸ್ಪದ ಬೆಲೂನ್; ಸುದ್ದಿ ಕೇಳಿ ಬೆಚ್ಚಿಬಿತ್ತು ಬೈಲಹೊಂಗಲ ಜನತೆ !
ಬೈಲಹೊಂಗಲ: ತಾಲೂಕಿನ ಗದ್ದಿಕರವಿನಕೊಪ್ಪ ಗ್ರಾಮದ ಹೊಲವೊಂದರಲ್ಲಿ ಪತ್ತೆಯಾಗಿರುವ ಬೆಲೂನ್ ಒಂದು ಜನತೆ ಬೆಚ್ಚಿಬೀಳುವಂತೆ ಮಾಡಿದೆ. ಇತ್ತೀಚೆಗಷ್ಟೇ ಚೀನಾ ಹಾರಿ ಬಿಟ್ಟಿದ್ದು ಎನ್ನಲಾದ ಗೂಢಚಾರ ಬೆಲೂನ್ ಗಳು ಅಮೆರಿಕ ಮತ್ತಿತರೆಡೆ ಪತ್ತೆಯಾಗಿರುವ ಹಾಗೂ ಅವುಗಳನ್ನು ವೈಮಾನಿಕ ದಾಳಿಯಿಂದ ನಾಶಪಡಿಸಿದ ಘಟನೆಗಳು ಸ್ಮೃತಿಪಟಲದಿಂದ ಮಾಸಿ ಹೋಗುವ ಮುನ್ನ ವಿಚಿತ್ರ ಬೆಲೂನ್ ಹೊಲದಲ್ಲಿ ಹಾರಿಬಂದಿರುವುದು ನಾನಾ ರೀತಿಯ ಸಂದೇಹಗಳು, ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿತು. ಬಿಳಿಯ ಬಣ್ಣದ ಈ ಬೆಲೂನ್ ನಲ್ಲಿ ಬ್ಯಾಟರಿ ಹಾಗೂ …
Read More »ನಾಳೆಯಿಂದ 29ರವರೆಗೆ ದ್ವಿತೀಯ ಪಿಯು ಪರೀಕ್ಷೆ; ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದ್ದವರ ಮೇಲೆ ನಿಗಾ
ಬೆಂಗಳೂರು: 2023ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ನಾಳೆ (ಮಾ.9) ಆರಂಭವಾಗಲಿದ್ದು ರಾಜ್ಯಾದ್ಯಂತ 1,109 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಮಾ. 29ರ ವರೆಗೂ ನಡೆಯಲಿರುವ ಈ ಪರೀಕ್ಷೆಗೆ ಸಂಬಂಧಿಸಿದಂತೆ ಸಿಸಿಟಿವಿ ಕ್ಯಾಮರಾ ಹಾಗೂ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. 3,63,698 ಬಾಲಕರು ಮತ್ತು 3,62.497 ಬಾಲಕಿಯರು ಸೇರಿ ಒಟ್ಟಾರೆ 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಹೊಸದಾಗಿ 6.29 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 25,847 ಖಾಸಗಿ ಮತ್ತು 70,589 …
Read More »ರಾಷ್ಟ್ರ ಮಟ್ಟದಲ್ಲಿ ವೈರಲ್ ಆಯ್ತು ವಿಡಿಯೋ; ನರ್ತಕಿ ಮೇಲೆ ಹಣ ತೂರಿದ ಕಾಂಗ್ರೆಸ್ ಮುಖಂಡ!
ಧಾರವಾಡ: ನಿನ್ನೆ ನರ್ತಕಿಯೊಬ್ಬರ ಮೇಲೆ ಹಣ ತೂರಿದ್ದ ಕಾಂಗ್ರೆಸ್ ಮುಖಂಡನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದ್ದು ದಿನ ಬೆಳಗಾಗುವಷ್ಟರಲ್ಲಿ ಈ ಸುದ್ದಿ ಕಾಡ್ಗಿಚ್ಚಿನಂತೆ ಹರಡಿ ದೇಶದೆಲ್ಲೆಡೆ ವೈರಲ್ ಆಗಿದೆ. ಶಿವಶಂಕರ ಎಂಬ ಈ ಕಾಂಗ್ರೆಸ್ ಮುಖಂಡ ಧಾರವಾಡದವನು. ಅಷ್ಟೇ ಅಲ್ಲದೇ ಈತ ಮಾಜಿ ಸಚಿವ ವಿನಯ ಕುಲಕರ್ಣಿ ಪರಮಾಪ್ತ ಕೂಡ. ಶಿವಶಂಕರ ಹಂಪಣ್ಣವರ, ಮದುವೆಯೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ. ಅಲ್ಲೇ ನೃತ್ಯ ಕಾರ್ಯಕ್ರಮವೂ ನಡೆಯುತ್ತಿತ್ತು. ಈ ವೇಳೆ ಶಿವಶಂಕರ ಹಂಪಣ್ಣವರ ನೃತ್ಯಗಾರ್ತಿ ಮೇಲೆ …
Read More »‘ಪತಲಿ ಕಮರಿಯಾ’ ನಂತರ ‘.ಈ ಸ್ವತ್ತು ಬಿಟ್ಟು ಇರಲಾರೆ.’; ರೋಗಿಗಳ ಮುಂದೆ ರೀಲ್ಸ್ ಮಾಡಿದ ಆಸ್ಪತ್ರೆ ಸಿಬ್ಬಂದಿ!
ಹುಬ್ಬಳ್ಳಿ: ರೀಲ್ಸ್ ಮಾಡುವ ಅಭ್ಯಾಸ ಅನೇಕರಿಗೆ ಇದೆ. ಆದರೆ ಎಲ್ಲದ್ದಕ್ಕೂ ಸ್ಥಾನ ಸಮಯ ಎಂದಿರುತ್ತದೆ. ಈ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಮಾತ್ರ ರೋಗಿಗಳ ಮುಂದೆಯೇ ರೀಲ್ಸ್ ಮಾಡಿ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಈ ವೈದ್ಯ ಮತ್ತು ನರ್ಸ್ ಸಿಬ್ಬಂದಿ ರೀಲ್ಸ್ ಮಾಡಲು ಆಸ್ಪತ್ರೆಯನ್ನೇ ಸ್ಪಾಟ್ ಮಾಡಿಕೊಂಡ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಕ್ಕಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಮತ್ತೊಬ್ಬ ಸಿಬ್ಬಂದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೀಲ್ಸ್ …
Read More »ನಟ-ನಿರ್ದೇಶಕ ಸತೀಶ್ ಕೌಶಿಕ್ ನಿಧನ
ಮುಂಬೈ: ನಟ-ನಿರ್ದೇಶಕ ಸತೀಶ್ ಕೌಶಿಕ್ ನಿಧನರಾದರು. ಅವರಿಗೆ 66 ವರ್ಷವಾಗಿತ್ತು. ನಟ ಅನುಪಮ್ ಖೇರ್ ಅವರು ಸತೀಶ ಕೌಶಿಕ್ ಅವರ ನಿಧನ ಕುರಿತು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. “45 ವರ್ಷಗಳ ಸ್ನೇಹಕ್ಕೆ ಅಂತಹ ಹಠಾತ್ ಪೂರ್ಣ ವಿರಾಮ! ನೀವು ಇಲ್ಲದೆ ಜೀವನವು ಎಂದಿಗೂ ಒಂದೇ ಆಗುವುದಿಲ್ಲ!”ಎಂದು ಅನುಪಮ್ ಖೇರ್ ಹೇಳಿದ್ದಾರೆ. ನಟಿ ಕಂಗನಾ ರಣಾವತ್ ಕೂಡ ನಟನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ಈ ಭಯಾನಕ ಸುದ್ದಿಯಿಂದ ಎಚ್ಚರವಾಯಿತು. ಅವರು ನನ್ನ …
Read More »ಅಥಣಿ ಬಿಜೆಪಿ ಟಿಕೆಟ್ ವಿಚಾರವಾಗಿಯೂ ಬಣ ಬಡಿದಾಟ ಆರಂಭ
ಬೆಳಗಾವಿ: ಬೆಳಗಾವಿ ಜಿಲ್ಲಾ ಬಿಜೆಪಿ ಘಟಕದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಮಾಜಿ ಡಿಸಿಎಂ ಲಕ್ಷ್ಮನ ಸವದಿ ಹಾಗೂ ರಮೇಶ್ ಜಾರಕಿಹೊಳಿ ನಡುವೆ ವೈಮನಸ್ಸು ಇರುವುದು ಗೊತ್ತಿರುವ ವಿಚಾರ. ಈಗ ಅಥಣಿ ಬಿಜೆಪಿ ಟಿಕೆಟ್ ವಿಚಾರವಾಗಿಯೂ ಬಣ ಬಡಿದಾಟ ಆರಂಭವಾಗಿದೆ. ಅಥಣಿ ಬಿಜೆಪಿ ಟಿಕೆಟ್ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ, ಅಥಣಿ ಕ್ಷೇತ್ರದ ಜನರು ನಾನು ಸ್ಪರ್ಧೆ ಮಾಡಲಿ ಎಂದು ಹೇಳುತ್ತಿದ್ದಾರೆ. ಪಕ್ಷದ ಹೈಕಮಾಂಡ್ ಏನು ನಿರ್ಧಾರ …
Read More »ಮೈಸೂರು -ಬೆಂಗಳೂರು- ಮಾರ್ಗ ಬದಲಾವಣೆ
ಬೆಂಗಳೂರು: ಬೆಂಗಳೂರು-ಮೈಸೂರು ದಶಪಥ ರಸ್ತೆ ಉದ್ಘಾಟನೆಗೆ ಸಜ್ಜಾಗಿದ್ದು, ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ದಶಪಥ ರಸ್ತೆ ಲೋಕಾರ್ಪಣೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮಂಡ್ಯಕ್ಕೆ ಆಗಮಿಸಲಿದ್ದು, ಅಂದು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ದಶಪಥ ರಸ್ತೆಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಅಲ್ಲಿಯೇ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಬೆಳಿಗ್ಗೆ …
Read More »